Ashitha Soodlu

ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com  ನ. 21: ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಗದಗದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಕಳೆದ ದಿನ ರಾತ್ರಿ ಅಪಘಾತಕ್ಕೀಡಾಗಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಗಳನ್ನು ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಎಂದು ಗುರುತಿಸಲಾಗಿದೆ.     ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದು, ಹುಬ್ಬಳ್ಳಿ ತಾಲ್ಲೂಕಿನ […]

ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ನ. 23ರಂದು ಮುಲ್ಕಿ ತಾಲೂಕು ಘೋಷಣೆ ಸಾಧ್ಯತೆ ➤ ಶಾಸಕ ಉಮಾನಾಥ್ ಕೋಟ್ಯಾನ್

(ನ್ಯೂಸ್ ಕಡಬ) newskadaba.com ಮುಲ್ಕಿ  ನ. 21: ಮುಲ್ಕಿ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮುಲ್ಕಿ ತಾಲೂಕು ನ.23 ರಂದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.   ಈಗಾಗಲೇ ಮುಲ್ಕಿ ತಾಲೂಕು ರಚನೆ ಪ್ರಕ್ರಿಯೆ ಮುಗಿದಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಮುಲ್ಕಿ ತಾಲೂಕು ರಚನೆಗೆ 30 ಗ್ರಾಮಗಳು ಸೇರಲಿದ್ದು, ಜಿಲ್ಲಾಧಿಕಾರಿಗಳು ಅಧಿಕೃತ ಘೋಷಣೆ ಮಾಡಲಿದ್ದಾರೆ. ಬಳಿಕ ಮುಲ್ಕಿಯಲ್ಲಿ ತಾಲೂಕು ಮಟ್ಟದ ಎಲ್ಲಾ ಕಚೇರಿಗಳು ಆರಂಭಗೊಳ್ಳಲಿದೆ ಎಂದಿದ್ದಾರೆ.

ನ. 23ರಂದು ಮುಲ್ಕಿ ತಾಲೂಕು ಘೋಷಣೆ ಸಾಧ್ಯತೆ ➤ ಶಾಸಕ ಉಮಾನಾಥ್ ಕೋಟ್ಯಾನ್ Read More »

ಕರಾವಳಿ

ಕಮಿಲ: ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ನಾಗರಿಕರು

(ನ್ಯೂಸ್ ಕಡಬ) newskadaba.com ಕಮಿಲ ನ. 21: ಕಳೆದ ದಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ವಿದ್ಯುತ್ ಲೈನ್ ಮೇಲೆ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳನ್ನು ಮೆಸ್ಕಾಂ ಸಿಬ್ಬಂದಿಗಳ ಸಹಯೋಗದೊಂದಿಗೆ ತೆರವು ಗೊಳಿಸಲಾಯಿತು.     ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಸ್ಥಳೀಯ ಯುವಕರಾದ ನಿರಂಜನ ಕಾಂತಿಲ, ಪುನೀತ್ ಕಮಿಲ, ಭರತ್ ಕಾಂತಿಲ, ಧರ್ಮಪಾಲ ಕಮಿಲ, ಶಿವಕುಮಾರ್ ಕಮಿಲ, ಚನಿಯ ಕಮಿಲ, ಸುಂದರ ಬರೆಪ್ಪಾಡಿ, ದಿನೇಶ್ ಕಮಿಲ, ಪ್ರದೀಪ್ ಕಮಿಲ, ಶಿವಕುಮಾರ್ ಕಮಿಲ, ರಘುವೀರ್ ಮೊಗ್ರ, ಹರ್ಷಿತ್ ಕಾಂತಿಲ ಹಾಗೂ

ಕಮಿಲ: ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ನಾಗರಿಕರು Read More »

ಕರಾವಳಿ

ಪ್ರಧಾನಮಂತ್ರಿ “ವನ್ ಧನ್” ಯೋಜನೆಗೆ ಅನುದಾನ ➤ ಬ್ರ್ಯಾಂಡ್ ಆಗಲಿವೆ ಕಾಡಿನ ಉತ್ಪನ್ನಗಳು

(ನ್ಯೂಸ್ ಕಡಬ) newskadaba.com ಮಂಗಳೂರು ನ. 21: ಪವಿತ್ರ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ ಹಾಗೂ ದೇಶದ ವಿವಿಧ ಭಾಗದಿಂದ ಭಕ್ತಾಧಿಗಳು ಬರುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಡುತ್ಪನ್ನಗಳನ್ನು ಇಲ್ಲಿ, ದಕ್ಷಿಣಕನ್ನಡ ಜಿಲ್ಲೆಯ ಬ್ರಾಂಡ್ ಆಗಿ ಪರಿಚಯಿಸುವ ಪ್ರಯತ್ನ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ.   ಈ ಯೋಜನೆಗೆ ಪ್ರಧಾನಮಂತ್ರಿ ವನ್ ಧನ್ ಯೋಜನೆ ಮೂಲಕ 30 ಲಕ್ಷ ರೂಪಾಯಿಗಳ ಅನುದಾನ ಸಿಗುತ್ತಿದೆ. ಜಿಲ್ಲೆಯ ಎರಡು ಕಡೆಗಳಲ್ಲಿ ಈ

