Ashitha Soodlu

ಪುತ್ತೂರು: ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18: ದೇಶದಲ್ಲಿ ಇದೀಗ IPL‌ ಹವಾ ಜೋರಾಗಿಯೇ ನಡೆಯುತ್ತಿದೆ. ಇದೇ ವೇಳೆ ಬೆಟ್ಟಿಂಗ್‌ ದಂಧೆಯೂ ಕೂಡಾ ವ್ಯಾಪಕವಾಗಿ ನಡೆಯುತ್ತಿದೆ.‌ ಇದೀಗ ಕ್ರಿಕೆಟ್ ದಂಧೆಯಲ್ಲಿ ನಿರತರಾಗಿದ್ದ ವ್ಯಕ್ತಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಮಾಹಿತಿ ಕಬಕದಲ್ಲಿ ಲಭ್ಯವಾಗಿದೆ.     ಈ ರೀತಿಯಾಗಿ ವಿಷಯ ಕೇಳಿ ಬರುತ್ತಿದ್ದ ಬೆನ್ನಲ್ಲೇ ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ನಡೆಯುತ್ತಿದ್ದ ವ್ಯಕ್ತಿಯಯೊಬ್ಬರನ್ನು ಪೊಲೀಸರು ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.  

ಪುತ್ತೂರು: ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಸುಬ್ರಹ್ಮಣ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಸುಬ್ರಹ್ಮಣ್ಯ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ರಂಗನಾಥ್ (35ವ.)‌ ಎಂದು ಗುರುತಿಸಲಾಗಿದೆ.     ಈತ ವಾರದ ಹಿಂದೆ ಮನೆ ಬಿಟ್ಟು ಬಂದಿರುವುದಾಗಿ ತಿಳಿದು ಬಂದಿದೆ. ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಈತನ ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ತನಿಖೆ

ಸುಬ್ರಹ್ಮಣ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಎಂ.ಗಣೇಶ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.     ಬಂಧಿತ ಆರೋಪಿ ಕಾಟನ್‍ಪೇಟೆ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಆಂಜನಪ್ಪಗಾರ್ಡ್‍ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್‍ನಲ್ಲಿದ್ದ ಚಾಕುವನ್ನು ತೆಗೆದುಕೊಂಡು

ಬೆಂಗಳೂರು: ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿತ ➤ ಅಮಾಯಾಕ ವ್ಯಕ್ತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ.18: ಮದ್ದಳೆಯ ಮಾಂತ್ರಿಕ, ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ (101) ಅವರು ಕಳೆದ ದಿನ ರಾತ್ರಿ ಕೊನೆಯುಸಿರೆಳೆದಿದ್ದಾರೆ.     ಭಾರತದಲ್ಲಿ ಯಕ್ಷಗಾನ ಕಲಿಕೆಗೆ ಬಂದ ಪ್ರಥಮ ವಿದೇಶಿ ಮಹಿಳೆಯಾಗಿರುವ ಅಮೆರಿಕದ ಮಾರ್ತಾ ಆಸ್ಟಿನ್ ಅವರಿಗೆ, ಯಕ್ಷಗಾನದಲ್ಲಿ ಸಂಶೋಧನಾ ಪ್ರಬಂಧಕ್ಕೆ ಇವರು ಮಾರ್ಗದರ್ಶಕರಾಗಿದ್ದರು. ಅಲ್ಲದೇ ಅವರೊಂದಿಗೆ ಅಮೆರಿಕಕ್ಕೆ ತೆರಳಿ ಅಲ್ಲಿ ಯಕ್ಷಗಾನ ಪ್ರದರ್ಶನವನ್ನೂ ಕೂಡ ನೀಡಿದ್ದರು. ಇನ್ನು ಅವರು ಜಾನಪದ ಅಕಾಡೆಮಿ ಮತ್ತು ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅಲ್ಲದೇ

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ Read More »

ಕರಾವಳಿ

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಮತ್ತು ಪರ್ವತಮುಖಿ ಫ್ರೆಂಡ್ಸ್‌ ವತಿಯಿಂದ ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.     ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಮಣಿಕಂಠ, ಜೇಸಿ ರವಿ ಕಕ್ಕೆಪದವು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.  

