Ashitha Soodlu

ಪುತ್ತೂರು – ಕಡಬದಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.16: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 12 ಮಂದಿಗೆ ಕೊರೋನಾ ಸೋಕು  ದೃಢಗೊಂಡಿದೆ.     ಕಡಬ ತಾಲೂಕಿನ ನೆಲ್ಯಾಡಿಯ 31 ವರ್ಷದ ವ್ಯಕ್ತಿ, ಕಡಬದ 70 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು – ಕಡಬದಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಮರ್ಕಂಜ: ಹೆರಿಗೆ ವೇಳೆ ಮಹಿಳೆ ಮೃತ್ಯು ➤ ಮಗು ಕ್ಷೇಮ

(ನ್ಯೂಸ್ ಕಡಬ) newskadaba.com ಮರ್ಕಂಜ, ಅ.16: ಮರ್ಕಂಜದಿಂದ ಎರಡು ವರ್ಷಗಳ ಹಿಂದೆ ಪುತ್ತೂರಿನ ಕಾಪುವಿಗೆ ಮದುವೆಯಾಗಿದ್ದ ಮಹಿಳೆ ಕಳೆದ ದಿನ ಹೆರಿಗೆ ವೇಳೆ ಲೋ ಬಿಪಿ ಹಾಗೂ ರಕ್ತಸ್ರಾವ ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮರ್ಕಂಜ ಗ್ರಾಮದ ಬಳ್ಳಕ್ಕಾನ ಸುಬ್ಬಣ್ಣ ನಾಯ್ಕ ರವರ ಪುತ್ರಿ ಚಂದ್ರಕಲಾ (25) ಎಂದು ಗುರುತಿಸಲಾಗಿದೆ.     ಚಂದ್ರಕಲಾರವರನ್ನು ಪುತ್ತೂರು ತಾಲೂಕಿನ ಕಾವು ಬಳ್ಳಿಕಾನ ನಿವಾಸಿ ಪ್ರವೀಣ್‌ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಚಂದ್ರಕಲಾರವರು ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಮರ್ಕಂಜ: ಹೆರಿಗೆ ವೇಳೆ ಮಹಿಳೆ ಮೃತ್ಯು ➤ ಮಗು ಕ್ಷೇಮ Read More »

ಕರಾವಳಿ

ಉಪ್ಪಳಿಗೆಯಲ್ಲಿ ಶಾಲಾ ಬಾವಿ ಸಂಪೂರ್ಣ ಕುಸಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.16: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಎಡಬಿಡದೆ ಸುರಿದ ಧಾರಕಾರ  ಮಳೆಯಿಂದಾಗಿ ಇರ್ದೆ ಉಪ್ಪಳಿಗೆ  ಹಿ.ಪ್ರಾ. ಶಾಲಾ ಬಾವಿಯೊಂದು ಇಂದು  ಆವರಣಗೋಡೆ ಸಂಪೂರ್ಣ ಕುಸಿದು ಹೋಗಿದೆ.     ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುವ ಸಂದರ್ಭದಲ್ಲಿ ಶಾಲಾ ಪರಿಸರದ ಮನೆಗಳ ನಿವಾಸಿಗಳೂ ಕುಡಿಯುವ ನೀರಿಗಾಗಿ ಇದೇ ಬಾವಿಯ ನೀರನ್ನು ಬಳುತ್ತಿದ್ದರು.  ಕಳೆದ ಸುಮಾರು 65 ವರ್ಷಗಳಿಂದ ಶಾಲೆಗೆ ಬಾವಿಯನ್ನು ಕುಡಿಯವ ನೀರಿಗೆ  ಹಾಗೂ ಅಕ್ಷರದಾಸೋಹ ದ ಬಳಕೆಗೆ ಬಾವಿಯಿಂದ ನೀರು ಮೇಲೆಕ್ಕೆತ್ತಲು

ಉಪ್ಪಳಿಗೆಯಲ್ಲಿ ಶಾಲಾ ಬಾವಿ ಸಂಪೂರ್ಣ ಕುಸಿತ Read More »

