Ashitha Soodlu

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28.,  ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಬೇಕು ಎಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಸಹನಾ ಹೇಳಿದರು. ಬೆಳ್ತಂಗಡಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಚ್ಯವನಪ್ರಾಶ ಅವಲೇಹವನ್ನು ವಿತರಿಸಿ ಮಾತನಾಡಿದ ಅವರು, ಹಿಂದೆ ಋಷಿ […]

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ Read More »

ಕರಾವಳಿ

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.,  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಿರಿಯ ಸದಸ್ಯರಾದ ಉಮೇಶ ಕೆ. ಸಣ್ಣಾರ ಅವರು ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಬಿದ್ದು ಅವರ ಕಾಲಿನ ಮೂಳೆ ಮುರಿತವಾಗಿದ್ದು,  ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಧನ ಸಂಗ್ರಹ ಮಾಡಿ ಅವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ದನ ಸೂಡ್ಲು, ಕಾರ್ಯದರ್ಶಿ ಸುಂದರ ಒಗ್ಗು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ Read More »

ಕರಾವಳಿ

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.  ಹೊಸದಿಲ್ಲಿ:ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಗಳನ್ನು ಮೇ 31ರ ನಂತರ ರೂಪಿಸುವ ನಿರ್ಧಾರವನ್ನು ರಾಜ್ಯ ಸರಕಾರಗಳಿಗೆ ಬಿಡಲು ಕೇಂದ್ರ ಮುಂದಾಗುವ ಸಾಧ್ಯತೆ ಇದೆ. ಕೇಂದ್ರದ ಉನ್ನತ ಮೂಲಗಳ ಪ್ರಕಾರ . ತಮ್ಮ ರಾಜ್ಯದ ಪರಿಸ್ಥಿತಿ ಆಧರಿಸಿ ನಿಯಮಗಳನ್ನು ರಾಜ್ಯಗಳು ರೂಪಿಸಬಹುದು ಎಂದು ತಿಳಿಸಬಹುದು ಎನ್ನಲಾಗುತ್ತಿದೆ. ಮೇ 31ರ ನಂತರ ಲಾಕ್ಡೌನ್ ಮುಂದುವರೆಸುವುದೋ ಬೇಡವೋ ಎಂಬ ಆಯ್ಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ,

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ Read More »

ಕರಾವಳಿ

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ

(ನ್ಯೂಸ್ ಕಡಬ) newskadaba.com  ಕಡಬ,ಮೇ.27:  ಸುಳ್ಯದ ಚಂದನ ಸಾಹಿತ್ಯ ವೇದಿಕೆಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ಪನಲ್ಲಿ ರಾಜ್ಯಮಟ್ಟದ ಚಂದನ ಕವಿಗೋಷ್ಠಿ ಯು ಇತ್ತೀಚೆಗೆ ನಡೆಯಿತು. ರಾಜ್ಯಮಟ್ಟದ ಚಂದನ ಆನ್ ಲೈನ್ ಕವಿಗೋಷ್ಠಿ ಉದ್ಘಾಟನೆಯನ್ನು ಹರಿನರಸಿಂಹ ಉಪಾಧ್ಯಾಯ  ಬೆಂಗಳೂರು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಶಿಕ್ಷಕರಾದ ಜಮಖಂಡಿಯ ದಾಮೋದರ್ ಬಡಿಗೇರ್ ಮತ್ತು ಮಂಗಳೂರಿನ  ಖ್ಯಾತ ಮದರಂಗಿ ಪತ್ರಿಕಾ ಸಂಪಾದಕರಾದ ಅಬೂಬಕರ್ ಕೈರಂಗಳ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು . ಕವಿಗೋಷ್ಠಿ ಅಧ್ಯಕ್ಷತೆಯನ್ನು ಖ್ಯಾತ ಕವಿಗಳು, ಪತ್ರಕರ್ತರೂ ಆದ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ Read More »

