NewsKadaba Team

ಶತಮಾನೋತ್ಸವ ಸಂಭ್ರಮದಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ – ನಾಳೆ (ಎ.17) ನೂತನ ಪ್ರವೇಶ ದ್ವಾರದ ಉದ್ಘಾಟನೆ, ಕೃತಜ್ಞತಾ ಬಲಿಪೂಜೆ

ಕಡಬ: ಮಂಗಳೂರು ಧರ್ಮಪ್ರಾಂತದ ಆಧೀನದಲ್ಲಿರುವ ಕಡಬದ ಸೈಂಟ್ ಜೋಕಿಮ್ ಚರ್ಚ್ ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಎ. 17 ರಂದು ವಿವಿಧ ಧರ್ಮಪ್ರಾಂತಗಳ ಧರ್ಮಾಧ್ಯಕ್ಷರ ಉಪಸ್ಥಿತಿಯಲ್ಲಿ ಚರ್ಚ್‌ನ ನೂತನ ಪ್ರವೇಶ ದ್ವಾರದ ಉದ್ಘಾಟನೆ, ಶತಮಾನೋತ್ಸವ ಸಂಭ್ರಮದ ಸಭಾ ಕಾರ್ಯಕ್ರಮ ಹಾಗೂ ಕೃತಜ್ಞತಾ ಬಲಿಪೂಜೆ ನೆರವೇರಲಿದೆ. ಬೆಳಗ್ಗೆ ಘಂಟೆ 9.30ಕ್ಕೆ ಧರ್ಮಾಧ್ಯಕ್ಷರಿಗೆ ಸ್ವಾಗತ, 9.40ಕ್ಕೆ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ಆಶೀರ್ವಚನ, 10 ಘಂಟೆಗೆ ಕೃತಜ್ಞತಾ ಬಲಿಪೂಜೆ ನೆರವೇರಲಿದೆ. ಪೂರ್ವಾಹ್ನ 11.30 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮ […]

ಶತಮಾನೋತ್ಸವ ಸಂಭ್ರಮದಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ – ನಾಳೆ (ಎ.17) ನೂತನ ಪ್ರವೇಶ ದ್ವಾರದ ಉದ್ಘಾಟನೆ, ಕೃತಜ್ಞತಾ ಬಲಿಪೂಜೆ Read More »

ಕರ್ನಾಟಕ

ಇಂದು (ಎ.16) ಕಡಬದಲ್ಲಿ ಹಾಫಿಳ್ ಸಿರಾಜುದ್ದೀನ್ ಖಾಸಿಮಿಯವರಿಂದ ಮತ ಪ್ರಭಾಷಣ

(ನ್ಯೂಸ್ ಕಡಬ) newskadaba.com ಕಡಬ, ಎ.16. ಇಸ್ಲಾಮಿಕ್ ಪ್ರಭಾಷಣ ಲೋಕದ ಅಂತರರಾಷ್ಟ್ರೀಯ ತಾರೆ, ಬಹುಬೇಡಿಕೆಯ ವಾಗ್ಮಿ ಅಲ್-ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಪತ್ತಾನಪುರಂ ಕೇರಳ ಅವರು ಇಂದು ರಾತ್ರಿ ಕಡಬಕ್ಕೆ ಆಗಮಿಸಲಿದ್ದಾರೆ. ಸಿರಾಜುಲ್ ಹುದಾ ಮದರಸ ಪೊರಂತ್, ಕಡಬ ಹಾಗೂ ಅಲ್-ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಪೊರಂತ್ ನಲ್ಲಿ ಇಂದು ಸಂಜೆ (ಎಪ್ರಿಲ್ 16) ರಾತ್ರಿ 8 ಗಂಟೆಗೆ ಮತಪ್ರಭಾಷಣ ನಡೆಸಲಿದ್ದಾರೆ. ದೀನೀ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ತಿಳಿಸಿದ್ದಾರೆ.

ಇಂದು (ಎ.16) ಕಡಬದಲ್ಲಿ ಹಾಫಿಳ್ ಸಿರಾಜುದ್ದೀನ್ ಖಾಸಿಮಿಯವರಿಂದ ಮತ ಪ್ರಭಾಷಣ Read More »

