NewsKadaba Team

ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾೈಕ್‍ ರಿಗೆ “ಶಿಕ್ಷಣ ಭೀಷ್ಮ” ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಅ.26. ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ.ಕೆ.ಸಿ.ನಾೈಕ್‍ರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರಿ) ಕರ್ನಾಟಕ, ರುಪ್ಸಾ ಕರ್ನಾಟಕ (RUPSA KARNATAKA) ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ “ಶಿಕ್ಷಣ ಭೀಷ್ಮ” ಪ್ರಶಸ್ತಿ ನೀಡಿ ಗೌರವಿಸಿದೆ.   ಡಾ.ಕೆ.ಸಿ.ನಾೈಕ್ ಶಕ್ತಿ ಶಿಕ್ಷಣ ಸಂಸ್ಥೆಯನ್ನು ಮಂಗಳೂರಿನಲ್ಲಿ ಪ್ರಾರಂಭ ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾಗಿರುವ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ರಾಜ್ಯದ 31 ಜಿಲ್ಲೆಗಳ ವಿದ್ಯಾರ್ಥಿಗಳು ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವುದು […]

ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾೈಕ್‍ ರಿಗೆ “ಶಿಕ್ಷಣ ಭೀಷ್ಮ” ಪ್ರಶಸ್ತಿ Read More »

ಕರಾವಳಿ

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26

(ನ್ಯೂಸ್ ಕಡಬ) newskadaba.com ಅ.26. ಪ್ರತಿ  ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26ರಂದು ವಿಶ್ವ ಬೊಜ್ಜು ಜಾಗೃತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆ 2024ರಿಂದ ಆರಂಭಿಸಿತ್ತು.   ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ ಬಾಯಿಚಪಲ ಬಿಡಬೇಕಲ್ಲ. ನಾಲಗೆಯ

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ತಣ್ಣೀರುಬಾವಿ ಬೀಚ್ ಅಭಿವೃದ್ಧಿ: ಪ್ರೀ ಬಿಡ್ ಸಭೆ

(ನ್ಯೂಸ್ ಕಡಬ) newskadaba.com ಅ.26. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಕಡಲ ತೀರವನ್ನು ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ಲೀಸ್ ಆಧಾರದ ಮೇಲೆ ಗುತ್ತಿಗೆ ನೀಡಲು ಇ-ಟೆಂಡರ್ ಸಲ್ಲಿಸಲು ಕಡೆಯ ದಿನಾಂಕವನ್ನು ನವೆಂಬರ್ 8ರ ವರೆಗೆ ವಿಸ್ತರಿಸಲಾಗಿದೆ. ಈ ಪ್ರಯುಕ್ತ ಅಕ್ಟೋಬರ್ 28ರಂದು ರಂದು ಬೆಳಿಗ್ಗೆ 11.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಪ್ರೀ ಬಿಡ್ ಸಭೆ ಕರೆಯಲಾಗಿದೆ. ಆಸಕ್ತ ಬಿಡ್ಡುದಾರರು ಭಾಗವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಪ್ರಕಟಣೆ

ತಣ್ಣೀರುಬಾವಿ ಬೀಚ್ ಅಭಿವೃದ್ಧಿ: ಪ್ರೀ ಬಿಡ್ ಸಭೆ Read More »

ಕರಾವಳಿ

ಎಸ್ಸಿ/ಎಸ್ಟಿ ಪತ್ರಕರ್ತರಿಗೆ ಮೀಡಿಯಾ ಕಿಟ್ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು

ಎಸ್ಸಿ/ಎಸ್ಟಿ ಪತ್ರಕರ್ತರಿಗೆ ಮೀಡಿಯಾ ಕಿಟ್ – ಅರ್ಜಿ ಆಹ್ವಾನ Read More »

ಕರ್ನಾಟಕ

ರಾಜ್ಯ ಮಟ್ಟದ ಗಾಂಧೀಜಿ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.26. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧಿ ತತ್ವ ಸಿದ್ಧಾಂತಗಳ ಮಹತ್ವದ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು ಅಕ್ಟೋಬರ್ 31ರೊಳಗಾಗಿ ಇ-ಮೇಲ್ ವಿಳಾಸ kstaessay.kannada@gmail.com ಅಥವಾ kstaessay.english@gmail.com ಗೆ ಕಳುಹಿಸಿಕೊಡಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ನವೆಂಬರ್ 12ರಂದು

ರಾಜ್ಯ ಮಟ್ಟದ ಗಾಂಧೀಜಿ ಪ್ರಬಂಧ ಸ್ಪರ್ಧೆ Read More »

