Ashitha Soodlu

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 07:  ಸಂತೆ ಮಾರುಕಟ್ಟೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 11 ಮಕ್ಕಳನ್ನು ಮಹಿಳಾ- ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.     ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆಯು ನಿರಂತರವಾಗಿ 1 ವಾರದ ಜಂಟಿ ಕಾರ್ಯಚರಣೆ ನಡೆಸಿ, 28 ಮಕ್ಕಳನ್ನು ವಶಪಡಿಸಿಕೊಳ್ಳಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.    

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ನಾಳೆಯಿಂದ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 07: ನಾಳೆಯಿಂದ ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ಶಿಬಿರವು ನ.8 ರಿಂದ ಆರಂಭಗೊಂಡು ನ.14 ರವರೆಗೆ ನಡೆಯಲಿದ್ದು, ಶಿಬಿರವನ್ನು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಉದ್ಘಾಟಿಸಲಿದ್ದಾರೆ.     ಈಗಾಗಲೇ 450 ಶಿಬಿರಾರ್ಥಿಗಳು ಹೆಸರು ನೊಂದಾಯಿಸಿರುವುದಾಗಿ ಶಿಬಿರದ ಸಂಯೋಜಕ ಜಯಪ್ರಕಾಶ್ ಕೂಜುಗೋಡು ಮಾಹಿತಿ ನೀಡಿದರು. ಶಿಬಿರದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಮತ್ತು ದುರಸ್ತಿ, ಕಸಿ ಕಟ್ಟುವುದು, ಅಣಬೆ ಕೃಷಿ, ಜೇನು ಕೃಷಿ, ಹೈನುಗಾರಿಕೆ ಮೀನುಗಾರಿಕೆ, ಕೋಳಿ, ಕುರಿ,

ಸುಬ್ರಹ್ಮಣ್ಯ: ನಾಳೆಯಿಂದ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ Read More »

ಕರಾವಳಿ

ಹಲವು ನಿರ್ಬಂಧಗಳೊಂದಿಗೆ ಹಜ್ ಯಾತ್ರೆಗೆ ಡೇಟ್ ಫಿಕ್ಸ್ ➤ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07. 2021ನೇ ಸಾಲಿನ ಹಜ್‌ ಯಾತ್ರೆಯು ಜೂ.26 ರಿಂದ ಆರಂಭವಾಗಲಿದೆ ಎಂದು ಭಾರತೀಯ ಹಜ್‌ ಸಮಿತಿಯು ತಿಳಿಸಿದೆ. ಕೊರೋನಾ ಪರಿಸ್ಥಿತಿಯಿಂದಾಗಿ ಈ ಬಾರಿ ನಿರ್ಬಂಧಗಳನ್ನು ವಿಧಿಸಲಾಗಿದ್ದು, 18-65 ವರ್ಷದವರಿಗೆ ಮಾತ್ರ ಈ ಬಾರಿಯ ಹಜ್  ಯಾತ್ರೆಗೆ ಅವಕಾಶ ಇರಲಿದೆ. ಇದಕ್ಕಾಗಿ ಅರ್ಜಿ ಸಲ್ಲಿಕೆಯು ಇಂದಿನಿಂದ  ಆರಂಭಗೊಂಡು, ಡಿ.10ರಂದು ಅರ್ಜಿ ಸಲ್ಲಿಕೆಗೆ ಕಡೇ ದಿನವಾಗಿದೆ. ಇದರಲ್ಲಿ 500 ಸೀಟುಗಳನ್ನು ಮಾತ್ರ ಮಹಿಳೆಯರಿಗೆ ಮೀಸಲಿಡಲಾಗಿದೆ ಎಂದು ತಿಳಿಸಿದೆ. ಪುರುಷ ಜೊತೆಗಾರರು ಇಲ್ಲದ ಮಹಿಳೆಯರು,

ಹಲವು ನಿರ್ಬಂಧಗಳೊಂದಿಗೆ ಹಜ್ ಯಾತ್ರೆಗೆ ಡೇಟ್ ಫಿಕ್ಸ್ ➤ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಳೆಂಜ: ಹೊಳೆ ದಾಟುತ್ತಿದ್ದ ವೇಳೆ ಜಾರಿ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಳೆಂಜ ನ. 07: ಕಳೆಂಜದಲ್ಲಿ ಬಾಲಕನೋರ್ವ ಹೊಳೆ ದಾಟುತ್ತಿದ್ದಾಗ ಕಾಲು ಜಾರಿ ಹೊಳೆ ಬಿದ್ದು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೊಗ್ರ ಗ್ರಾಮದ ಮುಗೆರಡ್ಕ ಅಲೆಕ್ಕಿ ನಿವಾಸಿ ಧರ್ಣಪ್ಪ ಗೌಡ ಮತ್ತು ಯಮುನಾ ದಂಪತಿಯ ಪುತ್ರ ದುರ್ಗೇಶ್ (17) ಮೃತ ಬಾಲಕ. ಸಂಬಂಧಿಕರ ಮನೆಗೆ ಬಂದಿದ್ದ ದುರ್ಗೇಶ್ ತನ್ನ ಸಹೋದರ ಹಾಗೂ ಸಹೋದರಿಯ ಜೊತೆ ಪಂಜಾಲ ಎಂಬಲ್ಲಿನ ಹೊಳೆಯನ್ನು ದಾಟುತ್ತಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ. ಈ ಸಂಬಂಧ

