Ashitha Soodlu

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.29. ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ವೆ, ತಾಲೂಕು ಯುವಜನ ಒಕ್ಕೂಟ ಪುತ್ತೂರು, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ರಕ್ತದಾನ ಮಾಹಿತಿ ಕಾರ್ಯಾಕ್ರಮ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ರಕ್ತದಾನ ಶಿಬಿರ ಮತ್ತು ರಕ್ತದಾನ ಮಾಹಿತಿ ಕಾರ್ಯಕ್ರಮನ್ನು ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ  ವೈದ್ಯಾಧಿಕಾರಿ ಡಾ.ದೀಪಕ್ ರೈ […]

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ Read More »

ಕರಾವಳಿ

ಬೆಳಂದೂರು: ನೆರೆಹೊರೆ ಯುವ ಸಂಸತ್ತು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.29. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು, ಶ್ರೀ ಗೌರಿ ಯುವತಿ ಮಂಡಲ ಸರ್ವೆ ಇದರ ಆಶ್ರಯದಲ್ಲಿ ನೆರೆಹೊರೆ ಯುವ ಸಂಸತ್ತು ಮಾಹಿತಿ ಕಾರ್ಯಗಾರ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಮಾಹಿತಿ ಕಾರ್ಯಾಗಾರವನ್ನು ಕಾಲೇಜಿನ ಪ್ರಾಚಾರ್ಯ ಪ್ರೋ.ಪದ್ಮನಾಭ ಕೆ. ಅವರು ಉದ್ಘಾಟಿಸಿ ಮಾತನಾಡಿ, ಯುವಜನತೆಯ ಬೆಳವಣಿಗೆಗೆ ಪೂರಕವಾಗಿ ತರಬೇತಿ ಕಾರ್ಯಗಳು ದೊರಕಿದರೆ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ

ಬೆಳಂದೂರು: ನೆರೆಹೊರೆ ಯುವ ಸಂಸತ್ತು ಕಾರ್ಯಾಗಾರ Read More »

ಕರಾವಳಿ

ಸವಣೂರು ಮೆಸ್ಕಾಂ ಉಪವಿಭಾಗ ಜೆಇ ಆಗಿ ನಾಗರಾಜ್ ಕೆ.

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಸವಣೂರು ಮೆಸ್ಕಾಂ ಉಪವಿಭಾಗಕ್ಕೆ ಜೆಇ ಆಗಿ ನಾಗರಾಜ್ ಕೆ. ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾಗರಾಜ್ ಕೆ. ಅವರು ಈ ಹಿಂದೆ ಕಡಬದಲ್ಲಿ 3 ವರ್ಷ,ಮೂಡಿಗೆರೆಯಲ್ಲಿ 4 ತಿಂಗಳು ಕರ್ತವ್ಯ ನಿರ್ವಹಿಸಿದ್ದರು. ನಾಗರಾಜ್ ಕೆ ಅವರು ಮೂಲತಃ ಹಾಸನ ಜಿಲ್ಲೆ ಯ ಆಲೂರು ತಾಲೂಕಿನವರು.

ಸವಣೂರು ಮೆಸ್ಕಾಂ ಉಪವಿಭಾಗ ಜೆಇ ಆಗಿ ನಾಗರಾಜ್ ಕೆ. Read More »

ಕರಾವಳಿ

ಬೆಳಂದೂರು: ಜಯಪ್ರಕಾಶ್ ಅಲೆಕ್ಕಾಡಿಯವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.28.  ಕಳೆದ ಏಳು ವರ್ಷಗಳಿಂದ ಬೆಳಂದೂರು ಗ್ರಾಮ ಪಂಚಾಯಿತಿನಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮ ಪಂಚಾಯಿತಿಗೆ ಪಿಡಿಓ ಆಗಿ ಭಡ್ತಿಗೊಂಡು ವರ್ಗಾವಣೆಯಾದ ಜಯಪ್ರಕಾಶ್ ಅಲೆಕ್ಕಾಡಿಯವರನ್ನು ಬೆಳಂದೂರು ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಸನ್ಮಾನಿಸಿ ಬೀಳ್ಕೊಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮೇಶ್ವರಿ ಅಗಳಿ ಮಾತನಾಡಿ, ಜಯಪ್ರಕಾಶ್ ಅಲೆಕ್ಕಾಡಿಯವರು ಸರಕಾರದ ಸೌಲಭ್ಯವನ್ನು ಜನಸಾಮಾನ್ಯರಿಗೆ ಒದಗಿಸಿಕೊಡುವಲ್ಲಿ ಮುತುವರ್ಜಿ ವಹಿಸುತ್ತಿದ್ದರು. ಅತ್ಯಂತ ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಜಯಪ್ರಕಾಶರು ಎಲ್ಲರೊಂದಿಗೂ ಸೌಜನ್ಯತೆಯಿಂದಲೇ ಬೆರೆಯುತ್ತಿದ್ದರು ಎಂದು