ಪ್ರಧಾನಮಂತ್ರಿ “ವನ್ ಧನ್” ಯೋಜನೆಗೆ ಅನುದಾನ ➤ ಬ್ರ್ಯಾಂಡ್ ಆಗಲಿವೆ ಕಾಡಿನ ಉತ್ಪನ್ನಗಳು Read More »

ಕರಾವಳಿ

ಉಡುಪಿ: ಯುವಕರ ಜೊತೆ ಕ್ರಿಕೆಟ್ ಆಡಿದ ಜಿಲ್ಲಾಧಿಕಾರಿ ಜಿ.ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಜನಸ್ನೇಹಿ ಡಿ.ಸಿ. ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಜಿ. ಜಗದೀಶ್ ನಿನ್ನೆ ಸ್ಥಳೀಯ ಯುವಕರ ಜೊತೆ ಕ್ರಿಕೆಟ್ ಆಡುವ ಮೂಲಕ ಯುವಕರನ್ನು ಖುಷಿ ಪಡಿಸಿದ್ದಾರೆ.   ಜಿಲ್ಲಾಸ್ಪತ್ರೆಯ ವೀಕ್ಷಣೆ ಸಂದರ್ಭ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಅಲ್ಲಿಗೆ ತೆರಳಿದ ಜಿಲ್ಲಾಧಿಕಾರಿ ಜಗದೀಶ್ ಯುವಕರ ಜೊತೆ ಕ್ರಿಕೆಟ್ ಆಡಿದ್ದಾರೆ. ಬ್ಯಾಟಿಂಗ್ ಮಾಡಿ ಬೌಂಡರಿ ಬಾರಿಸುವ ಮೂಲಕ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ ಮತ್ತು ಕ್ರಿಕೆಟ್

ಉಡುಪಿ: ಯುವಕರ ಜೊತೆ ಕ್ರಿಕೆಟ್ ಆಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ Read More »

ಕರಾವಳಿ

ಡಿಸಂಬರ್ 5ಕ್ಕೆ ‘ಕರ್ನಾಟಕ ಬಂದ್’ ಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 20: ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ನಿರ್ಧಾರ ಕೈಗೊಂಡಿವೆ.     ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ಬಂದ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದು, ಸಭೆಯಲ್ಲಿ ಡಿಸೆಂಬರ್ 5ರಂದು ಕರ್ನಾಟಕ್ ಬಂದ್ ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಮರಾಠ

ಡಿಸಂಬರ್ 5ಕ್ಕೆ ‘ಕರ್ನಾಟಕ ಬಂದ್’ ಗೆ ನಿರ್ಧಾರ Read More »

ಕರ್ನಾಟಕ

ಉಡುಪಿ :ಅಂಗಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಉಡುಪಿಯ ಶಿರ್ವ ಬಳಿಯ ಮುಖ್ಯ ರಸ್ತೆಯ ಸೈಕಲ್ ಅಂಗಡಿಯ ಮುಂಭಾಗವೇ ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.   ವಿವರೀತ ಕುಡಿತದ ಚಟ ಹೊಂದಿರುವ ಮಟ್ಟಾರು ನಿವಾಸಿ ಅಕ್ಷಯ್ ಪೂಜಾರಿ(35) ಗುರುವಾರ ರಾತ್ರಿ ವೇಳೆ ಆತ್ಮಹತ್ಯೆಗೆ ಗೆ ಶರಣಾದ ವ್ಯಕ್ತಿ. ಈ ಕುರಿತು ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ.  ಇನ್ನು ಈತನ ಆತ್ಮಹತ್ಯೆ ಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.    

