Ashitha Soodlu

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಿಂಗ್ ಸ್ಟನ್. ಆ,25:  ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್‌ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್‌, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಸುರಕ್ಷಿತವಾಗಿರಲು ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವುದಾಗಿ ಹೇಳಿಕೊಂಡಿದ್ದರು.   ಆದರೆ, ಅವರ ವರದಿ ಪಾಸಿಟಿವ್‌ ಬಂದಿರುವುದಾಗಿ ಜಮೈಕಾದ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ. ಶನಿವಾರ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಬೋಲ್ಟ್,‌ ಮರುದಿನವೇ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಸುರಕ್ಷಿತವಾಗಿರಲು ನಾನು ಸ್ವಯಂ ಕ್ವಾರಂಟೈನ್‌ಗೆ […]

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ

ಪೆರುವಾಜೆ – ಬೆಳಂದೂರು ರಸ್ತೆಗೆ ಸಂಸದ ನಳಿನ್ ಕುಮಾರ್ ರಿಂದ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 25. ಪೆರುವಾಜೆ – ಬೆಳಂದೂರು ಸಡಕ್ ರಸ್ತೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿ ಸುಮಾರು 5.529 ಕೋಟಿ ರೂ ವೆಚ್ಚದಲ್ಲಿ ಬರೆಪ್ಪಾಡಿ–ಪಳ್ಳತ್ತಾರು –ಬೆಳಂದೂರು– ಪೆರುವಾಜೆ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನಡೆಯಿತು. ಈ ಸಂದರ್ಭ ಶಾಸಕ ಎಸ್ ಅಂಗಾರ, ಹರೀಶ್ ಕಂಜಿಪಿಲಿ, ವೆಂಕಟ್ ವಳಲಂಬೆ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಪೆರುವಾಜೆ – ಬೆಳಂದೂರು ರಸ್ತೆಗೆ ಸಂಸದ ನಳಿನ್ ಕುಮಾರ್ ರಿಂದ ಗುದ್ದಲಿಪೂಜೆ Read More »

ಕರಾವಳಿ

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾವಳಿ . ಆ,25:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಒಟ್ಟು ಸಂಖ್ಯೆ ಸಂಖ್ಯೆ 316ಕ್ಕೆ ಹೆಚ್ಚಳವಾಗಿದೆ.   ಮೃತರಲ್ಲಿ 255 ಮಂದಿ ದಕ ಜಿಲ್ಲೆಯವರಾದರೆ, 61 ಮಂದಿ ಹೊರಜಿಲ್ಲೆಯವರು. ಸೋಮವಾರ ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಇಬ್ಬರು ಮತ್ತು ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.ಪಾಸಿಟಿವ್‌ ಆದವರಲ್ಲಿ ಮಂಗಳೂರು ತಾಲೂಕಿನ 144, ಬಂಟ್ವಾಳದ 22, ಪುತ್ತೂರಿನ 5, ಸುಳ್ಯದ 5,

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ

(ನ್ಯೂಸ್ ಕಡಬ) newskadaba.com ಬಲ್ಲಿಯಾ, ಆ. 25.  ಹಿಂದಿ ಸುದ್ದಿ ವಾಹಿನಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತರೋರ್ವರನ್ನು ಗುಂಡಿಟ್ಟು, ಹತ್ಯೆ ಮಾಡಿರುವ ಘಟನೆ ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ರತನ್‌ ಸಿಂಗ್‌ (45) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಇವರಿಗೆ ನೆರೆಹೊರೆಯವರೊಂದಿಗೆ ಆಸ್ತಿ ವಿವಾದವಿದ್ದು, ಈ ಸಂಬಂಧ ಇವರ ನಡುವೆ ಜಗಳ ನಡೆದು, ಈ ಸಂದರ್ಭ ರತನ್‌ ಅವರಿಗೆ ನೆರೆ ಮನೆಯವರು ಗುಂಡು ಹಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಕೊಡಗು . ಆ,25:  ಮಗ SSLC ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. 39 ವರ್ಷದ ತಂದೆ, ಕೂಲಿ ಕಾರ್ಮಿಕ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. SSLC  ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಸಿದ್ದಾಪುರ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಂಗವೈಕಲ್ಯತೆಯನ್ನು ಮೆಟ್ಟಿನಿಂತು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಕೌಶಿಕ್ಗೆ ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 25. ಕಾಲು ಬೆರಳಿನ ಮೂಲಕ ಪರೀಕ್ಷೆ ಬರೆದು ರಾಜ್ಯದ ಜನತೆಯ ಗಮನ ಸೆಳೆದಿದ್ದ ಬಂಟ್ವಾಳ ಕಂಚಿಕಾರ ನಿವಾಸಿ ಕೌಶಿಕ್ ನ ವಿದ್ಯಾಭ್ಯಾಸ ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೀಡಿದ ಭರವಸೆಯಂತೆ ನೆರವಾಗಿದ್ದು, ಇದೀಗ ವಿದ್ಯಾರ್ಥಿಯನ್ನು ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಸೇರ್ಪಡೆ ಮಾಡಲಾಗಿದೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಧ್ಯಕ್ಷ ಡಾ. ಮೋಹನ್ ಆಳ್ವ ಅವರ ಜೊತೆ ಮಾತನಾಡಿ ಶಾಸಕರು ದಾಖಲಾತಿಗೆ ಕ್ರಮ ಕೈಗೊಂಡಿದ್ದಾರೆ.

