Ashitha Soodlu

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18

(ನ್ಯೂಸ್ ಕಡಬ) newskadaba.com ಕರಾವಳಿ,ಜೂ.19: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದೇ ದಿನ 13,586 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 336 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532 ಏರಿಕೆಯಾಗಿದ್ದು, ಒಟ್ಟು 12,573 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕರುನಾಡಿನ […]

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18 Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್

(ನ್ಯೂಸ್ ಕಡಬ) newskadaba.com  ಮಂಗಳೂರು ,ಜೂ.19: ಮಾನವೀಯತೆಗೆ ಇನ್ನೊಂದು ಹೆಸರು ಮಂಗಳೂರು ಪೊಲೀಸ್ ಕಮೀಷನರೇಟ್ ನ ಪಣಂಬೂರು ಎಸ್ಐ ಉಮೇಶ್ ಕುಮಾರ್ ಆಗಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿ ಯಾಗಿದ್ದ ವಿಜಯಲಕ್ಷ್ಮಿ 59 ವಯಸ್ಸಿನ ವೃದ್ಧ ಮಹಿಳೆ ಉತ್ತರಭಾರತದಲ್ಲಿ ಯಾವುದೋ ಒಂದು ಶಾಲೆಯಲ್ಲಿ ಉಪನ್ಯಾಸಕಿಯಾಗಿ ಇದ್ದವರನ್ನು ಕೋರೋಣ ಕಾಯಿಲೆಯ ಕಾರಣದಿಂದಾಗಿ ಅಲ್ಲಿದ್ದ ನೌಕರರನ್ನು ತಮ್ಮ ತಮ್ಮ ಊರಿಗೆ ಕಳಿಸಿದ ಪರಿಣಾಮ ತಮ್ಮ ಊರಾದ ಚಿಕ್ಕಮಂಗಳೂರಿನಲ್ಲಿ ಯಾರು ಇಲ್ಲದ ಕಾರಣ ದೇವರ ಮೊರೆ ಹೋಗಿ ಧರ್ಮಸ್ಥಳಕ್ಕೆ ಬಂದು ಎರಡು ದಿನ ಇದ್ದರು.

ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್ Read More »

ಕರಾವಳಿ, ಕರ್ನಾಟಕ

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19: SSLC ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳಿಗೆ ಹಂಚಲು ಸ್ಕೌಟ್ಸ್ ಆ್ಯಂಡ್ ಗೈಡ್ಸ್ 1 ಲಕ್ಷ ಮಾಸ್ಕ್ ಹೊಲಿಯುವ ಗುರಿ ಹೊಂದಿದ್ದು, ಉಡುಪಿಯ ಬಾಲಕಿಯೊಬ್ಬಳು ಒಂದೇ ಕೈಯಲ್ಲಿ 15 ಮಾಸ್ಕ್ ಹೊಲಿದುಕೊಟ್ಟು ಗಮನ ಸೆಳೆದಿದ್ದಾಳೆ. ಕಲ್ಯಾಣಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆ 6ನೇ ತರಗತಿ ವಿದ್ಯಾರ್ಥಿ ಸಿಂಧೂರಿ (10) ಹುಟ್ಟಿನಿಂದ ಮಣಿಗಂಟಿನ ಕೆಳಗೆ ಎಡಗೈ ಇಲ್ಲ. ಕಬ್ ಬುಲ್ ಬುಲ್(ಸ್ಕೌಟ್ಸ್ ಆ್ಯಂಡ್ ಗೈಡ್ಸ್) ವಿದ್ಯಾರ್ಥಿಯಾದ ಸಿಂಧೂರಿಗೆ 10 ಮಾಸ್ಕ್ ಮಾಡಿಕೊಡುವಂತೆ

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ Read More »

ಕರಾವಳಿ, ಕರ್ನಾಟಕ

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಜೂ.19., ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಾಷ್ಟ್ರಭಕ್ತ ಸಮಿತಿ ವತಿಯಿಂದ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ನುಡಿನಮನ ಸಲ್ಲಿಸಲಾಯಿತು.

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ Read More »

ಕರಾವಳಿ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19:  ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಾಗೂ ದಂಡ ವಿಧಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.   ಕೊರೋನಾ ವಿರುದ್ಧ ನಿರಂತರ ಹೋರಾಟ ಅಗತ್ಯವಾಗಿದೆ. ಈ ಹೋರಾಟ ಮುಗಿಯುವುದಿಲ್ಲ. ಈ ಹೋರಾಟದಲ್ಲಿ ಬಹಳ ಮುಖ್ಯವಾದ ಅಸ್ತ್ರ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ Read More »

