Ashitha Soodlu

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,19: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಲ್ಲಿ ಇಂದು ( ಆ. 19) 17 ಮಂದಿಯಲ್ಲಿ ಕೊರೋನಾ ಸೊಂಕು ದೃಢ ಪಟ್ಟಿದೆ. ಕಡಬ ತಾಲೂಕಿನ ನೂಜಿ ಬಾಳ್ತಿಲ ನಿವಾಸಿ 70 ವರ್ಷದ ವ್ಯಕ್ತಿ, ಕಡಬ ನಿವಾಸಿಗಳಾದ 12 ವರ್ಷದ ಬಾಲಕಿ,  40 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಭವಾನಿಶಂಕರ್ ರಸ್ತೆಯ ನಿವಾಸಿ 29 ವರ್ಷದ ಯುವಕ, ಮಲ್ಯ ಕಂಪೌಂಡ್ ನಿವಾಸಿ 77 ವರ್ಷದ ವೃದ್ದೆ, […]

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ

ಮಂಗಳೂರು ಅಲ್ಪಸಂಖ್ಯಾತ ಭವನಕ್ಕೆ ಕಲ್ಲೆಸೆತ ಪ್ರಕರಣ ➤ ಪರಾರಿ ಆದ ಆರು ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,19:  ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಧನರಾಜ್ ಶೆಟ್ಟಿ,ಸುಶಾಂತ್, ಕಾರ್ತಿಕ್ ಶೆಟ್ಟಿ, ಸಾಗರ್ ಬಂಗೇರ, ಮನೀಶ್ ಪುತ್ರನ್ ಎಂದು ಗುರುತಿಸಲಾಗಿದ್ದು,ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಧೀಶರ ಸಮ್ಮುಖ ಹಾಜರು ಪಡಿಸಲಾಗಿದ್ದು ಅಪ್ರಾಪ್ತ ಬಾಲಕನಿಗೆ ಜಾಮೀನು ಮಂಜೂರು ಮಾಡಲಾಗಿದ್ದು ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ .13ರಂದು ತಡರಾತ್ರಿ ಪಾಂಡೇಶ್ವರದಲ್ಲಿನ

ಮಂಗಳೂರು ಅಲ್ಪಸಂಖ್ಯಾತ ಭವನಕ್ಕೆ ಕಲ್ಲೆಸೆತ ಪ್ರಕರಣ ➤ ಪರಾರಿ ಆದ ಆರು ಮಂದಿ ಬಂಧನ Read More »

ಕರಾವಳಿ

ಕಾಣಿಯೂರು : ಮನೆಯಂಗಳದ ಧರೆ ಕುಸಿತ

(ನ್ಯೂಸ್ ಕಡಬ) newskadaba.com ಕಾಣಿಯೂರು. ಆ,19:  ಮಳೆರಾಯನ ಅಬ್ಬರಕ್ಕೆ ಕರಾವಳಿ ಭಾಗಗಳಲ್ಲಿ ಈಗಾಗಲೇ ಆನೇಕ ಭಾಗಗಳ್ಲಿ ಧರೆ ಕುಸಿತಗೊಂಡಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತ ಸೇರಿದಂತೆ ಆನೇಕ ಮನೆಗಳು ಕುಸಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.   ಇದೀಗಾ ಕಾಣಿಯೂರಿನ ಚಾರ್ವಾಕದ ಕೆಳಗಿನಕೇರಿಯಲ್ಲಿ ಮನೆಯಂಗಳದ ಧರೆ ಕುಸಿತಗೊಂಡ ಘಟನೆ ನಡೆದಿದೆ. ದೆ. ಚಂದಪ್ಪ ಗೌಡರ ಮನೆಯಂಗಳದ ಧರೆಯು ಕುಸಿದಿದ್ದು, ನಷ್ಟ ಸಂಭವಿಸಿದೆ. ಇನ್ನು ಘಟನಾ ಸ್ಥಳಕ್ಕೆ ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ. ಗ್ರಾಮಕರಣಿಕಾರದ

ಕಾಣಿಯೂರು : ಮನೆಯಂಗಳದ ಧರೆ ಕುಸಿತ Read More »

ಕರಾವಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19:  ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಹಾಗೂ ಎಂ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊರ್ವನನ್ನು ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ. 28 ವರ್ಷದ ಡಾ.ಎ.ರೆಹ್ಮಾನ್ ಬಂಧಿತ ವಿದ್ಯಾರ್ಥಿಯಾಗಿದ್ದು, ಈತ ಬಸವನಗುಡಿಯಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.     ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,19:  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.   ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ವಿಕಲಚೇತನ ನೌಕರರ ಸಂಘದ ಅಧ್ಯಕ್ಷರಾಗಿ ಶಿವಪ್ಪ ರಾಥೋಡ್ ನೇಮಕ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ನೌಕರರ ಸಂಘದ ಅಧ್ಯಕ್ಷರನ್ನಾಗಿ ಪುತ್ತೂರು ತಾಲೂಕಿನ ಕುಂಬ್ರ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಶಿವಪ್ಪ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.  

