Ashitha Soodlu

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15: ತುಳು ರಂಗ ಭೂಮಿಯ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಇಂದುನಿಧನರಾದರು.     ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು. ಮಾಧವ ಜಪ್ಪು ಪಟ್ಲ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.  

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.14: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಂತೆ 55 ಮಂದಿಗೆ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಪೆರಾಬೆ ನಿವಾಸಿ 28 ವರ್ಷದ ಮಹಿಳೆ, ಕೊಯಿಲ 52 ವರ್ಷದ ವ್ಯಕ್ತಿ, 30 ವರ್ಷದ ಯುವಕ, 32 ವರ್ಷದ ವ್ಯಕ್ತಿ, 59 ವರ್ಷದ ವ್ಯಕ್ತಿ, 54 ವರ್ಷದ ವ್ಯಕ್ತಿ, 23 ವರ್ಷದ ಯುವಕ, ಸವಣೂರಿನ 50 ವರ್ಷದ ವ್ಯಕ್ತಿ, 48 ವರ್ಷದ ಮಹಿಳೆ, 7 ವರ್ಷದ ಬಾಲಕಿ,

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ Read More »

ಕರಾವಳಿ

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.!

(ನ್ಯೂಸ್ ಕಡಬ) newskadaba.com ಭಟ್ಕಳ, ಅ.14: ಪಟ್ಟಣದ ಕೋಟೇಶ್ವರ ನಗರ ಸಮೀಪದ ನಿಶಾಂತ್‌ ನರ್ಸಿಂಗ್‌ ಹೋಮ್‌ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಅನಿಲ ಸಾಗಾಟದ ಬುಲೆಟ್‌ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಟ್ಯಾಂಕರ್‌ ಚಾಲಕನನ್ನು ಜಾರ್ಖಂಡ್‌ ಮೂಲದ ಅಜಯ್‌ ಯಾದವ್‌ (25) ಎಂದು ಗುರುತಿಸಲಾಗಿದೆ. ಎಚ್‌ ಪಿ ಕಂಪೆನಿಗೆ ಸೇರಿದ ಈ ಖಾಲಿ ಟ್ಯಾಂಕರ್‌ ಗೋವಾದಿಂದ ಮಂಗಳೂರಿನ ಕಡೆಗೆ ಅನಿಲ ತುಂಬಿಸಿಕೊಳ್ಳಲು ಮಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ.

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.! Read More »

ಕರಾವಳಿ

ಸಂಪತ್‌ ಕುಮಾರ್‌‌ ಹತ್ಯೆ ಪ್ರಕರಣ ➤ ಮತ್ತೆ 3 ಆರೋಪಿಗಳ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಸುಳ್ಯ, ಅ.14: ಕಲ್ಲುಗುಂಡಿ ಸಂಪತ್‌ ಕುಮಾರ್‌‌ ಹತ್ಯೆಗೆ ಸಂಬಂಧಿಸಿದಂತೆ, ಕೊಲೆಗಾರರಿಗೆ ಬಂದೂಕು ಸರಬರಾಜು ಮಾಡಿದ ಇಬ್ಬರು ವ್ಯಕ್ತಿಗಳನ್ನು ಹಾಗೂ ಅವರ ಕಾರನ್ನು ಬಾಡಿಗೆಗೆ ಪಡೆದ ಒಬ್ಬ ವ್ಯಕ್ತಿಯನ್ನು ಕಳೆದ ದಿನ ಪೊಲೀಸರು ಬಂಧಿಸಿದ್ದಾರೆ.     ಪ್ರಕರಣದ ಐದು ಪ್ರಮುಖ ಆರೋಪಿಗಳನ್ನು ಅ.11ರ ಭಾನುವಾರದಂದು ಬಂಧಿಸಲಾಗಿದ್ದು, ಸದ್ಯ ಬಂಧಿತ ಆರೋಪಿಗಳ ಸಂಖ್ಯೆ ಇದೀಗ ಎಂಟಕ್ಕೆ ಏರಿದೆ. ಹತ್ಯೆಗಾರರ ತಂಡಕ್ಕೆ ಬಂದೂಕು ಒದಗಿಸಿದ್ದಾನೆ ಎಂದು ವರದಿಯಾಗಿದ್ದು, ಈ ಪೈಕಿ ಮೂವರನ್ನು ಮಡಿಕೇರಿಯಿಂದ ಬಂದ ರವೀಂದ್ರ,

