NewsKadaba Team

ಕೊಂಬಾರು: ಅಗ್ನಿವೀರ ಪುನೀತ್ ರಾಜ್ ಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.26. ಭಾರತೀಯ ಸೇನೆಗೆ ಅಗ್ನಿವೀರನಾಗಿ ಆಯ್ಕೆಯಾದ ಕಡಬ ತಾಲೂಕಿನ ಕೊಂಬಾರಿನ ಪುನಿತ್ ರಾಜ್ ಎಂಬವರನ್ನು ಕೆಂಜಾಳ ಹಾಲು ಉತ್ಪಾ ದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳಾರು, ಉಪಾಧ್ಯಕ್ಷ ನೀಲಪ್ಪ ಗೌಡ ಮುಗೇರು, ನಿರ್ದೇಶಕರಾದ ಶ್ರೀಧರ ಗೌಡ ಕಾಪಾರು, ನೀಲಪ್ಪ ಗೌಡ ಮಣಿಭಾಂಡ, ಧರ್ಮಪಾಲ ಗೌಡ ಕೋಲ್ಕಜೆ, ಉಷಾ ಪೆರುಂದೋಡಿ, ವೇದಾವತಿ ಕೂತೂರು, ಮೋಹನಾಂಗಿ ಕೊಡೆಂಕಿರಿ, ಕಾರ್ಯದರ್ಶಿ ಈಶ್ವರ ಗೌಡ ಕಾಪಾರು, ಹಾಲು ಪರಿವೀಕ್ಷಕಿ […]

ಕೊಂಬಾರು: ಅಗ್ನಿವೀರ ಪುನೀತ್ ರಾಜ್ ಗೆ ಸನ್ಮಾನ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಅ.26. ಅರಣ್ಯ ಭೂಮಿಯ ಜಂಟಿ ಸರ್ವೆ ಮಾಡುವುದು, ಪಶ್ಚಿಮಘಟ್ಟ ಪ್ರದೇಶಕ್ಕೆ ಗಡಿ ಗುರುತು ಮಾಡುವುದು ಮತ್ತು ಅರಣ್ಯ ಭೂಮಿಗಳಿಗೆ ಬಫರ್ ನ್ ಇಡಬಾರದು. ಇಷ್ಟು ಅಂಶಗಳನ್ನು ಸರಕಾರ ಮಾಡಿದರೆ ಯಾವ ಅರಣ್ಯ ರಕ್ಷಣೆಯ ವರದಿಗೂ ರೈತರು ಭಯ ಪಡಬೇಕಿಲ್ಲ ಎಂದು ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ಸಂಚಾಲಕ ಕಿಶೋ‌ರ್ ಶಿರಾಡಿ ಹೇಳಿದರು. ಕಸ್ತೂರಿ ರಂಗನ್ ವರದಿಯ ವಿರುದ್ಧ ಕುಟ್ರುಪ್ಪಾಡಿ ಗ್ರಾ.ಪಂ. ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಗೆ

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ Read More »

ಕರಾವಳಿ

ಕಡಬ: ನಾಳೆ (ಅ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಅ. 25. ಕಡಬ ತಾಲೂಕಿನ ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ನಾಳೆ (ಅ.26) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಡಬ: ನಾಳೆ (ಅ.26) ವಿದ್ಯುತ್ ನಿಲುಗಡೆ Read More »

ಕರಾವಳಿ

ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಬೈಕ್‌- ಸವಾರ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಅ. 25.  ದ್ವಿಚಕ್ರವಾಹನ ಸವಾರನೊಬ್ಬ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಹೊಳೆಗೆ ಉರುಳಿ ಬಿದ್ದ ಘಟನೆ ಬೈಂದೂರು ಠಾಣಾ ವ್ಯಾಪ್ತಿಯ ನಾಕಟ್ಟೆ ಚಿಕ್ಕ ಸೇತುವೆ ಬಳಿ ಗುರುವಾರದಂದು ನಡೆದಿದೆ. ಬೈಕ್ ಸವಾರ ಕಿರಿಮಂಜೇಶ್ವರ ನಿವಾಸಿ ಕೆ.ಪಿ.ಇಸ್ಮಾಯಿಲ್ ಎಂಬವರ ಪುತ್ರ ಉಸ್ಮಾನ್ (24) ಎಂದು ಗುರುತಿಸಲಾಗಿದೆ. ಭಟ್ಕಳದಲ್ಲಿ ಮೀನುಗಾರಿಕೆ ವ್ಯಾಪಾರ ನಡೆಸುತ್ತಿರುವ ಉಸ್ಮಾನ್ ಭಟ್ಕಳದಿಂದ ಕಿರಿಮಂಜೇಶ್ವರದ ಮನೆಗೆ ತೆರಳುತ್ತಿದ್ದ ವೇಳೆ ನಾಕಟ್ಟೆ ಕಿರು ಸೇತುವೆ ಬಳಿ ಬರುತ್ತಿದ್ದಂತೆ

ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಬೈಕ್‌- ಸವಾರ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..!

