NewsKadaba Team

ಹೋರಾಟ ಸಮಿತಿ ವತಿಯಿಂದ ಉ.ಕ ಧ್ವಜ ಹಾರಿಸುವ ಮೂಲಕ ಪ್ರತ್ಯೇಕ ರಾಜ್ಯ ಮಾಡುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ.01. ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜ ಹಾರಿಸುವ ಮೂಲಕ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಒತ್ತಾಯಿಸಲಾಗಿದೆ.     ಗಡಿನಾಡು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪಟ್ಟಣದಲ್ಲಿ ಪೊಲೀಸರ ಕಣ್ಣು ತಪ್ಪಿಸಿ, ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಅಡಿವೇಶ್ ಇಟಗಿಯವರ ನೇತೃತ್ವದಲ್ಲಿ ಪ್ರತ್ಯೇಕ ಧ್ವಜಾರೋಹಣ ಮಾಡಲಾಗಿದೆ.

ಹೋರಾಟ ಸಮಿತಿ ವತಿಯಿಂದ ಉ.ಕ ಧ್ವಜ ಹಾರಿಸುವ ಮೂಲಕ ಪ್ರತ್ಯೇಕ ರಾಜ್ಯ ಮಾಡುವಂತೆ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿ ಕಳವಿಗೆಂದು ಶೀಟ್ ಮುರಿದ ಕಳ್ಳರು…! ➤ ನಗದು ಸಿಗದಿದ್ದಾಗ ಹತಾಶೆಗೊಂಡು ಅಂಗಡಿಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 01.  ಅಂಗಡಿ ಕಳವಿಗೆ ಬಂದ ಕಳ್ಳರು, ಅಂಗಡಿಯಲ್ಲಿ ಹುಡುಕಾಟ ನಡೆಸಿ ಏನೂ ಸಿಗದೇ ಇದ್ದಾಗ ಹತಾಶರಾಗಿ ಅಂಗಡಿಯಲ್ಲಿನ ಅಪಾರ ಪ್ರಮಾಣದ ಸೊತ್ತುಗಳಿಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ‌. ಕಲಬುರ್ಗಿಯ ಎ.ಪಿ.ಎಂ.ಸಿ. ಆವರಣದಲ್ಲಿನ ಅಂಗಡಿಯಲ್ಲಿ ಈ ದುರ್ಘಟನೆ ನಡೆದಿದ್ದು,  ಸುಮಾರು 80 ಲಕ್ಷ ರೂಪಾಯಿ ಮೌಲ್ಯದ ಕಿರಾಣಿ ಸಾಮಾನು ಸುಟ್ಟು ಕರಕಲಾಗಿದೆ.  ಲಕ್ಷಾಂತರ ರೂಪಾಯಿ ನಗದು ಸಿಗಬಹುದೆಂದು ಶೆಡ್ ಮುರಿದು ಅಂಗಡಿಗೆ ನುಗ್ಗಿದ ಕಳ್ಳರು ಯಾವುದೇ ಹಣ ಸಿಗದೇ

ಅಂಗಡಿ ಕಳವಿಗೆಂದು ಶೀಟ್ ಮುರಿದ ಕಳ್ಳರು…! ➤ ನಗದು ಸಿಗದಿದ್ದಾಗ ಹತಾಶೆಗೊಂಡು ಅಂಗಡಿಗೆ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಇಟಿ ಕೌನ್ಸೆಲಿಂಗ್ ಅವಧಿ ಜ.15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 01.  ರಾಜ್ಯದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ.15ರ ತನಕ ಕಾಲಾವಕಾಶವನ್ನು ವಿಸ್ತರಣೆ ಮಾಡಿ ಅನುಮತಿ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌‌.ಅಶ್ವತ್ಥ್‌‌‌‌ ನಾರಾಯಣ ಹೇಳಿದ್ದಾರೆ.     “ಈ ಹಿನ್ನೆಲೆ ಇನ್ನೊಂದು ಸುತ್ತಿನ ಕೌನ್ಸೆಲಿಂಗ್‌‌‌ ನಡೆಸಲಾಗುವುದು. ಇದರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೌನ್ಸೆಲಿಂಗ್‌  ಶೀಘ್ರದಲ್ಲೇ ಪ್ರಕಟಿಸಲಿದೆ” ಎಂದಿದ್ದಾರೆ.  

ಸಿಇಟಿ ಕೌನ್ಸೆಲಿಂಗ್ ಅವಧಿ ಜ.15ರ ವರೆಗೆ ವಿಸ್ತರಣೆ Read More »

ಕರಾವಳಿ

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ತಡೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜ.01. 17 ವರ್ಷದ ಬಾಲಕಿಯೋರ್ವಳ ವಿವಾಹ ನಡೆಸಲು ಮುಂದಾದ ಸಂದರ್ಭದಲ್ಲಿ  ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮದುವೆಯನ್ನು ತಡೆದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿ ಗ್ರಾಮದ 17 ವರ್ಷದ ಬಾಲಕಿಯನ್ನು 28 ವರ್ಷದ ಹುಡುಗನೊಂದಿಗೆ ವಿವಾಹ ಮಾಡಲು ಎರಡೂ ಕಡೆಯ ಸಂಬಂಧಿಕರೂ ಕೂಡಾ ಒಪ್ಪಿದ್ದು, ಸಮಾರಂಭಕ್ಕೆ 200ಕ್ಕೂ ಅಧಿಕ ಮಂದಿ ಸೇರಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಜಿಲ್ಲಾ ಮಹಿಳಾ

