Ashitha Soodlu

ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯಲ್ಲಿ 2 ಲಕ್ಷ ಮಂಜೂರು

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯಲ್ಲಿ ದಿ.ಶೀನಪ್ಪ ಗೌಡ ಗಾಳಿಬೆಟ್ಟು ಇವರ ಪತ್ನಿಗೆ 2 ಲಕ್ಷ ಮೊತ್ತದ ಚೆಕ್ ನ್ನು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಜನರಲ್ ಮೆನೇಜರ್ ಎಸ್.ಎಂ. ಗೋರ್ಬಲ್ ಅವರು ಕಾಣಿಯೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ. ಗೋರ್ಬಲ್ ಬ್ಯಾಂಕಿನ ಪ್ರತಿಯೊಬ್ಬ ಗ್ರಾಹಕರು ವರ್ಷಕ್ಕೆ ರೂ.330 ಮತ್ತು ರೂ.12 ರ ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯನ್ನು ಮಾಡಿಸಿಕೊಳ್ಳಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಪ್ರಾದೇಶಿಕ ಪ್ರಬಂಧಕರಾದ […]

ಪ್ರಧಾನಮಂತ್ರಿ ಜೀವನ್ ಸುರಕ್ಷಾ ಯೋಜನೆಯಲ್ಲಿ 2 ಲಕ್ಷ ಮಂಜೂರು Read More »

ಕರಾವಳಿ

ಮಾ.31: ಸವಣೂರಲ್ಲಿ ಎಸ್‍ಪಿ ರವಿಕಾಂತೇ ಗೌಡ ಉಪಸ್ಥಿತಿಯಲ್ಲಿ ಪೊಲೀಸ್ ಬೀಟ್ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಬೆಳಂದೂರು ಹಾಗೂ ಸವಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊಲೀಸ್ ಬೀಟ್ ಸಭೆಯು ಮಾ.31ರ ಶನಿವಾರ ಸಂಜೆ 3 ಗಂಟೆಗೆ ಸವಣೂರಿನ ಪ್ರಿಯಕಾರಿಣಿ ಸಭಾಭವನದಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್. ರವಿಕಾಂತೇ ಗೌಡ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುತ್ತಿದ್ದು, ಪೊಲೀಸ್ ಇಲಾಖೆಗೆ ಸಂಬಂಧಪಟ್ಟಂತಹ ಸಮಸ್ಯೆ, ದೂರುಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ತಿಳಿಸಬಹುದು ಎಂದು ಬೆಳ್ಳಾರೆ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.31: ಸವಣೂರಲ್ಲಿ ಎಸ್‍ಪಿ ರವಿಕಾಂತೇ ಗೌಡ ಉಪಸ್ಥಿತಿಯಲ್ಲಿ ಪೊಲೀಸ್ ಬೀಟ್ ಸಭೆ Read More »

ಕರಾವಳಿ

ಪಾಲ್ತಾಡು: ವಿಷ್ಣುಮೂರ್ತಿ ದೈವದ ಒತ್ತೆಕೋಲ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಕೊಳ್ತಿಗೆ ಗ್ರಾಮದ ಪಾಲ್ತಾಡು ನಡುಮನೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಾವಧಿ ಒತ್ತೆಕೋಲವು ನಡೆಯಿತು. ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ದಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು.ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸುಮಾರು 5000 ಕ್ಕೂ ಮಿಕ್ಕಿ ಜನರು ಅನ್ನಪ್ರಸಾದ ಸ್ವೀಕರಿಸಿದರು.ಅನ್ನಸಂತರ್ಪಣೆಯ ಬಳಿಕ ಕುಳಿಚಟ್ಟು ನಡೆಯಿತು. ನಂತರ ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಪ್ರಾತಃಕಾಲ

ಪಾಲ್ತಾಡು: ವಿಷ್ಣುಮೂರ್ತಿ ದೈವದ ಒತ್ತೆಕೋಲ Read More »

ಕರಾವಳಿ

ಸವಣೂರು: ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.27. ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ 4ನೇ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಮಾ.25 ರಂದು ಬೆಳಿಗ್ಗೆ ಭಕ್ತಾಧಿಗಳಿಂದ ಹೊರೆಕಾಣಿಕೆ ಸಮರ್ಪಣೆ ಬಳಿಕ ಭಕ್ತಾಧಿಗಳಿಂದ ಕ್ಷೇತ್ರ ಸ್ವಚ್ಚತೆ, ಅಲಂಕಾರ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ ,ಪುಣ್ಯಾಹ, ಪ್ರಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಪೂಜೆ ನಡೆಯಿತು. ಮಾ.26

