Ashitha Soodlu

ಏರೋ ಇಂಡಿಯಾ 2021 ವೆಬ್‌ಸೈಟ್‌ಗೆ ಸಚಿವ ರಾಜನಾಥ್‌ಸಿಂಗ್ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.12: ಬೆಂಗಳೂರಿನಲ್ಲಿ ಮುಂದಿನವರ್ಷ ಫೆಬ್ರವರಿ 3ರಿಂದ 7ರ ತನಕ ನಡೆಯಲಿರುವ ಏರೋ ಇಂಡಿಯಾ 2021ರ ವೆಬ್​ಸೈಟ್​ ( https://aeroindia.gov.in )ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಚಾಲನೆ ನೀಡಿದರು.     ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದು 13ನೇ ಆವೃತ್ತಿಯ ಪ್ರದರ್ಶನವಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲ ಆನ್​ಲೈನ್ ಸೇವೆಗಳನ್ನೂ ಈ ವೆಬ್​ಸೈಟ್ ಮೂಲಕ ಪಡೆಯಬಹುದಾಗಿದೆ. ಪ್ರದರ್ಶಕರು ಈ ಸೈಟ್​ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. […]

ಏರೋ ಇಂಡಿಯಾ 2021 ವೆಬ್‌ಸೈಟ್‌ಗೆ ಸಚಿವ ರಾಜನಾಥ್‌ಸಿಂಗ್ ಚಾಲನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ದೇವಿಪ್ರಸಾದ್‌ ಚಿಕ್ಮುಳಿ ಅವರಿಗೆ ಜೆಸಿಐ ಸಾಧನಾಶ್ರೀ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.12: ಜೆಸಿಐ ಪಂಜ ಪಂಚ ಶ್ರೀಯ ಕಾರ್ಯದರ್ಶಿ ಜೇಸಿ ದೇವಿಪ್ರಸಾದ್‌ ಚಿಕ್ಮುಳಿ ಅವರಿಗೆ ಭಾರತೀಯ ಜೇಸಿಸ್‌ ಆಶ್ರಯದಲ್ಲಿ ಭಾನುವಾರ ಬಂಟ್ವಾಳದ ಬಂಟರ ಭವನದಲ್ಲಿ ನಡೆದ ಅದ್ವಿತೀಯ ಸಮ್ಮೇಳನದಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.     ಈ ಸಂದರ್ಭದಲ್ಲಿ ಜೆಸಿಐ ವಲಯ ಅಧ್ಯಕ್ಷ ಜೆಎಫ್‌ಪಿ ಕಾರ್ತಿಕೇಯ ಮಧ್ಯಸ್ಥ ನಿಕಟಪೂರ್ವ ಅಧ್ಯಕ್ಷರಾದ ಪಿಪಿಪಿ ಅಶೋಕ್‌ ಚುಂತಾರ್‌ ವಲಯ ಉಪಾಧ್ಯಕ್ಷ ಜೆಎಫ್‌ಪಿ ಪ್ರದೀಪ್‌ ಬಾಕಿಲ ವ್ಯವಹಾರ ವಿಭಾಗದ ನಿರ್ದೇಶಕ ಜೇಸಿ ರಾಜೇಶ್‌ ಪುಂಜಲಕಟ್ಟೆ, ಜೆಸಿಐ

ಬಂಟ್ವಾಳ: ದೇವಿಪ್ರಸಾದ್‌ ಚಿಕ್ಮುಳಿ ಅವರಿಗೆ ಜೆಸಿಐ ಸಾಧನಾಶ್ರೀ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.!

(ನ್ಯೂಸ್ ಕಡಬ) newskadaba.com ಲಖನೌ, ಸೆ.12: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಮೊಸಳೆಯನ್ನು ಹಿಡಿದಿಟ್ಟುಕೊಂಡ ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರಿಗೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಬುದ್ದಿ ಕಲಿಸಿದ್ದಾರೆ.     ಹೌದು, ಉತ್ತರ ಪ್ರದೇಶದ ಭಾಗದಲ್ಲಿ ಮಾನ್ಸೂನ್ ಮಳೆ ಸುರಿದಿದೆ. ಮಳೆಯಿಂದ ಪ್ರವಾಹ ಉಂಟಾಗಿದೆ. ಈ ವೇಳೆ ಮೊಸಳೆಯೊಂದು ಕೊಚ್ಚಿಕೊಂಡು

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.11: ಮಾಜಿ ರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜಯಂತಿಯಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಕರ್ನಾಟಕ ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.     ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಂದರ್ಭ ರಾಜ್ಯ ಶಿಕ್ಷಣ ಇಲಾಖೆಯಿಂದ ಆಯ್ಕೆಯಾದ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಪ್ರಶಸ್ತಿ ವಿಜೇತ ಮೂವರು ಶಿಕ್ಷಕರಾದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಡಾದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಸ್‌.ಯಾಕೂಬ್‌‌, ಅಫ್ಜಲ್ಪುರದ ಬಂದರವಾಡದ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ Read More »

ಕರಾವಳಿ, ಕರ್ನಾಟಕ

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸರಕಾರಿ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದ ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಮಡಿಯಾಳ ಸದಾನಂದ ರಾವ್‌ (76) ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.     ಅವರು ಪತ್ನಿ ಮೋಹಿನಿ ಎಸ್.ರಾವ್‌, ಪುತ್ರ ಸುಧೀರ್‌, ಪುತ್ರಿ ಅನ್ನಪೂರ್ಣ ಅವರನ್ನು ಅಗಲಿದ್ದಾರೆ.ಹಲವಾರು ಗಣ್ಯರು ಮನೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.    

