Ashitha Soodlu

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ➤ ಹೆಣ್ಣು ಮರಿಗೆ ಜನ್ಮ ನೀಡಿದ ‘ಲಕ್ಷ್ಮೀ’

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.01: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಹೌದು ಮಂಜುನಾಥನ ಸನ್ನಿಧಿ ಗೆ ಇಂದು ಪುಟ್ಟ, ಪುಟ್ಟ ಹೆಜ್ಜೆಯನಿಟ್ಟು, ಮುದ್ದಾದ ಪುಟ್ಟ ಲಕ್ಷ್ಮೀ ಆಗಮಿಸಿದ್ದಾಳೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ.   ಮಾವುತರು ಆನೆ ಮರಿಗೆ ಉಪಚಾರ ನಡೆಸುತ್ತಿದ್ದು, ಆನೆ ಮರಿ ಆರೋಗ್ಯವಾಗಿದೆ ಎನ್ನಲಾಗಿದೆ. ಸಚಿವ ಆನಂದ್ ಸಿಂಗ್ ಅವರು ಧರ್ಮಸ್ಥಳಕ್ಕೆ ಈ ಆನೆಯನ್ನು ನೀಡಿದ್ದರು. ತುಂಟಾಟದಿಂದ ಧರ್ಮಸ್ಥಳದಲ್ಲಿ ಲಕ್ಷ್ಮೀ ಅಚ್ಚುಮೆಚ್ಚಾಗಿತ್ತು. ಧರ್ಮಸ್ಥಳದ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ➤ ಹೆಣ್ಣು ಮರಿಗೆ ಜನ್ಮ ನೀಡಿದ ‘ಲಕ್ಷ್ಮೀ’ Read More »

ಕರಾವಳಿ, ಕರ್ನಾಟಕ

ಕೌಶಾಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಭೇತಿ ಕೇಂದ್ರದ ಶಂಕು ಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಜು.01. ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಅಂಗ ಸಂಸ್ಥೆಯಾದ ಹೋಯಿಗೆಬಝಾರ್ ನಲ್ಲಿರುವ ತಾಂತ್ರಿಕ ವಿಭಾಗದ ಆವರಣದಲ್ಲಿ ಮೀನುಗಾರಿಕೆಯಲ್ಲಿ ಕೌಶಾಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಭೇತಿ ಕೇಂದ್ರದ ಶಂಕು ಸ್ಥಾಪನೆಯನ್ನು ಮಂಗಳವಾರ ಮಾಡಲಾಯಿತು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ದ.ಕ. ಜಿಲ್ಲೆಯ ಉಸ್ಥುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕೊರೋನ ಸಂದರ್ಭದಲ್ಲಿ ಹೊರದೇಶದಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಉದ್ಯೋಗವಿಲ್ಲದೇ ಹಿಂತಿರುಗುತ್ತಿರುವ ಈ ಸಮಯದಲ್ಲಿ ನಿರುದ್ಯೋಗಿಗಳಿಗೆ ಪರ್ಯಾಯ

ಕೌಶಾಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಭೇತಿ ಕೇಂದ್ರದ ಶಂಕು ಸ್ಥಾಪನೆ Read More »

ಕರಾವಳಿ

ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.01: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.    ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ,ಶಿವಮೊಗ್ಗ, ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  

ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಯೋಜನೆ ವತಿಯಿಂದ ಕಾನ್ಸರ್ ಪೀಡಿತರಿಗೆ ಧನಸಹಾಯ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.01., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾನ್ಸರ್ ಪೀಡಿತರಿಗೆ ಧನಸಹಾಯವನ್ನು ಸೋಮವಾರ ವಿತರಿಸಲಾಯಿತು. ಉಡುಪಿ ಪ್ರಾದೇಶಿಕ ಕಛೇರಿ ಯೋಜನಾಧಿಕಾರಿ ಸುರೇಂದ್ರ ಅವರು ಯೋಜನೆಯಿಂದ ಮಂಜೂರಾದ ಧನಸಹಾಯ ಚೆಕ್‍ನ್ನು ಫಲಾನುಭವಿಗಳಾದ ಕೊಣಾಜೆ ಗ್ರಾಮದ ಈಶ್ವರ ಗೌಡ ಹಾಗೂ ಲಿಂಗಪ್ಪ ಗೌಡ, ಕೊಂಬಾರು ಗ್ರಾಮದ ಯೋಜನೆಯ ಸದಸ್ಯ ಆನಂದ ಗೌಡರ ಪತ್ನಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಯೋಜನಾಧಿಕಾರಿ ಜನಾರ್ಧನ ಎಸ್., ವಲಯ ಮೇಲ್ವಿಚಾರಕರಾದ ಧರ್ಣಪ್ಪ ಗೌಡ, ಒಕ್ಕೂಟ ಅಧ್ಯಕ್ಷ

ಧರ್ಮಸ್ಥಳ ಯೋಜನೆ ವತಿಯಿಂದ ಕಾನ್ಸರ್ ಪೀಡಿತರಿಗೆ ಧನಸಹಾಯ ವಿತರಣೆ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜು .01. ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಪುತ್ತೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ.ಎಂ. ಅವರು ಸೋಮವಾರ ನಿರ್ಗಮನ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಅವರಿಂದ ಅಧಿಕಾರ ವಹಿಸಿಕೊಂಡರು. ಗ್ರಾ.ಪಂ. ಸದಸ್ಯ ತೋಮಸ್ ಕೆ.ಜೆ., ಸಿಬಂದಿಗಳು ಉಪಸ್ಥಿತರಿದ್ದರು. ಪಿಡಿಒ ಆನಂದ ಎ. ಸ್ವಾಗತಿಸಿ, ಧನರಾಜ್ ವಂದಿಸಿದರು.

ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ Read More »

ಕರಾವಳಿ

ತೆಂಕಿಲ : ಬೃಹತ್ ಗಾತ್ರದ ಮಾವಿನ ಮರ ಬಿದ್ದು ಅಪಾರ ಹಾನಿ

(ನ್ಯೂಸ್ ಕಡಬ) newskadaba.com ತೆಂಕಿಲ ,ಜೂ.30:  ತೆಂಕಿಲ ಕೊಟ್ಟಿಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ವೇಳೆ ಭಾರಿ ಗಾತ್ರದ ಮಾವಿನ ಮರವೊಂದು  ಬುಡ ಸಹಿತ ಮುರಿದು ಬಿದ್ದು, ದೈವದ ಕಟ್ಟೆಯ ಕಾಂಪೌಂಡ್ ಹಾಗೂ ಮನೆಗೆ ಹಾನಿಯಾಗಿದ್ದು ಜೊತೆಗೆ ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ಸೋಮವಾರದಂದು ನಡೆದಿದೆ. ತೆಂಕಿಲ ಕೊಟ್ಟಿಬೆಟ್ಟು ಎಂಬಲ್ಲಿರುವ ಪುರುಷೋತ್ತಮ ನಾಯ್ಕ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಇವರ ಮನೆ ಬಳಿ ಕೊಟ್ಟಿಬೆಟ್ಟು ಕುಟುಂಬದ ತರವಾಡಿನ ಗುಳಿಗ ಹಾಗೂ ಬೈರವ ದೈವದ

ತೆಂಕಿಲ : ಬೃಹತ್ ಗಾತ್ರದ ಮಾವಿನ ಮರ ಬಿದ್ದು ಅಪಾರ ಹಾನಿ Read More »

ಕರಾವಳಿ, ಕರ್ನಾಟಕ

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ,ಜೂ.30:  ಕೊಂಬಾರು ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರದಂದು ನಡೆಯಿತು.   ಗ್ರಾಮ ಪಂಚಯತ್ ಅಧ್ಯಕ್ಷರಾದ ಅಜಿತ್ ಎಸ್.ರವರು ಕಟ್ಟಡ ಉದ್ಘಾಟಿಸಿದರು. ತಾ. ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಢಾರಿ, ಕಡಬ ಕ್ಷೇತ್ರದ ಜಿ. ಪಂ ಸದಸ್ಯ ಪಿ.ಪಿ ವರ್ಗೀಸ್, ಕೋ- ಆರ್ಡಿನೇಟರ್, ಕಟ್ಟಡ ನಿರ್ಮಾಣಕ್ಕೆ ಸಮಾಗ್ರಿ ಸರಬರಾಜುದಾರರು, ಗ್ರಾಮ

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.30:  ಮಂಗಳವಾರ ಪ್ರಧಾನ ನರೇಂದ್ರ ಮೋದಿ ಅವರು ಮತ್ತೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವಿಟರ್ ಖಾತೆ ಮಾಹಿತಿ ಹಂಚಿಕೊಂಡಿದ್ದು, ಸಂಜೆ 4 ಗಂಟೆಗೆ ಪ್ರಧಾನಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. ಒಂದನೇ ಹಂತದ ಅನ್ಲಾಕ್ ಪ್ರಕ್ರಿಯೆಯ ದಿನ ಕೊನೆಗೊಳ್ಳುವ ದಿನದಂತೆ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನು ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ಒಂದೇ ದಿನ 18584 ಪ್ರಕರಣಗಳು

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವೆನ್ಲಾಕ್ ಭರ್ತಿಯಾದರೆ ಖಾಸಗಿಗೆ ಶಿಫ್ಟ್ ➤ ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.30: ಜಿಲ್ಲೆಯಲ್ಲಿ ಕರೊನಾ ರೋಗಿಗಳ ಸಂಖ್ಯೆ ಏರಿಕೆಯಲ್ಲಿರುವುದರಿಂದ ವೆನ್ಲಾಕ್ ಸಾಮರ್ಥ್ಯ ಮೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಬೆಡ್‌ಗಳನ್ನು ಕಾದಿರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ಸೂಚಿಸಿದರು.     ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ನಿವೃತ್ತಿ ಹೊಂದಿದ ಎಂಬಿಬಿಎಸ್ ಅಥವಾ ಆಯುಷ್ ವೈದ್ಯಾಧಿಕಾರಿಗಳನ್ನು ಸರ್ಕಾರದ ಮಾರ್ಗಸೂಚಿ ಅನುಸಾರ ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು. ನರ್ಸಿಂಗ್ ಸಿಬ್ಬಂದಿ

ವೆನ್ಲಾಕ್ ಭರ್ತಿಯಾದರೆ ಖಾಸಗಿಗೆ ಶಿಫ್ಟ್ ➤ ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಸುಳ್ಯ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.30:  ಸುಳ್ಯದ ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕುಮಾರ್ ಬೆಳ್ವಪ್ಪಾಡ ಎಂಬುವರು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.   ಮೃತರಿಗೆ 62 ವರುಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.  

ಸುಳ್ಯ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top