NewsKadaba Team

ಕೃಷಿ ಕಾಯ್ದೆ ವಿರೋಧಿಸಿ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ಸುರಿದು ಪ್ರತಿಭಟನೆ ಮಾಡಿದ ರೈತರು

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 02. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪೊಂದು ಪಂಜಾಬ್‌ ನ ಹೊಶಿಯಾರ್‌ ಪುರದಲ್ಲಿರುವ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ತಂದು ಸುರಿದಿದ್ದಾರೆ ಎಂದು ಆಪಾದಿಸಲಾಗಿದೆ.   ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅಮರೀಂದರ್ ಸಿಂಗ್, “ಪ್ರತಿಭಟನಾ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ಸುರಿದು ಪ್ರತಿಭಟನೆ ಮಾಡಿದ ರೈತರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಸ್ಕೂಟರ್- ಲಾರಿ ನಡುವೆ ಡಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜ. 02. ಸ್ಕೂಟರ್‌‌ ಹಾಗೂ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ.   ಮೃತಪಟ್ಟವರನ್ನು ಹೂಡೆ ನಿವಾಸಿ ಐಸಾಕ್‌‌ ಎಂದು ಗುರುತಿಸಲಾಗಿದೆ. ಹೂಡೆ ಕಡೆಯಿಂದ ಮಲ್ಪೆ ಕಡೆಗೆ ಬರುತ್ತಿದ್ದ ಸ್ಕೂಟರಿಗೆ ಎದುರಿನಿಂದ ಬಂದ ಮೀನಿನ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಸ್ಕೂಟರ್‌ ಸವಾರ ಐಸಾಕ್‌ ಎಂಬವರನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮಾರ್ಗದ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಉಡುಪಿ: ಸ್ಕೂಟರ್- ಲಾರಿ ನಡುವೆ ಡಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಮಾರಧಾರ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯ ಪುನರಾರಂಭ

(ನ್ಯೂಸ್ ಕಡಬ) newskadaba.com ಕಾಣಿಯೂರು, ಜ. 01. ಕುಡಿಯುವ ನೀರಿನ ಯೋಜನೆಗಾಗಿ ಕಡಬ ತಾಲೂಕಿನ ಶಾಂತಿಮೊಗರಿನ ಕುಮಾರಾಧಾರ ನದಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಯು ಪುನರಾರಂಭಗೊಂಡಿದೆ. ತಾಲೂಕಿನ ಕುದ್ಮಾರು, ಸವಣೂರು, ಬೆಳಂದೂರು, ಕಾಣಿಯೂರು, ಪುಣ್ಚಪ್ಪಾಡಿ, ಆಲಂಕಾರು, ಪೆರಾಬೆ ಹಾಗೂ ಕುಂತೂರು ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದೇ ಬರುವ ಮೇ ತಿಂಗಳೊಳಗೆ ಕಾಮಗಾರಿಯು ಪೂರ್ಣವಾಗುವ ನಿರೀಕ್ಷೆಯನ್ನು ಹೊಂದಲಾಗಿದೆ.

ಕುಮಾರಧಾರ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯ ಪುನರಾರಂಭ Read More »

ಕರಾವಳಿ, ಕರ್ನಾಟಕ

ಜ. 7ರಂದು ಬಂಟ್ವಾಳ ತಾ. ಪಂ. ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಬಂಟ್ವಾಳ ತಾಲೂಕು ಪಂಚಾಯತ್‍ ನ ಸಾಮಾನ್ಯ ಸಭೆಯು ಜನವರಿ 7 ರಂದು ಬೆಳಿಗ್ಗೆ 10.30ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್‍ ನ  ಎಸ್.ಜಿ.ಎಸ್.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜ. 7ರಂದು ಬಂಟ್ವಾಳ ತಾ. ಪಂ. ಸಾಮಾನ್ಯ ಸಭೆ Read More »

ಕರಾವಳಿ, ಕರ್ನಾಟಕ

ಈಜುಕೊಳಗಳನ್ನು ತೆರೆಯದಂತೆ ಹಾಗೂ ಗ್ರಾಹಕರು ಅಥವಾ ಸಾರ್ವಜನಿಕರು ಬಳಸದಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಜಿಲ್ಲೆಯಲ್ಲಿ  ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ 9 ರಂತೆ ಕಂಟೈನ್ ಮೆಂಟ್ ವಲಯದ ಹೊರಗೆ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶಕ್ಕಾಗಿ ಮಾತ್ರವೇ ಈಜುಕೊಳಗಳನ್ನು ತೆರೆಯಲು ಹಾಗೂ ಬಳಕೆ ಮಾಡಲು ಅವಕಾಶವಿರುತ್ತದೆ. ಇದನ್ನು  ಹೊರತುಪಡಿಸಿ ಯಾವುದೇ ಹೋಟೆಲ್/ ಲಾಡ್ಜ್/ ರೆಸಾರ್ಟ್ ಗಳಲ್ಲಿ ಈಜುಕೊಳಗಳನ್ನು ತೆರೆಯಲು ಹಾಗೂ ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿರುವುದಿಲ್ಲ. ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಯಾವುದೇ

ಈಜುಕೊಳಗಳನ್ನು ತೆರೆಯದಂತೆ ಹಾಗೂ ಗ್ರಾಹಕರು ಅಥವಾ ಸಾರ್ವಜನಿಕರು ಬಳಸದಂತೆ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ

ಮಕ್ಕಳಿಗೆ ಉಚಿತವಾಗಿ ಆಪ್ತ ಸಮಾಲೋಚನೆ ➤ ಟೋಲ್ ಫ್ರೀ ಸಂಖ್ಯೆ 14499 ಕರೆ ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕರ್ನಾಟಕದಲ್ಲಿ ಆಪ್ತ-ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಉಚಿತ “ಟೆಲಿ-ಕೌನ್ಸ್‍  ಲಿಂಗ್” ಸೌಲಭ್ಯವನ್ನು ನೀಡಲು ಟೋಲ್ ಫ್ರೀ ಸಂಖ್ಯೆ 14499 ಸ್ಥಾಪಿಸಲಾಗಿದೆ. ಆಪ್ತ ಸಮಾಲೋಚನೆ ಬಯಸುವ ರಾಜ್ಯದ ಎಲ್ಲಾ ಮಕ್ಕಳು ಹಾಗೂ ಪೋಷಕರು ಈ ಸೌಲಭ್ಯವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0824-2440004 ಅಥವಾ E-mail:depu.mnglr@gmail.com ನ್ನು ವೀಕ್ಷಿಸಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳಿಗೆ ಉಚಿತವಾಗಿ ಆಪ್ತ ಸಮಾಲೋಚನೆ ➤ ಟೋಲ್ ಫ್ರೀ ಸಂಖ್ಯೆ 14499 ಕರೆ ಮಾಡಿ Read More »

ಕರಾವಳಿ

ಮಂಗಳೂರು: 2021ರ ಬ್ಯಾರಿ ಕ್ಯಾಲೆಂಡರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಬಿಡುಗಡೆಗೊಳಿಸಿದ ನೂತನ ಬ್ಯಾರಿ ಲಿಪಿ ಹಾಗೂ ಬ್ಯಾರಿ ಸಂಖ್ಯೆಯನ್ನು ಬಳಸಿಕೊಂಡು 2021ರ ಹೊಸ ವರ್ಷದ ಕ್ಯಾಲೆಂಡರನ್ನು (ಬ್ಯಾರಿ ನಾಲ್ ಕನಕ್ಕ್) ಗುರುವಾರ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಕ್ಯಾಲೆಂಡರ್ ಬಿಡುಗಡೆಗೊಳಿಸಿದ ನಂತರ ಅವರು ಮಾತನಾಡಿ, ಪ್ರತಿ ಬ್ಯಾರಿ ಭಾಷಿಕರು ಸುಲಭವಾಗಿ ಮತ್ತು ಸರಳವಾಗಿ ನೂತನ ಬ್ಯಾರಿ ಲಿಪಿಯನ್ನು ಕಲಿಯಲು ಹಾಗೂ ನೆನಪಿನಲ್ಲಿಟ್ಟುಕೊಳ್ಳಲು  ಈ ಕ್ಯಾಲೆಂಡರ್ ಸಹಕಾರಿಯಾಗಿದೆ. ನೂತನ

ಮಂಗಳೂರು: 2021ರ ಬ್ಯಾರಿ ಕ್ಯಾಲೆಂಡರ್ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಅಡ್ವಾನ್ಸ್ಡ್ ಸಿದ್ಧ ಉಡುಪು ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸ್ತುತ ಸಾಲಿಗೆ ಅಡ್ವಾನ್ಸ್ಡ್ ಎಸ್.ಎಂ.ಒ (ಸಿದ್ಧ ಉಡುಪು ತಯಾರಿಕಾ ತರಬೇತಿ) ಪಡೆದು ಉದ್ಯೋಗವಂತರಾಗಲು ದಕ್ಷಿಣ ಕನ್ನಡ ಜಿಲ್ಲೆಯ ಸಾಮಾನ್ಯ/ ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡದ ಅರ್ಹ ಪುರುಷ/ ಮಹಿಳಾ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಯೆಯ್ಯಾಡಿ, ಮಂಗಳೂರು  ದೂರವಾಣಿ ಸಂಖ್ಯೆ: 0824-2225056/ 9481628584 ಹಾಗೂ ಹತ್ತಿರದ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸಂಪರ್ಕಿಸಲು

ಅಡ್ವಾನ್ಸ್ಡ್ ಸಿದ್ಧ ಉಡುಪು ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಅಮರಶಿಲ್ಪಿ ಜಕಣಾಚಾರ್ಯರ ಕಲೆ ಇಂದಿಗೂ ಸಹ ಜನರ ಮಾನಸದಲ್ಲಿ ಉಳಿದಿದೆ ➤ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಅಮರ  ಶಿಲ್ಪಿ ಜಕ್ಕಣಾಚಾರ್ಯ ನಿರ್ಮಿಸಿರುವ ಸುಪ್ರಸಿದ್ಧ ಬೇಲೂರು, ಹಳೆಬೀಡಿನ ದೇವಾಲಯಗಳ ಶಿಲ್ಪಕಲೆ ವಿಶ್ವ ವಿಖ್ಯಾತಿ ಹೊಂದುವುದರ ಜೊತೆಗೆ ಇಂದಿಗೂ ಜನಮಾನಸದಲ್ಲಿ ಉಳಿದಿದೆ  ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ವತಿಯಿಂದ ಆಯೋಜಿಸಿದ ಅಮರ ಶಿಲ್ಪಿ

ಅಮರಶಿಲ್ಪಿ ಜಕಣಾಚಾರ್ಯರ ಕಲೆ ಇಂದಿಗೂ ಸಹ ಜನರ ಮಾನಸದಲ್ಲಿ ಉಳಿದಿದೆ ➤ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು , ಕೊರೊನಾ ನಿಯಂತ್ರಣಕ್ಕೆ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್‍ ಫೋನ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದರು. ಪೋಷಣ ಅಭಿಯಾನ

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top