(ನ್ಯೂಸ್ ಕಡಬ) newskadaba.com ಅ. 25. ಪ್ರಿಯಕರನೊಂದಿಗೆ ಸೇರಿ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಕಳೆದ 25 ದಿನಗಳಿಂದ ಜ್ವರ ಹಾಗೂ ವಾಂತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲೇ ಸಾವನ್ನಪ್ಪಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ನೀಡಿದ

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 25.  ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರದಂದು ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ಪ್ರಜ್ವಲ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರೊಂದಿಗೆ ಕರಾವಳಿ ಪೊಲೀಸರು ರಕ್ಷಣಾ ಬೋಟ್‌ನಲ್ಲಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಚಂಡಮಾರುತ ಹಾಗೂ ಆಗಾಗ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದ ಮುಕ್ಕದಲ್ಲಿ ಮುಳುಗಿ

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭ

(ನ್ಯೂಸ್ ಕಡಬ) newskadaba.com ಅ. 25.  ಗುರುವಾರದಿಂದ ಹಾಸನಾಂಬೆ ದರ್ಶನ ಆರಂಭವಾಗಿದ್ದು, ನವೆಂಬರ್ 3ರವರೆಗೆ ಹಾಸನಾಂಬೆ ದೇವಿಯ ದರ್ಶನ ಪಡೆಯಬಹುದಾಗಿದೆ. ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ಬಾಗಿಲು ತೆರೆಯಲಾಗಿದೆ.   ದಿನದ 24 ಗಂಟೆಯೂ ದೇವಿ ದರ್ಶನ ಮಾಡಬಹುದಾಗಿದೆ. ಭಾರೀ ಭಕ್ತರು ಬರುವ ಕಾರಣ ಬಂದೋಬಸ್ತ್ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಹಾಗೂ ವ್ಯವಸ್ಥೆ ಮಾಡಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಭಕ್ತರ ಗಮನ ಸೆಳೆಯಲು ಶಿವಲಿಂಗ, ನಂದಿ, ನವಿಲು, ಆನೆಗಳ‌

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭ Read More »

ಕರ್ನಾಟಕ

ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ

(ನ್ಯೂಸ್ ಕಡಬ) newskadaba.com ಅ. 25. ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4ರವರೆಗೆ ಮಧ್ಯಪ್ರದೇಶದ ಮದಸ್ಸೂರ್ ನಲ್ಲಿ ನಡೆಯಿತು.  ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಸ್ಪೀವ್ ಜೆಫ್ ಲೋಬೊ ದ್ವಿತೀಯ ವಿಜ್ಞಾನ ವಿಭಾಗ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ ಕೀರ್ತನ್ ಬೇಕಲ್ 2 ಬೆಳ್ಳಿ ಪದಕಗಳನ್ನು ಪಡೆದು 68ನೇ SಉಈI ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ ಹಾಗೂ ಶ್ರೀ ವಿಷ್ಣು  ಪ್ರಥಮ

ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ Read More »

ಕರಾವಳಿ

ಶ್ರೀನಿವಾಸ ಯೂನಿವರ್ಸಿಟಿ ಸಿಮ್ಸ್ ಮತ್ತು ಆರ್ಸಿ ಓರಿಯಂಟೇಶನ್ ಪ್ರೋಗ್ರಾಂ

(ನ್ಯೂಸ್ ಕಡಬ) newskadaba.com ಅ. 25. ಶ್ರೀನಿವಾಸ ವಿಶ್ವವಿದ್ಯಾಲಯ, ಶ್ರೀನಿವಾಸ ಇನ್‌ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ವತಿಯಿಂದ ಎಂಬಿಬಿಎಸ್ ಓರಿಯಂಟೇಶನ್ ಕಾರ್ಯಕ್ರಮವನ್ನು ಅಕ್ಟೋಬರ್ 24ರಂದು ಮುಕ್ಕ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿತ್ತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ ಎ.ರಾಘವೇಂದ್ರರಾವ್ ಅವರ ಆಶೀರ್ವಾದದೊಂದಿಗೆ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ್ ರಾವ್ ಮಾತನಾಡಿ, ಎಂಬಿಬಿಎಸ್ ವಿದ್ಯಾರ್ಥಿಗಳು ಆಯ್ಕೆ ಮಾಡುವ ಉದಾತ್ತ ಕೋರ್ಸ್ ಮತ್ತು ಇದು ದೊಡ್ಡ ಪ್ರಯಾಣವಾಗಿದೆ.

ಶ್ರೀನಿವಾಸ ಯೂನಿವರ್ಸಿಟಿ ಸಿಮ್ಸ್ ಮತ್ತು ಆರ್ಸಿ ಓರಿಯಂಟೇಶನ್ ಪ್ರೋಗ್ರಾಂ Read More »

ಕರಾವಳಿ

ಕಾರ್ಮಿಕರ ಕಾನೂನು ಅರಿವು- ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ. 25. ಕಾರ್ಮಿಕ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐ.ಇ.ಸಿ ಚಟುವಟಿಕೆಗಳಡಿ ಸಂಘಟಿತ ಮತ್ತು ಅಸಂಘಟಿತ ವರ್ಗದ ಎಲ್ಲಾ ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಆಡಳಿತ ವರ್ಗದವರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕಾನೂನುಗಳ ಬಗ್ಗೆ ಮತ್ತು ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ನವೆಂಬರ್ 4ರಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರ ಕಾನೂನು ಅರಿವು- ಕಾರ್ಯಾಗಾರ Read More »

ಕರಾವಳಿ
Scroll to Top