Ashitha Soodlu

ಮಂಗಳೂರು :ಲಾಕ್ ಡೌನ್ ನಂತರ ಕಾಲೇಜು ಆರಂಭ ➤ ಹೆಚ್ಚಿನ ವಿದ್ಯಾರ್ಥಿಗಳು ಗೈರು

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳು ಇಂದು ಆರಂಭಗೊಂಡಿದೆ. ಕೊರೊನಾ ಲಾಕ್ ಡೌನ್ ನ 8 ತಿಂಗಳ ನಂತರ ಕಾಲೇಜು ಬಾಗಿಲು ತೆರೆದಿದ್ದು, ವಿದ್ಯಾರ್ಥಿಗಳು ಕೋವಿಡ್ ಪ್ರಮಾಣ ಪತ್ರ ಹಾಗೂ ಪೋಷಕರ ಮುಚ್ಚಳಿಕೆ ಪತ್ರದ ಜೊತೆಗೆ ಆಗಮಿಸಿದ್ದಾರೆ. ಇನ್ನೂ ಹಲವು ವಿದ್ಯಾರ್ಥಿಗಳಿಗೆ ಕೋವಿಡ್ ಪ್ರಮಾಣ ಪತ್ರ ಸಿಗದ ಹಿನ್ನೆಲೆಯಲ್ಲಿ ತರಗತಿಗೆ ಹಾಜರಾಗಲು ಸಾಧ್ಯವಾಗಿಲ್ಲ. ನೆಗೆಟಿವ್ ವರದಿ ಜೊತೆ ಹಾಜರಾದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ತರಗತಿಗೆ ಹಾಜರಾಗಿದ್ದಾರೆ. […]

ಮಂಗಳೂರು :ಲಾಕ್ ಡೌನ್ ನಂತರ ಕಾಲೇಜು ಆರಂಭ ➤ ಹೆಚ್ಚಿನ ವಿದ್ಯಾರ್ಥಿಗಳು ಗೈರು Read More »

ಕರಾವಳಿ

ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ- ನ. 20 ರಿಂದ ನೇಮಕಾತಿಗೆ ಸೂಚನೆ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಪಿಯು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20 ರಿಂದ ನೇಮಕಾತಿ ಆದೇಶಗಳನ್ನ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.   ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ನವೆಂಬರ್ 20ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಸಾಂಕೇತಿಕವಾಗಿ ನೇಮಕಾತಿ ಆದೇಶವನ್ನು ನೀಡಲಿದ್ದಾರೆ. ಇನ್ನು 23ರಿಂದ

ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ- ನ. 20 ರಿಂದ ನೇಮಕಾತಿಗೆ ಸೂಚನೆ ➤ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಮುಲ್ಕಿಯಲ್ಲಿ ಶೆಡ್ ಗೆ ಸಿಡಿಲು ಬಡಿದು ಹಾನಿ ➤ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಮುಲ್ಕಿ ನ. 17 :ಮುಲ್ಕಿ ಹೋಬಳಿಯಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು ವಿದ್ಯುತ್ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಮುಲ್ಕಿ ಹೋಬಳಿಯ ಕಿನ್ನಿಗೋಳಿ-ಹಳೆಯಂಗಡಿ ಪಕ್ಷಿಕೆರೆ ಕಟೀಲು ಪರಿಸರದಲ್ಲಿ ಭಾರಿ ಮಳೆಯಾಗಿದೆ. ಬಿರು ಮಳೆ, ಸಿಡಿಲಿಗೆ ಸೋಮವಾರ ರಾತ್ರಿ 11.30ಕ್ಕೆ ಕಿನ್ನಿಗೋಳಿ ಬಳಿಯ ಮೂರುಕಾವೇರಿ ಜಂಕ್ಷನ್ ಸಮೀಪ ಲಿಯೋ ಮಾರ್ಸೆಲ್ ಪಿಂಟೋ ಎಂಬವರ ಮನೆ ಬಳಿಯ ಶೆಡ್ ಗೆ ಆಕಸ್ಮಿಕ ಬೆಂಕಿ ತಗುಲಿ ಒಳಗಿದ್ದ ಬೈಹುಲ್ಲು, ಮರಮಟ್ಟು, ತೆಂಗಿನಕಾಯಿ, ಸಿಂಟೆಕ್ಸ್ ಟ್ಯಾಂಕ್

