ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ
(ನ್ಯೂಸ್ ಕಡಬ) newskadaba.com ಉಡುಪಿ, ನ. 07: ಸಂತೆ ಮಾರುಕಟ್ಟೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 11 ಮಕ್ಕಳನ್ನು ಮಹಿಳಾ- ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ. ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆಯು ನಿರಂತರವಾಗಿ 1 ವಾರದ ಜಂಟಿ ಕಾರ್ಯಚರಣೆ ನಡೆಸಿ, 28 ಮಕ್ಕಳನ್ನು ವಶಪಡಿಸಿಕೊಳ್ಳಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.
ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