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬಳಕುಂಜೆ ಗುಡ್ಡೆ, ಅ.18: ಗುಡ್ಡೆಯಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಸ್ಥಳಕ್ಕೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಳಕುಂಜೆ ಮೇಗಿನ ಮನೆ ನಿವಾಸಿ ನಿತ್ಯಾನಂದ ಶೆಟ್ಟಿ ಹಾಗೂ ಮಾಗಂದಡಿ ನಿವಾಸಿ ವಿಜಯಕುಮಾರ್‌ ಎಂದು ಗುರುತಿಸಲಾಗಿದೆ.     ಬಳಕುಂಜೆ ಸಮೀಪ ಈ ಕೋಳಿ ಅಂಕ ನಡೆಯುತ್ತಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ 11 ಮಂದಿ ಪರಾರಿಯಾಗಿದ್ದಾರೆ. ಬಳಕುಂಜೆ ಗುಡ್ಡೆ ಪಡ್ಪು ಬಳಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಅ.18: ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಥಬೀದಿಯಲ್ಲಿ ಕಳೆದ ದಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಯಾನೆ ಕಿಟ್ಟ(೬೫) ಎಂದು ಗುರುತಿಸಲಾಗಿದೆ.     ಕ್ಯಾಟರಸ್ ಕೆಲಸ ಮಾಡುತ್ತಿದ್ದ ಇವರು ಅವಿವಾಹಿತರಾಗಿದ್ದುಕೊಂಡು ಸಹೋದರನೊಂದಿಗೆ ರಥಬೀದಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಅ.17: ಬಸ್‌ ನ ಟಯರ್‌ ಒಡೆದ ಪರಿಣಾಮ ಬಸ್‌ ನೊಳಗಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ದೊಡ್ಡತೋಟ ಎಂಬಲ್ಲಿ ನಡೆದಿದೆ.     ಮೈಸೂರಿನಿಂದ ಬರುವ ಸರಕಾರಿ ಬಸ್ಸೊಂದು ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ನ ಹಿಂಬದಿಯ ಟಯರ್‌ ಒಡೆದು ಹೋಗಿ ಟಯರ್‌ ಬಸ್ಸಿನ ಅಡಿ ಭಾಗಕ್ಕೆ ಗುದ್ದಿದ ಪರಿಣಾಮದಿಂದಾಗಿ, ಸೀಟಿನಲ್ಲಿ ಕುಳಿತುಕೊಂಡ ಇಬ್ಬರ ಕಾಲಿಗೆ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಾಳುಗಳನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.17: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 25 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಪಾಲ್ತಾಡಿಯ 56 ವರ್ಷದ ವ್ಯಕ್ತಿ, 12 ವರ್ಷದ ಬಾಲಕಿ, ಪುಣ್ಚಪ್ಪಾಡಿ 50 ವರ್ಷದ ಮಹಿಳೆ, ಬಿಳಿನೆಲೆಯ 53 ವರ್ಷದ ಮಹಿಳೆ, ಕೋಡಿಂಬಾಳದ 59 ವರ್ಷದ ವ್ಯಕ್ತಿ, 6 ವರ್ಷದ ಬಾಲಕಿ, ಕೊಣಾಲಿನ 30 ವರ್ಷದ ಮಹಿಳೆ, ಕುದ್ಮಾರಿನ 46 ವರ್ಷದ ವ್ಯಕ್ತಿ 2 ವರ್ಷದ ಬಾಲಕಿ,

ಪುತ್ತೂರು, ಕಡಬದಲ್ಲಿ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.17: ಇಂದಿನಿಂದ ನವರಾತ್ರಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸಲಾಗುವ ನವರಾತ್ರಿ ಹಬ್ಬ ಇಂದಿನಿಂದ ಆರಂಭಗೊಂಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಹೇಳಿದ್ದಾರೆ.     ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ

ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top