Ashitha Soodlu

ಸರಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಡ್ರಗ್ಸ್ ಸರಬರಾಜು ➤ ಶ್ವಾನದಳದ ಮೂಲಕ ತಪಾಸಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವ ಬಸ್ಸುಗಳ ಮೂಲಕ ಬೆಂಗಳೂರಿಗೆ ಡ್ರಗ್ ರವಾನೆ ಮಾಡುತ್ತಿದ್ದ ಖಚಿಯ ಮಾಹಿತಿಯಂತೆ ಸಿಸಿಬಿ ಪೊಲೀಸರು ಇಂದು ಬೆಳಗ್ಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿದ್ದ ಸರಕಾರಿ ಹಾಗೂ ಖಾಸಗಿ ಬಸ್ಸುಗಳ ಕೊರಿಯರ್ ಹಾಗೂ ಪಾರ್ಸೆಲ್ ಗಳನ್ನು ಪರಿಶೀಲನೆ ನಡೆಸಿದ್ದಾರೆ. ಡ್ರಗ್ ಮಾಫಿಯಾ ತಡೆಗಟ್ಟಲು ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು ತನಿಖೆ ಮುಂದುವರಿಸಿ, ಡ್ರಗ್ ಸರಬರಾಜು ಹಾಗೂ ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

ಸರಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಡ್ರಗ್ಸ್ ಸರಬರಾಜು ➤ ಶ್ವಾನದಳದ ಮೂಲಕ ತಪಾಸಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಾಯದಲ್ಲಿ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ. ಸೆ.02: ಮಳೆಗಾಲದಲ್ಲಿ ಗುಡ್ಡ ಕುಸಿದು ಸಾವು ನೋವು ಸಂಭವಿಸುತ್ತಿರುವ ಘಟನೆಗಳು ನಡೆಯುತ್ತಿರುವುದನ್ನು ನಾವು ಪದೇ ಪದೇ ಕೇಳುತ್ತಲೇ ಇದ್ದೇವೆ. ಇಲ್ಲೊಂದು ಪ್ರದೇಶದಲ್ಲಿ ಹೆದ್ದಾರಿ ಕಾಮಗಾರಿಗಾಗಿ ಗುಡ್ಡವನ್ನು ಅಗೆಯಲಾಗಿದ್ದು, ಪ್ರಸ್ತುತ ಗುಡ್ಡಗಳು ಅಪಾಯಕಾರಿ ಸ್ಥಿತಿಯಲ್ಲಿದೆ. ಗುಡ್ಡದ ಮೇಲ್ಭಾಗದಲ್ಲಿ ಬೃಹತ್ ಗಾತ್ರದ ಮರಗಳೂ ಇರುವುದರಿಂದ ಅಪಾಯದ ಸಾಧ್ಯತೆ ಹೆಚ್ಚಿದೆ. ಬಿ.ಸಿ.ರೋಡು-ಪುಂಜಾಲಕಟ್ಟೆ 19.85 ಕಿ.ಮೀ.ಹೆದ್ದಾರಿ ಅಭಿವೃದ್ಧಿಗಾಗಿ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಭೂಸ್ವಾಧೀನ ಪಡಿಸಲಾದ ಪ್ರದೇಶಗಳನ್ನು ಅಗೆದು ರಸ್ತೆ ನಿರ್ಮಿಸಲಾಗಿದೆ. ರಸ್ತೆ ಸಾಗುವ ನಾವೂರು ಗ್ರಾಮದ ಬಡಗುಂಡಿ

ಅಪಾಯದಲ್ಲಿ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಮರದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗೋಳಿತ್ತೊಟ್ಟಿನಲ್ಲಿ ಬುಧವಾರದಂದು ನಡೆದಿದೆ. ಮೃತರನ್ನು ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್ (25ವ.) ಎಂದು ಗುರುತಿಸಲಾಗಿದೆ. ಇವರು ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ಎಂಬಲ್ಲಿ ಮಾವಿನ ಮರವೊಂದರ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ

ನೆಲ್ಯಾಡಿ: ಮರದಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಯುವಕನ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಸೆ. 02.  ಯುವಕನೋರ್ವನನ್ನು‌ ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬಡಗ ಮಿಜಾರು ಎಂಬಲ್ಲಿ‌ ಬೆಳಕಿಗೆ ಬಂದಿದೆ. ಮೃತ ಯುವಕನನ್ನು  ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡರ ಪುತ್ರ ಉಮೇಶ್ ಗೌಡ(35) ಎಂದು ಗುರುತಿಸಲಾಗಿದೆ. ಯಾರೋ ದುಷ್ಕರ್ಮಿಗಳು ಮಂಗಳವಾರ  ತಡರಾತ್ರಿ  ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದಿದ್ದಾರೆ ಎನ್ನಲಾಗಿದೆ.  ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಬೇಟಿ ನೀಡಿ ತನಿಖೆ ನಡೆಸಿದ್ದಾರೆ.