ಕರಾವಳಿ

ಪತ್ತೂರು: ಹಿಂಬದಿ ಸವಾರರಿಗೂ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.16: ನ್ಯಾಯಾಲಯದ ಆದೇಶ ಹಾಗೂ ಮೇಲಾಧಿಕಾರಿಗಳ ನಿರ್ದೇಶದಂತೆ ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲಿ ಸಹ ಸವಾರರಾಗಿ ಸಂಚರಿಸುವವರೂ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಎಂದು ಸಂಚಾರ ಪೊಲೀಸ್‌ ಠಾಣಾ ಎಸ್.ಐ ತಿಳಿಸಿದ್ದಾರೆ.     ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವುದನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸದೇ ಸಂಚಾರಿಸುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು ಎಂದು ಸಂಚಾರಿ ಠಾಣಾ ಎಸ್‌.ಐ ರಾಮ ನಾಯ್ಕ

ಪತ್ತೂರು: ಹಿಂಬದಿ ಸವಾರರಿಗೂ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ Read More »

ಕರಾವಳಿ

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಮೂಡುಬಿದಿರೆ ಶಿಕ್ಷಕಿಯೊಬ್ಬರು ಇಂದು ಮೃತಪಟ್ಟಿದ್ದಾರೆ.     ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಯವರಿಗೆ ಸೆ. 29 ರಂದು ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು Read More »

ಕರಾವಳಿ

ತಲಕಾವೇರಿ: ಕಾವೇರಿ ತೀರ್ಥೋದ್ಭವʼಗೆ ಕ್ಷಣಗಣನೆ..!

(ನ್ಯೂಸ್ ಕಡಬ) newskadaba.com ತಲಕಾವೇರಿ, ಅ.16: ಕೊಡವರ ಕುಲದೇವತೆ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲು ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಕೊರೋನಾ ಹಿನ್ನಲೆ ಈ ತೀರ್ಥೋದ್ಭವ ಜಾತ್ರೆಗೆ ಹೆಚ್ಚಿನ ಜನರು ಸೇರದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಸರಳವಾಗಿ ಈ ಬಾರಿ ಕಾರ್ಯಕ್ರಮ ಆಚರಣೆ ಮಾಡಲು ಸೂಚನೆ ನೀಡಿದ್ದು, ಕೋವಿಡ್​ ಸುರಕ್ಷತೆ ಪಾಲಿಸುವುದು ಕಡ್ಡಾಯವಾಗಿದೆ. ತೀರ್ಥೋದ್ಭವದಲ್ಲಿ ಭಾಗಿಯಾಗುವ ಭಕ್ತರು ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್​ ಬಳಕೆ ಕಡ್ಡಾಯ. ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಪೂಜಾ ವಿಧಿವಿಧಾನಗಳು ನಡೆಯುತ್ತಿವೆ.

ತಲಕಾವೇರಿ: ಕಾವೇರಿ ತೀರ್ಥೋದ್ಭವʼಗೆ ಕ್ಷಣಗಣನೆ..! Read More »

ಕರ್ನಾಟಕ

ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.15: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 15 ಮಂದಿಯಲ್ಲಿ ಕೊರೋನಾ ದೃಢಗೊಂಡಿದೆ.     ಕಡಬ ತಾಲೂಕಿನ ಆತೂರಿನ 3 ವರ್ಷದ ಹೆಣ್ಣು ಮಗು, ಬಿಳಿನೆಲೆಯ 70 ವರ್ಷದ ಮಹಿಳೆ, 75 ವರ್ಷದ ವ್ಯಕ್ತಿ, ಕುಂತೂರಿನ 19 ವರ್ಷದ ಯುವತಿಯಲ್ಲಿ ಕೊರೋನಾ ಪತ್ತೆಯಾಗಿದೆ.  

ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.15: ಸಾಂಸ್ಕೃತಿಕ ಉತ್ಸವ ಪುತ್ತೂರು ದಸರಾ ನಾಡಹಬ್ಬವನ್ನು ಈ ವರ್ಷ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಗೊಳಿಸಲಾಗಿದೆ ಎಂದು ದಸರಾ ನಾಡಹಬ್ಬ ಸಮಿತಿ ಅಧ್ಯಕ್ಷ ಪಾಟೆಡ್ಕ ಕೃಷ್ಣ ಭಟ್‌ ರವರು ತಿಳಿಸಿದ್ದಾರೆ.     ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಳೆದ ವರ್ಷ 67 ನೇ ದಸರಾ ನಾಡ ಹಬ್ಬ 8 ದಿನ ವಿಜೃಂಭಣೆಯಿಂದ ನಡೆದಿದೆ. ಈ ವರ್ಷ ಜಗತ್ತಿನಾದ್ಯಂತ ಕೊರೋನಾ ಛಾಯೆ ಇರುವ ಹಿನ್ನಲೆಯಲ್ಲಿ ಮುಂಜಾಗರೂಕತೆ

ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು Read More »

ಕರಾವಳಿ

ನಿಷೇಧಿತ ನೋಟುಗಳ ಚಲಾವಣೆ ದಂಧೆ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15: ನಿಷೇಧಿತ ನೋಟುಗಳ ಚಲಾವಣೆ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಇಬ್ಬರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರೋಪಿಗಳನ್ನು ಶಿವಕುಮಾರ್ (44), ವಿಜಯ ಕುಮಾರ್ (40)  ಗುರುತಿಸಲಾಗಿದೆ.     ಜಾಲಹಳ್ಳಿ ಕ್ರಾಸ್ ಬಳಿ ಕಾರಿನಲ್ಲಿ ಬಂದು, ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಹಳೆಯ ನೋಟುಗಳನ್ನು ವಿದೇಶಕ್ಕೆ ಸಾಗಿಸಲು ಆರೋಪಿಗಳು ಯತ್ನಿಸುತ್ತಿದ್ದರು. ವಿದೇಶದಲ್ಲಿ ಭಾರತದ ಕರೆನ್ಸಿ ಚಲಾವಣೆಯ ಜಾಲ ಇರುವುದು ವಿಚಾರಣೆ ವೇಳೆ ಪತ್ತೆಯಾಗಿದೆ. ಬಂಧಿತರಿಂದ ಹಣ ಹಾಗೂ

ನಿಷೇಧಿತ ನೋಟುಗಳ ಚಲಾವಣೆ ದಂಧೆ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಅ.15: ಪರಿಸರ ಸ್ನೇಹಿ ದೀಪಾವಳಿ ಆಚರಣೆಗಾಗಿ ರಾಷ್ಟ್ರೀಯ ಕಾಮಧೇನು ಆಯೋಗ ಗೋಮಯದಿಂದ (ಸಗಣಿ) ಹಣತೆ ತಯಾರಿಸುವ ಅಭಿಯಾನ ಕೈಗೆತ್ತಿಕೊಳ್ಳುವ ಮೊದಲೇ ಏಳನೇ ತರಗತಿ ವಿದ್ಯಾರ್ಥಿಯೋರ್ವ ಹಣತೆ ತಯಾರಿಸಿಯೇಬಿಟ್ಟಿದ್ದಾನೆ. ಈತ ಮೂಡುಬಿದಿರೆ ಜವಳಿ ಉದ್ಯಮಿ ಎಸ್.ಎನ್.ಬೋರ್ಕರ್-ಸ್ವಾತಿ ದಂಪತಿ ಪುತ್ರ.     ರೋಟರಿ ಸೆಂಟ್ರಲ್ ಸ್ಕೂಲ್‌ನ ಏಳನೇ ತರಗತಿಯ  ಸ್ಕೌಟ್ಸ್ ವಿದ್ಯಾರ್ಥಿಯಾಗಿದ್ದು, ಶಶಾಂಕ್ ಬೋರ್ಕರ್ ಸಗಣಿ ಜತೆ ಮೈದಾ ಬೆರೆಸಿ ಹಣತೆ ನಿರ್ಮಿಸಿದ್ದಾನೆ. ಒಂದೆರಡು ದಿನ ಚೆನ್ನಾಗಿ ಬಿಸಿಲಲ್ಲಿ ಒಣಗಿಸಿದ್ದರಿಂದ ಬಿದ್ದರೂ ಒಡೆಯುವುದಿಲ್ಲ.

ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ Read More »

ಕರಾವಳಿ
Scroll to Top