Ashitha Soodlu

ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ: ಓರ್ವ ಯೋಧ ಹುತಾತ್ಮ

(ನ್ಯೂಸ್‌ ಕಡಬ) newskadaba.com, ಆ.18: ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸಕ್ಕೆ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಹುತಾತ್ಮ ಯೋಧರನ್ನು ದಿನೇಶ್‌ ನಾಗ್‌ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಯೋಧರಿಗೆ ಸ್ಥಳಕ್ಕೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಜಿಆರ್‌ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ನಕ್ಸಲರು ಸುಧಾರಿತ ಸ್ಪೋಟಕ(ಐಇಡಿ) ಸ್ಪೋಟಿಸಿದ ಪರಿಣಾಮ ಜಿಲ್ಲಾ ಮೀಸಲು ಪಡೆ(ಡಿಜಿಆರ್)ಯ ಯೋಧರೊಬ್ಬರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಭಾನುವಾರದಿಂದ ಕಾರ್ಯಾಚರಣೆ ಶುರುವಾಗಿತ್ತು, ಇಂದು […]

ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ: ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಶುಭಾಂಶು ಶುಕ್ಲಾ

(ನ್ಯೂಸ್‌ ಕಡಬ) newskadaba.com, ಆ.18: ಆಕ್ಸಿಯಂ-4 ಮಿಷನ್‌ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶುಭಾಂಶು ಶುಕ್ಲಾ ಅವರು, ಭೂಮಿಗೆ ಮರಳಿದ ನಂತರ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಮರಳಿದ್ದಾರೆ. ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಪ್ರಧಾನಿ ಮೋದಿ

ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಶುಭಾಂಶು ಶುಕ್ಲಾ Read More »

ರಾಷ್ಟ್ರೀಯ ನ್ಯೂಸ್

ʼದಿಯಾʼ ಚಿತ್ರದ ನಿರ್ಮಾಪಕ ಸೇರಿ ಮೂವರ ವಿರುದ್ದ FIR

(ನ್ಯೂಸ್‌ ಕಡಬ) newskadaba.com, ಆ.18: ದಿಯಾ ಸಿನಿಮಾದ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿದಂತೆ ಮೂವರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ. ವರ್ತೂರು ಬಳಿಯ ಜಮೀನು ಒಡೆತನದ ವಿಚಾರವಾಗಿ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಿನಾಪ್ಸೆ ಕನ್‌ಸ್ಟ್ರಕ್ಷನ್ಸ್ ಪ್ರೈವೇಟ್‌ ಲಿಮಿಟೆಡ್‌ನ ಕೃಷ್ಣ ಚೈತನ್ಯ‌, ಸಚಿನ್‌ ನಾರಾಯಣ್‌ ಮತ್ತು ಸಹಚರರು ಕಸವನಹಳ್ಳಿ ಗ್ರಾಮದ ಸರ್ವೆ ನಂ.52ರಲ್ಲಿನ 3 ಎಕರೆ 35 ಗುಂಟೆ ಜಮೀನಿಗೆ ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿಕೊಂಡು ಅತಿಕ್ರಮ ಪ್ರವೇಶಿಸಿದ್ದಾರೆ. ಆ ಜಮೀನು ನನಗೆ ಸೇರಿದ್ದು, ಕೃಷ್ಣ ಚೈತನ್ಯ ಹಾಗೂ ಸಹಚರು

ʼದಿಯಾʼ ಚಿತ್ರದ ನಿರ್ಮಾಪಕ ಸೇರಿ ಮೂವರ ವಿರುದ್ದ FIR Read More »

ಕರ್ನಾಟಕ

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಆ.18:‌‌ ಬೆಂಗಳೂರಿನ ಹೆಬ್ಬಾಳ ಭಾಗದ ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುತ್ತಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಗೊಳ್ಳಲಿದೆ. ಇಂದು ಬೆಳಗ್ಗೆ 10.30ರ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಮೇಲ್ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಕಳೆದ 20 ವರ್ಷಗಳಿಂದ ಬಿಡಿಎ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ ಕಾಮಗಾರಿ ನಡೆಸುತ್ತಾ ಇತ್ತು. ಇದೀಗ ಇದರ ಕಾಮಗಾರಿ ಪೂರ್ಣಗೊಂಡಿದೆ. ಉದ್ಘಾಟನೆಗೆ ಸಿದ್ದವಾಗಿದ್ದು, ಫ್ಲೈಓವರ್‌ನ್ನು ಹೂವಿನ ಹಾರ ಹಾಕಿ ಸಿಂಗಾರ ಮಾಡಲಾಗಿದೆ. ಈ ಫ್ಲೈ