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಾಷಣಗಳಲ್ಲಿ, ಪತ್ರಿಕೆಗಳಲ್ಲಿ ಪರಿಸರ ದಿನಾಚರಣೆಯಂದು ಪರಿಸರ ಉಳಿವಿನ ಜಾಗೃತಿ ಹೆಚ್ಚೆಚ್ಚು ಕೇಳಿ ಬರುತ್ತದೆ. ಆದರೆ ಈ ಭಾಷಣಗಳು, ಲೇಖನಗಳು ಕೇವಲ ಆ ದಿನಕ್ಕೆ ಮಾತ್ರ ಸೀಮಿತವಾಗುತ್ತವೆ. ಆ ಬಳಿಕ ಮತ್ತೆ ಪರಿಸರ ನಾಶ, ಪರಿಸರ ಮಾಲಿನ್ಯದ ಕೆಲಸದಲ್ಲಿ ಭಾಷಣ ಮಾಡಿದವರು, ಕೇಳಿದವರು, ಲೇಖನ ಬರೆದವರು, ಓದುವವರು ಆ ಬಗ್ಗೆ ಮರೆತೇಬಿಡುವುದು ಸಾಮಾನ್ಯ ವಿಚಾರವೂ ಆಗಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಕೃಷಿಕರೊಬ್ಬರು ಪರಿಸರದ ಉಳಿವಿಗಾಗಿ ತನ್ನ ಜಮೀನನ್ನು ಕಾಯ್ದಿರಿಸಿದ ಅಪ್ಪಟ ಪರಿಸರ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ Read More »

ಕರಾವಳಿ, ಕರ್ನಾಟಕ

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಟ್ಕಳ ಸಮುದ್ರ‌ತೀರದಿಂದ 17 ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರನ್ನು ಶುಕ್ರವಾರ ರಕ್ಷಣೆ ಮಾಡಲಾಗಿದೆ. ಕರಾವಳಿ ಕಾವಲು ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಎಲ್ಲರನ್ನು ಸುರಕ್ಷಿತವಾಗಿ ಭಟ್ಕಳ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.     ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿತ್ತು. ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ,

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ Read More »

ಕರಾವಳಿ, ಕರ್ನಾಟಕ

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.11: ನಾಡ ಹಬ್ಬ ದಸರಾವನ್ನು ಈ ಬಾರಿ ಅತ್ಯಂತವಾಗಿ ಅರಮನೆಗೆ ಸೀಮಿತವಾಗಿ ಆಚರಿಸಲು ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತೀರ್ಮಾನಿಸಿದೆ. ಅಲ್ಲದೆ ದಸರಾದಲ್ಲಿ ಭಾಗವಹಿಸುವ ಆನೆಗಳ ಸಂಖ್ಯೆಯನ್ನೂ 5 ಕ್ಕೆ ಮಿತಿ ಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಐದು ಆನೆಗಳ ಪಟ್ಟಿಯನ್ನು ಸಿದ್ದಪಡಿಸಿದ್ದಾರೆ. ಅರ್ಜುನನಿಗೆ 60 ವರ್ಷ ಮೀರಿರುವ ಹಿನ್ನೆಲೆಯಲ್ಲಿ ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರುವುದು ಬಹುತೇಕ ಖಚಿತವಾಗಿದೆ.  

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ Read More »

ಕರಾವಳಿ, ಕರ್ನಾಟಕ

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ತುರ್ತು ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ.     ಕಡಬ ಸಮೀಪದ ಮಜ್ಜಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಕಳೆದ ದಿನದಂದು ತೀರಾ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಗ್‌ ಎನ್.ಕೆ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ, ಠಾಣೆಗೂ ಕರೆ

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು Read More »

ಕರಾವಳಿ, ಕರ್ನಾಟಕ

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು ,ಸೆ.11: 2020 ನೇ ಸಾಲಿನ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಸೇರಿದಂತೆ 6 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯಪಾಲರ ಆದೇಶಾನುಸಾರ ವಿಪತ್ತು ನಿರ್ವಹಣೆ ವಿಭಾಗದ ಕಂದಾಯ ಇಲಾಖೆ ಸರಕಾರದ ಜಂಟಿಕಾರ್ಯದರ್ಶಿ ಅವರು ಘೋಷಣಾ ಆದೇಶವನ್ನು ಹೊರಡಿಸಿದ್ದಾರೆ.     2020 ರ ಮುಂಗಾರು

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ Read More »

ಕರಾವಳಿ, ಕರ್ನಾಟಕ
Scroll to Top