ರಾಷ್ಟ್ರೀಯ ನ್ಯೂಸ್

ಕಡಬ: ರಬ್ಬರ್ ನಿಗಮದ ಕಾರ್ಮಿಕರಿಗೆ ಅನ್ಯಾಯದ ಆರೋಪ – ದಿಢೀರ್ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಎ.15. ರಾಜ್ಯ ರಬ್ಬರ್ ನಿಗಮದ ಸುಬ್ರಹ್ಮಣ್ಯ ವಿಭಾಗದ ಕಾರ್ಮಿಕರಿಗೆ ಅನ್ಯಾಯದ ಆರೋಪದ ಹಿನ್ನೆಲೆಯಲ್ಲಿ ಕಾರ್ಮಿಕರು ಕರ್ತವ್ಯ ಮುಗಿದ ಕೂಡಲೇ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ರಬ್ಬರ್ ನಿಗಮದ ಕಾನೂನಿನಂತೆ ಜವಾಬ್ದಾರಿ ವಹಿಸಿಕೊಟ್ಟ ರಬ್ಬರ್ ತೋಟಗಳ ಕಾರ್ಮಿಕರಿಗೆ ಹಾಲು ಕಡಿಮೆ ಬಂದಲ್ಲಿ ಪ್ರತೀ ಕೆಜಿಗೆ ಸಂಬಳದಲ್ಲಿ ಕಡಿತ ಮಾಡುವುದಾಗಿತ್ತು. ಆದರೆ ಇದೀಗ ಹಾಲು ಕಡಿಮೆ ಇರುವ ಪ್ರದೇಶದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವುದನ್ನು ಸ್ಥಗಿತಗೊಳಿಸಿ

ಕಡಬ: ರಬ್ಬರ್ ನಿಗಮದ ಕಾರ್ಮಿಕರಿಗೆ ಅನ್ಯಾಯದ ಆರೋಪ – ದಿಢೀರ್ ಪ್ರತಿಭಟನಾ ಸಭೆ Read More »

ಕರಾವಳಿ

ಮಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ – ನಗರದಲ್ಲಿ ಪೊಲೀಸ್ ಸರ್ಪಗಾವಲು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.14. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದು, ರೋಡ್ ಶೋಗೆ ಕ್ಷಣ ಗಣನೆ ಆರಂಭವಾಗಿದೆ. ಮೈಸೂರಿನಲ್ಲಿ ಸಾರ್ವಜನಿಕ ಸಮಾವೇಶ ಮುಗಿಸಿ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು ನೇರವಾಗಿ ಲೇಡಿಹಿಲ್‌ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ರಾತ್ರಿ 7.45ಕ್ಕೆ ರೋಡ್‌ ಶೋ ಆರಂಭವಾಗಲಿದ್ದು, ಈಗಾಗಲೇ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌,ಪಿವಿಎಸ್‌ ಮೂಲಕ ಸಾಗುವ ರೋಡ್‌ಶೋ

ಮಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ – ನಗರದಲ್ಲಿ ಪೊಲೀಸ್ ಸರ್ಪಗಾವಲು Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕರುಳು ಕಿರಿಕಿರಿ ಖಾಯಿಲೆ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಕರುಳು ಕಿರಿಕಿರಿ ಖಾಯಿಲೆ ದೊಡ್ಡ ಕರುಳನ್ನು ಭಾಧಿಸುವ ಬಹಳ ಕಿರಿಕಿರಿ ಉಂಟುಮಾಡುವ ಮತ್ತು ಮಾನಸಿಕವಾಗಿ ವ್ಯಕ್ತಿಗೆ ಹೆಚ್ಚು ಕಿರುಕುಳ ನೀಡುವ ಖಾಯಿಲೆಯಾಗಿದ್ದು, ಆಂಗ್ಲಭಾಷೆಯಲ್ಲಿ ‘ಇರಿಟೇಬಲ್ ಬೋವೆಲ್ ಸಿಂಡ್ರೋಮ್’ ಎಂದು ಕರೆಯುತ್ತಾರೆ. ಕ್ರಿಯಾತ್ಮಕವಾಗಿ ಕರುಳಿನ ಒಳಭಾಗದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೂ ಈ ರೋಗದಿಂದ ಬಳಲುತ್ತಿರುವವರು ಸಾಮಾನ್ಯವಾಗಿ ಮಾನಸಿಕವಾಗಿ ಕುಗ್ಗಿರುತ್ತಾರೆ. ಆತಂಕ, ಒತ್ತಡ, ಖಿನ್ನತೆ, ಮುಂತಾದ ಮಾನಸಿಕ ಲಕ್ಷಣಗಳು ಈ ರೋಗಿಗಳಲ್ಲಿ ಹೆಚ್ಚು ಕಂಡುಬರುತ್ತದೆ. ಇಂತಹ ರೋಗಿಗಳ ಮನಸ್ಸಿಗೆ ಮಾನಸಿಕ ನೆಮ್ಮದಿ

ಕರುಳು ಕಿರಿಕಿರಿ ಖಾಯಿಲೆ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನಾಳೆಯಿಂದ (ಎ.11) ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೂರು ದಿನಗಳ ಉಚಿತ ಇಸಿಜಿ, ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ ತಪಾಸಣಾ ಶಿಬಿರ

