NewsKadaba Team

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 10. ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಬೃಹತ್ ಕಂಟೈನರ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಹಡಗಿನ ಆರು ಮಂದಿ ಸಿಬ್ಬಂದಿಗಳನ್ನು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೇರೀತಿ ರಕ್ಷಿಸಲ್ಪಟ್ಟ ಉಳಿದ 12 ಮಂದಿಯನ್ನೂ ಮಂಗಳೂರಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ದುರಂತಕ್ಕೀಡಾದ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಹೊತ್ತ ಐಎನ್ಎಸ್ ಸೂರತ್ ಸೋಮವಾರದಂದು ತಡರಾತ್ರಿ ಪಣಂಬೂರಿನ ಹೊಸ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದೆ. ಅಲ್ಲಿಂದ ಆರು ಮಂದಿ […]

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..!

(ನ್ಯೂಸ್ ಕಡಬ) newskadaba.com ಜೂ. 10. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಹಿತ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದುಪಡಿಸಬೇಕೆಂದು ರಾಜ್ಯ ಸರಕಾರಕ್ಕೆ ಇಂಡಿಯನ್ ಪೊಲೀಸ್ ಫೌಂಡೇಶನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಪೂರ್ವ ತಯಾರಿ ಇಲ್ಲದೇ ಏಕಾಏಕಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಬರುವಂತೆ ಆಹ್ವಾನಿಸಿತ್ತು. ಆರಂಭದಲ್ಲೇ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದರು. ಊಹೆಗೂ

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 10. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಸೇವಾಪ್ರತಿನಿಧಿಗಳು ಹಾಗೂ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರವು ಶ್ರೀ ದುರ್ಗಾಂಭಿಕಾ ಸಭಾಭವನ ಕಡಬದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿ ಮಾರ್ಗದರ್ಶನ ನೀಡಿದ ಕರಾವಳಿ ಪ್ರಾದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಅನುಷ್ಟಾನ ಮಾಡುತ್ತಿರುವ ಸೇವಾಪ್ರತಿನಿಧಿಗಳ ಕೆಲಸವು ಹೆಚ್ಚು ಮಹತ್ವ ತರುವಂತಹುದು. ಪೂಜ್ಯ ಹೆಗ್ಗಡೆಯವರ

ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ Read More »

ಕರಾವಳಿ

ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 10. ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು, ಕೋಡಿ ಸೇತುವೆಯ ಮೇಲೆ ತನ್ನ ಸ್ಕೂಟಿಯನ್ನು ಇರಿಸಿ ನದಿಗೆ ಹಾರಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್ ಎಂದು ಗುರುತಿಸಲಾಗಿದೆ. ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮೃತ ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ವಾಸಿಸುತ್ತಿದ್ದರು. ವರದಿಗಳ ಪ್ರಕಾರ, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದರು. ಬಳಿಕ ಅವರ

ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!?

(ನ್ಯೂಸ್ ಕಡಬ) newskadaba.com ಜೂ. 10. ರಾಷ್ಟ್ರ ರಾಜಧಾನಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಲಿದೆ. ಇದರಿಂದಾಗಿ ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆಗಳು ಬದಲಾವಣೆಯಾಗುವ ನಿರೀಕ್ಷೆಯಿದೆ. ಈ ಕುರಿತು ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಕೂಡ ಹೈಕಮಾಂಡ್ ಗೆ ಸಿಎಂ, ಡಿಸಿಎಂ ವರದಿ ಸಲ್ಲಿಸಲಿದ್ದಾರೆ. ಸಭೆಯಲ್ಲಿ ಕೆ.ಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಮತ್ತಿತರರಲಿದ್ದಾರೆ. ವರಿಷ್ಠರ

ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ನಗರದ ಹೊರವಲಯದ ಕುಡುಪುವಿನಲ್ಲಿ ಬಾಯಾರಿಕೆ ಆದಾಗ ನೀರು ಕೇಳಿದಕ್ಕೆ ಸಂಘಪರಿವಾರದ ಗೂಂಡಾಗಳಿಂದ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್ ಹಾಗೂ ಬಜರಂಗದಳದ ಕಿರಾತಕರ ಪೂರ್ವ ಯೋಜನೆಯ ಮತ್ತು ಸಂಘಟಿತ ಷಡ್ಯಂತ್ರದಿಂದ ತನ್ನ ಗೆಳೆಯ ಬಜರಂಗದಳದ ಕಾರ್ಯಕರ್ತ ದೀಪಕ್ ಮತ್ತು ತಂಡದಿಂದ ವಂಚನೆಯ ಮೂಲಕ ಅಮಾನುಷವಾಗಿ ಕೊಲೆಯಾದ ಬಂಟ್ವಾಳ ತಾಲೂಕಿನ ಕೊಳ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ  ಹಾಗೂ ದಲಿತ ಯುವಕ ಕೀರ್ತಿ ಮತ್ತು ಫಾಝಿಲ್ ಕೊಲೆ ಪ್ರಕರಣದ

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ..!

(ನ್ಯೂಸ್ ಕಡಬ) newskadaba.com ಜೂ. 10. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15ರಿಂದ ದೇವಾಲಯಗಳನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ತಿಳಿಸಿದರು. ಈ ಆದೇಶ ಜಾರಿಗೆ

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ..! Read More »

ಕರ್ನಾಟಕ

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ

(ನ್ಯೂಸ್ ಕಡಬ) newskadaba.com ಜೂ. 10. ದೆಹಲಿಯನ್ನು ಸಂಚಾರದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣಕ್ಕೆ ಮುಂದಾಗಿದ್ದು, ಇದು ಭಾರತದ ಸಂಪೂರ್ಣ ನಕ್ಷೆಯನ್ನು ಬದಲಾಯಿಸುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಂಚಾರ ದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸಲು ಕೇಂದ್ರ ಸರ್ಕಾರವು 1.5 ಲಕ್ಷ ಕೋಟಿ ರೂ.ಗಳ ರಸ್ತೆಗಳನ್ನು ನಿರ್ಮಿಸುತ್ತಿದೆ. ಇದರಿಂದ ನಾವು ದೆಹಲಿಯಿಂದ

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ ಏರ್ಪಡಿಸಲಾಗಿದೆ. ಆಸಕ್ತ ರೈತ ಭಾಂದವರು ತಮ್ಮ ತಾಲೂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು. ಜೂನ್ 12ರಿಂದ 13ರ ವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಜೂನ್ 26ರಿಂದ 27ರ ವರೆಗೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ  ಮಂಗಳೂರು ತಾಲೂಕು

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ
Scroll to Top