Ashitha Soodlu

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.01: ಒಂದೇ ದಿನ 210 ಮಂದಿಗೆ ಕೊರೊನಾ ಸೋಂಕು ತಗುಲುವ ಮೂಲಕ ಕೊರೊನಾ ಅಬ್ಬರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯಾ ಸಿಯೋನ್ ಆಶ್ರಮಕ್ಕೆ ನೆರಿಯ ವಿಶ್ವ ಹಿಂದೂ ಪರಿಷತ್ ಘಟಕ ನೆರವಾಗಿದೆ. ಸುಮಾರು 270 ಜನ ನಿರ್ಗತಿಕರು ಹಾಗೂ ವೃದ್ಧರಿರುವ ಈ ಆಶ್ರಮದಲ್ಲಿ ನಿನ್ನೆ ಬರೋಬ್ಬರಿ 210 ಮಂದಿಗೆಪಾಸಿಟಿವ್ ಆಗಿತ್ತು. ಹೀಗಾಗಿ ಇಂದು ವಿಎಚ್‍ಪಿ ಕಾರ್ಯಕರ್ತರು ಆಶ್ರಮವನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದಾರೆ. ಪಿಪಿಇ ಕಿಟ್ ಧರಿಸಿದ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದಲೇ […]

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು Read More »

ಕರಾವಳಿ, ಕರ್ನಾಟಕ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಕೊರೋನಾ ಸೋಂಕಿನ ಮೊದಲನೇ ಅಲೆಗಿಂತ ಎರಡನೇ ಅಲೆ ಭಿನ್ನವಾಗಿತ್ತು. 2ನೇ ಅಲೆಗಿಂತ 3ನೇ ಅಲೆ ವಿಭಿನ್ನವಾಗಿರುತ್ತದೆ. ಈಗಾಗಲೇ ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ತಿಳಿಸಿದ್ದಾರೆ.   ಈ ಸಂಬಂಧ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಆಕ್ಸಿಜನ್​ ಸಮಸ್ಯೆ ಉದ್ಭವಿಸದಂತೆ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಪ್ರತಿ ಪ್ರಾಥಮಿಕ ಕೇಂದ್ರಗಳಲ್ಲಿ ಬೆಡ್​ಗಳ ಹೆಚ್ಚಳ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ Read More »

ಕರ್ನಾಟಕ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಪುತ್ರ ಯತೀಂದ್ರ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.       ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ಪುತ್ರ ಡಾ.ಯಂತೀಂದ್ರ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ.ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ Read More »

ಕರ್ನಾಟಕ

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್‌ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ನೈರುತ್ಯ ಮಾನ್ಸೂನ್‌ ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ,

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ದಿನೇ ದಿನೇ ಬ್ಲ್ಯಾಕ್​​ ಫಂಗಸ್​ಗೆ ಹೆಚ್ಚಿನ ಜನ ತುತ್ತಾಗುತ್ತಿದ್ದಾರೆ. ಅತಿಯಾದ ಮಧುಮೇಹವುಳ್ಳ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಪ್ಪು ಶಿಲೀಂಧ್ರಿ ಕಾಯಿಲೆ ಈಗ ಮಕ್ಕಳಲ್ಲೂ ಕಾಣಿಸಿಕೊಂಡಿದೆ. ಬಳ್ಳಾರಿಯ 11 ವರ್ಷ ಬಾಲಕಿ ಹಾಗೂ ಚಿತ್ರದುರ್ಗದ 14 ವರ್ಷ ಬಾಲಕನಲ್ಲಿ ಬ್ಲ್ಯಾಕ್​​ ಫಂಗಸ್​ ಕಾಣಿಸಿಕೊಂಡಿದೆ. ಇಬ್ಬರೂ ಮಕ್ಕಳು ಒಂದು ಕಣ್ಣನಾದ್ರೂ ಕಳೆದುಕೊಳ್ಳುತ್ತಾರೆ ಎಂದು ವೈದ್ಯರು ತಿಳಿಸಿರುವುದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇಬ್ಬರೂ ಮಕ್ಕಳಿಗೆ ಸದ್ಯ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..! Read More »

ಕರ್ನಾಟಕ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ಕಳೆದ ದಿನ 16,604 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 26,04,431ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 411 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 29 ಸಾವಿರ ಗಡಿ ದಾಟಿ, 29,090ಕ್ಕೆ ತಲುಪಿದೆ. ಸೋಂಕಿನ ಪ್ರಕರಣ ಕಡಿಮೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವಿಟಿ ದರ ನಿರಂತರವಾಗಿ ಇಳಿಕೆಯಾಗುತ್ತಲೇ ಇದೆ.ಆದರೆ ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಲೇ ಇಲ್ಲ.

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ Read More »

ಕರ್ನಾಟಕ

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.01:  ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಈ ಅವಧಿಯಲ್ಲಿ 2,795 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ.ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ Read More »

ಕರಾವಳಿ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.27: ಕೋವಿಡ್‌ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ರೂಪಿಸಲು ಕ್ರಮ ವಹಿಸಲಾಗುತ್ತದೆ.     ಹೀಗಾಗಿ ಪರಿಸ್ಥಿತಿ ಎದುರಿಸಲು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ Read More »

ಕರಾವಳಿ, ಕರ್ನಾಟಕ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26: ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ವಿಧಿವಶರಾಗಿದ್ದಾರೆ.ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.   ಕೊರೊನಾದಿಂದ ಗುಣಮುಖರಾದ 4 ದಿನದ ಬಳಿಕ ದೊರೆಸ್ವಾಮಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಎದುರಾಗಿತ್ತು. ಹಿನ್ನೆಲೆಯಲ್ಲಿ 8 ದಿನದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.  

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ Read More »

ಕರ್ನಾಟಕ
Scroll to Top