ಕಡಬ, ಎ.10. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಹಾಗೂ ನಾಡೋಳಿ ಡಯಾಗೋಸ್ಟಿಕ್ ಸೆಂಟರ್ ನ ಸಹಯೋಗದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಉಚಿತ ಇಸಿಜಿ, ಮಧುಮೇಹ ತಪಾಸಣೆ, ಹಿಮೋಗ್ಲೋಬಿನ್, ರಕ್ತದೊತ್ತಡ ಪರೀಕ್ಷಾ ಶಿಬಿರ ನಡೆಯಲಿದೆ. ನಾಳೆಯಿಂದ (ಎ.11) ಎಪ್ರಿಲ್ 13ರ ವರೆಗೆ ನಡೆಯಲಿರುವ ಶಿಬಿರವನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಉದ್ಘಾಟಿಸಲಿದ್ದಾರೆ. ಕಡಬ ತಾಲೂಕು

ನಾಳೆಯಿಂದ (ಎ.11) ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೂರು ದಿನಗಳ ಉಚಿತ ಇಸಿಜಿ, ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ ತಪಾಸಣಾ ಶಿಬಿರ Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಗದಗ ಜಿಲ್ಲೆಗೆ ಕೊನೆಯ ಸ್ಥಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.10. ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಯು ಕೊನೆಯ ಸ್ಥಾನ ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮೀ 598 ಅಂಕ‌ಗಳಿಸುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ ಡಿ. ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು 81.15 ಶೇ. ಫಲಿತಾಂಶ ಬಂದಿದೆ.  

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಗದಗ ಜಿಲ್ಲೆಗೆ ಕೊನೆಯ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ನಾಳೆಯವರೆಗೆ (ಜ.19) ಸೀಸನಲ್ ಸ್ಪೆಷಲ್ ಆಫರ್ – ಬ್ರೋಸ್ಟೆಡ್, ಮಿಲ್ಕ್ ಶೇಕ್ ಗಳಿಗೆ ಭರ್ಜರಿ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜ.18. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಜ.19) ಶುಕ್ರವಾರದ ವರೆಗೆ ಸೀಸನಲ್ ಸ್ಪೆಷಲ್ ಆಫರ್ ನಡೆಯಲಿದೆ. ಬ್ರೋಸ್ಟೆಡ್ ಚಿಕನ್ ಫುಲ್‌ 8 ಪೀಸ್, ಮಯನೀಸ್, ಫ್ರೆಂಚ್ ಫ್ರೈಸ್ ಜೊತೆಗೆ 600ml ಹನಾ ಡ್ರಿಂಕ್ಸ್ ಕೇವಲ 449 ರೂ., ಬ್ರೋಸ್ಟೆಡ್ ಚಿಕನ್ ಹಾಫ್ 4 ಪೀಸ್, ಮಯನೀಸ್, ಫ್ರೆಂಚ್ ಫ್ರೈಸ್ ಜೊತೆಗೆ 600ml ಹನಾ ಡ್ರಿಂಕ್ಸ್ ಕೇವಲ 249 ರೂ.,

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ನಾಳೆಯವರೆಗೆ (ಜ.19) ಸೀಸನಲ್ ಸ್ಪೆಷಲ್ ಆಫರ್ – ಬ್ರೋಸ್ಟೆಡ್, ಮಿಲ್ಕ್ ಶೇಕ್ ಗಳಿಗೆ ಭರ್ಜರಿ ಆಫರ್ Read More »

ಅಡುಗೆ, ಕರಾವಳಿ, ಲೈಫ್‍ಸ್ಟೈಲ್

ಕಡಬ: ರೈಲ್ವೇ ಹಳಿ ಪಕ್ಕದಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

(ನ್ಯೂಸ್ ಕಡಬ) newskadaba.com ಕಡಬ, ಜ‌.17. ಇಲ್ಲಿನ ಕೋಡಿಂಬಾಳ ರೈಲ್ವೇ ಹಳಿಯ ಪಕ್ಕದಲ್ಲೇ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62 ವ) ಎಂದು ಗುರುತಿಸಲಾಗಿದೆ. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ಮಾಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು

ಕಡಬ: ರೈಲ್ವೇ ಹಳಿ ಪಕ್ಕದಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ Read More »

ಕರ್ನಾಟಕ

ಕಡಬ: ಅನಾರೋಗ್ಯದಿಂದ ಪ್ರಥಮ ಬಿ.ಕಾಂ‌. ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.12. ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವತಿಯನ್ನು ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ, ಎಡಮಂಗಲ ನಿವಾಸಿ ತೃಪ್ತಿ ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಡಬ: ಅನಾರೋಗ್ಯದಿಂದ ಪ್ರಥಮ ಬಿ.ಕಾಂ‌. ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ
Scroll to Top