ಕರಾವಳಿ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಪುತ್ತೂರು: ಮಾಸ್ಕ್ ಹಾಕದೆ ಖಾಸಗಿ ಮಳಿಗೆಗೆ ಆಗಮಿಸಿದ ಗ್ರಾಹಕನೊಂದಿಗೆ ವಿಚಾರಿಸಿದ್ದಕ್ಕೆ  ಹೊಡೆದಾಟ ನಡೆದಿರುವ ಘಟನೆ ಮಂಗಳವಾರದಂದು  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ  ನಡೆದಿದೆ. ಪುತ್ತೂರಿನಲ್ಲಿರುವ ಖಾಸಗಿ ಮಳಿಗೆಯ ಮುಂಭಾಗದಲ್ಲಿ ಖರೀದಿಗೆ ಆಗಮಿಸಿದ್ದ ಗ್ರಾಹಕನೊಬ್ಬ ಮಾಸ್ಕ್ ಹಾಕದೇ ಸಾಲಿನಲ್ಲಿ ನಿಂತಿದ್ದ. ಕೋವಿಡ್ ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿರುವುದರಿಂದ ಮಾಸ್ಕ್ ಧರಿಸದ ಗ್ರಾಹನಿಗೆ ಮಳಿಗೆಯ ಸಿಬ್ಬಂದಿಗಳು ಖರೀದಿಗೆ ಪ್ರವೇಶ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ Read More »

ಕರಾವಳಿ

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.27., ದೇಶದ ಎರಡನೇ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿ ಭಾರತ್ ಪೆಟ್ರೋಲಿಯಂ (BPCL) ಅನಿಲ ಗ್ರಾಹಕರಿಗೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಭಾರತ್ ಪೆಟ್ರೋಲಿಯಂ ದೇಶಾದ್ಯಂತ 71 ದಶಲಕ್ಷಕ್ಕೂ ಹೆಚ್ಚು ಅನಿಲ ಗ್ರಾಹಕರನ್ನು ಹೊಂದಿದೆ. ಭಾರತ್ ಗ್ಯಾಸ್ ಪ್ರಕಾರ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಿಲಿಂಡರ್‌ಗಳನ್ನು ವಾಟ್ಸಾಪ್ ಸಂಖ್ಯೆ 180022434 ನಲ್ಲಿ ಬುಕ್ ಮಾಡಬಹುದು. ನೀವು ಮಾಡಬೇಕಾದ ಪ್ರಮುಖ ವಿಚಾರ ನೆನಪಿನಲ್ಲಿಡಿ, ಗ್ಯಾಸ್

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..? Read More »

ರಾಷ್ಟ್ರೀಯ ನ್ಯೂಸ್

ಪಲ್ಟಿ ಹೊಡೆದ ಟೆಂಪೋ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಉಡುಪಿ: ಶಿವಮೊಗ್ಗದಿಂದ ಮಂಗಳೂರು ಕಡೆ ಬಾಳೆಹಣ್ಣು ತುಂಬಿಸಿಕೊಂಡು ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಪಲ್ಟಿ ಹೊಡೆದ ಟೆಂಪೋ Read More »

ಕರಾವಳಿ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಮಂಗಳೂರು:  ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಕೇಂದ್ರ ಸರಕಾರದ ಆದೇಶದ ಮೇರೆಗೆ  ಜೂನ್ 14ರ ವರೆಗೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ.  ಆ ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತಿತ್ತು. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ಕರಾವಳಿ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ

(ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,ಮೇ.27., ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದೆ, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಕೊರೋನಾ ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ವಿಶ್ವದಾದ್ಯಂತ ಈ ವರೆಗೆ 3.43 ಲಕ್ಷ ಜನರು ವೈರಸ್’ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 99,780ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರತೀನಿತ್ಯ ಪಾಸಿಟಿವ್ ಪ್ರಕರಣಗಳು ಶರವೇಗದಲ್ಲಿ ಸಾಗುತ್ತಲೇ ಇದೆ. ಪ್ರಸ್ತುತ ಇಡೀ ವಿಶ್ವದಲ್ಲಿ ಸೋಂಕಿತರ ಸಂಖ್ಯೆ 5,404,512ಕ್ಕೆ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top