Ashitha Soodlu

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ನಾಳೆ (ಸೋಮವಾರ)  ಬಂದ್‌ಗೆ ಕರೆ ನೀಡಿರುವ ದಕ್ಷಿಣ ಕನ್ನಡದ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಅಂದು ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಯಲಿದೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನ ಸಭೆ ಮತ್ತು […]

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್ Read More »

ಕರಾವಳಿ, ಕರ್ನಾಟಕ

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ.26: ದ.ಕ ಜಿಲ್ಲಾ ಕೆ ಎಸ್‌ ಎಸ್‌ ಎಫ್‌ ವಿಖಾಯ ರಕ್ತದಾನಿ ಬಳಗ, ಸುಳ್ಯ ಕ್ಲಸ್ಟರ್‌, ಅರಂತೋಡು ಶಾಖೆ ಹಾಗೂ ತೆಕ್ಕಿಲ್‌ ಗ್ರಾಮಾಭಿವೃದ್ದಿ ಪ್ರತಿಷ್ಠಾನ ಅರಂತೋಡು, ಪಠೇಲ್‌ ಚಾರಿಟೇಬಲ್‌ ಟ್ರಸ್ಟ್‌, ಮೆಡಿಕಲ್‌ ಮತ್ತು ಲ್ಯಾಬೋರೇಟರಿ ಸುಳ್ಯ, ಇಂಡಿಯನ್‌ ರೆಡ್‌ ಕ್ರಾಸ್‌ ಸೊಸೈಟಿ ಮಂಗಳೂರು, ಕೆ ಎಸ್‌ ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರವು ಇಂದು ತೆಕ್ಕಿಲ್‌ ಸಮುದಾಯ

ಅರಂತೋಡು: ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ Read More »

ಕರಾವಳಿ

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.26: ಕೊಣಾಜೆ ಬಳಿಯ ಹೂಹಾಕುವಕಲ್ಲು ಬೆಳ್ಳೇರಿಯಲ್ಲಿ ಒಂಟಿ ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.  ಹತ್ಯೆಗೀಡಾದ ಮಹಿಳೆಯನ್ನು ಕುಸುಮ(50) ಎಂದು ಗುರುತಿಸಲಾಗಿದೆ ಮತ್ತು ಇವರ ಶವ ಮನೆಯಲ್ಲಿ ಪತ್ತೆಯಾಗಿದೆ.     ಕುಸುಮ ಅವರು ತನ್ನ ಮನೆಯಲ್ಲಿ ಏಕಾಂಗಿಯಾಗಿರುತ್ತಿದ್ದು, ಅತ್ಯಾಚಾರವೆಸಗಿ ಹತ್ಯೆ ನಡೆಸಿರುವುದಾಗಿ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಹತ್ಯೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಯ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು : ಒಂಟಿ ಮಹಿಳೆಯ ಹತ್ಯೆ ➤ ಅತ್ಯಾಚಾರವೆಸಗಿರುವ ಶಂಕೆ .!! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಚೊಕ್ಕಡಿ, ಸೆ.26: ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ಧಾಳಿ ನಡೆಸಿ 14 ಕೋಳಿಗಳನ್ನು ಹಾಗೂ 9 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.     ಕೋಳಿ ಅಂಕ ಹಾಗೂ ಜುಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಭಾರ ಠಾಣಾಧಿಕಾರಿ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಮಧು ಟಿ ಹಾಗೂ ಪೊಲೀಸರು ಜುಜಾಟ ನಡೆಸುತ್ತಿದ್ದ ಸ್ಥಳಕ್ಕೆ

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ Read More »