ವಿಕಲಚೇತನ ನೌಕರರ ಸಂಘದ ಅಧ್ಯಕ್ಷರಾಗಿ ಶಿವಪ್ಪ ರಾಥೋಡ್ ನೇಮಕ Read More »

ಕರಾವಳಿ, ಕರ್ನಾಟಕ

ಜಿಟಿಟಿಸಿ – ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

newskadaba.com ಮಂಗಳೂರು, ಆ. 18.  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 100% ಉದ್ಯೋಗಾವಕಾಶವುಳ್ಳ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಡಿಪ್ಲೋಮ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೋರ್ಸ್‍ಗಳು ಕರ್ನಾಟಕ ಸರಕಾರ ಹಾಗೂ ಎಐಸಿಟಿಇ (AICTE) ಯಿಂದ ಅಂಗೀಕೃತವಾಗಿದೆ. ಪ್ರಾಸ್ಪೆಕ್ಟಸ್ ಹಾಗೂ ಅರ್ಜಿಗಳನ್ನು ಆನ್‍ಲೈನ್ (gttc.co.in)  ನಲ್ಲಿ ರೂ 250, (ಎಸ್.ಸಿ. ಎಸ್.ಟಿ

ಜಿಟಿಟಿಸಿ – ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ, ಕರ್ನಾಟಕ

ಎಸ್‍ಸಿ ಕಾನೂನು ಪದವೀಧರರ ಶಿಷ್ಯ ವೇತನ-ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) ಮಂಗಳೂರು, ಆಗಸ್ಟ್ 18. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2020-21 ನೇ ಸಾಲಿಗೆ ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.sw.kar.nic.in   ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ಸ್, ದೂರವಾಣಿ ಸಂಖ್ಯೆ 0824 2451237 ಸಂಪರ್ಕಿಸಲು ಮಂಗಳೂರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಎಸ್‍ಸಿ ಕಾನೂನು ಪದವೀಧರರ ಶಿಷ್ಯ ವೇತನ-ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಗೋಮಾಳ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ತಾ.ಪಂ. ಸೂಚನೆ

newskadaba.com ಮಂಗಳೂರು, ಆ. 18. ಮಂಗಳೂರು ತಾಲೂಕಿನಲ್ಲಿ ಗೋಮಾಳ ಜಾಗ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಂಡು, ಒತ್ತುವರಿ ತೆರವು ಮಾಡುವಂತೆ ಮಂಗಳೂರು ತಾಲೂಕು ಪಂಚಾಯತ್ ಸಭೆಯಲ್ಲಿ ಆಗ್ರಹಿಸಲಾಗಿದೆ. ಮಂಗಳವಾರ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಈ ಬಗ್ಗೆ ಒತ್ತಾಯ ಮಾಡಿದರು. ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಇದಕ್ಕೆ ಉತ್ತರಿಸಿ, ಗೋಮಾಳ ಜಾಗಗಳನ್ನು ಭೂದಾಖಲೆಗಳೊಂದಿಗೆ ಗುರುತಿಸಿ, ಸರ್ವೇ ಮಾಡಲಾಗುವುದು.  ಒತ್ತುವರಿ ಮಾಡಿಕೊಂಡವರ ವಿರುದ್ಧ ಕಾನೂನು ರೀತಿಯ ಕ್ರಮ

ಗೋಮಾಳ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ತಾ.ಪಂ. ಸೂಚನೆ Read More »

ಕರಾವಳಿ, ಕರ್ನಾಟಕ

ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) ಮಂಗಳೂರು, ಆಗಸ್ಟ್ 18. 2020-21ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಟ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ ಆತ್ಮ ಯೋಜನೆಯಲ್ಲೂ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ದ ರೈತರಿಗೆ ಪುರಸ್ಕರಿಸುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಚಟುವಟಿಕೆಗಳ

ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top