ಕರಾವಳಿ

ನಗರಪಾಲಿಕೆ ವಸತಿ ಯೋಜನೆ- ವಂತಿಗೆ ಪಾವತಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಅ.26. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇಡ್ಯ ಗ್ರಾಮದ ಸರ್ವೆ.ನಂ.16ಪಿ1 ರಲ್ಲಿ ಜಿ+3 ಮಾದರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಸಂಕೀರ್ಣ ಯೋಜನೆಗೆ ಆಯ್ಕೆಗೊಂಡಿರುವ ಫಲಾನುಭವಿಗಳಲ್ಲಿ ವಂತಿಗೆ ಪಾವತಿಸದೇ ಇರುವ ಫಲಾನುಭವಿಗಳನ್ನು, ವಸತಿ ಪಡೆಯಲು ಆಸಕ್ತಿ ಇಲ್ಲದ ಫಲಾನುಭವಿಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ಪ್ರತಿಕ್ರಿಯೆ ಮಾಡದೇ ಇರುವ ಫಲಾನುಭವಿಗಳನ್ನು ರದ್ದು ಪಡಿಸಿ ಹೊಸ ಫಲಾನುಭವಿಗಳನ್ನು ಆಯ್ಕೆ ಮಾಡುವ ಬಗ್ಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನಗರಾಶ್ರಯ ಸಮಿತಿ ಸಭೆಯಲ್ಲಿ ನಿರ್ಣಯ

ನಗರಪಾಲಿಕೆ ವಸತಿ ಯೋಜನೆ- ವಂತಿಗೆ ಪಾವತಿಸಲು ಸೂಚನೆ Read More »

ಕರಾವಳಿ

ಹಸಿರು ಪಟಾಕಿ ಬಳಕೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಅ.26. ಪಟಾಕಿ ಮತ್ತು ಸಿಡಿಮದ್ದುಗಳನ್ನು ಉಪಯೋಗಿಸದೆ ಶಬ್ದ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಬ್ಬದ ಅವಧಿ ಸಂಜೆ ಆರರಿಂದ ರಾತ್ರಿ ಹತ್ತು ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಮತ್ತು ಸಿಡಿಮದ್ದುಗಳನ್ನು ಸಿಡಿಸುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಹಾಗೂ ಆಚರಣೆಯ ಸಮಯದಲ್ಲಿ ಯಾವುದೇ ಪ್ರಾಣಿ-ಪಕ್ಷಿಗಳು ಮಕ್ಕಳು ಹಾಗೂ ವೃದ್ಧರಿಗೆ ತೊಂದರೆ ಆಗದಂತೆ ಪಟಾಕಿಗಳನ್ನು ಬಳಸಬೇಕು. ಉಳಿದ ಸಮಯದಲ್ಲಿ ಪಟಾಕಿ, ಸಿಡಿಮದ್ದುಗಳನ್ನು

ಹಸಿರು ಪಟಾಕಿ ಬಳಕೆಗೆ ಸೂಚನೆ Read More »

ಕರಾವಳಿ

ದ್ವಿಚಕ್ರ ವಾಹನ- ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಅ.26. ಉರ್ವ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಳ್ಳಲಾದ ನಿರುಪಯುಕ್ತವಾಗಿರುವ ಎರಡು ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ಉರ್ವ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪೂರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವಿಚಕ್ರ ವಾಹನ- ಬಹಿರಂಗ ಹರಾಜು Read More »

ಕರಾವಳಿ

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ನಿಷೇದಾಜ್ಞೆ

(ನ್ಯೂಸ್ ಕಡಬ) newskadaba.com ಅ.26. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕನ್ನಡ ಪರೀಕ್ಷೆ -2 ಮತ್ತು ಪೇಪರ್-1 ಮತ್ತು ಪೇಪರ್-2 ಪರೀಕ್ಷೆಗಳು ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 26ರಿಂದ 27ರ ವರೆಗೆ 18 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಉಪಪೊಲೀಸ್ ಆಯುಕ್ತ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ಧಾರ್ಥ್ ಗೋಯಲ್

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ನಿಷೇದಾಜ್ಞೆ Read More »

ಕರಾವಳಿ

ಜೆಬಿಎಫ್‌ ಕಂಪೆನಿಗೆ ಭೂಮಿ ಬಿಟ್ಟುಕೊಟ್ಟವರಿಗೆ ಗೈಲ್‌ ಕಂಪೆನಿಯಲ್ಲಿ ಉದ್ಯೋಗ- ಉದ್ಯೋಗ ಪತ್ರ ವಿತರಿಸಿದ ದ.ಕ. ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಅ.26. ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನ ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್‌)ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟಿದ್ದವರ ಪೈಕಿಯಲ್ಲಿ 69 ಮಂದಿಗೆ ಜಿಎಂಪಿಎಲ್‌ (ಗೈಲ್‌ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಕಲ್ಪಿಸುವ ನೇಮಕಾತಿ ಪತ್ರಗಳನ್ನು ಬಜಪೆಯ ಎಂಎಸ್‌ಇಝೆಡ್‌ನ ಜಿಎಂಪಿಎಲ್‌ ಕಂಪೆನಿಯಲ್ಲಿ

ಜೆಬಿಎಫ್‌ ಕಂಪೆನಿಗೆ ಭೂಮಿ ಬಿಟ್ಟುಕೊಟ್ಟವರಿಗೆ ಗೈಲ್‌ ಕಂಪೆನಿಯಲ್ಲಿ ಉದ್ಯೋಗ- ಉದ್ಯೋಗ ಪತ್ರ ವಿತರಿಸಿದ ದ.ಕ. ಸಂಸದ ಕ್ಯಾ. ಚೌಟ Read More »

ಕರಾವಳಿ
Scroll to Top