Ashitha Soodlu

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ

(ನ್ಯೂಸ್ ಕಡಬ ) newskadaba.com ಸುಳ್ಯ, ಜುಲೈ .22:   ಸುಳ್ಯ ಗಾಂಧಿನಗರದಿಂದ ಪೈಚಾರು ಕಡೆಗೆ ಸೂಟ್ ಕೇಸ್‌ನಲ್ಲಿ ದನದ ಮಾಂಸ ತುಂಬಿಸಿ ಪೈಚಾರು ಕಡೆ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಸಿದ್ದಾರೆ.   ಬಂಧಿತ ಆರೋಪಿಯನ್ನು ಕಲ್ಲುಮುಟ್ಲು ನಿವಾಸಿ ನಿಸಾರ್ (30) ಎಂದು ಗುರುತಿಸಲಾಗಿದೆ.ಲಾಕ್ ಡೌನ್ ಹಿನ್ನಲೆಯಲ್ಲಿ ಪೊಲೀಸರು ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ಕೂಟರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಪೊಲೀಸರು ಸ್ಕೂಟರ್ ಸಮೇತ ದನದ ಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ […]

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!!

(ನ್ಯೂಸ್ ಕಡಬ) newskadaba.com ಕಡಬ,ಜು.22 : ಪುತ್ತೂರು ಹಾಗೂ ಕಡಬ ಅವಳಿ ತಾಲೂಕುಗಳಲ್ಲಿ ಬುಧವಾರ ಒಟ್ಟು 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಮೂಲಕ ಎರಡು ತಾಲೂಕಿನಲ್ಲಿ ಒಟ್ಟು120 ಕೊರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.   ಬುಧವಾರ ಬೆಳಿಗ್ಗಿನ ಅರೋಗ್ಯ ಇಲಾಖೆಯ ವರದಿಯಲ್ಲಿ ಪುತ್ತೂರು ತಾಲೂಕಿನಲ್ಲಿ ಒಟ್ಟು 8 ಜನರಿಗೆ ಸೋಂಕು ತಗಲಿರುವುದು ಖಚಿತವಾಗಿದೆ.ಅದರಲ್ಲಿ ಕೋರ್ಟು ರಸ್ತೆಯ ಉದ್ಯಮಿ ದಂಪತಿಗಳಿಗೂ ಸೋಂಕು ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಕೇರಳದಿಂದ ಆಗಮಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!! Read More »

ಕರಾವಳಿ, ಕರ್ನಾಟಕ

ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.22: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳ ಪವಿತ್ರ ಮಣ್ಣನ್ನು ಸಂಗ್ರಹಿಸಿ ದ.ಕ. ಜಿಲ್ಲಾ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಲಯದಿಂದ ಮಂಗಳವಾರ ಅಯೋಧ್ಯೆಗೆ ಕಳುಹಿಸಿಕೊಡಲಾಯಿತು. ಈ ವೇಳೆ ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಹಲವು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದಿನ ಸನ್ನಿಹಿತವಾಗುತ್ತಿದೆ. ರಾಮರಾಜ್ಯ ಆಗಬೇಕು, ಭವ್ಯ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಪ್ರತಿ ಹಿಂದೂಗಳ ಕನಸಾಗಿತ್ತು. ಆ. 5ರಂದು ಪ್ರಧಾನಿ

ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು: ಜು.22., ಚಿಕಿತ್ಸೆಗೆಂದು ತಂದೆಯ ಜತೆ ಕ್ಲಿನಿಕ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕನೋರ್ವ ಕಣ್ಸನ್ನೆ ಮಾಡಿ ಮತ್ತು ಮೊಬೈಲ್ ನಂಬರ್ ಅನ್ನು ಚೀಟಿಯಲ್ಲಿ ಬರೆದು ಬಿಸಾಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ದರ್ಬೆ ಬಳಿ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುರುಷರಕಟ್ಟೆಯ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಈ ಕುರಿತು ಯುವತಿ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354(ಡಿ)