ಮುಲ್ಕಿಯಲ್ಲಿ ಶೆಡ್ ಗೆ ಸಿಡಿಲು ಬಡಿದು ಹಾನಿ ➤ ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಆನೆದಂತ ಮಾರಾಟ ಮಾಡಲೆತ್ನಿಸುತ್ತಿದ್ದ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಆನೆ ದಂತ ಮಾರಾಟ ಮಾಡಲೆತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಆರೋಪಿಗಳನ್ನು ಚಿತ್ತೂರು ಜಿಲ್ಲೆಯ ಗುಟ್ಟುಪಾಳ್ಯಂ ನಿವಾಸಿ ಲೋಕೇಶ್‌, ಮದನಪಲ್ಲಿಯ ಪೂಲಾಕುಟ್ಲಪುರ ನಿವಾಸಿ ಮಂಜುನಾಥ್‌ ಎನ್, ಶ್ರೀಹರಿಪುರ ನಿವಾಸಿ ಗೋಪಿ ಎಂದು ಗುರುತಿಸಲಾಗಿದೆ.  ಆರೋಪಿಗಳು ಸೋಮವಾರ ಮಧ್ಯಾಹ್ನ ಹೆಬ್ಬಾಳದ ಗುಡ್ಡದಹಳ್ಳಿ ಟೆಂಪೋ ನಿಲ್ದಾಣ ಬಳಿ ಆನೆ ದಂತ ಮಾರಲು ಯತ್ನಿಸಿದ್ದ ವೇಳೆ ಖಚಿತ ಮಾಹಿತಿ ಪಡೆದ ಹೆಬ್ಬಾಳ ಪೊಲೀಸರು ದಾಳಿ ನಡೆಸಿ ಮೂವರು

ಆನೆದಂತ ಮಾರಾಟ ಮಾಡಲೆತ್ನಿಸುತ್ತಿದ್ದ ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು- ಕಾಸರಗೋಡು ನಡುವೆ ಬಸ್ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಂಗಳೂರು: ಕೋವಿಡ್ ಕಾರಣದಿಂದಾಗಿ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕಾಸರಗೋಡು ಬಸ್ ಸಂಚಾರ ಸೋಮವಾರದಿಂದ ಮತ್ತೆ ಆರಂಭಗೊಂಡಿದೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಒಟ್ಟು 24 ಕರ್ನಾಟಕ ರಸ್ತೆ ಸಾರಿಗೆ ಬಸ್ಸುಗಳು ಓಡಾಟ ಅರಂಭಿಸಿದೆ.   ಈ ಹಿಂದೆ ಕರ್ನಾಟಕದಿಂದ ಕಾಸರಗೋಡಿಗೆ ಬಸ್ ಸಂಚಾರಿಸಲು ಯಾವುದೇ ನಿರ್ಬಂಧವಿಲ್ಲದ್ದಿದ್ದರೂ ಕೋವಿಡ್ ಸಂದರ್ಭದಲ್ಲಿ ಕೇರಳ ಸರಕಾರ ಅನುಮತಿ ನಿರಾಕರಿಸಿತ್ತು. ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿತ್ತು.ಇದೀಗ ಕೇರಳ ಸರಕಾರ ನಿರ್ಬಂಧ ತೆರವುಗೊಳಿಸಿದ

ಮಂಗಳೂರು- ಕಾಸರಗೋಡು ನಡುವೆ ಬಸ್ ಸಂಚಾರ ಆರಂಭ Read More »

ಕರ್ನಾಟಕ

ಕರ್ನಾಟಕದ “ಈ” ಸ್ಥಳದಲ್ಲಿ ತಲೆ ಎತ್ತಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಭವ್ಯ ಮೂರ್ತಿ

(ನ್ಯೂಸ್ ಕಡಬ) newskadaba.com ಹಂಪಿ ನ. 17: ಅಯೋಧ್ಯೆಯಲ್ಲಿ ಅಸಂಖ್ಯಾತ ಭಕ್ತರ ಕನಸಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಈಗ ಅದರ ಬೆನ್ನಲ್ಲೇ ರಾಮಭಕ್ತ, ರಾಮಬಂಟನಾದ ವಾಯು ಪುತ್ರ, ಅಂಜನೀ ಸುತ, ಕೇಸರಿ ನಂದನ ಶ್ರೀ ಹನುಮಂತನ ವಿಶ್ವದ ಅತಿ ಎತ್ತರದ ಮೂರ್ತಿಯನ್ನು ಸ್ಥಾಪನೆ ಮಾಡುವ ಕಾರ್ಯಕ್ಕೆ ಕೂಡಾ ಚಾಲನೆ ನೀಡಲಾಗಿದೆ. ಈ ಭವ್ಯ ಮೂರ್ತಿಯನ್ನು ಕರ್ನಾಟಕದ ಹಂಪಿ ಯಲ್ಲಿ ಪ್ರತಿಷ್ಠಾಪನೆ ಮಾಡಲು ಸಜ್ಜಾಗಿದ್ದು ಇದೊಂದು ಸಂತಸದ ಸುದ್ದಿಯಾಗಿದೆ.   ಹನುಮ ಭಕ್ತರಿಗೆ ಈ ಸುದ್ದಿ