ಕರಾವಳಿ, ಕರ್ನಾಟಕ

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ

(ನ್ಯೂಸ್ ಕಡಬ) newskadaba.com  ಮಲ್ಪೆ ,ಜೂ.19: ಸಾಮಾನ್ಯವಾಗಿ ಕರಾವಳಿಯಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧದ ಸಂದರ್ಭದಲ್ಲಿ ಒಣ ಮೀನಿನ ಸಾರು ಪರ್ಯಾಯವಾಗಿ ಹಸಿಮೀನಿನ ಸ್ಥಾನವನ್ನು ತುಂಬುತ್ತದೆ. ಈ ಬಾರಿ ಆರಂಭದಿಂದ ಕಾಡಿದ ಚಂಡಮಾರುತ, ಮೀನಿನ ಕ್ಷಾಮ, ಮಾರ್ಚ್‌ ಬಳಿಕ ಕೊರೊನಾ ಲಾಕ್‌ಡೌನ್‌ನಿಂದಾಗಿ ಸರಿಯಾದ ಮೀನುಗಾರಿಕೆ ಇಲ್ಲದೆ ಮಳೆಗಾಲ ಪೂರ್ವದ 3 ತಿಂಗಳ ವ್ಯವಹಾರ ಆಗದಿರು ವುದು ಒಣಮೀನಿನ ವ್ಯಾಪಾರದ ಮಹಿಳೆ ಯರಿಗೆ ದೊಡ್ಡ ಹೊಡೆತವಾಗಿದೆ. ಪರಿಣಾಮವಾಗಿ ಒಣಮೀನಿನ ದಾಸ್ತಾನಿಲ್ಲದೆ ಲಾಕ್‌ಡೌನ್‌ ಅನಂತರದ ದಿನಗಳಲ್ಲಿ ಮೀನಿನ ಲಭ್ಯತೆ ಇಲ್ಲದೆ ದರ

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ Read More »

ಕರಾವಳಿ, ಕರ್ನಾಟಕ

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ

(ನ್ಯೂಸ್ ಕಡಬ) newskadaba.com  ಪುತ್ತೂರು ,ಜೂ.19:  ವೃದ್ದ ದಂಪತಿಗೆ ಆಸರೆಯಾಗುವ ಮೂಲಕ ಕೆಯ್ಯೂರಿನ ಸಬ್ ಇನ್‍ಸ್ಪೆಕ್ಟರ್ ಪ್ರದೀಪ್ ಪೂಜಾರಿಯವರು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪುತ್ತೂರು ತಾಲೂಕಿನ ಕೆಯ್ಯೂರಿನ ಕಣಿಯಾರು ನಿವಾಸಿಯಾಗಿರುವ, ಪ್ರಸ್ತುತ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಆಗಿರುವ ಪ್ರದೀಪ್ ಪೂಜಾರಿ ಅವರು ತನ್ನ ಕರ್ತವ್ಯ ವ್ಯಾಪ್ತಿಯಲ್ಲಿ ಯಾರೂ ಇಲ್ಲದ, ವಂಚನೆಗೆ ಒಳಗಾದ ವೃದ್ದ ದಂಪತಿಯ ಜೀವನ ಕಥೆ ಆಲಿಸಿ, ಅವರಿಗೆ ಜೀವನ ಪರ್ಯಾಂತ ಆಸರೆ ನೀಡಲು ನಿರ್ಧರಿಸಿರುವ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.18:  ತನಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿ, ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಪತ್ನಿ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಇನ್ನು, 5 ತಿಂಗಳ ಹಿಂದೆಯಷ್ಟೆ ಸಬ್ ರಿ ಜಿಸ್ಟ್ರಾರ್ ಕಚೇರಿಯಲ್ಲಿ ಇವರಿಬ್ಬರ ವಿವಾಹ ನೋಂದಣಿ ನಡೆದಿತ್ತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಶಾಂತಕುಮಾರ್ ಅವರ ಪತ್ನಿ ಅಶ್ವಿನಿ ಶಾರದಾ (27) ಅವರು, ದೈಹಿಕ ಮತ್ತು ಮಾನಸಿಕ ಹಿಂಸೆಗೊಳಗಾಗಿರುವುದಾಗಿ

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18., ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ಗುರುವಾರ ನಡೆದಿದೆ. ಅಪಘಾತದ ರಭಸಕ್ಕೆ ಚಾಲಕ ಮತ್ತು ಸಹಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ದಿನೇಶ್ (35) ಮತ್ತು ಮಂಜು (30) ಮೃತಪಟ್ಟ ದುರ್ಧೈವಿಗಳು. ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!! Read More »

ಕರಾವಳಿ

ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕ್ಯಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.18:ಮಂಗಳೂರಿನಲ್ಲಿ ಪಿಯುಸಿ ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ , ಕೇರಳ ಗಡಿ ಭಾಗ ತಲಪಾಡಿಯಲ್ಲಿ ವಿದ್ಯಾರ್ಥಿಗಳು ಡೋಂಟ್ ಕ್ಯಾರ್ ಎಂದಿದ್ದಾರೆ. ಕೇರಳ ಗಡಿ ಭಾಗ ತಲಪಾಡಿಯಲ್ಲಿ ನೂರಾರು ವಿದ್ಯಾರ್ಥಿಗಳು ,ಮಂಗಳೂರಿಗೆ ಪರೀಕ್ಷೆ ಬರೆಯಲು ಆಗಮಿಸಿದ್ದು  ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನ ಮರೆತು ಗುಂಪುಗೂಡಿದ್ದರು. ತಲಪಾಡಿ ಮರಿಯಾಶ್ರಮ ಸಂಸ್ಥೆ ಬಳಿ ವಿದ್ಯಾರ್ಥಿಗಳಿಗೆ.  ಆಯಾ ಶಿಕ್ಷಣ ಸಂಸ್ಥೆಗಳಿಗೆ ತಲುಪಿಸಲು ಸರ್ಕಾರಿ ಬಸ್  ವ್ಯವಸ್ಥೆ ಮಾಡಲಾಗಿತ್ತು.    

ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕ್ಯಾರ್ Read More »

ಕರಾವಳಿ, ಕರ್ನಾಟಕ
Scroll to Top