ಕರಾವಳಿ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಳ್ನಾಡು, ಸೆ.26:  ರಬ್ಬರ್‌ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ನಡೆದಿದೆ.     ಮೃತ ವ್ಯಕ್ತಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಇರುವಸ್ಯ ಸಲ್ಮೋಯಿ ತೋಮಸ್(55 ವ.) ಎಂದು ಗುರುತಿಸಲಾಗಿದೆ. ಇವರು ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಮಾಲಕತ್ವದ ರಬ್ಬರ್‌ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಲ್ಮೋಯಿ ತೋಮಸ್‌ ರವರು ಕೆಲಸ ಮಾಡಿಕೊಂಡಿದ್ದರು. ಇನ್ನು ಆತ್ಮಹತ್ಯೆಗೆ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.24: ಭಾರತ ಸರಕಾರ ಅಂಚೆ ಕಛೇರಿಯಿಂದ ಬ್ಯಾಂಕಿಂಗ್‌ ಮನೆ ಬಾಗಿಲಿಗೆ ಅಭಿಯಾನ ಎಲ್ಲಾ ಅಂಚೆ ಕಛೇರಿಗಳಲ್ಲೂ ಸೆ.29 ರಂದು ನಡೆಯಲಿದೆ.   ಸ್ಥಳೀಯ ಅಂಚೆ ಕಛೇರಿಯ ಅಂಚೆ ವಿತರಕರ ಮೂಲಕ 1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ತೆರೆಯುವ ಅಭಿಯಾನ ಇದಾಗಿದ್ದು, ಕಾಗದ ರಹಿತ, ಪಾಸ್ಬುಕ್‌ ರಹಿತ ಪೂರ್ಣ ಡಿಜಿಟಲ್‌ ಖಾತೆ ಹಾಗೂ ಶೂನ್ಯ ಮೊತ್ತದ ಖಾತೆಗೆ ಇದರಲ್ಲಿ ಅವಕಾಶವಿದೆ. ಖಾತೆ ತೆರೆಯುವವರ ಆಧಾರ್‌ ಕಾರ್ಡ್‌ ಹಾಗೂ ಮೊಬೈಲ್‌ ಸಂಖ್ಯೆ ಹೊಂದಿರಬೇಕು.

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.! Read More »

ಕರಾವಳಿ, ಕರ್ನಾಟಕ

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24:  ವ್ಯಕ್ತಿಯೊಬ್ಬರು ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿದ ಪಂಜದ ಕೃಷ್ಣ ನಗರದ ನಿವಾಸಿ ದಿ. ಶೇಷಪ್ಪ ಆಚಾರ್ಯರವರ ಪುತ್ರ ವಸಂತ ಆಚಾರ್ಯರವರು ಆಸ್ಪತ್ರೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸಂಭವಿಸಿದೆ.     ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿ, ಅಲ್ಲಿ ತಲುಪಿ ಸ್ವಲ್ಪ ಹೊತ್ತಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.ಎಂದು ತಿಳಿದುಬಂದಿದೆ    

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ

ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.23: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ 54 ವರ್ಷದ ವ್ಯಕ್ತಿ, ಶಿರಾಡಿಯ 47 ವರ್ಷದ ಮಹಿಳೆ, 22 ವರ್ಷದ ಯುವಕ, ಬಂಟ್ರ ನಿವಾಸಿ 50 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದೆ.  

ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.23: ದ್ವಿಚಕ್ರ ವಾಹನವೊಂದರಲ್ಲಿ ಬಂದ ವ್ಯಕ್ತಿಯೋರ್ವ ಬೀಡಿ ಬ್ರಾಂಚ್‌ ನಿಂದ ಮರಳುತ್ತಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಳಿಯ ಮರುವಾಳ ಎಂಬಲ್ಲಿ ನಡೆದಿದೆ.     ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಮಹಿಳೆ ದೂರು ನೀಡಿದ್ದಾರೆ. ಕಳೆದ ದಿನ ಮದ್ಯಾಹ್ನದ ವೇಳೆ ಬೀಡಿಕೊಟ್ಟು ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಂಡಡ್ಕ ಭಾಗದಿಂದ

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ.23: ಕೆಲವು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ಮಳೆಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಸೋಮವಾರಪೇಟೆ ನಗರದ ಕಲ್ಕಂದೂರು ಬಾಣೆಯಲ್ಲಿ ಅಬ್ಬಾಸ್ ಎಂಬುವರ ಮನೆಯ ಗೋಡೆ ಕುಸಿತಗೊಂಡಿದೆ. ಸಿನಿಮೀಯ ರೀತಿಯಲ್ಲಿ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.     ಸೋಮಪಾರಪೇಟೆಯ ಕಲ್ಕಂದೂರು ಬಾಣೆಯ ಅಬ್ಬಾಸ್ ಎಂಬುವರ ಮನೆ ಭಾರೀ ಗಾಳಿ ಮಳೆಗೆ ಮುಂಜಾನೆ 3.30ಕ್ಕೆ ಕುಸಿತಗೊಂಡಿದೆ. ಕುಸಿಯುತ್ತಿದ್ದಂತ ಶಬ್ದ ಕೇಳಿದ್ದೇ ತಡ, ಮನೆಯಲ್ಲಿದ್ದಂತ ನಾಲ್ವರು ತಕ್ಷಣವೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ
Scroll to Top