ಕರ್ನಾಟಕದ “ಈ” ಸ್ಥಳದಲ್ಲಿ ತಲೆ ಎತ್ತಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಭವ್ಯ ಮೂರ್ತಿ Read More »

ಕರ್ನಾಟಕ

ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಾದಕ ದ್ರವ್ಯ ಜಾಳದ ನಂಟಿನ ಆರೋಪದ ಹಿನ್ನಲೆಯಲ್ಲಿ ಖ್ಯಾತ ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.   ಈ ಹಿಂದೆ ಅವರನನ್ನು ವರ್ಗಾವಣೆ ಮಾಡಿದ್ದಾಗ ವಿವಾದ ಸೃಷ್ಟಿಯಾಗಿತ್ತು. ಬಳಿಕ ಅದನ್ನು ರದ್ದು ಪಡಿಸಲಾಗಿತ್ತು. ಕಾಪು ಠಾಣೆಯ ಇನ್ಸ್‍ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಸಿಸಿಬಿಯ ನೂತನ ಇನ್ಸ್‍ಪೆಕ್ಟರ್ ಆಗಿ ನಿಯೋಜಿಸಲಾಗಿದೆ. ಸಿಸಿಬಿ ಇನ್ಸ್‍ಪೆಕ್ಟರ್ ಕಬ್ಬಾಳ ರಾಜ್ ರವರನ್ನು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಲಾಘಿದೆ ಎಂದು ಮೂಲಗಳು

ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ವರ್ಗಾವಣೆ Read More »

ಕರಾವಳಿ

ಮಂಗಳೂರು: ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17:  ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯಂಡ್ ಇಂಜಿನಿಯರಿಂಗ್ (ಮೈಟ್) ಮೂಡುಬಿದಿರೆಯ ಮಂಗಳೂರು ಕಾಲೇಜಿನ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.     ಇದನ್ನು ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿ, ಬೆಂಗಳೂರು ಇವರು ಭರತನಾಟ್ಯ, ಜಾನಪದ ನೃತ್ಯ, ಸಂಗೀತ, ಯಕ್ಷಗಾನ ಮತ್ತು ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುತ್ತದೆ

ಮಂಗಳೂರು: ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 17:  ಮೂವರು ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟ ಬಾಲಕನನ್ನು ಚೆಮ್ನಾಡ್ ಕೊಂಬನಡ್ಕದ ಮಿಸ್ಭಾಹ್ (15) ಎಂದು ಗುರುತಿಸಲಾಗಿದೆ.     ಮಿಸ್ಭಾಹ್ ಚೆಮ್ನಾಡ್ ಜಮಾ ಅತ್ ಹಯರ್ ಸೆಕಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಮೂವರು ಸ್ನೇಹಿತರ ಜೊತೆ ಚಂದ್ರಗಿರಿ ಹೊಳೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದನು. ಸ್ಥಳೀಯರು, ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ಕಾರ್ಯಚರಣೆ ನಡೆಸಿದರೂ ಪತ್ತೆಹಚ್ಚಲಾಗಲಿಲ್ಲ. ಬಳಿಕ ಇಂದು ಸ್ಥಳೀಯರು

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಶಾಸಕ ಎಂ.ಸಿ. ಕಮರುದ್ದೀನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 17. ಚಿನ್ನ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎಂ.ಸಿ. ಕಮರುದ್ದೀನ್ ರನ್ನು ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಅಧಿಕಗೊಂಡಿದ್ದು ಅಲ್ಲದೇ ಮಧುಮೇಹ ಪ್ರಮಾಣವು ಹೆಚ್ಚಾಗಿದ್ದು, ಚಿಕಿತ್ಸೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡು: ಶಾಸಕ ಎಂ.ಸಿ. ಕಮರುದ್ದೀನ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top