Ashitha Soodlu

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.   ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಏನೆಕಲ್ , ಜು.22:  ಏನೆಕಲ್‍ನಲ್ಲಿ ಜೀಪು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರನಿಗೆ ತಲೆಗೆ ಗಾಯಗಳಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಳ್ಪ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿ ಸುಬ್ಬದಾಸ್ ರವರು ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬನ ಆನಂದ ಎಂಬುವರ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗುದ್ದಿದ್ದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಬೈಕ್ ಸವಾರ ದಾಸ್ ರವರ ತಲೆಗೆ ಸ್ವಲ್ಪ ಗಾಯಗಳಾಗಿದ್ದು ಇವರನ್ನ

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮಂಗಳವಾರ ಐವರು ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.21:   ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ.   ಆ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ.        

ದ.ಕ. ಜಿಲ್ಲೆಯಲ್ಲಿ ಮಂಗಳವಾರ ಐವರು ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ

ಉಡುಪಿ ಜಿಲ್ಲೆಯ ಗಡಿ ಸೀಲ್‍ಡೌನ್ ಆದೇಶ ರದ್ದು ➤ ಬಸ್ ಸೇವೆ ಆರಂಭ, ಅನಾವಶ್ಯಕ ಓಡಾಟಕ್ಕೆ ಬ್ರೇಕ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21:  ಕೋವಿಡ್-19 ಹರಡುವಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜಾರಿ ಮಾಡಿದ್ದ ಗಡಿ ಸೀಲ್‍ಡೌನ್ ಆದೇಶವನ್ನು ರದ್ದು ಪಡಿಸಿದ್ದು, ಜು.22 ರಂದು ಸರಕಾರಿ ಬಸ್ ಸೇವೆ ಯಥಾಸ್ಥಿತಿಯಲ್ಲಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಲಾಕ್‍ಡೌನ್ ಇರುವುದಿಲ್ಲ ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಆರಂಭವಾಗಲಿದೆ.     ಜು. 22 ರಂದು ಸರಕಾರಿ ಬಸ್ ಸೇವೆ ಆರಂಭವಾಗಲಿದ್ದು, ಖಾಸಗಿ ಬಸ್

ಉಡುಪಿ ಜಿಲ್ಲೆಯ ಗಡಿ ಸೀಲ್‍ಡೌನ್ ಆದೇಶ ರದ್ದು ➤ ಬಸ್ ಸೇವೆ ಆರಂಭ, ಅನಾವಶ್ಯಕ ಓಡಾಟಕ್ಕೆ ಬ್ರೇಕ್ Read More »

ಕರಾವಳಿ, ಕರ್ನಾಟಕ

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21:  ಘಜಿಯಾಬಾದ್​ನಲ್ಲಿ ಸೋಮವಾರ ರಾತ್ರಿ 10.30ಕ್ಕೆ ಪತ್ರಕರ್ತನ ತಲೆಗೆ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದೆ. ಘಜಿಯಾಬಾದ್‌ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಜಿಯಾಬಾದ್​ನ ಪತ್ರಕರ್ತ ವಿಕ್ರಂ ಜೋಶಿ ತಂಗಿಯ ಮನೆಯಿಂದ ತನ್ನ ಬೈಕಿನಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವೇಗವಾಗಿ ಚಲಿಸುತ್ತಿರುವಾಗ ದುಷ್ಕರ್ಮಿಗಳ ಗುಂಪು

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಡುಪಿ,ಜು.21:  ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ  ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಗೌರವ ಸಿಕ್ಕಿದೆ.  ಹಲವಾರು ದೇಶಗಳ ಛಾಯಾಗ್ರಾಹಕರು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಉಡುಪಿಯ ರಘು ಪ್ರಶಸ್ತಿ ಗಳಿಸಿ ಕನ್ನಡಿಗರಿಗೆ ಹೆಮ್ಮೆ ತಂದಿದ್ದಾರೆ. ಇನ್ನು ರಘು ಪಾಲಿಗೆ ಇದು 24 ನೇ ಅಂತರರಾಷ್ಟ್ರೀಯ ಪ್ರಶಸ್ತಿ ಆಗಿದೆ.  

