NewsKadaba Team

ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ 6 – 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.01. ಸರಕಾರದ ಆದೇಶದಂತೆ 2021ರ ಹೊಸ ವರುಷದ ಮೊದಲ ದಿನವೇ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯನ್ನು ಪ್ರಾರಂಭಿಸಲಾಯಿತು. ಪ್ರಸ್ತುತ ದಿನದ ಸಮಸ್ಯೆಯಿಂದ ಶಾಲೆಯಲ್ಲಿ ಶಿಕ್ಷಣದ ಸೌಲಭ್ಯದಿಂದ ವಂಚಿತರಾಗಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಕರು ಮತ್ತು ಪೋಷಕರ ಅಭಿಪ್ರಾಯದ ಹಿನ್ನಲೆಯಲ್ಲಿ ಸರಕಾರವು ವಿದ್ಯಾಗಮ ಕಾರ್ಯಕ್ರಮಕ್ಕೆ ಒಪ್ಪಿಗೆಯನ್ನುಸೂಚಿಸಿತು. ಅದೇ ಪ್ರಕಾರವಾಗಿ ರಾಜ್ಯದಾದ್ಯಂತ ಎಲ್ಲಾ ಶಾಲೆಗಳು ಇಂದೇ ಶಾಲಾ ಪುನರಾರಂಭಕ್ಕೆ ನಿರ್ಧರಿಸಿತ್ತು. ಈ ನಿಟ್ಟಿನಲ್ಲಿ ಶಕ್ತಿ ವಿದ್ಯಾಸಂಸ್ಥೆಯು ಈ ವಿದ್ಯಾಗಮ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು […]

ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ 6 – 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭ Read More »

ಕರಾವಳಿ

ಎನ್.ಎಸ್.ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜೆಸಿಐ ಸುಳ್ಯ ಸಿಟಿ ವತಿಯಿಂದ ಹೊಸ ವರ್ಷಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 01. ಜೆಸಿಐ ಸುಳ್ಯ ಸಿಟಿ ಹಾಗೂ ಎನ್‌.ಎಸ್‌.ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ವತಿಯಿಂದ “ಹೊಸ ವರ್ಷ -2021” ರ ಆಚರಣಾ ಕಾರ್ಯಕ್ರಮವನ್ನು ತೆಂಗಿನ ಗಿಡವನ್ನು ನೆಡುವ ಮೂಲಕ ಕೊಡಿಯಾಲ್ ಬೈಲ್ ಕಾಲೋನಿಯಲ್ಲಿ ಆಚರಿಸಲಾಯಿತು.   ಈ ಕಾರ್ಯಕ್ರಮದಲ್ಲಿ ಉಬರಡ್ಕ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಹರೀಶ್ ರೈ ಉಬರಡ್ಕ, ಉಬರಡ್ಕ ಗ್ರಾಮ ಪಂಚಾಯತ್ ನ ಸದಸ್ಯರಾದ ಮಮತಾ ಕುದ್ಪಾಜೆ, ನಿವೃತ್ತ ಸೈನಿಕರಾದ ನವೀನ

ಎನ್.ಎಸ್.ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜೆಸಿಐ ಸುಳ್ಯ ಸಿಟಿ ವತಿಯಿಂದ ಹೊಸ ವರ್ಷಾಚರಣೆ Read More »

ಕರಾವಳಿ, ಕರ್ನಾಟಕ

ಇಂದು (ಜ. 01) ಉಭಯ ತಾಲೂಕಿನಲ್ಲಿ ತಲಾ ಒಂದೊಂದು ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜ. 01. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖಾ ವರದಿಯಂತೆ ಒಂದೊಂದು ಕೊರೋನಾ ಪತ್ತೆಯಾಗಿದೆ. ಪುತ್ತೂರು ತಾಲೂಕಿನ ನೆಲ್ಲಿಕಟ್ಟೆ ನಿವಾಸಿ 31 ವರ್ಷದ ವ್ಯಕ್ತಿ, ಕಡಬ ತಾಲೂಕಿನ ಕೋಲಡ್ಕದ 41 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಡಪಟ್ಟಿದೆ.

