Ashitha Soodlu

ಒಂದೇ ಮನೆಯ ಐವರಲ್ಲಿ ಸೋಂಕು ಪತ್ತೆ ➤ 13 ಅಂಗಡಿಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಬ್ರಹ್ಮಾವರ , ಜು.20: ಬಾರಕೂರು ರಥ ಬೀದಿಯಲ್ಲಿನ ಮನೆಯೊಂದರಲ್ಲಿ ವಾಸವಿರುವ ವ್ಯಕ್ತಿಯೋಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಒಂದೇ ಮನೆಯ ಐವರರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ  19 ಅಂಗಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬ್ರಹ್ಮಾವರ ತಾಲೂಕಿನ ಕೋಡಿಬೆಂಗ್ರೆ ನಿವಾಸಿ ವೃದ್ದೆಯೋರ್ವರು ಮಣಿಪಾಲದ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಗುಣಮುಖರಾಗಿ ಸಂಬಂಧಿಕರ ಮನೆಗೆ ಬರುತ್ತಿದ್ದಂತೆಯೇ ಅವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು, ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. […]

ಒಂದೇ ಮನೆಯ ಐವರಲ್ಲಿ ಸೋಂಕು ಪತ್ತೆ ➤ 13 ಅಂಗಡಿಗಳು ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಮುಂದಿನ ಮೂರು ದಿನವೂ ಕರ್ನಾಟಕ ರಾಜ್ಯಾದ್ಯಂತ ಮಳೆ ➤ ಹವಾಮಾನ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.20:  ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿಯಲಿದೆ. ಇವತ್ತೂ ಸೇರಿ ಇನ್ನೂ 4 ದಿನ ಮಳೆಯ ನರ್ತನ ಮುಂದುವರಿಯಲಿದೆ. ಜುಲೈ 23ರವರೆಗೂ ಐಎಂಡಿಬಿಯ ಹವಾಮಾನ ಮುನ್ಸೂಚನೆಯ ಪ್ರಕಾರ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಹಲವು ದಿನಗಳಿಂದಲೂ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಇಲ್ಲಿ ಮುಂದಿನ ಮೂರು ದಿನಗಳೂ ಭರ್ಜರಿ ಮಳೆ ಮುಂದುವರಿಯಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇವತ್ತು ದೊಡ್ಡ ಪ್ರಮಾಣದಲ್ಲಿ

ಮುಂದಿನ ಮೂರು ದಿನವೂ ಕರ್ನಾಟಕ ರಾಜ್ಯಾದ್ಯಂತ ಮಳೆ ➤ ಹವಾಮಾನ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.20:  ಕೋವಿಡ್ ಸಂದರ್ಭದಲ್ಲಿ ಮಕ್ಕಳ ನಿರಂತರ ಕಲಿಕೆಗೆ ಯಾವುದೇ ಅಡಚಣೆಯುಂಟಾಗದಂತೆ ಕಲಿಕೆಯನ್ನು ಮುಂದುವರೆಸಲು, ಮಕ್ಕಳು ಮನೆಯಲ್ಲಿಯೇ ಇದ್ದರೂ ಕಲಿಕೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇಂದಿನಿಂದ ಅಂದರೆ ಸೋಮವಾರದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಇ ಕ್ಲಾಸ್ ಕಲಿಕಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಇಂದಿನಿಂದ 20 ದಿನಗಳ ಅವಧಿಗೆ 8 ರಿಂದ 10ನೇ ತರಗತಿಯ ಮಕ್ಕಳಿಗೆ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಸಂಸ್ಕೃತ, ಉರ್ದು, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ

ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20: ಕರಾವಳಿಯಲ್ಲಿ ಕೊರೋನಾ ಭೀತಿ ಮಿತಿಮೀರುತ್ತಿದೆ. ದಿಕಳೆದಂತೆ ಸೋಂಕಿತರ ಸಂಖ್ಯೆಯ ಜೊತೆಗೆ ಕೊವೀಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂದು ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಜುಲೈ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರು ನಿವಾಸಿಯಾಗಿರುವ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇನ್ನು ಬೆಳ್ತಂಗಡಿ ನಿವಾಸಿ

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜು.20: ಕೊರಾನಾ ಲಾಕ್ ಡೌನ್ ಕಾರಣದಿಂದ ನೇತ್ರಾವತಿ ಹಾಗೂ ಕುಮಾರಧಾರ ನದಿ ಸಂಗಮ ಸ್ಥಳದಲ್ಲಿ ಆಟಿ ಅವiವಾಸ್ಯೆ ಪುಣ್ಯ ತೀರ್ಥ ಸ್ನಾನಕ್ಕೆ ಈ ವರುಷ ಅತೀ ಕಡಿಮೆ ಪ್ರಮಾಣದಲ್ಲಿ ಭಕ್ತರು ಆಗಮಿಸಿ ತೀಥ್ಸ್ನಾನ ಮಾಡಿದರು.   ಲಾಕ್ಡೌನ್ ಕಾರಣದಿಂದ ದೇವಳದ ವತಿಯಿಂದ ಯಾವುದೇ ವ್ಯವಸ್ಥೆಗಳು ಇಲ್ಲದಿದ್ದರೂ ಕಡಿಮೆ ಸಂಖ್ಯೆಯಲ್ಲಿ ಶ್ರದ್ದಾ ಭಕ್ತಿಯಿಂದ, ಭಕ್ತಾದಿಗಳು ನದಿಯಲ್ಲಿ ತೀರ್ಥ ಸ್ನಾನ ಮಾಡಿ ಆಟಿ ಅಮಾಸಾಸ್ಯೆ ಪಾರಂಪರಿಕ ಪದ್ದತಿಯಂತೆ ನವ ದಾನ್ಯಗಳನ್ನ ಗಂಗೆಗೆ ಅರ್ಪಿಸಿ, ಗತಿಸಿದ ಹಿರಿಯರಿಗೆ