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ Read More »

ಕರ್ನಾಟಕ

ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ: ತೀವ್ರ ಶೋಧ

(ನ್ಯೂಸ್‌ ಕಡಬ) newskadaba.com, ಆ.18:‌‌ ದ್ವಾರಕಾದ ದೆಹಲಿ ಪಬ್ಲಿಕ್‌ ಶಾಲೆ ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸ್‌ ತಂಡಗಳು ಹಾಗೂ ಬಾಂಬ್‌ ನಿಷ್ಕ್ರಿಯ ದಳಗಳು ಸ್ಥಳಗೆ ಧಾವಿಸಿದ್ದು, ಶೋಧ ನಡೆಸುತ್ತಿವೆ. ದ್ವಾರಕಾದ ಸೆಕ್ಟರ್-19‌ ಬಳಿಯ ಸೇಂಟ್‌ ಥಾಮಸ್‌ ಶಾಲೆ, ಸೆಕ್ಟರ್‌-18ರ ದೆಹಲಿ ಇಂಟರ್‌ನ್ಯಾಷನಲ್‌ ಸ್ಕೂಲ್‌ ಎಡ್ಜ್‌, ಸೆಂಟ್ರಲ್‌ ಅಕಾಡೆಮಿ ಸ್ಕೂಲ್‌, ಸೆಕ್ಟರ್-10ರ ದ್ವಾರಕಾದ ಜಿಡಿ ಗೋನೆಕಾ ಸ್ಕೂಲ್‌, ಸೆಕ್ಟರ್-19ರ ದ್ವಾರಕಾ ಹಾಗೂ

ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ: ತೀವ್ರ ಶೋಧ Read More »

ರಾಷ್ಟ್ರೀಯ ನ್ಯೂಸ್

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.18:‌‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪಗೊಂಡಿದೆ. ಈ ಪರಿಣಾಮ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಗದಗ, ಮೈಸೂರು, ಬೀದರ್‌, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಬೆಳಗಾವಿ,

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್

(ನ್ಯೂಸ್‌ ಕಡಬ) newskadaba.com, ಆ.17:‌ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆ ಸದನದಲ್ಲಿ ಉತ್ತರ ನೀಡುತ್ತೇನೆ ಎಂದು ಗೃಹಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಸಂಬಂಧ ಯಾರೂ ಕೂಡ ರಾಜಕೀಯ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ವಿಚಾರದ ಬಗ್ಗೆ ನಾವು ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಹೇಳಿದ್ದಾರೆ. ತನಿಖೆ ನಡೆಯುವ ವೇಳೆ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್ Read More »

ಕರ್ನಾಟಕ

ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.17:‌ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಬೈರಾಪುರ ಕ್ರಾಸ್‌ ಬಳಿ ನಡೆದಿದೆ. ಮಂಡ್ಯ ಮೂಲದ ಶ್ವೇತಾ(38), ಕನಕಪುರ ಮೂಲದ ಬಾಲನಾಯಕ(42) ಮೃತರು. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತರಿಬ್ಬರು ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದರು. ರಾಯರ ದರ್ಶನ ಮುಗಿಸಿ ಮಸ್ಕಿಯಿಂದ ಬೆಂಗಳೂರಿಗೆ ಸರ್ಕಾರಿ ಬಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿದ್ದು,

ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: ಇಬ್ಬರು ಸಾವು Read More »

ಕರ್ನಾಟಕ

ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌

(ನ್ಯೂಸ್‌ ಕಡಬ) newskadaba.com, ಆ.17:‌ ತರುಣ್ ಸುಧೀರ್‌ ನಿರ್ಮಾಣದ ಏಳುಮಲೆ ಸಿಸಿಮಾದ ಹಾಡುಗಳು ಹಾಗೂ ಟೈಟಲ್‌ ಟೀಸರ್‌ ಮೂಲಕ ಈಗಾಗಲೇ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ನಡುವೆ ಚಿತ್ರತಂಡ ಸಿಹಿಸುದ್ದಿ ನೀಡಿದೆ. ಏಳುಮಲೆ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಈ ಸಿನಿಮಾ ಸೆ.5ರಂದು ತೆರೆಕಾಣಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ‌ ಕರ್ನಾಟಕ–ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡ ಹುಡುಗ ಹರೀಶ್‌ ಪಾತ್ರದಲ್ಲಿ

ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ Read More »

ಸಿನಿಮಾ

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಆ.17:‌ ಬೆಂಗಳೂರಿನ ನಗರ್ತಪೇಟೆಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿದುರಂತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್‌, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಇಂದು ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದ್ದೇನೆ.

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ Read More »

ಕರ್ನಾಟಕ
Scroll to Top