ಇಂದು (ಜ. 01) ಉಭಯ ತಾಲೂಕಿನಲ್ಲಿ ತಲಾ ಒಂದೊಂದು ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಫೇಸ್ ಕ್ರೀಂ ಸೇವಿಸಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಜ. 01. ಮುಖಕ್ಕೆ ಹಚ್ಚುವ ಫೇಸ್ ಕ್ರೀಂ ತಿಂದು ಮಗುವೊಂದು ಮೃತಪಟ್ಟ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಬೆಳಗನಹಳ್ಳಿಯಲ್ಲಿ ನಡೆದಿದೆ. ಮಹೇಶ್ ಹಾಗೂ ಕನ್ಯಾ ದಂಪತಿಯ ಪುತ್ರ ಮನ್ವಿಷ್ ಮೃತಪಟ್ಟ ಮಗು. ಈತ ಸಂಜೆ ವೇಳೆ ಮನೆಯಲ್ಲಿ ಆಟವಾಡುತ್ತಿದ್ದಾಗ ಮುಖಕ್ಕೆ ಹಚ್ಚುವ ಕ್ರೀಂ ತಿಂದಿದ್ದು, ಪೋಷಕರು ಇದನ್ನು ಗಮನಿಸಿರಲಿಲ್ಲ. ರಾತ್ರಿ ಹತ್ತು ಗಂಟೆಯ ಸಮಯ ವಾಂತಿ ಮಾಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.

ಫೇಸ್ ಕ್ರೀಂ ಸೇವಿಸಿ ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಶಾಲಾ- ಕಾಲೇಜು ಪುನರಾರಂಭ ➤ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕ ಉಚಿತವಾಗಿ ಪ್ರಯಾಣಿಸಲು ಅವಕಾಶ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 01. ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆಯು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಕಳೆದ ವರ್ಷದ 2019-20ರಲ್ಲಿ ವಿತರಿಸಲಾಗದ ಬಸ್ ಪಾಸ್ ಮೂಲಕ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಹೀಗಾಗಿ ವಿದ್ಯಾರ್ಥಿಗಳು ಹಳೆಯ ಬಸ್ ಪಾಸ್, ಶಾಲೆಗೆ ದಾಖಲಾಗಿರುವ ಶುಲ್ಕ ಪಾವತಿ ರಸೀದಿ ಹಾಗೂ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣ ಮಾಡಬಹುದಾಗಿದೆ. ಇಂದಿನಿಂದ ಸರಕಾರದ ಮುಂದಿನ ಆದೇಶದವರೆಗೆ ಹಳೆಯ ಪಾಸ್ ಮೂಲಕ ಸಂಚರಿಸಬಹುದು.

ಇಂದಿನಿಂದ ಶಾಲಾ- ಕಾಲೇಜು ಪುನರಾರಂಭ ➤ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕ ಉಚಿತವಾಗಿ ಪ್ರಯಾಣಿಸಲು ಅವಕಾಶ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜ. 02) ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 01. ಡಿಸೆಂಬರ್ ನಲ್ಲಿ ದೇಶದ ನಾಲ್ಕು ರಾಜ್ಯಗಳಲ್ಲಿ ನಡೆಸಿದ ಕೊರೋನಾ ಲಸಿಕೆ ವಿತರಣಾ ತಾಲೀಮನ್ನು ಎಲ್ಲಾ ರಾಜ್ಯಗಳಲ್ಲಿ ನಾಳೆ (ಜ. 02) ನಡೆಸಲು ಕೆಂದ್ರ ಸೂಚಿಸಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ನಾಳೆ ತಾಲೀಮು ನಡೆಯಲಿದೆ. ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಲಸಿಕೆ ವಿತರಣೆ ನಡೆಯಲಿದೆ.

