NewsKadaba Team

ಕಡಬ: ಕಾರುಗಳ ನಡುವೆ ಢಿಕ್ಕಿ – ಓರ್ವ ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.23. ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ. ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಓರ್ವ ಮೃತಪಟ್ಟಿದ್ದಾರೆ‌. ಹಲವರು ಗಾಯಗೊಂಡಿದ್ದು, ಕಡಬ ಸಮುದಾಯ […]

ಕಡಬ: ಕಾರುಗಳ ನಡುವೆ ಢಿಕ್ಕಿ – ಓರ್ವ ಮೃತ್ಯು, ಹಲವರು ಗಂಭೀರ Read More »

ಕರ್ನಾಟಕ

ಕಡಬ: ಮೇಯಲು ಬಿಟ್ಟಿದ್ದ ದನ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – ಕಾಡಾನೆ ದಾಳಿಯ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.6. ಮೇಯಲು ಬಿಟ್ಟಿದ್ದ ದನವೊಂದು ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕಡಬ ತಾಲೂಕು ಕೊಣಾಜೆ ದೊಡ್ಡಮನೆ ನಿವಾಸಿ ಅಶೋಕ್ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಡಲಾಗಿತ್ತು. ಸಂಜೆ ವೇಳೆಗೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ

ಕಡಬ: ಮೇಯಲು ಬಿಟ್ಟಿದ್ದ ದನ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – ಕಾಡಾನೆ ದಾಳಿಯ ಶಂಕೆ Read More »

ಕರಾವಳಿ

ನೆಲ್ಯಾಡಿ: ಶಿರಾಡಿ ಘಾಟ್ ನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಅಪರಿಚಿತ ವಾಹನ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ –

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.06. ಗೂಡ್ಸ್ ಟೆಂಪೋವೊಂದಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ಟೆಂಪೋಲ್ಲಿದ್ದ ಇಬ್ಬರು ಮೃತಪಟ್ಟ ದಾರುಣ ಘಟನೆ ಶಿರಾಡಿ ಘಾಟ್ ನ ಗುಂಡ್ಯ ಕೆಂಪು ಹೊಳೆ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ ಗೂಡ್ಸ್ ವಾಹನದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರನ್ನು ಹಾಸನ ನಿವಾಸಿಗಳು ಎಂದು ಗುರುತಿಸಲಾಗಿದೆ. ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪ ಈ ಘಟನೆ ನಡೆದಿದ್ದು, ಯಾವುದೋ ಅಪರಿಚಿತ ಘನ ವಾಹನ

ನೆಲ್ಯಾಡಿ: ಶಿರಾಡಿ ಘಾಟ್ ನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಅಪರಿಚಿತ ವಾಹನ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ – Read More »

ಕರಾವಳಿ

ಕಡಬದ ಅಡಿಗ ಮೋಟಾರ್ಸ್ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಂಡು ಇಂದು(ಡಿ.04) ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಕಳೆದ ಏಳು ವರ್ಷಗಳಿಂದ ಕಡಬದಲ್ಲಿ ಕಾರ್ಯಾಚರಿಸುತ್ತಿರುವ ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಮಾರಾಟ ಸಂಸ್ಥೆ ಅಡಿಗ ಮೋಟಾರ್ಸ್ ಇಂದು (ಡಿ.04) ಪ್ರೋಪೆಲ್ ಆಟೋ ಗ್ಯಾಸ್ ಸ್ಟೇಷನ್ ಮುಂಭಾಗದಲ್ಲಿ ವಿಸ್ತ್ರತವಾದ ಹಾಗೂ ಸುಸಜ್ಜಿತವಾದ ಕಟ್ಟಡದಲ್ಲಿ ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ. ಇಂದು ಬೆಳಿಗ್ಗೆ ಗಂಟೆ 10:30ಕ್ಕೆ ಸರಿಯಾಗಿ ಆಹ್ವಾನಿತ ಗಣ್ಯರಿಂದ ದೀಪ ಪ್ರಜ್ವಲನೆಯೊಂದಿಗೆ ಶುಭಾರಂಭಗೊಳ್ಳಲಿದ್ದು, ಉದ್ಘಾಟನೆಯ ಪ್ರಯುಕ್ತ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್ ಸೌಲಭ್ಯ ಕಲ್ಪಿಸಲಾಗಿದೆ. ಕಡಬದ ಅಡಿಗ ಮೋಟಾರ್ಸ್ ಸಂಸ್ಥೆಯು ದಕ್ಷಿಣ ಕನ್ನಡ

ಕಡಬದ ಅಡಿಗ ಮೋಟಾರ್ಸ್ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಂಡು ಇಂದು(ಡಿ.04) ಶುಭಾರಂಭ Read More »

ಕರಾವಳಿ

ಕಡಬದಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ – ಆತಂಕದಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಪರಿಸರದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಕೃಷಿಕರು ಕಂಗೆಟ್ಟಿದ್ದಾರೆ. ಶುಕ್ರವಾರ ಸಂಜೆ ವೇಳೆಗೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಹತ್ಯಡ್ಕ ಕುದ್ರಡ್ಕ ಸಮೀಪ ತೋಟವೊಂದರಲ್ಲಿ ಕಾಡಾನೆ ಸಂಚರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಯು ಇಬ್ಬರನ್ನು ಕೊಂದು ಹಾಕಿತ್ತು. ತದನಂತರ ಊರವರ ಒತ್ತಡಕ್ಕೆ ಮಣಿದ ಅರಣ್ಯ ಇಲಾಖೆಯು ಕಾಡಾನೆ ಸ್ಥಳಾಂತರ ಕಾರ್ಯಾಚರಣೆ ನಡೆಸಿದ್ದು, ಒಂದು ಆನೆಯನ್ನು ಸೆರೆ ಹಿಡಿದಿದ್ದರು.

ಕಡಬದಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ – ಆತಂಕದಲ್ಲಿ ಜನತೆ Read More »

ಕರಾವಳಿ

ಕಡಬ: ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ

ಕಡಬ: ಸಮಾಜ ದೇವಸ್ಥಾನದಂತೆ. ಇಲ್ಲಿ ಪ್ರತಿಯೊಬ್ಬರಿಗೂ ಕರ್ತವ್ಯ ಇದೆ. ಆ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಕಡಬ ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭಾನುವಾರ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ, ಸಮುದಾಯದ ಜನಸಂಖ್ಯಾ ಸಮೀಕ್ಷೆ ಹಾಗೂ ಭವನ ನಿರ್ಮಾಣ ಸಹಾಯಾರ್ಥ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಹಿರಿಯರ ಮಾರ್ಗದರ್ಶನದೊಂದಿಗೆ ಪರಿಶ್ರಮದಿಂದ ಸಮಾಜವನ್ನು ಕಟ್ಟಿ

ಕಡಬ: ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಅಯ್ಯಪ್ಪ ಸ್ವಾಮಿಯ ತುಳು ಭಕ್ತಿಗೀತೆ ‘ಶಬರಿಗಿರಿತ ಅಯ್ಯಪ್ಪ’ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ನ.28. ದೀಕ್ಷಿತ್ ದೀಚು ಕ್ರಿಯೇಷನ್ ಅರ್ಪಿಸುವ ಅಯ್ಯಪ್ಪ ಸ್ವಾಮಿಯ ತುಳು ಭಕ್ತಿ ಗೀತೆ ಶಬರಿಗಿರಿತ ಅಯ್ಯಪ್ಪ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಹಲವಾರು ಭಕ್ತಿ ಗೀತೆ ಹಾಗೂ ಆಲ್ಬಮ್ ಸಾಂಗ್ ಗಳನ್ನು ಹಾಡಿರುವ ಉದಯೋನ್ಮುಖ ಗಾಯಕ ದೀಕ್ಷಿತ್ ಸುವರ್ಣ ಕೊಯಿಲ ಇವರ ಇಂಪಾದ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಚಂದ್ರಶೇಖರ್ ಹೆಗ್ಡೆ ಪುತ್ತೂರು ಸಾಹಿತ್ಯದೊಂದಿಗೆ ಕಬಕ ಶ್ರೀ ರಾಜ್ ಮ್ಯೂಸಿಕ್ ವರ್ಲ್ಡ್ ನಲ್ಲಿ ಧ್ವನಿ ಮುದ್ರಣ ಗೊಂಡಿದೆ. ಹಾಡು ಮೂಡಿಬಂದಿದ್ದು,

ಅಯ್ಯಪ್ಪ ಸ್ವಾಮಿಯ ತುಳು ಭಕ್ತಿಗೀತೆ ‘ಶಬರಿಗಿರಿತ ಅಯ್ಯಪ್ಪ’ ಬಿಡುಗಡೆ Read More »

ಕರಾವಳಿ

ಕಾರು ಹಾಗೂ ಬೋರ್’ವೆಲ್ ಲಾರಿ ನಡುವೆ ಢಿಕ್ಕಿ – ಕಂಬಳ ವೀಕ್ಷಿಸಿ ಹಿಂತಿರುಗುತ್ತಿದ್ದ ಕರಾವಳಿಯ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.26. ಬೋರ್ ವೆಲ್ ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕರಾವಳಿಯ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಣಿಗಲ್ ಠಾಣಾ ವ್ಯಾಪ್ತಿಯ ಕೊತ್ತಗೆರೆ ಹೋಬಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಬಜಪೆ ನಿವಾಸಿ ಕಿಶಾನ್ ಶೆಟ್ಟಿ, ಫಿಲಿಪ್ ಲೋಬೋ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಕಂಬಳ ಕಾರ್ಯಕ್ರಮವನ್ನು ವೀಕ್ಷಿಸಿ

ಕಾರು ಹಾಗೂ ಬೋರ್’ವೆಲ್ ಲಾರಿ ನಡುವೆ ಢಿಕ್ಕಿ – ಕಂಬಳ ವೀಕ್ಷಿಸಿ ಹಿಂತಿರುಗುತ್ತಿದ್ದ ಕರಾವಳಿಯ ಇಬ್ಬರು ಮೃತ್ಯು Read More »

ಕರ್ನಾಟಕ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.01. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸುರೇಂದ್ರ ಮೆಹ್ತಾ (37) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕೌಕ್ರಾಡಿ ಗ್ರಾಮ ಪಂಚಾಯತಿ ಬಳಿ ಈ ದುರ್ಘಟನೆ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಡಬ, ಅ.29. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ Read More »

ಕರಾವಳಿ
Scroll to Top