NewsKadaba Team

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 13. ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹ್ಮದ್ ಮತ್ತು ಖಮರ್ಜಹಾ ಬಾನು ಎಂಬವರ ಪುತ್ರಿ ಹಿಬಾ ಐಮನ್(15) ಎಂದು ಗುರುತಿಸಲಾಗಿದೆ. ಹಿಬಾ ಐಮನ್ ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ […]

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಿಕಪ್‌ ಸಹಿತ ಚಾಲಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಹಮ್ಮದ್‌ ನಿಜಾಂ ಎಂದು ಗುರುತಿಸಲಾಗಿದೆ. ಪಡೀಲ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಕಣ್ಣೂರು ಕಡೆಯಿಂದ ಬಂದ ವಾಹನವನ್ನು ತಡೆದು ನಿಲ್ಲಿಸಿ, ತಪಾಸಣೆ ನಡೆಸಿದಾಗ ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಈತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಈ ಸಂಬಂಧ ಪಿಕಪ್‌ ವಾಹನ ಮತ್ತು

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಕರಾವಳಿಯಲ್ಲಿ ನಡೆಯುವ ಕೋಮು ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆಯನ್ನು (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಇಂದು (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ಈ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ, ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ.ಎಂ.ಎ.ಸಲೀಂ, ಎಡಿಜಿಪಿ

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ Read More »

ಕರಾವಳಿ

ಡಾ.ಚೂಂತಾರು ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು  ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ. ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು  ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ

ಡಾ.ಚೂಂತಾರು ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಆಯ್ಕೆ Read More »

ಕರಾವಳಿ

“ಹಸಿರೇ ಉಸಿರು”- ಡಾ ಚೂಂತಾರು ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 13. ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರದಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.   ಈ ಸಂದರ್ಭ ಸುಮಾರು 55 ಮಂದಿಗೆ ಮಾವು, ಹಲಸು, ಸಫೋಟ, ಪೇರಳೆ, ನೇರಳೆ ಮುಂತಾದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಶ್ರೀ ಅಬ್ದುಲ್ ನೌಷಾದ್ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ.ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ರಾಜಶ್ರೀ ಮೋಹನ್, ಡಾ ಪ್ರಜ್ವಲ್, ದಂತ ಪರಿಚಾರಕಿಯರಾದ

“ಹಸಿರೇ ಉಸಿರು”- ಡಾ ಚೂಂತಾರು ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಪರಿಸರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 12. ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ‌ ನಡೆದಿದೆ. ಗಾಯಗೊಂಡವರನ್ನು ಅಟೊ ಚಾಲಕ ಕಂಚಿನಡ್ಕ ನಿವಾಸಿ‌ ಹಂಝ ಎಂದು ಗುರುತಿಸಲಾಗಿದೆ. ಬಸ್ ಢಿಕ್ಕಿ ಹೊಡೆದ ಪರಿಣಾಮ‌ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪಡುಬಿದ್ರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕೋಮುಗಲಭೆಯನ್ನು ಪ್ರಚೋದಿಸುವ ಸರಣಿ ಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರವು ರಚಿಸಿದ್ದ ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ. ಜೂ.13ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕಾರ್ಯಪಡೆಯನ್ನು ಉದ್ಘಾಟಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಈ ಕಾರ್ಯಪಡೆಯಲ್ಲಿ ಒಟ್ಟು 248 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಇವು

ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ Read More »

ಕರಾವಳಿ

ವೈದ್ಯರ ವರ್ಗಾವಣೆಗೆ ಆರೋಗ್ಯ ಮಂಡಳಿ ರಚಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ವೈದ್ಯರ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮಂಡಳಿಯು ನೀಡಿರುವಂತಹ ಪ್ರಮಾಣ ಪತ್ರವನ್ನು ಮತ್ತೊಮ್ಮೆ ಪರಿಶೀಲನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ರಾಜ್ಯ ಆರೋಗ್ಯ ಮಂಡಳಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಆರೋಗ್ಯ ಮಂಡಳಿಯು ನಗರದ ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಮಂಡಳಿಯಲ್ಲಿ ಒಬ್ಬರು ಅಧ್ಯಕ್ಷರು ಸೇರಿ 15 ಮಂದಿ ಸದಸ್ಯರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ. ಕೆ.ಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಮಂಡಳಿಯ

ವೈದ್ಯರ ವರ್ಗಾವಣೆಗೆ ಆರೋಗ್ಯ ಮಂಡಳಿ ರಚಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ರಾಜ್ಯದ ತೋತಾಪುರಿ ಮಾವಿಗೆ ನಿಷೇಧ ಹೇರಿದ ಆಂಧ್ರ- ನಾಯ್ಡುಗೆ ಪತ್ರ ಬರೆದ ಸಿಎಂ ಸಿದ್ದು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ನಿಷೇಧ ಹೇರಿರುವುದರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಈ ನಿರ್ಧಾರವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಈ ಕ್ರಮವು ಪ್ರತೀಕಾರದ ಕ್ರಮಗಳಿಗೆ ಮತ್ತು ಸರಕುಗಳ ಅಂತರ-ರಾಜ್ಯ ಸಾಗಣೆಗೆ ಅಡ್ಡಿಯಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಆದೇಶ ಹಿಂಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಮುಖ್ಯಮಂತ್ರಿ

ರಾಜ್ಯದ ತೋತಾಪುರಿ ಮಾವಿಗೆ ನಿಷೇಧ ಹೇರಿದ ಆಂಧ್ರ- ನಾಯ್ಡುಗೆ ಪತ್ರ ಬರೆದ ಸಿಎಂ ಸಿದ್ದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸ್ ನಿರೀಕ್ಷಕರಾಗಿ ನಂದಕುಮಾರ್ ಪದೋನ್ನತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಪುಂಜಾಲಕಟ್ಟೆ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ಅವರಿಗೆ ಪದೋನ್ನತಿ ನೀಡಿ ಮಂಗಳೂರು ಡಿ.ಎಸ್.ಬಿ. ಕಚೇರಿಗೆ ವರ್ಗಾವಣೆ ಮಾಡಿ ಪೋಲೀಸ್ ಇಲಾಖೆ ಅದೇಶ ಹೊರಡಿಸಿದೆ.. ಮಡಿಕೇರಿ, ಬಂಟ್ವಾಳ ನಗರ, ಪುತ್ತೂರು ನಗರ ಹಾಗೂ ಬೆಳ್ತಂಗಡಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅವರು ಪ್ರಸ್ತುತ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ‌ಕರ್ತವ್ಯದಲ್ಲಿದ್ದಾರೆ.

ಪೊಲೀಸ್ ನಿರೀಕ್ಷಕರಾಗಿ ನಂದಕುಮಾರ್ ಪದೋನ್ನತಿ Read More »

ಕರಾವಳಿ
Scroll to Top