ಮಂಗಳೂರು: ಯುವಕನ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇನ್ಫೋಸಿಸ್‍ ನಾರಾಯಣಮೂರ್ತಿಗೆರವರಿಗೆ ವಿಶ್ವ ಡಿಜಿಟಲ್ ಅವಾರ್ಡ್

(ನ್ಯೂಸ್ ಕಡಬ) newskadaba.com ನವದೆಹಲಿ. ಸೆ.02:  ಪ್ರಥಮ ಬಾರಿಗೆ ನೀಡಲಾಗುತ್ತಿರುವ ವಿಶ್ವ ಡಿಜಿಟಲ್ ಅವಾರ್ಡ್‍ಗೆ ಇನ್ಫೋಸಿಸ್‍ನ ನಾರಾಯಣಮೂರ್ತಿ, ರತನ್ ಟಾಟಾ , ಮುಖೇಶ್ ಅಂಬಾನಿ ಹಾಗೂ ಆನಂದ್ ಮಹೀಂದ್ರಾ ಅವರು ಭಾಜನರಾಗಿದ್ದಾರೆ. ಐಎಎ ಸಂಸ್ಥೆ ಘೋಷಣೆ ಮಾಡಿರುವ ವಿಶ್ವ ಡಿಜಿಟಲ್ ಅವಾರ್ಡ್‍ನಲ್ಲಿ ಜೀವ ಮಾನ ಸಾಧನೆಗಾಗಿ ಈ ನಾಲ್ವರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.   ಅದೇ ರೀತಿ ಇತರ ವಿಭಾಗಗಳಲ್ಲಿ ಮಹತ್ತರ ಸಾಧನೆ ಮಾಡಿರುವ ಸಾಧಕರಿಗೂ ಡಿಜಿಟಲ್ ಪ್ರಶಸ್ತಿ ನೀಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿದ

ಇನ್ಫೋಸಿಸ್‍ ನಾರಾಯಣಮೂರ್ತಿಗೆರವರಿಗೆ ವಿಶ್ವ ಡಿಜಿಟಲ್ ಅವಾರ್ಡ್ Read More »

ರಾಷ್ಟ್ರೀಯ ನ್ಯೂಸ್

ನಾಡಹಬ್ಬ ದಸರಾ ಆಚರಣೆಗೆ ಹೆಚ್ಚಿದ ಒತ್ತಡ: ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.02. ಕೊರೋನಾ  ಕಾರಣ ಮುಂದಿಟ್ಟು ನಾಡಹಬ್ಬ ಮೈಸೂರು ದಸರಾ ಆಚರಣೆ ಕೈಬಿಡಬಾರದು ಎಂಬ ಒತ್ತಡದ ನಡುವೆ ಮೈಸೂರು ದಸರಾ ನಡೆಯುವುದೇ ಇಲ್ಲವೇ ಎಂಬ ಸಂದೇಹ ಹೆಚ್ಚಾಗಿದೆ. ಕಳೆದ ತಿಂಗಳು ಕಾವೇರಿ ನದಿಗೆ ಬಾಗಿನ ಸಮರ್ಪಿಸಲು ತೆರಳುವ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಸರಾ ಆಚರಣೆ ಬಗ್ಗೆ ತೀರ್ಮಾನಿಸಲು ಚಿಂತನೆ ನಡೆದಿದ್ದು, ಶೀಘ್ರವೇ ಸಭೆ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೆ.7ರಂದು ಉನ್ನತಮಟ್ಟದ ಸಭೆ ನಿಗದಿಯಾಗಿದೆ ಎಂದು

ನಾಡಹಬ್ಬ ದಸರಾ ಆಚರಣೆಗೆ ಹೆಚ್ಚಿದ ಒತ್ತಡ: ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ Read More »

ಕರಾವಳಿ, ಕರ್ನಾಟಕ

ಕಡಬ: ಶ್ರೀದುರ್ಗಾ ಫ್ಯಾನ್ಸಿ ಮತ್ತು ಫೂಟ್ ವೇರ್ ಹೌಸ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ಇಲ್ಲಿನ ಸಿ.ಎ. ಬ್ಯಾಂಕ್‌ ಯೋಗಕ್ಷೇಮ ಸಂಕೀರ್ಣದಲ್ಲಿ ಶ್ರೀದುರ್ಗಾ ಫ್ಯಾನ್ಸಿ ಮತ್ತು ಫೂಟ್ ವೇರ್ ಹೌಸ್‌ ಇಂದು ಶುಭಾರಂಭಗೊಂಡಿತು. ಶುಭವತಿ ರೈ ಬೆದ್ರಾಜೆ ಇವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.   ಈ ಸಂದರ್ಭದಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್‌, ಕಡಬ ಸಿ.ಎ ಬ್ಯಾಂಕ್‌ ಅಧ್ಯಕ್ಷ ರಮೇಶ್‌ ಭಟ್‌ ಕಲ್ಪುರೆ, ಸೀತಾರಾಮ ಗೌಡ ಪೊಸವಳಿಕೆ, ಕಡಬ ದುರ್ಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯಕ್‌, ರಂಜಿತ್‌ ರೈ ಬೆದ್ರಾಜೆ ಉಪಸ್ಥಿತರಿದ್ದರು. ನೂತನ ಫ್ಯಾನ್ಸಿ

