Ashitha Soodlu

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ಉಡುಪಿ,ಜೂ.12:  ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ಬಸ್ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ಗಳ ವಿರುದ್ಧ ಎಪಿಡಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ. ಕೋವಿಡ್ -19 ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ. ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹ ಬಸ್ಗಳ […]

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ

(ನ್ಯೂಸ್ ಕಡಬ) newskadaba.com ,ಜೂ.12: ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪೈಕಿ ಭಾರತ ಇದೀಗ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿಯೇ ಹತ್ತು ಸಾವಿರ ಸೋಂಕು ವರದಿಯಾಗಿದೆ.ಈ ಮೂಲಕ ಬ್ರಿಟನ್ ದೇಶವನ್ನು ಭಾರತ ಹಿಂದಿಕ್ಕಿಂತಾಗಿದ್ದು, ರಷ್ಯಾ, ಬ್ರೆಝಿಲ್ ಮತ್ತು ಅಮೆರಿಕ ದೇಶಗಳು ಮಾತ್ರ ಇದೀಗ ಭಾರತಕ್ಕಿಂತ ಹೆಚ್ಚಿನ ಸೋಂಕಿತರನ್ನು ಹೊಂದಿದೆ.   ರಷ್ಯಾದಲ್ಲಿ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಜೂ.12: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಮಾಸಿಕ ಮಹಾಸಭೆ ಗುರುವಾರ ಸುಬ್ರಹ್ಮಣ್ಯ – ಐನೆಕಿದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಭಾಂಗಣದಲ್ಲಿ ಜರಗಿತು. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ಕಲ್ಮಕ್ಕಾರು ಗ್ರಾಮ ಗುಳಿಕ್ಕಾನದ 9 ಕುಟುಂಬಗಳಿಗೆ ಸರಕಾರ ಬಿಡುಗಡೆಗೊಳಿಸಿದ ಪರಿಹಾರ ಮೊತ್ತ ವಿನಿಯೋಗ ಮತ್ತು ನಿವೇಶನ ಮಂಜೂರಾತಿ ಸಮಸ್ಯೆ ಪರಿಹಾರಕ್ಕಾಗಿ ವೇದಿಕೆ ನಿಯೋಗ ಶೀಘ್ರ ಸ್ಥಳ ಪರಿಶೀಲನೆಗೆ ತೆರಳಲು ಸಭೆಯಲ್ಲಿ ನಿರ್ಧರಿಸಲಾಯಿತು.   ವೇದಿಕೆಯ

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ Read More »

ಕರಾವಳಿ, ಕರ್ನಾಟಕ

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ

(ನ್ಯೂಸ್ ಕಡಬ) newskadaba.com ತಿರುವನಂತಪುರ,ಜೂ.12: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರು ಇನ್ನೂ ಸ್ವಲ್ಪದಿನ ಕಾಯಬೇಕಾದ ಪರಿಸ್ಥಿತಿ ಬಂದಿದ್ದು, ಕೇರಳ ಸರಕಾರ ಶಬರಿಮಲೆಗೆ ಭಕ್ತರಿಗೆ ಪ್ರವೇಶಕ್ಕೆ ಸದ್ಯಕ್ಕೆ ಅನುಮತಿ ನಿರಾಕರಿಸಿದೆ.   ಕೇಂದ್ರ ಸರಕಾರದ ಅನ್ ಲಾಕ್ 1.0ದಲ್ಲಿ ಧಾರ್ಮಿಕ ಕೇಂದ್ರಗಳನ್ನು ಮಾರ್ಗಸೂಚಿ ಗಳೊಂದಿಗೆ ತೆರೆಯಲು ಅನುಮತಿ ನೀಡಿದ ಬೆನ್ನಲ್ಲೆ ದೇಶದಾದ್ಯಂತ ಹಲವು ದೇವಸ್ಥಾನಗಳು ಭಕ್ತರಿಗೆ ದೇವರ ದರ್ಶನಕ್ಕ ಅವಕಾಶ ನೀಡಿವೆ. ಈ ಹಿನ್ನಲೆ ಕೇರಳ ಸರಕಾರವೂ ಕೂಡ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ದೇಶದಾದ್ಯಂತ