ಸವಣೂರು: ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಜಾತ್ರೋತ್ಸವ Read More »

ಕರಾವಳಿ

ಕುದ್ಮಾರು: ತಿರಂಗಾ ವಾರಿಯರ್ಸ್ ವತಿಯಿಂದ ಸ್ಚಚ್ಛತಾ ಕಾರ್ಯ

(ನ್ಯೂಸ್ ಕಡಬ) newskadaba.com ಬೆಳಂದೂರು, ಮಾ.27. ದ.ಕ. ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಬೆಳಂದೂರು, ತಿರಂಗಾ ವಾರಿಯರ್ಸ್ ಕುದ್ಮಾರು ಇವುಗಳ ಸಹಯೋಗದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕುದ್ಮಾರು ಗ್ರಾಮದಲ್ಲಿ ಸ್ಚಚ್ಛತಾ ಕಾರ್ಯ ನಡೆಯಿತು. ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಮೇಶ್ವರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಮ್ಮ ಮನೆ, ಪರಿಸರ, ಗ್ರಾಮವನ್ನು ಸ್ಚಚ್ಛವಾಗಿಟ್ಟುಕೊಳ್ಳುವ ಕಾರ್ಯವಾಗಬೇಕು. ಎಲ್ಲೆಂದರಲ್ಲಿ ಕಸ ಬಿಸಾಡುವ ರೂಢಿಗೆ ಸ್ವಪ್ರೇರಣೆಯಿಂದ ಕಡಿವಾಣ ಹಾಕುವಂತಾಗಬೇಕೆಂದರು. ಪಿಡಿಒ ನವೀನ್, ಕುದ್ಮಾರು ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಪುಷ್ಪಾಲತಾ ಪಿ. ಗೌಡ, ತಿರಂಗಾ ವಾರಿಯರ್ಸ್ ಕುದ್ಮಾರು

ಕುದ್ಮಾರು: ತಿರಂಗಾ ವಾರಿಯರ್ಸ್ ವತಿಯಿಂದ ಸ್ಚಚ್ಛತಾ ಕಾರ್ಯ Read More »

ಕರಾವಳಿ

ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.24. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್‌ ಇಂಡಿಯಾ ಪರಿಕಲ್ಪನೆಗೆ ಪೂರಕವಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಕಾಣಿಯೂರು ಗ್ರಾಮದಲ್ಲಿ ಅತೀಹೆಚ್ಚು ರೂಪೇ ಕಾರ್ಡ್ ವಿತರಣೆ ಮಾಡಿ, ಅಂತರ್ಜಾಲ ಬ್ಯಾಂಕಿಂಗ್ , ಎಟಿಎಂ ವ್ಯವಹಾರ ಉತ್ತೇಜನ, ಗ್ರಾಮದ ಪ್ರತಿಯೊಬ್ಬರಿಗೂ ಉಳಿತಾಯ ಖಾತೆಗಳನ್ನು ಹೊಂದುವಂತೆ ಮಾಡಿ ಡಿಜಿಟಲ್ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಜನರಲ್ ಮೇನೆಜರ್ ಎಸ್.ಎಂ. ಗೋರ್ಬಲ್ ಹೇಳಿದರು. ಅವರು ಕಾಣಿಯೂರು ಗ್ರಾ.ಪಂ. ಕಚೇರಿಯಲ್ಲಿ ಕರ್ನಾಟಕ

ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ Read More »

ಕರಾವಳಿ

ಸವಣೂರು ವಿಷ್ಣುಪುರ ಆರಿಗಮಜಲಿನಲ್ಲಿ ಬಸ್ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಇಲ್ಲಿನ ವಿಷ್ಣುಪುರ ಆರಿಗಮಜಲಿನಲ್ಲಿ ಸವಣೂರು ಗ್ರಾಮ ಪಂಚಾಯತ್‍ನ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ, ಉಪಾಧ್ಯಕ್ಷರಾದ ರವಿಕುಮಾರ್ ಬಿ.ಕೆ, ಲೆಕ್ಕ ಸಹಾಯಕ ಎ.ಮನ್ಮಥ, ಸದಸ್ಯರಾದ ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಗಾಯತ್ರಿ ಬರೆಮೇಲು, ವೇದಾವತಿ ಬಾಲಕೃಷ್ಣ ಅಂಜಯ, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಸಿಬ್ಬಂಧಿ ಪ್ರಮೋದ್ ಕುಮಾರ್ ರೈ, ದಯಾನಂದ