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು.22:  ಇತ್ತೀಚೆಗೆ ಹಲವು ಕಡೆಗಳಲ್ಲಿ ಕೊರೊನಾ ವಾರಿಯರ್ಸ್ ಕಿಲೋಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತನ್ನ ಎರಡು ಕಾರುಗಳನ್ನು ಕೂಡಾ ಕೊರೊನಾ ವಾರಿಯರ್ಸ್‌ಗಳ ಸಹಾಯಕ್ಕಾಗಿ ನೀಡಿದ್ದಾರೆ.     ಜೈನ್ ಕಳೆದ 15 ದಿನಗಳಿಂದ ಮತ್ತು ಮಾರ್ಚ್‌ನಲ್ಲಿ ಲಾಕ್ ಡೌನ್ ಸಮಯದಲ್ಲಿ ತನ್ನ ಕಾರುಗಳನ್ನು ಕೊರೊನಾ ವಾರಿಯರ್ಸ್‌ಗೆ ನೀಡಿದ್ದರು. ಸಾರ್ವಜನಿಕ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌ Read More »

ಕರಾವಳಿ, ಕರ್ನಾಟಕ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!!

(ನ್ಯೂಸ್ ಕಡಬ) newskadaba.com ಕುಂದಾಪುರ: ಜು.22., ಬಿಗ್ ಬಾಸ್‌ ಸೀಸನ್‌ನಲ್ಲಿ 7ನಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಕುವರಿ ಭೂಮಿ ಶೆಟ್ಟಿ ಸದ್ಯ ಬೆಂಗಳೂರು  ಸಿಟಿಯಿಂದ ದೂರವಿದ್ದು, ಇದೀಗ ತನ್ನ ಹುಟ್ಟೂರಿನಲ್ಲಿ ಕೃಷಿ ಕಾಯಕದಲ್ಲಿ ಖುಷಿ ಕಾಣುತ್ತಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯ ಭೂಮಿ ಶೆಟ್ಟಿ, ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ ಇದ್ದರು. ಸದ್ಯ ಕೊರೋನಾ ಹಿನ್ನಲೆ ಲಾಕ್ ಡೌನ್ ಅದ ಕಾರಣ ಊರಲ್ಲೇ ಇದ್ದು, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಭೂಮಿ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!! Read More »

ಕರಾವಳಿ

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22:  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ ‘ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ’

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮುಖಾಂತರ ಪ್ರೀ ರೆಕಾರ್ಡೆಡ್‌ ವಿಡಿಯೋ ತರಗಳು ಪ್ರಾರಂಭವಾಗಲಿವೆ.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಅಥವಾ ಇಂಟರ್‌ನೆಟ್‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ ಸಾಧ್ಯತೆ ಇಲ್ಲ.

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ

(ನ್ಯೂಸ್ ಕಡಬ) newskadaba.com ಪುತ್ತೂರು,ಜು.22:  ಮೊಣಕಾಲಿನ ಮಂಡಿ ಜಾರಿದಂತಿದ್ದು, ಎದ್ದು ನಿಲ್ಲಲಾಗುತ್ತಿಲ್ಲ, ಹೊಟ್ಟೆಯಲ್ಲಿ ಹೊಕ್ಕುಳ ಪಕ್ಕದಲ್ಲಿ ಮಾಂಸ ಸೀಳಿ ಹೊರಬಂದಂದಂತೆ ಕಾಣುತ್ತಿದ್ದು, ಅದಕ್ಕೆ ಪಂಚೆಯನ್ನು ಮುಚ್ಚಿಕೊಂಡು ನೋವನ್ನು ಸಹಿಸಿಕೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯೊಬ್ಬನ್ನು ಪುತ್ತೂರಿನ ಬಜರಂಗದಳದ ಕಾರ್ಯಕರ್ತರು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.     ಮೂಲತ: ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಶಂಕರ ಯಾನೆ ಮುನ್ನ ಎಂದು ಗರುತಿಸಲಾಗಿದೆ. ಕೆಲ ದಿನಗಳ ಹಿಂದೆ ಮಂಗಳೂರು ಪರಿಸರದಲ್ಲಿ ನಡೆದಿದ್ದ ಹೊಡೆದಾಟ

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ Read More »

ಕರಾವಳಿ, ಕರ್ನಾಟಕ

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22:  ಪಿಕಪ್ ವ್ಯಾನ್‌ನಲ್ಲಿ ಬಾಳೆ ಗೊನೆಗಳ ನಡುವೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಮಂಜೇಶ್ವ ರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.       ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ವೇಗವಾಗಿ ಒಳ ರಸ್ತೆಯಾಗಿ ಚಲಾಯಿಸಿಕೊಂಡು ಹೋಗಿದ್ದು, ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ತಪಾಸಣೆ

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top