Ashitha Soodlu

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಬಿಜೆಪಿ ನಾಯಕರು ಹೊಣೆ: ತಿಮರೋಡಿ

(ನ್ಯೂಸ್‌ ಕಡಬ) newskadaba.com, ಆ.21: ನನ್ನ ಜೀವಕ್ಕೆ ಹಾನಿಯಾದರೆ ರಾಜ್ಯ ಸರ್ಕಾರ ಮತ್ತು ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ತ ಮಹೇಶ್‌ ತಿಮರೋಡಿ ಹೇಳಿದರು. ಬಿ.ಎಲ್.ಸಂತೋಷ್‌ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ನಂತರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎನ್ನುವುದೇ ನಮ್ಮ ಉದ್ದೇಶ. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್‌ಐಟಿ ತನಿಖೆ ಮುಂದುವರಿಯಬೇಕು. ಬಿಜೆಪಿಗರ ಪಾಪದ ಕೂಸು ಸರ್ವನಾಶವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. […]

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಬಿಜೆಪಿ ನಾಯಕರು ಹೊಣೆ: ತಿಮರೋಡಿ Read More »

ಕರ್ನಾಟಕ

ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌

(ನ್ಯೂಸ್‌ ಕಡಬ) newskadaba.com, ಆ.21:‌ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ 39ನೇ ಹುಟ್ಟುಹಬ್ಬವನ್ನು ಈ ಬಾರಿ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ. ನನ್ನ ಪ್ರೀತಿಯ ಅಭಿಮಾನಗಳೇ, ಆ.23, ಪ್ರತಿ ವರ್ಷ ನನ್ನ ಬರ್ತ್‌ಡೇ ಅಂದ್ರೆ ಅದು ನನ್ನ ಹಬ್ಬಕ್ಕಿಂತ ಹೆಚ್ಚು ನಿಮ್ಮ ಹಬ್ಬ. ನಿಮ್ಮ ಪ್ರೀತಿ, ನಿಮ್ಮ ಎನರ್ಜಿ, ನಿಮ್ಮ ಸಂಭ್ರಮ ಅದೇ ನನ್ನ ಶಕ್ತಿ. ಆದರೆ, ಈ ಸಲ ನಾನು

ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌ Read More »

ಸಿನಿಮಾ

ಬಿ.ಎಲ್‌ ಸಂತೋಷ್‌ ವಿರುದ್ದ ಅವಹೇಳನ: ಮಹೇಶ್‌ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.21:‌ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ವಿರುದ್ದ ಅವೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ‌ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡದಿದ್ದಾರೆ. ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋವೊಂದರಲ್ಲಿ ತಿಮರೋಡಿ ಬಿಎಲ್‌ ಸಂತೋಷ‌ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಬಗ್ಗೆ ರಾಜೀವ್‌ ಕುಲಾಲ್‌ ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ ಬಿಎಸ್‌ಎನ್ 196(1), 352,353(2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮದ

ಬಿ.ಎಲ್‌ ಸಂತೋಷ್‌ ವಿರುದ್ದ ಅವಹೇಳನ: ಮಹೇಶ್‌ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ Read More »

ಕರಾವಳಿ

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್

(ನ್ಯೂಸ್‌ ಕಡಬ) newskadaba.com, ಆ.21:‌ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಘೋಷಿಸಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ.

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್ Read More »

ಕರ್ನಾಟಕ

ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದ ಆಟಗಾರರಿವರು…

(ನ್ಯೂಸ್‌ ಕಡಬ) newskadaba.com, ಆ.21: ಏಷ್ಯಾಕಪ್‌ ಟೂರ್ನಿಗೆ 15 ಸದಸ್ಯರುಗಳ ಟೀಂ ಇಂಡಿಯಾವನ್ನು ಹೆಸರಿಸಲಾಗಿದೆ. 15 ಸದಸ್ಯರುಗಳ ಪೈಕಿ ಟಿ20 ವಿಶ್ವಕಪ್‌ ಆಡಿದ 8 ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ.  ಏಷ್ಯಾಕಪ್‌ 2025ರ ತಂಡಗಳಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಹೀಗಿವೆ. ಏಷ್ಯಾ ಕಪ್‌ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್‌ ಗಿಲ್‌ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್‌ ಶರ್ಮಾ, ಅರ್ಷದೀಪ್‌ ಸಿಂಗ್‌, ವರುಣ್ ಚಕ್ರವರ್ತಿ,

ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದ ಆಟಗಾರರಿವರು… Read More »

ಕ್ರೀಡಾ ನ್ಯೂಸ್

ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com, ಆ.21: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್‌ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ವಿಶ್ವವಿಖ್ಯಾತ ದಸರಾ ಮಹೋತ್ಸವದ ಭಾಗವಾಗಿ ಏರ್‌ ಶೋ ನಡೆಸಲು ಒಪ್ಪಿಗೆ ನೀಡಿದ್ದಕ್ಕಾಗಿ ರಾಜನಾಥ್‌ಸಿಂಗ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಮಂದಿ

ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ Read More »

ಕರ್ನಾಟಕ

ಬೆಳಗ್ಗಿನ ಸಮಯ ಈ ಅಭ್ಯಾಸಗಳನ್ನು ಬಿಟ್ಟುಬಿಡಿ…

(ನ್ಯೂಸ್‌ ಕಡಬ) newskadaba.com, ಆ.21: ಬೆಳಗ್ಗೆ ಎದ್ದ ನಂತರ ಒಂದಷ್ಟು ಮಂದಿ ದಿನಗಳನ್ನು ಪಾಲಿಸುತ್ತಾರೆ. ಕೆಲವರು ಮೊಬೈಲ್‌ ನೋಡುತ್ತಾ ಕುಳಿತರೆ, ಇನ್ನೂ ಕೆಲವು ಮಂದಿ ತಮ್ಮ ದಿನವನ್ನು ಜಡತ್ವದಿಂದ ಆರಂಭಿಸುತ್ತಾರೆ. ಜಡತ್ವದ ದಿನಚರಿಗಳು ನಿಮ್ಮ ದಿನವನ್ನು ಹಾಳು ಮಾಡುತ್ತದೆ ಅಲ್ಲದೇ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಬೆಳಗ್ಗಿನ ಹೊತ್ತು ನೀವು ಈ ಅಭ್ಯಾಸಗಳನ್ನು ಮಾಡುತ್ತಿದ್ದರೆ, ಇಂದೇ ಅದನ್ನು ಬಿಟ್ಟುಬಿಡಿ. ಅನೇಕ ಮಂದಿ ಎದ್ದ ಕೂಡಲೇ ಮೊಬೈಲ್‌ ನೋಡುತ್ತಾರೆ ಹಾಗೂ ಗಂಟೆಗಟ್ಟಲೆ ಮೊಬೈಲ್‌

ಬೆಳಗ್ಗಿನ ಸಮಯ ಈ ಅಭ್ಯಾಸಗಳನ್ನು ಬಿಟ್ಟುಬಿಡಿ… Read More »

ಆರೋಗ್ಯ ಮಾಹಿತಿ

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು

(ನ್ಯೂಸ್‌ ಕಡಬ) newskadaba.com, ಆ.21:‌‌ ಹಿಂದೂ–ಮುಸ್ಲಿಮರ ಮಧ್ಯೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ದ ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆ.3ರಂದು ಅನ್ಯಕೋಮಿನ ಯುವಕನಿಂದ ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕನ ಕೊಲೆ ಆಗಿತ್ತು. ಆ.10ರಂದು ಸಂತ್ರಸ್ತ ಕುಟುಂಬದವರಿಗೆ ಸಾಂತ್ವಾನ ಹೇಳಲು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು Read More »

ಕರ್ನಾಟಕ

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ

(ನ್ಯೂಸ್‌ ಕಡಬ) newskadaba.com, ಆ.21:‌‌ ಇಂದಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ. ಆದರೆ. ಆ.27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ Read More »

ಕರ್ನಾಟಕ

ಮುಂಬೈಯಲ್ಲಿ ವರುಣನ ಆರ್ಭಟ: ವಿಮಾನ ಹಾರಾಟದಲ್ಲಿ ವ್ಯತ್ಯಯ

(ನ್ಯೂಸ್‌ ಕಡಬ) newskadaba.com, ಆ.19: ಮುಂಬೈಯಲ್ಲಿ ವರ್ಷಾಧಾರೆಯಾಗುತ್ತಿದ್ದು, ತಗ್ಗುಪ್ರದೇಶಗಳು ಹಾಗೂ ರಸ್ತೆಗಳು ಜಲಾವೃತಗೊಂಡಿವೆ. ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವಾರು ಪ್ರದೇಶಗಳಲ್ಲಿ 200 ಮೀ.ಮೀ.ಗಿಂತಲೂ ಅಧಿಕ ಮಳೆಯಾಗಿದೆ. ಪೂರ್ವ ಉಪನಗರದ ಮಿಕ್ರೋಲಿಯಲ್ಲಿ ಅತೀ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬೈಯಲ್ಲಿ ಭಾರೀ ಮಳೆಯ ಪರಿಣಾಮ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಇಂಡಿಗೊ ಪ್ರಯಾಣಿಕರಿಗೆ ಸೂಚನೆ ನೀಡಿದೆ. ಮುಂಬೈಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗಗಳಲ್ಲಿ ನೀರು ತುಂಬಿಕೊಂಡಿರುವುದರಿಂದ

ಮುಂಬೈಯಲ್ಲಿ ವರುಣನ ಆರ್ಭಟ: ವಿಮಾನ ಹಾರಾಟದಲ್ಲಿ ವ್ಯತ್ಯಯ Read More »

ರಾಷ್ಟ್ರೀಯ ನ್ಯೂಸ್
Scroll to Top