Ashitha Soodlu

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ, […]

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ. ಆ,20:  ಕರ್ನಾಟಕದಾದ್ಯಂತ ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇನ್ನು ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಧಿಕವಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.   ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ Read More »

ಕರಾವಳಿ

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,20:  ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ವಾರ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು.     ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರನ್ನು ಕಳೆದ ದಿನ ಕೊವೀಡ್ ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನ ಅವರ ಮನೆಯಲ್ಲೇ ಕ್ವಾರಂಟೈನ್

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ನಿನ್ನೆ ಮಧ್ಯಾಹ್ನದ ವೇಳೆಗೆ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಕರೆ ಬಂದಿತು. ಕೂಡಲೇ ಅವರು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಪೊಲೀಸರಿಗೆ ತಿಳಿಸಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿಬಾಂಬ್ ಕರೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,20:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಆಗಸ್ಟ್ 21 ರ ನಾಳೆ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cetonline.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.   ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ ಆಫ್ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು. ಪರೀಕ್ಷೆ ನಡೆದ 20 ದಿನಗಳೊಳಗೆ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಹೇಳಲಾಗಿದೆ.  

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ Read More »

ಕರ್ನಾಟಕ

ನಿರುಪಯುಕ್ತ ವಾಹನದ ಬಿಡಿಭಾಗಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕೆ.ಎಸ್.ಆರ್.ಪಿ. 7ನೇ ಪಡೆ ಅಸೈಗೋಳಿ, ಮಂಗಳೂರು ಘಟಕದಲ್ಲಿ ವಾಹನಗಳಿಗೆ ಉಪಯೋಗಿಸುವ ನಿರುಪಯುಕ್ತಗೊಳಿಸಲ್ಟಟ್ಟ ಬಿಡಿಭಾಗಗಳು, ಟಯರ್, ಟ್ಯಾಟ್ಸ್, ಪ್ಲಾಪ್ಸ್‍ಗಳು ಮತ್ತು ಸುಟ್ಟ ಇಂಜಿನ್ ಆಯಿಲ್‍ನ್ನು ಕಚೇರಿ ಆವರಣದಲ್ಲಿ ಸೆಪ್ಪಂಬರ್ 10 ರಂದು ಬೆಳಿಗ್ಗೆ 11.30 ಘಂಟೆಗೆ ಟೆಂಡರ್ ಕಮ್ ಬಹಿರಂಗ ಹರಾಜನ್ನು ಮಾಡಲಾಗುವುದು. ಟೆಂಡರ್‍ನ  ಇ.ಎಂ.ಡಿ. ರೂ 2000 ಆಗಿದ್ದು, ಅರ್ಜಿ ಸಲ್ಲಿಸಲು ಸೆಪ್ಪಂಬರ್ 8 ರಂದು ಸಂಜೆ 5 ಘಂಟೆ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ;

ನಿರುಪಯುಕ್ತ ವಾಹನದ ಬಿಡಿಭಾಗಗಳ ಬಹಿರಂಗ ಹರಾಜು Read More »

ಕರಾವಳಿ, ಕರ್ನಾಟಕ

ಎಸ್ಸಿಪಿ, ಟಿಎಸ್ಪಿ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗೆ ತಾ.ಪಂ. ಇ.ಓ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಅನುಸೂಚಿತ ಜಾತಿ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಯೋಜನೆಯಡಿ ಎಲ್ಲಾ ಇಲಾಖೆಗಳಿಗೆ ಬಿಡುಗಡೆಗೊಂಡ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು  ಮಂಗಳೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸದಾನಂದ ತಿಳಿಸಿದ್ದಾರೆ. ಅವರು ಬುಧವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯ ಮೇಲ್ವಿಚಾರಣಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ  ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯಡಿ ರಾಜ್ಯ ಮತ್ತು

ಎಸ್ಸಿಪಿ, ಟಿಎಸ್ಪಿ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗೆ ತಾ.ಪಂ. ಇ.ಓ ಸೂಚನೆ Read More »

ಕರಾವಳಿ, ಕರ್ನಾಟಕ

ಖಾಯಂ ಜನತಾ ನ್ಯಾಯಾಲಯ– ವ್ಯಾಜ್ಯ ಪೂರ್ವ ಕೇಸುಗಳ ಇತ್ಯರ್ಥಕ್ಕೆ ಅವಕಾಶ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 19. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಖಾಯಂ ಜನತಾ ನ್ಯಾಯಾಲಯಗಳನ್ನು ರಾಜ್ಯದ 6 ಜಿಲ್ಲೆಗಳಲ್ಲಿ ಸ್ಥಾಪಿಸಿದ್ದು, ಆ ಪೈಕಿ ಮಂಗಳೂರಿನಲ್ಲಿಯೂ ಕಾರ್ಯನಿರ್ವಹಿಸುತ್ತಿರುತ್ತದೆ. ನಗರದ ಬಲ್ಲಾಳ್‍ಬಾಗ್ ಎಂ.ಜಿ.ರಸ್ತೆಯಲ್ಲಿರುವ “ತಕ್ಷಿಲಾ” ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಖಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳು ಒಳಪಟ್ಟಿರುತ್ತದೆ. ಈ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಸಾರ್ವಜನಿಕಉಪಯುಕ್ತ ಸೇವೆಗಳಿಗೆ ಸಂಬಂಧಿಸಿದ ಈ ಕೆಳಕಂಡ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ. ಪ್ರಯಾಣಿಕರನ್ನು

ಖಾಯಂ ಜನತಾ ನ್ಯಾಯಾಲಯ– ವ್ಯಾಜ್ಯ ಪೂರ್ವ ಕೇಸುಗಳ ಇತ್ಯರ್ಥಕ್ಕೆ ಅವಕಾಶ Read More »

ಕರಾವಳಿ, ಕರ್ನಾಟಕ

ಮಂಗಳೂರು ನಗರ ಸ್ಥಿರಾಸ್ತಿ ಮೌಲ್ಯಮಾಪನ – ಆಕ್ಷೇಪಣೆ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ 2019ನೇ ಸಾಲಿನ ಹೊಸ, ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಣೆಗೊಳಿಸಲಾಗಿದೆ. ಸಾರ್ವಜನಿಕರು ಯಾವುದೇ ಆಕ್ಷೇಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗೊಂದಿಗೆ 15 ದಿನಗಳ ಒಳಗೆ ಮಂಗಳೂರು ಮಿನಿ ವಿಧಾನಸೌಧದ ಆವರಣದಲ್ಲಿರುವ ಕೇಂದ್ರೀಯ ಉಪನೋಂದಣಿ ಕಚೇರಿಗೆ ಸಲ್ಲಿಸಬಹುದು ಎಂದು ಮಂಗಳೂರು ಹಿರಿಯ ಉಪ ನೋಂದಾಣಿಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಂಗಳೂರು ನಗರ ಸ್ಥಿರಾಸ್ತಿ ಮೌಲ್ಯಮಾಪನ – ಆಕ್ಷೇಪಣೆ ಸಲ್ಲಿಸಲು ಅವಕಾಶ Read More »

ಕರಾವಳಿ, ಕರ್ನಾಟಕ

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಮಂಗಳೂರು, ಆಗಸ್ಟ್ 19. ಪುತ್ತೂರು ತಾಲೂಕು ಐತ್ತೂರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಮಾಸಿಕ ಗೌರವ ಸಂಭಾವನೆ ರೂ. 7000 ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಐತ್ತೂರು ಗ್ರಾಮ ಪಂಚಾಯತ್ ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top