Ashitha Soodlu

ಇಂದು ಮತ್ತೆ ಇಳಿಕೆ ಕಂಡ “ಚಿನ್ನ ಧಾರಣೆ”

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 27.  ಇಂದು ದೇಶೀಯ  ಮಾರುಕಟ್ಟೆಯಲ್ಲಿ ಚಿನ್ನದ  ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್ ನಲ್ಲಿ ಅಕ್ಟೋಬರ್ ಚಿನ್ನದ ಭವಿಷ್ಯವು ಶೇಕಡಾ 0.22 ರಷ್ಟು ಇಳಿದಿದ್ದು, 10 ಗ್ರಾಂ. ಬಂಗಾರದ ಬೆಲೆಯು 51,665 ಕ್ಕೆ ತಲುಪಿದೆ. ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ ಶೇಕಡಾ 1 ರಷ್ಟು ಇಳಿಕೆ ಕಂಡಿದ್ದು, ಕೆ.ಜಿಗೆ 66,821 ರೂಪಾಯಿಯಾಗಿದೆ. ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 54,870 ರೂಪಾಯಿಗಳಿಂದ  54,380 ರೂಪಾಯಿಗೆ ಇಳಿದಿದೆ. ಬೆಳ್ಳಿ […]

ಇಂದು ಮತ್ತೆ ಇಳಿಕೆ ಕಂಡ “ಚಿನ್ನ ಧಾರಣೆ” Read More »

ರಾಷ್ಟ್ರೀಯ ನ್ಯೂಸ್

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ಆ.27: ಭಾರತೀಯ ಜನತಾ ಪಾರ್ಟಿ, ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಕಡಬದಲ್ಲಿ ನಡೆಯುತ್ತಿರುವ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ್‌ ಕಂಜಿಪಿಲಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಯುವ ಮೋರ್ಚಾದ ಮಂಡಲ ಅಧ್ಯಕ್ಷ ಶ್ರೀ ಕೃಷ್ಣ ಭಟ್‌ ಹೊಸಮಠ ವಹಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ದಕ್ಷಿಣ ಕನ್ನಡದ ಜಿಲ್ಲಾಧ್ಯಕ್ಷ ಗುರುದತ್‌ ನಾಯಕ್‌ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೃಷ್ಣ ಶೆಟ್ಟಿ ಕಡಬ ಜಿಲ್ಲಾ

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ Read More »

ಕರಾವಳಿ, ಕರ್ನಾಟಕ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ.   ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಲೇಡಿಸ್ ಪಿಜಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ವಿಕೃತ ಕಾಮಿಯೊಬ್ಬ ಬಂದು ಯುವತಿಯರ ಬಟ್ಟೆ ಕದಿಯುತ್ತಿದ್ದ. ಈ ಹಿಂದೆ ಎರಡು ಬಾರಿ ಈತನನ್ನು ಹಿಡಿದು ಪೊಲೀಸರ ವಶಕ್ಕೆ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕರ ನಡುವೆ ಮಾರಾಮಾರಿ ➤ ಇಬ್ಬರ ಕೊಲೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 27.  ನಗರದ ಗೋಪನಕೊಪ್ಪ ಎಂಬಲ್ಲಿ ಬಸ್ ನಿಲ್ದಾಣದ ಬಳಿ ಬುಧವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಹೊಡೆದು ಇಬ್ಬರನ್ನು ಕೊಲೆಗೈಯ್ಯಲಾಗಿದೆ.   ಕೊಲೆಯಾದ ಯುವಕರನ್ನು ಮಂಜುನಾಥ ಕಬ್ಬಿನ ಹಾಗೂ ನಿಯಾಜ್ ಎಂದು ಗುರುತಿಸಲಾಗಿದೆ. ಹಳೆಯ‌ ವೈಷ್ಯಮದ ಹಿನ್ನೆಲೆಯಲ್ಲಿ ಹೊಡೆದಾಟ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವುದರಿಂದ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಯುವಕರ ನಡುವೆ ಮಾರಾಮಾರಿ ➤ ಇಬ್ಬರ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಸ್ಪರ್ಶಕ್ಕೆ ಆನೆ ಬಲಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 27. ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ಎಂಬಲ್ಲಿ ವಿದ್ಯುತ್ ಪ್ರವಹಿಸಿ ಗಂಡಾನೆಯೊಂದು ಸಾವನ್ನಪ್ಪಿದೆ. ಬೆಳೆಯ ರಕ್ಷಣೆಗೆಂದು ರೈತರೋರ್ವರು ತಮ್ಮ‌ ಜಮೀನಿಗೆ ತಂತಿಬೇಲಿ ಅಳವಡಿಸಿ, ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ‌ ನೀಡಿದ್ದರು ಎನ್ನಲಾಗಿದೆ. ಆನೆಯ ವಯಸ್ಸು 28-30 ವರ್ಷ ಇರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ವಿದ್ಯುತ್ ಸ್ಪರ್ಶಕ್ಕೆ ಆನೆ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27:  ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು. ಆ. 27.  ನೀರು ತುಂಬಿಸಿಡಲಾಗಿದ್ದ ಬಕೇಟ್‌ ಒಂದಕ್ಕೆ ಎಳೆ ಹಸುಗೂಸು ಬಿದ್ದು, ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೊಂಬೆಟ್ಟುವಿನಲ್ಲಿ ನಡೆದಿದೆ.     ಕೊಂಬೆಟ್ಟವಿನ ಬಾಡಿಗೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆ. 26ರಂದು ಸಂಜೆ ಹೆಣ್ಣು ಮಗುವೊಂದು ನೀರು ತುಂಬಿಸಿಟ್ಟ ಬಕೇಟ್‌ಗೆ ಬಿದ್ದಿರುವುದನ್ನು ತಡವಾಗಿ ಗಮನಿಸಿದ ಮನೆ ಮಂದಿ ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ ಆಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