ನಾಳೆ (ಜ. 02) ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆ Read More »

ಕರ್ನಾಟಕ

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ಗುಪ್ತಾಂಗದಲ್ಲಿ ಅಡಗಿಸಿಟ್ಟು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು 1.26 ಕೆಜಿ ಚಿನ್ನ ಸಹಿತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ಮಹಮ್ಮದ್ ಜಹೀರ್ ಹಾಗೂ ವಾಸಿಂ ಮರ್ಜನ್ ಎಂದು ಗುರುತಿಸಲಾಗಿದೆ. ಇವರು ಡಿ. 30ರಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಅಕ್ರಮ ಮರಳು ಸಾಗಾಟ ➤ ಎರಡು ಮಿನಿ ಟಿಪ್ಪರ್ ಸೇರಿದಂತೆ ಐದು ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 01. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಮಿನಿ ಟಿಪ್ಪರ್ ಸೇರಿದಂತೆ ಐದು ಟಿಪ್ಪರ್ ಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಅಕ್ರಮ ಮರಳು ಸಾಗಾಟದ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಗಣಿ ಅಧಿಕಾರಿಗಳು ಮಣಿಪಾಲ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ಗ್ರಾಮದ ಜಂಕ್ಷನ್ ನಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಮಿನಿ ಟಿಪ್ಪರ್ ಹಾಗೂ ತಲಾ ಆರು ಟನ್ ಮರಳನ್ನು ವಶಪಡಿಸಿದ್ದಾರೆ. ಮತ್ತೊಂದೆಡೆ ಪುತ್ತೂರು ರಾ.ಹೆದ್ದಾರಿಯ ಬಳಿ ಮೂರು

ಉಡುಪಿ: ಅಕ್ರಮ ಮರಳು ಸಾಗಾಟ ➤ ಎರಡು ಮಿನಿ ಟಿಪ್ಪರ್ ಸೇರಿದಂತೆ ಐದು ಟಿಪ್ಪರ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಡ್, ವಾದ್ಯಗಳ ಮೂಲಕ ಸ್ವಾಗತ

(ನ್ಯೂಸ್ ಕಡಬ) newskadaba.com ಮರ್ಕಂಜ, ಜ. 01. ಕೊರೋನಾದಿಂದಾಗಿ ಮುಚ್ಚಲಾಗಿದ್ದ ಶಾಲೆಗಳಿಗೆ ಇಂದಿನಿಂದ ಪುನರಾರಂಭಗೊಂಡಿದ್ದು, ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿಶೇಷ ವ್ಯಾಂಡ್ ವಾದ್ಯಗಳಿಂದ ಸ್ವಾಗತಿಸಲಾಗಿದೆ. ಜೊತೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನೂ ಕೂಡಾ ಅನುಸರಿಸಲಾಗಿದೆ. ವಿದ್ಯಾರ್ಥಿಗಳನ್ನು ಬರ ಮಾಡಿಕೊಳ್ಳುವ ದೃಶ್ಯವೂ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಡ್, ವಾದ್ಯಗಳ ಮೂಲಕ ಸ್ವಾಗತ Read More »

ಕರಾವಳಿ, ಕರ್ನಾಟಕ

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದ ವೇಳೆ ಢಿಕ್ಕಿ ಹೊಡೆದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 01. ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ. ಕಾಜರಬೈಲು ರಾ.ಹೆದ್ದಾರಿಯಲ್ಲಿ ಮುದ್ದೇಬಿಹಾಳ ಮೂಲದ ಶರಣು, ಸಿದ್ದು, ತೌಸೀಫ್ ಹಾಗೂ ಬಸವರಾಜು ಎಂಬವರು ಬರೆಯುತ್ತಿದ್ದ ವೇಳೆ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು, ಇವರ ಪೈಕಿ ಶರಣು ಹಾಗೂ ಸಿದ್ದು ಮೃತಪಟ್ಟಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದ ವೇಳೆ ಢಿಕ್ಕಿ ಹೊಡೆದ ಕಾರು ➤ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top