NewsKadaba Team

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಮಂಜನಾಡಿ ಇಲ್ಲಿಗೆ ಇಂಗ್ಲೀಷ್, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ  ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.   ಎಂ.ಎ/ಎಂ.ಎಸ್ಸಿ – ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.14,000 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ:- 9620439218 ಅಥವಾ ಮಂಜನಾಡಿ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಇಲ್ಲಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ […]

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ Read More »

ಕರಾವಳಿ

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ

(ನ್ಯೂಸ್ ಕಡಬ) newskadaba.com ಜೂ. 13. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಗುರುವಾರದಂದು ನಗರದ ಪುರಭವನ ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.   ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಮಾತನಾಡಿ,

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ Read More »

ಕರಾವಳಿ

ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ

(ನ್ಯೂಸ್ ಕಡಬ) newskadaba.com ಜೂ. 13. ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಗುರುವಾರ ಚಾಲನೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ

ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಜೂ. 13. 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದು ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ ಆಘಾತಕಾರಿ ಘಟನೆ ಗುರುವಾರ ಸಂಭವಿಸಿದ್ದು, ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ಇನ್ನು ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ದುರಂತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಸಿಕ್ಕಿದ್ದು, ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆಯ ಪುಸ್ತಕ

ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..! Read More »

ವೀಡಿಯೋ

ಭೂಮಿಗೆ ವಿದಾಯ ಹೇಳಿತ್ತು.. “ನಗುತ್ತಿರುವ ಸೆಲ್ಫೀಯೊಂದಿಗೆ ತುಂಬಿದ ಕುಟುಂಬ”

ಯಾತ್ರೆಯ ಸಂದರ್ಭ ವಿಮಾನದಲ್ಲಿ ಕುಳಿತ ಕಂದಮ್ಮಗಳು ‘ತನ್ನ ಅಜ್ಜಿಗಾಗಿ ಒಂದು ಸೆಲ್ಫೀ ತೆಗಿಯಮ್ಮ’ ಎಂದು ಹೇಳಿರಬಹುದು.. ಹೌದು, ಆ ಕುಟುಂಬ ಕಣ್ಣೀರಿನ ಶೋಕ ಸಾಗರದಲ್ಲಿ ಮುಳುಗಿದೆ….ನಗುತ್ತಿರುವ ಸೆಲ್ಫಿಯ ಭರವಸೆಯಿಂದ ತುಂಬಿದ ಕುಟುಂಬ “ಆಕಾಶಕ್ಕೆ ಕಳೆದುಹೋಯಿತು”. ನಿನ್ನೆ ನಡೆದ ಕರಾಳ ದುರಂತದಲ್ಲಿ ಮಡಿದವರ ಒಂದೊಂದೇ ಭಾವನಾತ್ಮಕ ಚಿತ್ರಗಳು, ಸಾರಿ ಹೇಳುವ ಮಾನವೀಯ ಸಂಬಂಧಗಳು… ಇನ್ನೂ ಸಾಫ್ಟ್‌ವೇರ್ ವೃತ್ತಿಪರರಾಗಿದ್ದ ರಾಜಸ್ಥಾನದ ಬನ್ಸ್ವಾರಾ ಮೂಲದ ಪ್ರತೀಕ್ ಜೋಶಿ ಎಂವವರು ತನ್ನ ಪತ್ನಿ ಮತ್ತು ಮೂವರು ಮುದ್ದಾದ ಮಕ್ಕಳೊಂದಿಗೆ ಲಂಡನ್ ನಲ್ಲಿ ಜೀವನ

ಭೂಮಿಗೆ ವಿದಾಯ ಹೇಳಿತ್ತು.. “ನಗುತ್ತಿರುವ ಸೆಲ್ಫೀಯೊಂದಿಗೆ ತುಂಬಿದ ಕುಟುಂಬ” Read More »

ವಿಶೇಷ ಲೇಖನಗಳು

ಟ್ರಾಫಿಕ್ ನಲ್ಲಿ ಸಿಲುಕಿ ದುರಂತದಿಂದ ಪಾರಾದೆ- ಗದ್ಗದಿತರಾದ ಮಹಿಳೆ

(ನ್ಯೂಸ್ ಕಡಬ) newskadaba.com ಜೂ. 13. ಲಂಡನ್ ಗೆ ಹೊರಟಿದ್ದ ಅಹಮದಾಬಾದ್ ನ ಭೂಮಿ ಚೌಹಾಣ್ ಎಂಬ ಮಹಿಳೆಯೊಬ್ಬರು ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಹೌದು, ಭೂಮಿ ಅವರು ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರಿಂದ ಅವರಿಗೆ ವಿಮಾನವೇರಲು ಅವಕಾಶ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ. ದುರಂತದ ವಿಚಾರ ಕೇಳಿ ನನಗೆ ಭಯವದಿಂದ