ಕಳೆಂಜ: ಹೊಳೆ ದಾಟುತ್ತಿದ್ದ ವೇಳೆ ಜಾರಿ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ. 07: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕಡಬ ತಾಲೂಕಿನ ಶಿರಾಡಿಯ 55 ವರ್ಷದ ವ್ಯಕ್ತಿ, ಕೌಕ್ರಾಡಿಯ 48 ವರ್ಷದ ಮಹಿಳೆ, 58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.    

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ➤ ಕೊಡಗಿನಲ್ಲಿ ಹೈಅಲರ್ಟ್

(ನ್ಯೂಸ್ ಕಡಬ) newskadaba.com ಮಡಿಕೇರಿ ನ. 07 : ಕೇರಳದ ವಯನಾಡುವಿನ ಬಣಾಸುರಮನೆ ಅರಣ್ಯದಲ್ಲಿ ಕೇರಳದ ನಕ್ಸಲ್‌ ನಿಗ್ರಹ ದಳ ಥಂಡರ್‌ ಬೋಲ್ಟ್‌ ಹಾಗೂ ಮಾವೋವಾದಿಗಳ ನಡುವೆ ಮಂಗಳವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದು ಒಬ್ಬ ಮಾವೋವಾದಿ ಮೃತಪಟ್ಟ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿ ಪ್ರದೇಶಗಳಲ್ಲಿ ಕೂಬಿಂಗ್‌ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಪೊಲೀಸ್‌ ಇಲಾಖೆಯೊಂದಿಗೆ ಮಹತ್ವದ ಸಭೆ ನಡೆದಿದೆ.   ಸಭೆಯಲ್ಲಿ ಐಜಿಪಿ ವಿಫುಲ್‌ ಕುಮಾರ್‌,

ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ➤ ಕೊಡಗಿನಲ್ಲಿ ಹೈಅಲರ್ಟ್ Read More »

ಕರ್ನಾಟಕ

➤➤ ಆರೋಗ್ಯ ಮಾಹಿತಿ ನವೆಂಬರ್- 7: “ವಿಶ್ವ ಕ್ಯಾನ್ಸರ್ ಜನಜಾಗೃತಿ ದಿನ” ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ನ . 07. ಕ್ಯಾನ್ಸರ್ ರೋಗ ಮನುಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಕುಲವನ್ನು ಕಾಡುತ್ತಿದೆ. ಅಚ್ಚ ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ‘ಅರ್ಬುದ ರೋಗ’ ಎಂದು ಕರೆಯಲಾಗುತ್ತದೆ. ‘ಏಡಿ’ ಎಂಬ ಪ್ರಾಣಿಯನ್ನು ‘ಅರ್ಬುದ’ ಎಂದೂ ಕರೆಯಲಾಗುತ್ತದೆ. ಈ ‘ಏಡಿ’ಯ ವಿಶೇಷವೆಂದರೆ ತಾನು ಒಮ್ಮೆ ತನ್ನ ಕದಂಬ ಬಾಹುಗಳಲ್ಲಿ ತನ್ನ ಆಹಾರವನ್ನು ಹಿಡಿದು ಕೊಂಡರೆ ತನ್ನ ಪ್ರಾಣ ಹೋದರೂ ತನ್ನ ಬಾಹುಗಳ ಹಿಡಿತವನ್ನು ಸಡಿಲಿಸುವುದಿಲ್ಲ. ಈ ಕಾರಣದಿಂದಲೇ ಕ್ಯಾನ್ಸರ್ ರೋಗಕ್ಕೆ ‘ಅರ್ಬುದ

➤➤ ಆರೋಗ್ಯ ಮಾಹಿತಿ ನವೆಂಬರ್- 7: “ವಿಶ್ವ ಕ್ಯಾನ್ಸರ್ ಜನಜಾಗೃತಿ ದಿನ” ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಿಟ್ಲ :ಕಾಲು ಮುರಿತಕ್ಕೊಳಗಾಗಿದ್ದ ಮಹಿಳೆಗೆ ಶ್ರೀ ವೀರಾಂಜನೇಯ ಸಮಿತಿಯಿಂದ ಸಹಾಯಧನ