ಬೆಳಂದೂರು: ಜಯಪ್ರಕಾಶ್ ಅಲೆಕ್ಕಾಡಿಯವರಿಗೆ ಬೀಳ್ಕೊಡುಗೆ Read More »

ಕರಾವಳಿ

ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್.ರೈ ದಂಪತಿಯಿಂದ ಮುಗೇರು ದೇವಸ್ಥಾನಕ್ಕೆ ನೂತನ ವಸಂತಕಟ್ಟೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಇಲ್ಲಿನ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸುಮಾರು ರೂ. 3 ಲಕ್ಷ ವೆಚ್ಚದಲ್ಲಿ ನೂತನ ವಸಂತ ಕಟ್ಟೆಯನ್ನು ಸೇವಾಕರ್ತರಾದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್. ರೈ ಅವರು ಶ್ರೀ ದೇವಸ್ಥಾನಕ್ಕೆ ಸಮರ್ಪಿಸಿದರು. ಈ ಸಂದರ್ಭ ನೂತನ ವಸಂತ ಕಟ್ಟೆಯ ಸೇವಾಕರ್ತರಾದ ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್.ರೈ ದಂಪತಿಯನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ

ಸವಣೂರು ಕೆ. ಸೀತಾರಾಮ ರೈ ಹಾಗೂ ಕಸ್ತೂರಿಕಲಾ ಎಸ್.ರೈ ದಂಪತಿಯಿಂದ ಮುಗೇರು ದೇವಸ್ಥಾನಕ್ಕೆ ನೂತನ ವಸಂತಕಟ್ಟೆ ಸಮರ್ಪಣೆ Read More »

ಕರಾವಳಿ

ನರಿಮೊಗರು: ವೃತ್ತಿ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪ್ರಶಸ್ತಿ ಪುರಸ್ಕ್ರತ ಪ್ರಖ್ಯಾತಿ ಯುವತಿ ಮಂಡಲ ನರಿಮೊಗರು ಇದರ ಆಶ್ರಯದಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಾಗಾರವನ್ನು ತರಬೇತುದಾರೆ ಬೇಬಿ ಕುಮಾರಮಂಗಲ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಯುವತಿ ಮಂಡಲದ ಗೌರವಾಧ್ಯಕ್ಷೆ ವಿದ್ಯಾ ನಾಯಕ್ ಮಾತನಾಡಿ, ಇಲ್ಲಿನ ಯುವತಿ ಮಂಡಲವು ಆತ್ಯುನ್ನತ ಕಾರ್ಯ ಚಟುವಟಿಕೆಯಿಂದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದಿಂದ ಜಿಲ್ಲಾ ಅಯಗುತ್ತಮ ಸಂಘ ಪ್ರಶಸ್ತಿ ಪಡೆದುಕೊಂಡಿದೆ.

ನರಿಮೊಗರು: ವೃತ್ತಿ ತರಬೇತಿ ಕಾರ್ಯಾಗಾರ Read More »

ಕರಾವಳಿ

ಬಾಳಿಲ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.28. ಬಾಳಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಸೌಹಾರ್ದ ಕೂಟ ಸಮಾರಂಭದಲ್ಲಿ ಹಿರಿಯರ ಕ್ರೀಡಾಕೂಟದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ರೈ, ಕ್ರೀಡಾ ತರಬೇತುದಾರ ಮಹಾಬಲ ರೈ, ಮಹಿಳಾ ಕ್ರೀಡಾಪಟು ರೀಟಾ ಡಿ’ಸೋಜಾ, ಸಂಕಪ್ಪ ಸಾಲಿಯಾನ್ ಅಲೆಕ್ಕಾಡಿರವರನ್ನು ಸನ್ಮಾನಿಸಲಾಯಿತು.