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಬೈಕ್ ಪರಾರಿ

(ನ್ಯೂಸ್ ಕಡಬ) newskadaba.com ಕೋಡಿಂಬಾಡಿ, ಜ.  01. ಪಾದಚಾರಿ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ನಡೆದಿದೆ.   ಗಾಯಗೋಡವರನ್ನು ಸೇಡಿಯಾಪು ನಿವಾಸಿ ದಿ. ದೇವಣ್ಣ ಎಂಬವರ ಪತ್ನಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅಪಘಾತ ರಭಸಕ್ಕೆ  ಮಹಿಳೆಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಪುತ್ತೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಬೈಕ್ ಪರಾರಿ Read More »

ಕರಾವಳಿ

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬೀಳುತ್ತಲೇ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹಾಗೂ ಮಂಗಳೂರು ಎ.ಸಿ.ಪಿ ರಂಜಿತ್ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೆಕ್ಕಾರು: ಒಂದೇ ವಾರ್ಡ್ ನಲ್ಲಿ 3 ಪಕ್ಷದ ಅಭ್ಯರ್ಥಿಗಳನ್ನು ಕೈ ಹಿಡಿದ ಮತದಾರರು

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.31. ಈ ಬಾರಿಯ ಪಂಚಾಯತ್ ಚುನಾವಣೆ ಒಂದಲ್ಲ ಒಂದು ರೀತಿಯಿಂದ ವಿಶೇಷವಾಗಿತ್ತು. ಅದರಲ್ಲಿ ತೆಕ್ಕಾರು ಪಂಚಾಯತ್ ವ್ಯಾಪ್ತಿಯ ವಾರ್ಡ್-2 ರಲ್ಲಿ ಈ ಬಾರಿ ಮತದಾರರು 3 ಪಕ್ಷದ ಒಂದೊಂದು ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ.   ಕಾಂಗ್ರೆಸ್ ನ ಭದ್ರ ಕೋಟೆ ಎಂದು ಹೇಳುತ್ತಿದ್ದ ತೆಕ್ಕಾರು-2 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಐಸಮ್ಮರವರು 7 ಮತಗಳ ಅಂತರದಿಂದ ಜಯಶಾಲಿಯಾದರೆ, ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ಅನ್ವರ್ ನೆಲ್ಲಿಪಳಿಕೆ 10 ಮತಗಳ ಅಂತರದಿಂದ

ತೆಕ್ಕಾರು: ಒಂದೇ ವಾರ್ಡ್ ನಲ್ಲಿ 3 ಪಕ್ಷದ ಅಭ್ಯರ್ಥಿಗಳನ್ನು ಕೈ ಹಿಡಿದ ಮತದಾರರು Read More »

ಕರಾವಳಿ, ಕರ್ನಾಟಕ

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ಯುವಕನನ್ನು ಸಿಪಿಸಿ ಕಾಂಪೌಂಡ್ ನಿವಾಸಿ ಹಸನ್ ತೈಶೀರ್ (18) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಈತ ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.31. ರಾಜ್ಯದ ಜನತೆ ಹೊಸ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಆದರೆ ಕೊರೋನಾ ಇದೀಗ ಜನರ ಸಂಭ್ರಮಕ್ಕೆ ಬ್ರೇಕ್ ಹಾಕಿದೆ.   ಇದರ ನಡುವೆ ಬ್ರಿಟನ್ ಕೊರೊನಾ ಸೋಂಕು ರಾಜ್ಯದಲ್ಲಿ ತಾಂಡವವಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ಹಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸಚಿವರ ಪ್ರವಾಸ

ಮ0ಗಳೂರು ಮೇ 26 ಕರ್ನಾಟಕ ವಾರ್ತೆ:- ಕೇಂದ್ರ ಅಂಕಿಅಂಶ ಮತ್ತು ಕಾರ್ಯಕ್ರಮಗಳ ಅನುಷ್ಠಾನ ಸಚಿವ ಡಿ.ವಿ. ಸದಾನಂದ ಗೌಡ ಅವರು ಮೇ 28 ರಂದು 4.25 ಗಂಟೆಗೆ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಿ, ಸಂಜೆ 6 ಗಂಟೆಗೆ ಅಡ್ಯಾರ್‍ನಲ್ಲಿ ಯಕ್ಷ ಧ್ರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು, ರಾತ್ರಿ 8.45 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು. ಚಿತ್ರ ಶೀರ್ಷಿಕೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೆಂಕಟೇಶ್ ಅವರು ಸೇವಾ ನಿವೃತ್ತಿ ಬಗ್ಗೆ ವರ್ಗಾವಣೆ

ಕೇಂದ್ರ ಸಚಿವರ ಪ್ರವಾಸ Read More »

ರಾಷ್ಟ್ರೀಯ ನ್ಯೂಸ್
Scroll to Top