ಉಡುಪಿ :ಅಂಗಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾದ ಯುವಕ Read More »

ಕರಾವಳಿ

ಸ್ಕಾಲರ್ಶಿಪ್ ಅವ್ಯವಸ್ಥೆ ವಿರುದ್ಧ “ಸ್ಕಾಲರ್ಶಿಪ್ ಕೊಡಿ” ಆಂದೋಲನ ➤ ಕ್ಯಾಂಪಸ್ ಫ್ರಂಟ್ ನಿಂದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಸ್ಕಾಲರ್ಶಿಪ್ ಮಂಜೂರಾತಿ ವಿಳಂಬ ಮತ್ತು ಅವ್ಯವಸ್ಥೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪಿ.ಹೆಚ್.ಡಿ , ಎಂ.ಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ಸರಕಾರದ ಕ್ರಮದ ವಿರುದ್ಧ ಕ್ಯಾಂಪಸ್ ಫ್ರಂಟ್ ಹಮ್ಮಿಕೊಂಡ “ಸ್ಕಾಲರ್ಶಿಪ್ ಕೊಡಿ” ರಾಜ್ಯವ್ಯಾಪಿ ವಿದ್ಯಾರ್ಥಿ ಆಂದೋಲನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿಯು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು.   ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾ ಅಲ್ಪಸಂಖ್ಯಾತ ಕಚೇರಿಗೆ

ಸ್ಕಾಲರ್ಶಿಪ್ ಅವ್ಯವಸ್ಥೆ ವಿರುದ್ಧ “ಸ್ಕಾಲರ್ಶಿಪ್ ಕೊಡಿ” ಆಂದೋಲನ ➤ ಕ್ಯಾಂಪಸ್ ಫ್ರಂಟ್ ನಿಂದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ Read More »

ಕರಾವಳಿ

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

(ನ್ಯೂಸ್ ಕಡಬ) newskadaba.com ಹಾಸನ ನ. 20: ಹಾಸನ ಜಿಲ್ಲೆಯ ತಿಪಟೂರು ತಾಲೂಕಿನ ಬೆಳಗರಹಳ್ಳಿಯಲ್ಲಿ ಮದುವೆಗೆ ಹೆತ್ತವರ ವಿರೋಧ ಕಟ್ಟಿಕೊಂಡ ಪರಿಣಾಮ ಹೇಮಾವತಿ ನಾಲೆಗೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಪ್ರೇಮಿಗಳನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ(18) ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ.     ನ.16 ರಂದು ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಈ ಯುವ ಪ್ರೇಮಿಗಳ ಮೃತದೇಹ

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ಸೀಫುಡ್‌ ಪಾರ್ಕ್ ಯೋಜನೆ ಕೈ ಬಿಡದಿದ್ದಲ್ಲಿ ‘ಚಲೋ ಪುತ್ತೂರು ಅಭಿಯಾನ

(ನ್ಯೂಸ್ ಕಡಬ) newskadaba.com ಪುತ್ತೂರು ನ. 20: ಪುತ್ತೂರಿನ ಬನ್ನೂರಿನಲ್ಲಿ ಸೀ ಫುಡ್‌ ಪಾರ್ಕ್ ನಿರ್ಮಿಸಲು ಮುಂದಾಗಿದ್ದು, ಇದಕ್ಕಾಗಿ ಸರಕಾರಿ ಮೆಡಿಕಲ್‌ ಕಾಲೇಜಿಗೆ ಮೀಸಲಿಟ್ಟ ಜಾಗ ಬಳಸಿಕೊಳ್ಳಲು ಮುಂದಾಗಿರುವುದು ತಪ್ಪು. ಸೀ ಫುಡ್‌ ಪಾರ್ಕ್ ಮೂಲಕ ಜನರ ಆರೋಗ್ಯದ ಹಕ್ಕನ್ನು ಕಸಿಯುವ ಯತ್ನ ನಡೆಯುತ್ತಿದೆ. ಸರಕಾರ ಜಮೀನು ಹಸ್ತಾಂತರ ಪ್ರಕ್ರಿಯೆ ಕೈ ಬಿಡದಿದ್ದಲ್ಲಿ ಸಾವಿರಾರು ಜನರನ್ನು ಸೇರಿ ಪುತ್ತೂರು ಚಲೋ ಅಭಿಯಾನ ನಡೆಸಲಾಗುವುದು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಎಚ್ಚರಿಸಿದ್ದಾರೆ.ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮೀಸಲಿರಿಸಿದ ಸ್ಥಳದಲ್ಲಿ

ಪುತ್ತೂರು : ಸೀಫುಡ್‌ ಪಾರ್ಕ್ ಯೋಜನೆ ಕೈ ಬಿಡದಿದ್ದಲ್ಲಿ ‘ಚಲೋ ಪುತ್ತೂರು ಅಭಿಯಾನ Read More »

ಕರಾವಳಿ
Scroll to Top