ಕಡಬ: ಶ್ರೀದುರ್ಗಾ ಫ್ಯಾನ್ಸಿ ಮತ್ತು ಫೂಟ್ ವೇರ್ ಹೌಸ್ ಶುಭಾರಂಭ Read More »

ಕರಾವಳಿ, ಕರ್ನಾಟಕ

ಅಕ್ರಮ ದನ ಸಾಗಾಟ ಪ್ರಕರಣ ➤ ಗೋವುಗಳನ್ನು ಹಿಂತಿರುಗಿಸುವಂತೆ ನ್ಯಾಯಾಲಯದಿಂದ ಆದೇಶ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02. ಅಕ್ರಮ ಗೋ ಸಾಗಾಟದಲ್ಲಿ ವಶಪಡಿಸಿಕೊಳ್ಳಲಾಗಿದ್ದ ಹಸು ಮತ್ತು ಕರುವನ್ನು ವಾಪಾಸು ನೀಡುವಂತೆ ನ್ಯಾಯಾಲಯ ಆದೇಶಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಎರಡು ವಾರಗಳ ಹಿಂದೆ ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಇರ್ದೆ ಸಮೀಪದ ಚೆಲ್ಯಡ್ಕ ಎಂಬಲ್ಲಿ ವಶಪಡಿಸಿಕೊಂಡು, ಆರೋಪಿಗಳಾದ ಬಾಲಕೃಷ್ಣ ಗೌಡ ಮತ್ತು ಆರ್ಲಪದವಿನ ಮೂಸಾ ಎಂಬವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಆರೋಪಿ

ಅಕ್ರಮ ದನ ಸಾಗಾಟ ಪ್ರಕರಣ ➤ ಗೋವುಗಳನ್ನು ಹಿಂತಿರುಗಿಸುವಂತೆ ನ್ಯಾಯಾಲಯದಿಂದ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ – ಪುತ್ತೂರಿನಲ್ಲಿ ಇಂದು 51 ಕೊರೋನ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ. ಸೆ.02: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಬುಧವಾರ ಒಟ್ಟು 51 ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಕಡಬ ತಾಲೂಕಿನ ಕೋಡಿಂಬಾಳದ 58ರ ಪುರುಷ, 53ರ ಪುರುಷ, 30ರ ಪುರುಷ, 68ರ ಮಹಿಳೆ, ಕಡಬ ತಾಲೂಕು ಕಚೇರಿ ಸಿಬ್ಬಂದಿ 34ರ ಪುರುಷ, 102 ನೆಕ್ಕಿಲಾಡಿಯ 32 ವರ್ಷದ ಪುರುಷ, 14ರ ಬಾಲಕ, 34ರ ಮಹಿಳೆ, ಕಡಬ ಠಾಣೆಯ 27 ವರ್ಷದ ಪುರುಷ ಸಿಬ್ಬಂದಿ, ನೆಲ್ಯಾಡಿಯ 65ರ ಪುರುಷ, 50ರ ಮಹಿಳೆ, ಬಿಳಿನೆಲೆಯ 21ರ

ಕಡಬ – ಪುತ್ತೂರಿನಲ್ಲಿ ಇಂದು 51 ಕೊರೋನ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಕಂದಕವನ್ನು ಕೆಡವಿ ತೋಟಕ್ಕೆ ನುಗ್ಗುತ್ತಿರುವ ಕಾಡಾನೆಗಳು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ, ಮಣ್ಣಗುಂಡಿ  ಪ್ರದೇಶದಲ್ಲಿ ಕಳೆದ 8 ದಿನಗಳಿಂದ  ಬೀಡು ಬಿಟ್ಟ ಕಾಡಾನೆಯು ಕೃಷಿಕರ ತೋಟದೊಳಗೆ ನುಗ್ಗಿ ಅಪಾರ ಪ್ರಮಾಣದ ಕೃಷಿ ಬೆಳೆ ಹಾನಿಗೊಳಿಸಿದೆ. ಅರಣ್ಯ ಇಲಾಖೆಯು ಕಾಡಿನಂಚಿನಲ್ಲಿ ಆನೆ ನಿರೋಧಕ ಕಂದಕ ನಿರ್ಮಿಸಿದ್ದು, ಆದರೆ ಆನೆಗಳ ಹಿಂಡು ಕಂದಕವನ್ನೇ ಕೆಡವಿ ದಾರಿ ಮಾಡಿಕೊಂಡು ರಸ್ತೆಯನ್ನು ದಾಟಿ  ತೋಟದೊಳಗೆ ನುಸುಳುತ್ತಿರುವುದು ಸಾಮಾನ್ಯವಾಗಿದೆ. ಒಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅಪಾರ ಕೃಷಿ ಹಾನಿಯಾಗುವುದನ್ನು ಅರಣ್ಯ ಇಲಾಖೆ  ತಪ್ಪಸುವ

ನೆಲ್ಯಾಡಿ: ಕಂದಕವನ್ನು ಕೆಡವಿ ತೋಟಕ್ಕೆ ನುಗ್ಗುತ್ತಿರುವ ಕಾಡಾನೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top