ಬಂಟ್ವಾಳ: ಅಂಗವೈಕಲ್ಯತೆಯನ್ನು ಮೆಟ್ಟಿನಿಂತು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಕೌಶಿಕ್ಗೆ ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ Read More »

ಕರಾವಳಿ, ಕರ್ನಾಟಕ

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ. ಆ,25:  ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ನಡೆದಿದೆ.   ಎನ್ ಡಿಆರ್ ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಈಗಾಗಲೇ ಒಟ್ಟು 24 ಮಂದಿಯನ್ನು ರಕ್ಷಿಸಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ರಾಷ್ಟ್ರೀಯ ನ್ಯೂಸ್

ಕಿರುಕುಳ ತಡೆಯಲಾರದೆ ಯುವ ವಕೀಲ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 25. ಸೆಲ್ಫಿ ವೀಡಿಯೋ ಮಾಡಿಕೊಂಡು ಯುವ ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಕೀಲರನ್ನು ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ಮಹೇಶ್ (28) ಎಂದು ಗುರುತಿಸಲಾಗಿದೆ. ಇವರು ಹೊಸಪೇಟೆಯ ಬಳ್ಳಾರಿ ಸರ್ಕಲ್‌ನಲ್ಲಿರುವ ಈಕ್ವಿಟಾಸ್‌‌‌ ಸ್ಮಾಲ್‌‌‌‌‌ ಫೈನಾನ್ಸ್‌‌‌‌ ಬ್ಯಾಂಕ್‌ನಲ್ಲಿ ಲೀಗಲ್‌‌ ಅಡ್ವೈಸರ್‌‌ ಆಗಿದ್ದರು. ಇನ್ನು ಮಹೇಶ್‌ ಮೃತಪಟ್ಟ ಸ್ಥಳದಲ್ಲಿ ಡೆತ್‌ ನೋಟ್‌ ದೊರೆತ್ತಿದ್ದು, ನನ್ನ ಸಾವಿಗೆ ಈಕ್ವಿಟಾಸ್ ಬ್ಯಾಂಕ್​ನ ಡಿ.ಡಿ.ಎಂ. ರಾಘವೇಂದ್ರ, ಜನರಲ್ ಮ್ಯಾನೇಜರ್ ರಮೇಶ್, ಬಸವರಾಜ್​,

ಕಿರುಕುಳ ತಡೆಯಲಾರದೆ ಯುವ ವಕೀಲ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ. ಆ,25: ಎರಡು ಬೈಕುಗಳ ಮಧ್ಯೆ ಅಪಘಾತ ಸಂಭವಿಸಿ, ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ಕನಕಮಜಲಿನಲ್ಲಿ ಆ.25 ರಂದು ಸಂಭವಿಸಿದೆ. ಕನಕಮಜಲಿನ ಕುತ್ತಿಮುಂಡ ಶೇಷಪ್ಪ ಗೌಡ ಎಂಬವರು ತಮ್ಮ ಬೈಕ್‌ ನಲ್ಲಿ ದೇರ್ಕಜೆ ರಸ್ತೆಯಿಂದ ಮುಖ್ಯರಸ್ತೆ ಕಡೆಗೆ ಬರುತ್ತಿದ್ದಾಗೆ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಪ್ರಸನ್ನ ಅಡ್ಕಾರು ಎಂಬವರ ಬೈಕ್‌ ಗೆ ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್‌ ನಿಂದ ರಸ್ತೆಗೆ ಎಸೆಯಲ್ಪಟ್ಟ ಶೇಷಪ್ಪ ಗೌಡರು ಕಾಲಿಗೆ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ

(ನ್ಯೂಸ್ ಕಡಬ) newskadaba.com ಕಾರ್ಕಳ. ಆ,25: ಕಾರ್ಕಳದ ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಎಂಬಲ್ಲಿ ಮಾರುತಿ ಇಂಡಸ್ಟ್ರೀಸ್ ಗೆ ಕಳೆದ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ಹಾನಿಯಾಗಿ ನಷ್ಟವುಂಟಾಗಿದೆ.     ಪ್ರಕಾಶ್ ಪುತ್ರನ್ ಎಂಬುವರಿಗೆ ಸೇರಿದ ಮಾರುತಿ ಇಂಡಸ್ಟ್ರೀಸ್ ಇದು ಗೇರುಬೀಜದ ಎಣ್ಣೆ ತೆಗೆಯುವ ಕಂಪನಿಯಾಗಿದ್ದು, ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆ ಆಹುತಿಯಾಗಿದೆ. ಇನ್ನು ಎರಡು ಲಾರಿಗಳು ಭಾಗಶ: ಭಸ್ಮವಾಗಿದೆ. ಸರಿ ಸುಮಾರು ಅಂದಾಜು

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ Read More »

ಕರಾವಳಿ, ಕರ್ನಾಟಕ
Scroll to Top