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಪುತ್ತೂರು,ಜೂ.12:  ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರ ಗುರುವಾರ ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎನ್ನಲಾಗಿದೆ. 20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಕೆಲಸಕ್ಕೂ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12 : ಶ್ರೀಮಂಗಳಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್(49) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೂ. 11ರಂದು ನಿಧನರಾಗಿದ್ದಾರೆ.   ಶ್ರೀಮಂಗಳಾದೇವಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಪೂಜಾ ಮನೆತನಕ್ಕೆ ಸೇರಿದ ಇವರು, ಈ ವರ್ಷದ ಪ್ರಧಾನ ಅರ್ಚಕರಾಗಿ ನಿಯುಕ್ತಿಗೊಂಡಿದ್ದರು. ದೇವಸ್ಥಾನದ ಪೂಜಾ ಕೆಲಸದೊಂದಿಗೆ ಊರಿನ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು ಇವರು ತಾಯಿ ಜಲಜಾಕ್ಷಿ, ಸಹೋದರ ವೇದಮೂರ್ತಿ ಚಂದ್ರಶೇಖರ್ ಐತಾಳ್, ಹರೀಶ್ ಐತಾಳ್, ಸಹೋದರಿ ಲಕ್ಷ್ಮೀ ಹೊಳ್ಳರವರನ್ನ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ Read More »

ಕರಾವಳಿ, ಕರ್ನಾಟಕ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್ 11: ಕೊರೊನಾವೈರಸ್ ಲಾಕ್ಡೌನ್ ಸಲುವಾಗಿ ಕಳೆದ ಮೂರು ತಿಂಗಳು ಆದಾಯವಿಲ್ಲದೇ ತೀವ್ರ ತೊಂದರೆ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕರ್ನಾಟಕ ಸರ್ಕಾರ ತಲಾ 5 ಸಾವಿರ ರುಪಾಯಿಯ ಭರವಸೆ ನೀಡಿತ್ತು.   ಇದರ ಅಂಗವಾಗಿ ಕರ್ನಾಟಕ ಸರ್ಕಾರ ಬುಧವಾರ 40 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಂದು ಬಾರಿ ಪರಿಹಾರವಾಗಿ ತಲಾ 5 ಸಾವಿರ ರುಪಾಯಿ ಘೋಷಣೆ ಮಾಡಿದ್ದರು. ಸದ್ಯ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ

(ನ್ಯೂಸ್ ಕಡಬ) newskadaba.com ಕಡಬ,ಜೂ.10: ಆಶಾ ಕಾರ್ಯಕರ್ತೆಯೋರ್ವರು ತನ್ನಿಬ್ಬರು ಮಕ್ಕಳನ್ನು ಮನೆಯಲ್ಲೇ ಬಿಟ್ಟು ನಾಪತ್ತೆಯಾದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಆಶಾ ಕಾರ್ಯಕರ್ತೆ ಸೌಮ್ಯಾ ಸೋಮವಾರದಂದು ಮಂಗಳೂರು ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿಯನ್ನು ಆತಂಕಕ್ಕೆ ಒಳಪಡಿಸಿದೆ. ಇತ್ತ ತನ್ನಿಬ್ಬರು ಕರುಳ ಕುಡಿಗಳನ್ನು ಮನೆಯಲ್ಲೇ ಬಿಟ್ಟು ತೆರಳಿರುವ ಸೌಮ್ಯಾರ ಆಗಮನಕ್ಕಾಗಿ ಮಕ್ಕಳು ಕಾಯುತ್ತಿದ್ದಾರೆ. ಈ ಬಗ್ಗೆ ಆಕೆಯ

ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.10:  ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದ ಮಿಡತೆಗಳು ಈಗ ಕಾಫಿನಾಡಿಗೂ ಕಾಲಿಟ್ಟಿದ್ದು, ಮಲೆನಾಡಿಗರು ಕಂಗಾಲಾಗಿದ್ದಾರೆ.. ಈಗಾಗಲೇ ಕಳೆದ ಎರಡು ದಶಕಗಳಿಂದ ಅಡಕೆಗೆ ಹಳದಿ ಎಲೆ ರೋಗ ತಗುಲಿದೆ. ಕಳೆದ ಎರಡು ವರ್ಷಗಳ ನಿರಂತರ ಭಾರೀ ಮಳೆಯಿಂದ ಅಡಕೆ ತೋಟಕ್ಕೆ ಕೊಳೆ ರೋಗ ಕೂಡ ಆವರಿಸಿತ್ತು. ತೋಟದಲ್ಲಿ ಎರಡು ಮೂರು ಅಡಿ ನೀರು ನಿಂತಿತ್ತು.   ಇದರಿಂದ ಮಲೆನಾಡಿಗರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದರು. ಹೀಗೆ ಹಲವು ಸಮಸ್ಯೆಗಳ ನಡುವೆ ಕೆಲವರು ಅಡಕೆಯನ್ನು ಕಷ್ಟಪಟ್ಟು ಉಳಿಸಿಕೊಂಡಿದ್ದರು.

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top