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್

ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.21:  ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.       ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.  

ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ

ದಕ್ಷಿಣಕನ್ನಡದಲ್ಲಿ ನಾಳೆ ಲಾಕ್ ಡೌನ್ ➤ಗುರುವಾರದಿಂದ ಎಂದಿನಂತೆ ವ್ಯಾಪಾರ ಆರಂಭ…!!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.21., ರಾಜ್ಯಾದ್ಯಂತ ಲಾಕ್ ಡೌನ್ ತೆರವುಗೊಳಿಸಿದರೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ (ಜು.22) ಲಾಕ್ ಡೌನ್ ಮುಂದುವರಿಯಲಿದೆ.   ಕೊರೊನಾ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಿಸಿದ್ದು ಇದೀಗ ಮುಖ್ಯಮಂತ್ರಿಗಳ ನಿರ್ದೇಶನದಂತೆ ಜು.23ರಿಂದ ಲಾಕ್ ಡೌನ್ ಅನ್ನು ತೆರವುಗೊಳಿಸಲಾಗುತ್ತದೆ. ಗುರುವಾರದಿಂದ ಎಂದಿನಂತೆ ಅಂಗಡಿ ಮುಂಗಟ್ಟುಗಳು ವಾಣಿಜ್ಯ ವ್ಯವಹಾರಗಳು,ಕಚೇರಿಗಳು ತೆರೆಯಲಿದೆ ಎಂದು ದಕ್ಷಿಣಕನ್ನಡ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.    

ದಕ್ಷಿಣಕನ್ನಡದಲ್ಲಿ ನಾಳೆ ಲಾಕ್ ಡೌನ್ ➤ಗುರುವಾರದಿಂದ ಎಂದಿನಂತೆ ವ್ಯಾಪಾರ ಆರಂಭ…!!! Read More »

ಕರಾವಳಿ, ಕರ್ನಾಟಕ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!!

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಮಾರಕ ಕೊರೊನಾ ರೋಗಕ್ಕೆ ಚಿಕ್ಕಮುಡ್ನೂರು ಗ್ರಾಮದ ವೃದ್ಧೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಬಂದಾಗ ಇವರಿಗೆ ಸೋಂಕು ತಗಲಿರುವುದು ಖಚಿತವಾಗಿತ್ತು. ಇವರ ನಿಧನದಿಂದ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೃತರ ಅಂತಿಮ ಸಂಸ್ಕಾರ ಪುತ್ತೂರಿನಲ್ಲಿ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!! Read More »

ಕರಾವಳಿ

ಮಾಸ್ಕ್, ಸಾಮಾಜಿಕ ಅಂತರದಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ➤ ಕರ್ನಾಟಕದಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ – ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ರಾಜ್ಯವನ್ನುದ್ದೇಸಿ ಭಾಷಣ ಮಾಡಿದರು. ಇಂದು ಸಂಜೆ 5 ಗಂಟೆಗೆ ಸರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಆನ್​​ಲೈನ್​​ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದ ಯಡಿಯೂರಪ್ಪರ ಭಾಷಣವೂ ಫೇಸ್​​ಬುಕ್​​, ಟ್ವಿಟರ್​​, ಇನ್ಸ್ಟಾಗ್ರಾಮ್, ಯೂಟ್ಯೂಬ್​​​ ಲೈವ್​​ನಲ್ಲಿ ಪ್ರಸಾರವಾಗಿದೆ. ಪ್ರಸ್ತುತ ದೇಶಾದ್ಯಂತ ಕೋವಿಡ್​-19 ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಕೊರೋನಾ ತಹಬದಿಗೆ ತರುವಲ್ಲಿ ಆರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೀಗ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತ್ರ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೊದಲಿನಷ್ಟು ಕೊರೋನಾ ತಡೆಯಲು

ಮಾಸ್ಕ್, ಸಾಮಾಜಿಕ ಅಂತರದಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ➤ ಕರ್ನಾಟಕದಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ – ಸಿ.ಎಂ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top