ಸವಣೂರು ವಿಷ್ಣುಪುರ ಆರಿಗಮಜಲಿನಲ್ಲಿ ಬಸ್ ತಂಗುದಾಣ ಉದ್ಘಾಟನೆ Read More »

ಕರಾವಳಿ

ಐತಿಹಾಸಿಕ 250ನೇ ಪಾಲ್ತಾಡು ಒತ್ತೆಕೋಲಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಕೊಳ್ತಿಗೆ ಗ್ರಾಮದ ಪಾಲ್ತಾಡು ವಿಷ್ಣುನಗರದಲ್ಲಿ ಐತಿಹಾಸಿಕ 250ನೇ ವರ್ಷದ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕ್ಷಣಗಣನೆ ಆರಂಭವಾಗಿದೆ. ಒತ್ತೆಕೋಲವು ಮಾ.24ರಂದು ರಾತ್ರಿ ಆರಂಭಗೊಂಡು ಮಾ.25ರ ಮದ್ಯಾಹ್ನದವರೆಗೆ ನಡೆಯಲಿದೆ.ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆದು, ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ ಸ್ಪರ್ಶ,ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ಅನ್ನಸಂತರ್ಪಣೆಯ ಬಳಿಕ ಕುಳಿಚಟ್ಟು ನಡೆಯಲಿದೆ. ನಂತರ  ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ನಡೆಯಲಿದೆ.ಮಾ.25ರಂದು ಬೆಳಿಗ್ಗೆ ವಿಷ್ಣುಮೂರ್ತಿ

ಐತಿಹಾಸಿಕ 250ನೇ ಪಾಲ್ತಾಡು ಒತ್ತೆಕೋಲಕ್ಕೆ ಕ್ಷಣಗಣನೆ Read More »

ಕರಾವಳಿ

 ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡೋತ್ಸವವು ಮಾ.24 ರಂದು ನಡೆಯಿತು.  ಕ್ರೀಡಾಕೂಟವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ  ಶ್ರೀ. ಕೆ. ಸೀತಾರಾಮ ರೈ ಸವಣೂರು ಇವರು,  “ಇತ್ತೀಚಿನ ದಿನಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವಂತಹ ಸಂದರ್ಭದಲ್ಲಿ ಪೋಷಕರ ಹಾಗೂ ವಿದ್ಯಾರ್ಥಿಗಳ ಒಲವು ಓದಿನ ಕಡೆಗೆ ಮಾತ್ರವಿದ್ದು, ಕ್ರೀಡೆಯ ಕಡೆಗೆ ಕಡಿಮೆಯಾಗುತ್ತಿದೆ.  ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಜೊತೆ ಜೊತೆಯಲ್ಲಿ ಸಾಗಬೇಕು,  ಕ್ರೀಡೆಯಲ್ಲಿ ಮುಂದಿರುವ ವಿದ್ಯಾರ್ಥಿಗಳೇ ಇಂದು

 ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ

ಶಾಂತಿಮೊಗರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಬೆಳಂದೂರು, ಕಾಣಿಯೂರು, ಸವಣೂರು, ಆಲಂಕಾರು ಗ್ರಾಮ ಪಂಚಾಯಿತಿಯ ಬಹುತೇಕ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶಾಂತಿಮೊಗರು ಘಟಕಕ್ಕೆ ಶನಿವಾರ ಸುಳ್ಯ ಶಾಸಕ ಎಸ್. ಅಂಗಾರ ಶಿಲಾನ್ಯಾಸಗೈದರು. ಸುಮಾರು 7.5 ಕೋಟಿ ರೂ. ವೆಚ್ಚದ ಈ ಯೋಜನೆಗೆ ಶಿಲಾನ್ಯಾಸಗೈದು ಬಳಿಕ ಶಾಸಕರು ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ರಮಾನಂದ ಭಟ್ ಪೂಜಾ ವಿದಿವಿಧಾನ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ

ಶಾಂತಿಮೊಗರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ Read More »

ಕರಾವಳಿ
Scroll to Top