(ನ್ಯೂಸ್ ಕಡಬ) newskadaba.com ವಿಟ್ಲ ನ. 07: ಬಂಟ್ವಾಳ ತಾಲೂಕಿನ ವಿಟ್ಲ ಶೋಭಾರವರು ಜಾರಿಬಿದ್ದು ಕಾಲು ಮುರಿತಕ್ಕೊಳಗಾಗಿ ತೀರಾ ಸಂಕಷ್ಟದಲ್ಲಿದ್ದು ಅವರ ಚಿಕಿತ್ಸೆಗೆ ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ರೂ 15ಸಾವಿರ ಸಹಾಯಧನವನ್ನು ಹಸ್ತಾಂತರಿಸಿದರು.   ಇವರು ವಿದ್ಯಾದಾನ ಮತ್ತು ಬಡವರ ಸೇವೇಯೇ ನಮ್ಮಧ್ಯೇಯ ಎಂಬ ಪರಿಕಲ್ಪನೆಯೊಂದಿಗೆ ಕಳೆದ ಮೂರು ವರ್ಷಗಳ ಹಿಂದೆ ರಚನೆಯಾದ ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಈಗಾಗಲೇ ಹಲವಾರು ಕುಟುಂಬಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಇನ್ನು ಈ ಸಂರ್ಭದಲ್ಲಿ ಶ್ರೀ

ವಿಟ್ಲ :ಕಾಲು ಮುರಿತಕ್ಕೊಳಗಾಗಿದ್ದ ಮಹಿಳೆಗೆ ಶ್ರೀ ವೀರಾಂಜನೇಯ ಸಮಿತಿಯಿಂದ ಸಹಾಯಧನ Read More »

ಕರಾವಳಿ

ಕಲ್ಲುಗುಡ್ಡೆ: ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ಸ್ಥಿತಿ ಶೋಚನೀಯ; ➤ ಗುದ್ದಲಿ ಪೂಜೆ ನಡೆದು 10 ತಿಂಗಳಾದರೂ ಆರಂಭವಾಗದ ಕಾಮಗಾರಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ. 07. ರಸ್ತೆ ಅಭಿವೃದ್ಧಿ ನಡೆಸಲು ಹತ್ತು ತಿಂಗಳ ಹಿಂದೆ ಗುದ್ದಲಿ ಪೂಜೆ ನಡೆಸಿ ಚಾಲನೆ ನೀಡಲಾಗಿದ್ದರೂ ರಸ್ತೆ ಅಭಿವೃದ್ಧಿ ಕಾಮಗಾರಿ ಇನ್ನೂ ಆರಂಭವಾಗದೇ ಹದಗೆಟ್ಟ ರಸ್ತೆಯಲ್ಲಿಯೇ ಜನತೆ ಇಂದಿಗೂ ಸಂಚರಿಸುತ್ತಿದ್ದಾರೆ. ಕಡಬ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಎಂಜೀರ ಸಂಪರ್ಕಿಸುವ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ-ಅಡೆಂಜ ರಸ್ತೆ ಶೋಚನೀಯ ಸ್ಥಿತಿಯಲ್ಲಿದೆ. ಜಿ.ಪಂ. ರಸ್ತೆಯಾಗಿರುವ ಈ ರಸ್ತೆಯು ಎರಡು ದಶಕಗಳಿಗೂ ಹಿಂದೆ ಡಾಂಬರೀಕರಣಗೊಂಡಿದ್ದು, ಆ ಬಳಿಕ ಅಭಿವೃದ್ಧಿ ನಡೆದಿಲ್ಲ ಎನ್ನುತ್ತಾರೆ ಸ್ಥಳೀಯರು.  

ಕಲ್ಲುಗುಡ್ಡೆ: ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ಸ್ಥಿತಿ ಶೋಚನೀಯ; ➤ ಗುದ್ದಲಿ ಪೂಜೆ ನಡೆದು 10 ತಿಂಗಳಾದರೂ ಆರಂಭವಾಗದ ಕಾಮಗಾರಿ Read More »

ಕರಾವಳಿ, ಕರ್ನಾಟಕ

ಬಜ್ಪೆ: ಅಪ್ರಾಪ್ತೆಗೆ ಥಳಿಸಿದ ಮಹಿಳಾ ಪೇದೆ ವಿರುದ್ದ ದೂರು

(ನ್ಯೂಸ್ ಕಡಬ) newskadaba.com ಬಜ್ಪೆ ನ. 07: ಅಪ್ರಾಪ್ತೆಗೆ ಥಳಿಸಿದ ಆರೋಪದಡಿಯಲ್ಲಿ ಮಂಗಳೂರಿನ ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತ ಯುವತಿ ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ತೆರಳಿದ್ದಾಳೆ ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು 16 ವರ್ಷದ ಈ ಅಪ್ರಾಪ್ತೆಗೆ ಲಾಠಿಯಿಂದ ಹೊಡೆದಿದ್ದಾರೆ ಎಂಬ

ಬಜ್ಪೆ: ಅಪ್ರಾಪ್ತೆಗೆ ಥಳಿಸಿದ ಮಹಿಳಾ ಪೇದೆ ವಿರುದ್ದ ದೂರು Read More »

ಕರಾವಳಿ
Scroll to Top