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ Read More »

ಕರಾವಳಿ, ಕರ್ನಾಟಕ

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು ಜು.20: ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೂಡ ಕೊರೊನಾ ಸೋಂಕು ತಗುಲಿದೆ.ಐಶ್ವರ್ಯಾ ಅರ್ಜುನ್ ಸರ್ಜಾ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದೆ. ಸೋಂಕು ತಗುಲಿದ್ದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ವೃತ್ತಿಪರ ವೈದ್ಯಕೀಯ ತಂಡದ ಸಲಹೆ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಎಲ್ಲರೀತಿಯ ಮುನ್ನೆಚ್ಚರಿಕೆ ಕ್ರಮವನ್ನೂ ವಹಿಸಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್​-19 ಟೆಸ್ಟ್​ಗೆ ಒಳಗಾಗಿ. ಕಾಳಜಿ ವಹಿಸಿ,

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ Read More »

ಕರಾವಳಿ, ಕರ್ನಾಟಕ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಬೆಂಗಳೂರು ಜು.20: SSLC ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ನಗರದ ವಿವಿಧೆಡೆಯ ಐದು ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು,ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಹದಿನೈದು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ಧನ ಪೂಜಾರಿ ಅವರು ಗುಣಮುಖರಾಗಿ ಸೋಮವಾರ ಮನೆಗೆ ತೆರಳಿದ್ದರು. ಹಲವು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 83 ವರ್ಷದ ಜನಾರ್ಧನ ಪೂಜಾರಿಯವರಿಗೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಜು 5 ಶನಿವಾರ ಕೋವಿಡ್ ತಪಾಸಣೆ ನಡೆಸಿದಾಗ ಜನಾರ್ದನ ಪೂಜಾರಿಯವರ ವರದಿ ಪಾಸಿಟಿವ್ ಬಂದಿತ್ತು . ಬಳಿಕ ಅವರ ಪತ್ನಿಗೂ ಸೋಂಕು ತಗುಲಿತ್ತು ಎಂದು ತಿಳಿದುಬಂದಿತ್ತು .ಇದು ಅವರ ಅಪಾರ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!! Read More »

ಕರಾವಳಿ

ಉಳ್ಳಾಲ: ಕಡಲ್ಕೊರೆತಕ್ಕೆ ಕೊಚ್ಚಿ ಹೋದ ರಸ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು 20:ಕರಾವಳಿಯಲ್ಲಿ ಮಳೆರಾಯನ ಅಬ್ಬರ ಹೆಚ್ಚುತ್ತಲೆ ಇದೆ. ಇದರಿಂದಾಗಿಕರಾವಳಿಯಲ್ಲಿ ಹವಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಭಾರೀ ಮಳೆಯಾಗುತ್ತಿದ್ದು ಕಡಲಿನ ಅಬ್ಬರವೂ ಅಧಿಕವಾಗಿದೆ. ಉಳ್ಳಾಲದ ಉಚ್ಚಿಲ, ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು ಉಚ್ಚಿಲದಲ್ಲಿ ರಸ್ತೆ ಕಡಿತವಾಗಿದೆ.ಕಡಲ ತೀರದ ಜನರು ಆತಂಕಕ್ಕೆ ಒಳಗಾಗಿದ್ದು ಉಚ್ಚಿಲದಲ್ಲಿ ರಸ್ತೆ ಕಡಲ್ಕೊರೆತದಿಂದಾಗಿ ಕಡಿತವಾದ ಕಾರಣ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಲ ಕೊರೆತದಿಂದಾಗಿ ಹಲವು ಮನೆಗಳು ಅಪಾಯದಲ್ಲಿದ್ದು ಆತಕಂಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ

ಉಳ್ಳಾಲ: ಕಡಲ್ಕೊರೆತಕ್ಕೆ ಕೊಚ್ಚಿ ಹೋದ ರಸ್ತೆ Read More »

ಕರಾವಳಿ, ಕರ್ನಾಟಕ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜು 20:ಕೊವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಆಯ್ಕೆಯಾಗಿರುವ ಮಂಗಳೂರಿನ ಫಾ. ಮುಲ್ಲರ್‌ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ತಂಡ ಸೋಮವಾರ ಭೇಟಿ ನೀಡಿ, ಕೋವಿಡ್ 19 ಚಿಕಿತ್ಸೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..! Read More »

ಕರಾವಳಿ, ಕರ್ನಾಟಕ
Scroll to Top