ಟ್ರಾಫಿಕ್ ನಲ್ಲಿ ಸಿಲುಕಿ ದುರಂತದಿಂದ ಪಾರಾದೆ- ಗದ್ಗದಿತರಾದ ಮಹಿಳೆ Read More »

ರಾಷ್ಟ್ರೀಯ ನ್ಯೂಸ್

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಜೂ. 13. ಗುಜಾರಾತ್ ನ ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ ಕಂಪನಿಯು 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಕೂಡಾ ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು. ಜೊತೆಗೆ ವಿಮಾನ ಪತನಗೊಂಡು ಬಿದ್ದ ಬಿಜೆ

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ Read More »

ರಾಷ್ಟ್ರೀಯ ನ್ಯೂಸ್

ಅತಿಯಾದ ವೇಗ- ರಸ್ತೆ ಬದಿಯ ಹೊಂಡಕ್ಕೆ ವಾಲಿನಿಂತ ಕೆಎಸ್ಸಾರ್ಟಿಸಿ ಬಸ್..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 13. ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ಅತಿಯಾದ ವೇಗದಿಂದ ಬೈರಿಕಟ್ಟೆಯ ಕೆಳಗಿನ ಕ್ರಾಸಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಿತ್ಯವೂ ಹೀಗೆ ಬಸ್ ಚಾಲಕರ ಅತಿಯಾದ ವೇಗದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು ಭಯಭೀತರಾಗಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಅತಿಯಾದ ವೇಗ- ರಸ್ತೆ ಬದಿಯ ಹೊಂಡಕ್ಕೆ ವಾಲಿನಿಂತ ಕೆಎಸ್ಸಾರ್ಟಿಸಿ ಬಸ್..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ

(ನ್ಯೂಸ್ ಕಡಬ) newskadaba.com ಜೂ. 13. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಕೋ ಪೈಲಟ್ ಕ್ಲೈವ್ ಕುಂದರ್ ಅವರು ಕೂಡಾ ಒಬ್ಬರಾಗಿದ್ದರು. ಪ್ಯಾರಿಸ್ ಏರ್ ಇಂಕ್‌ ನಲ್ಲಿ ತರಬೇತಿ ಪಡೆದಿದ್ದ ಕ್ಲೈವ್ ಕುಂದರ್ ಅವರು, 1,100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು. 8,200ಕ್ಕೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ ಸುಮಿತ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..!

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಸಣ್ಣ ಪ್ರಾಯದಲ್ಲೇ ಹೆತ್ತವರನ್ನು ಕಳೆದುಕೊಂಡರೂ ಸಾಕು ತಂದೆ-ತಾಯಿಯ ಆಸರೆಯಲ್ಲಿ ಬೆಳೆದು ಬಂದ ಯುವಕನೋರ್ವನಿಗೆ ತನ್ನ ಸಾಧನೆಯ ಮೂಲಕ ದೇಶಸೇವೆಗೆ ಆವಕಾಶ ಒದಗಿ ಬಂದಿದ್ದು, ಇಡೀ ಊರೇ ಹೆಮ್ಮೆ ಪಡುವಂತಾಗಿದೆ. 21ರ ಹರೆಯದ ಯುವಕ ಕಡಬದ ಐತ್ತೂರು ಗ್ರಾಮದ ಮಾಲ ನಿವಾಸಿ ಪುನೀತ್‌ರಾಜ್ ಇಂತಹ ಸಾಧನೆಯ ಶಿಖರವನ್ನೇರಿದ ಪ್ರತಿಭೆ. 2024ರ ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿದ್ದ ಅಗ್ನಿವೀರ ನೇಮಕಾತಿ ಶಿಬಿರದಲ್ಲಿ ಸುಮಾರು 25,೦೦೦ ಅಭ್ಯರ್ಥಿಗಳು ಭಾಗವಹಿಸಿ ಈ

ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..! Read More »

ಕರಾವಳಿ, ವಿಶೇಷ ಲೇಖನಗಳು
Scroll to Top