ಸಂಪತ್‌ ಕುಮಾರ್‌‌ ಹತ್ಯೆ ಪ್ರಕರಣ ➤ ಮತ್ತೆ 3 ಆರೋಪಿಗಳ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್

(ನ್ಯೂಸ್ ಕಡಬ) newskadaba.com ಚಿತ್ರಮಂದಿರ, ಅ.14: ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್‌ ಆಗಿದ್ದ ಚಿತ್ರಮಂದಿರಗಳು ಅಕ್ಟೋಬರ್ 15ರ ನಾಳೆಯಿಂದ ಆರಂಭವಾಗುತ್ತಿವೆ.     ಕೊರೊನಾ ಹರಡದಂತೆ ತಡೆಯಲು ಕಠಿಣ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಇದಕ್ಕಾಗಿ ಎಸ್‌ಒಪಿಯನ್ನು ಸಿದ್ಧಪಡಿಸಲಾಗಿದ್ದು, ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಕಡ್ಡಾಯವಾಗಿದೆ. ಸಿನೆಮಾ ಹಾಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೇವಲ ಶೇಕಡಾ 50 ರಷ್ಟು ಸೀಟುಗಳನ್ನು ಮಾತ್ರ ಪ್ರೇಕ್ಷಕರಿಗೆ ನೀಡಬೇಕು. ಪ್ರೇಕ್ಷಕರ ಮಧ್ಯೆ ಒಂದು ಸೀಟ್ ಅಂತರವಿರಬೇಕು ಮತ್ತು ಖಾಲಿ ಸೀಟ್

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್ Read More »

ಕರ್ನಾಟಕ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿಯಲ್ಲಿ ಬಿರುಸುಗೊಂಡಿರುವ ಮಳೆ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ದಿನದಂದು ಬಿಡುವಿಲ್ಲದೆ ಮಳೆ ಸುರಿಯುತ್ತಿದೆ.     ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿ ಕರಾವಳಿಯಲ್ಲಿ ನದಿಗಳ ಹರಿವು ಹೆಚ್ಚಾಗಿದ್ದು, ಮರಗಳು, ವಿದ್ಯುತ್‌‌ ಕಂಬಗಳು ಧರೆಗುರುಳಿದ್ದವು. ಈ ಭಾರೀ ಮಳೆಯಿಂದಾಗಿ ಪುತ್ತೂರಿನ ಮನೆಯೊಂದು ಭಾಹಶಃ ಹಾನಿಗೊಳಗಾಗಿದೆ. ಹೆಚ್ಚುತ್ತಿರುವ ಮಳೆಯಿಂದಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ Read More »

ಕರಾವಳಿ

ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.14: ಅಡಕೆ ಟೀ ತಯಾರಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಜಿಲ್ಲೆ ಇದೀಗ ಅಡಿಕೆಯಿಂದ ಶಾಂಪೂ ತಯಾರಾಗಿದೆ.     ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ಯುವ ಉದ್ಯಮಿ ನಿವೇದನ್‌ ನೆಂಪೆ ರವರು ಈಗ ಅಡಕೆ ಶಾಂಪೂ ಸಂಶೋಧಿಸುವ ಹೊಸ ಪ್ರಯೋಗವನ್ನು ಮಾಡಿದ್ದಾರೆ. ಚಾಲಿ ಅಡಿಕೆಯಲ್ಲಿ ಪ್ರೊಲೀನ್‌ ಎಂಬ ಆಂಟಿ ಏಜೆಂಗ್‌ ಇದ್ದು, ಇದು ದೇಹದಲ್ಲಿನ ಸುಕ್ಕವನ್ನು ಕಡಿಮೆ ಮಾಡುತ್ತದೆ. ಇದರ ಜೊತೆಗೆ ಗ್ಯಾಲಿಕ್‌ ಆಸಿಡ್‌ ಎಂಬ ಆಂಟಿ ಫಂಗಲ್‌ ಇದ್ದು,

ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….! Read More »

ಕರ್ನಾಟಕ

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಅ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಗುತ್ತಿಗಾರಿನ ವಳಲಂಬೆಯಲ್ಲಿ ಇಂದು ನಡೆದಿದೆ.     ಕೊಲ್ಲಮೊಗ್ರದ ಹಿತೇಶ್‌ ಎಂಬವರು ಕಾರಿನಲ್ಲಿ ತಾಯಿಯೊಂದಿಗೆ ದೊಡ್ಡತೋಟಕ್ಕೆ ತೆರಳಿದ್ದು, ಇಂದು ಗುತ್ತಿಗಾರಿಗೆ ಹಿಂತಿರುಗುತ್ತಿದ್ದಾಗ ವಳಲಂಬೆ ಬಳಿ ಅಪಘಾತ ಸಂಭವಿಸಿದೆ. ಕರೆಂಟ್‌ ಕಂಬ ಮುರಿದು ಬಿದ್ದಿದ್ದು, ಆ ವೇಳೆ ಕರೆಂಟ್‌ ಟ್ರಿಪ್‌ ಆಗಿರುವ ಕಾರಣ ಯಾವುದೇ ತೊಂದರೆ ಉಂಟಾಗಿಲ್ಲ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್‌ ಪರಾಗಿದ್ದಾರೆ.    

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಅ. 14ರಿಂದ ಅ.18ರ ಮಧ್ಯರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ

(ನ್ಯೂಸ್ ಕಡಬ) newskadaba.com ಮೈಸೂರು, ಅ.14: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ಜೋರಾಗಿ ನಡೆಯುತ್ತಿದ್ದು, ಅ. 17ರಿಂದ ಮೈಸೂರಿನಲ್ಲಿ ದಸರಾ ಉತ್ಸವದ ಕಳೆ ತುಂಬಲಿದೆ. ಈಗಾಗಲೇ ಅಂಬಾರಿ ಹೊರುವ ಗಜಪಡೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ.     ದಸರಾ ಉತ್ಸವದಲ್ಲಿ ಚಾಮುಂಡಿ ಬೆಟ್ಟದಲ್ಲೂ ಸಾಕಷ್ಟು ಸಾಂಪ್ರದಾಯಿಕ ಪೂಜೆಗಳು ನಡೆಯುವುದರಿಂದ ಇಂದು ಮಧ್ಯರಾತ್ರಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅ. 14ರ ಮಧ್ಯರಾತ್ರಿಯಿಂದ ಅ.18ರ ಮಧ್ಯರಾತ್ರಿಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ

ಅ. 14ರಿಂದ ಅ.18ರ ಮಧ್ಯರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ Read More »

ಕರ್ನಾಟಕ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.14: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಬೆಳ್ಳೇರಿ ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಸಂದರ್ಭ ಬಂಧಿತ ಆರೋಪಿ ಚಿನ್ನಾಭರಣ ದೋಚಲು ಬಂದು ಅತ್ಯಾಚಾರ ಗೈದು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.     ಬಂಧಿತ ಆರೋಪಿಯನ್ನು ಸಕಲೇಶಪುರದ ನಿವಾಸಿ ಪಾತೂರು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್‌ ಅಶ್ರಫ್‌ (28) ಎಂದು ಗುರುತಿಸಲಾಗಿದೆ. ಕುಸುಮಾ ಅವರ ನಿವಾಸದ ಎದುರು ವಾಸಿಸುವ ಗಿರೀಶ್ ಅವರ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top