ಪುತ್ತೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.27: ನೂಜಿಬಾಳ್ತಿಲದ ಕಲ್ಲುಗುಡ್ಡೆ ಪೇಟೆಯ ಮನೆಯೊಂದರಿಂದ ಕಳೆದ ದಿನ ರಾತ್ರಿ ಅಪರಿಚಿತರು ಅಡಿಕೆಗೋಣಿ ಎಗರಿಸಿದ ಘಟನೆ ನಡೆದಿದೆ. ಹಾಜೀ ಇಸ್ಮಾಯಿಲ್‌ ಎಂಬವರ ಮನೆಯಿಂದ 2 ಗೋಣಿ ಅಡಿಕೆ ಕಳವಾಗಿದ್ದು ಕಡಬ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನೂಜಿಬಾಳ್ತಿಲ, ರೆಂಜಿಲಾಡಿ ಪ್ರದೇಶದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು, ಕಲ್ಲುಗುಡ್ಡೆಗೂ ತಿರುಗಾಟ ನಡೆಸಿದ್ದಾರೆ. ಕಡಬ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದರೂ ಪೊಲೀಸರ ಕಣ್ಣು ತಪ್ಪಿಸಿ ಕಳ್ಳರು ಕೈಚಲಕ ತೋರುತ್ತಿದ್ದು ಕಳ್ಳರನ್ನು ಮಟ್ಟ ಹಾಕಲು ಪೊಲೀಸರು

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು Read More »

ಕರಾವಳಿ, ಕರ್ನಾಟಕ

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ

(ನ್ಯೂಸ್ ಕಡಬ) newskadaba.com ಅಳಿಕೆ . ಆ,27:  ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗಿನ ಜಾವ ನಿಧನ ಹೊಂದಿದರು.     ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸಿದ್ದರು. ತ್ಯಾಗ ಜೀವಿಯಾಗಿದ್ದ ಅವರು 1977ರಿಂದ ಇಲ್ಲಿಯ ತನಕ ಸುಮಾರು 43 ವರ್ಷಗಳ ಕಾಲ

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ Read More »

ಕರಾವಳಿ, ಕರ್ನಾಟಕ

ಸಂಸದ ಸಂಜಯ್ ಜಾಧವ್ ಶಿವಸೇನೆ ಪಕ್ಷಕ್ಕೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಮಹಾರಾಷ್ಟ್ರದ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್  ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರು ರಾಜೀನಾಮೆ ಪತ್ರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ. ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಅಸಾಧ್ಯವಾಗುವ ಹಿನ್ನೆಲೆ ನನಗೆ ಸಂಸದನಾಗಿರಲು ಹಕ್ಕಿಲ್ಲ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಸಂಸದ ಸಂಜಯ್ ಜಾಧವ್ ಶಿವಸೇನೆ ಪಕ್ಷಕ್ಕೆ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್
Scroll to Top