ಬಾಳಿಲ : ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ Read More »

ಕರಾವಳಿ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.28. ಇಂದಿನ ವಿದ್ಯಾರ್ಥಿಗಳೇ ನಮ್ಮ ದೇಶವನ್ನಾಳುವ ಮುಂದಿನ ಜನಾಂಗದವರಾಗಿದ್ದು, ತಮ್ಮ ಮುಂದಿನ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ತಮ್ಮ ಮೇಲೆ ತಾವು ಆತ್ಮ ವಿಶ್ವಾಸವನ್ನು ಇಟ್ಟುಕೊಂಡು ದೃಢ ನಿರ್ಧಾರದಿಂದ ಕಾರ್ಯವನ್ನು ಕೈಗೊಂಡಾಗ ಮಾತ್ರ ಸಾಧ್ಯ. ಅದರಂತೆಯೇ ಅಹಂಕಾರವನ್ನು ತ್ಯಜಿಸಿ ವಿನಯವನ್ನು ತಮ್ಮದಾಗಿಸಿಕೊಂಡಾಗ ಭವಿಷ್ಯವು ಉಜ್ವಲವಾಗುತ್ತದೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ, ಬಂಟ್ವಾಳ ಎಸ್.ವಿ.ಎಸ್ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ತುಕಾರಾಮ್ ಪೂಜಾರಿ ಹೇಳಿದರು. ಅವರು ಸವಣೂರು ಮಾ.28ರಂದು ನಡೆದ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ Read More »

ಕರಾವಳಿ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ ನೂತನ ಬಾಲವಿಕಾಸ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಬಾಲವಿಕಾಸ ಸಮಿತಿಯ ಅಧ್ಯಕ್ಷರಾಗಿ ವಿಮಲ ಎನ್.ಎಮ್. ರವರು ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯತ್ ಪ್ರತಿನಿಧಿಯಾಗಿ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಶಾಲಾ ಮುಖ್ಯೋಪಾಧ್ಯಾಯರಾದ ಪುಂಡಲೀಕ ಪೂಜಾರ, ಆಶಾ ಕಾರ್ಯಕರ್ತೆ ಕುಸುಮ, ಅಂಗನವಾಡಿ ವ್ಯಾಪ್ತಿಗೆ ಬರುವ ಪ್ರಾಯಪೂರ್ವ ಬಾಲಕಿ ಮೋಹಿನಿ, ಮಕ್ಕಳ ತಾಯಂದಿರ ಪರವಾಗಿ ಜಯಶ್ರೀ ಮತ್ತು ಸೀತಾ, ಅಂಗನವಾಡಿ ಫಲಾನುಭವಿಯ ತಂದೆ ಗಿರಿಯಪ್ಪ ಮಾದೋಡಿ,

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ರಚನೆ Read More »

ಕರಾವಳಿ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ  ಸಮಿತಿಯ ಸಭೆಯು ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ನಡೆಯುತ್ತಿದ್ದು ಈ ಬಾರಿಯ ಸಭೆಯು ಬಿಜೆಪಿ ಪಂಚಾಯತ್ ಸಮಿತಿಯ ಮಹಿಳಾ ಮೊರ್ಛದ ಕಾರ್ಯದರ್ಶಿಯಾದ ಚಂಪಾ ಕುಶಾಲಪ್ಪ ಗೌಡರ ಮನೆಯಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ಪೇಜ್ ಪ್ರಮುಖರ ನೇಮಕ ಮಾಡಲಾಯಿತು. ಚುನಾವಣಾ ಪೂರ್ವ ಚಟುವಟಿಕೆಯ ಬಗ್ಗೆ ಚರ್ಚೆ ಮಾಡಲಾಯಿತು. ಸಭೆಯಲ್ಲಿ ದಕ್ಷಿಣ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ Read More »

ಕರಾವಳಿ
Scroll to Top