news kadaba desk

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.06. ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ಅಪರಚಿತ ವ್ಯಕ್ತಿಯೋರ್ವ ನುಗ್ಗಿದ ಘಟನೆ ವರದಿಯಾಗಿದೆ. ಕಾವಲುಗಾರ ನನ್ನು ಕಂಡು ಈತ ಪರಾರಿಯಾಗಿದ್ದಾನೆ. ನ್ಯಾಯಾಲಯ ಕಟ್ಟಡದೊಳಗೆ ನುಗ್ಗಿದ ಈತ ಜಿಲ್ಲಾ ನ್ಯಾಯಾಧೀಶ ರವರ ಕಚೇರಿ ತನಕ ತೆರಳಿದ್ದು , ಈತನ ಬಳಿ ಕಬ್ಬಿಣದ ರಾಡ್ ಕಂಡು ಬಂದಿದೆ. ಈತ ಕಳವಿಗಾಗಿ ಬಂದಿದ್ದನೇ ಅಥವಾ ಕಡತಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಒಳನುಗ್ಗಿದ್ದನೇ ಎಂಬ ಬಗ್ಗೆ ಸ್ಪಷ್ಟ ಗೊಂಡಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ.  

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳಾದ ಮಂಜುನಾಥ ಮರಬದ ಹಾಗೂ ಕಸ್ತೂರಿ ಕುಕನೂರು ರವರ ಮಾರ್ಗದರ್ಶನದಂತೆ ಠಾಣೆಯ ಸಿಬ್ಬಂದಿಗಳಾದ ಗುರುರಾಜ್ ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿಯವರು ಆರೋಪಿಯನ್ನು ಬಂಧಿಸಿದ್ದಾರೆ. ಕಾಫಿ ಒಂದರಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಸ್ಕೂಟರ್ ಸವಾರರು ಗಂಭೀರ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ನಿಂತಿದ್ದ ಬಸ್‌ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹಳೆ ತಾಲೂಕು ಕಛೇರಿ ಕಿನ್ನಿಮುಲ್ಕಿ ರಸ್ತೆಯಲ್ಲಿ ಘಟನೆ ನಡೆದಿದ್ದು ಸ್ಕೂಟರ್ ಸವಾರರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಬಸ್‌ ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಕೂಟರ್ ಸವಾರ ಮತ್ತು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಸ್ಕೂಟರ್ ಸವಾರರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವೇಗದ ಮಿತಿ ನಿಗದಿಪಡಿಸಿದ ಎನ್ಎಚ್ಐ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕರಾವಳಿ ಭಾಗದಲ್ಲಿ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭೂ ಕುಸಿತದಿಂದಾಗಿ ಹಾನಿಯಾಗಿರುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹೊಸದಾಗಿ ವೇಗದ ಮಿತಿ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಸುರತ್ಕಲ್ ಮತ್ತು ತೊಕ್ಕೊಟ್ಟು ನಡುವಿನ ರಾಷ್ಟ್ರೀಯ ಹೆದ್ದಾರಿ-66 ಮಾರ್ಗದಲ್ಲಿ ಹಾಗೂ ಬಿಸಿ ರೋಡ್ ಮತ್ತು ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ-73 ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಗಂಟೆಗೆ 40 ಕಿಮೀ ವೇಗದ ಮಿತಿಯನ್ನು ಹೇರಲಾಗಿದೆ ಎಂದು ರಾಷ್ಟ್ರೀಯ

ಮಂಗಳೂರು: ವೇಗದ ಮಿತಿ ನಿಗದಿಪಡಿಸಿದ ಎನ್ಎಚ್ಐ Read More »

ಕರಾವಳಿ

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಮೊಬೈಲ್‌ ನಲ್ಲಿ ಪಬ್‌ಜಿ ಆನ್‌ ಲೈನ್ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿದ್ದ ಯುವತಿಯನ್ನು ಕೆಲಿಸ್ತಾ ಫೆರಾವೊ (18)ಎಂದು ಗುರುತಿಸಲಾಗಿದ್ದು, ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ ಗೆ ಸೇರ್ಪಡೆಗೊಂಡಿದ್ದರು. ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ Read More »

ಕರಾವಳಿ

ಲೋಕಸಭಾ ಚುನಾವಣೆಗೆ ಅಪಕೀರ್ತಿ ತರಲು ಸುಳ್ಳು ಪ್ರಚಾರ                     ಚುನಾವಣಾ ಆಯೋಗ                      

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೆ ಅಪಕೀರ್ತಿ ಮೂಡಿಸುವುದಕ್ಕೆ ಸುಳ್ಳು ಪ್ರಚಾರ ನಡೆದಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಸಿಟಿಜನ್ಸ್ ಪ್ಲಾಟ್ ಫಾರ್ಮ್ ವಿಶ್ಲೇಷಣೆಯನ್ನು ತಿರಸ್ಕರಿಸಿರುವ ಚುನಾವಣಾ ಆಯೋಗ ಇದು ಸುಳ್ಳು ಪ್ರಚಾರ ಎಂದು ಹೇಳಿದೆ. ಲೋಕಸಭಾ ಚುನಾವಣೆಯ ವೇಳೆಯಲ್ಲಿ ಆರಂಭದಲ್ಲಿ ಘೋಷಿಸಿದ್ದ ಮತದಾನದ ಪ್ರಮಾಣಕ್ಕೂ ಅಂತಿಮವಾಗಿ ಘೋಷಣೆ ಮಾಡಿದ್ದ ಮತದಾನದ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂದು ಸಿಟಿಜನ್ಸ್ ಪ್ಲಾಟ್ ಫಾರ್ಮ್ ವಿಶ್ಲೇಷಿಸಿತ್ತು.    

ಲೋಕಸಭಾ ಚುನಾವಣೆಗೆ ಅಪಕೀರ್ತಿ ತರಲು ಸುಳ್ಳು ಪ್ರಚಾರ                     ಚುನಾವಣಾ ಆಯೋಗ                       Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                     Read More »

ಕರ್ನಾಟಕ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ. ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT Read More »

ಕರ್ನಾಟಕ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com. ಕಡಬ, ಆ. 05. ಪಕ್ಷಕ್ಕೆ ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್, ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಸದಸ್ಯತ್ವ ನೋಂದಾವಣಿ ಹಾಗೂ ಪಕ್ಷದ ಆಂತರಿಕ ಚುನಾವಣೆಯನ್ನು ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಅದರಂತೆ ಈ ಬಾರೀ ಸುಳ್ಯ ಕ್ಷೇತ್ರದಿಂದ ಪ್ರಬಲ ಪೈಪೋಟಿಯಾಗಿ ಶಿಹಾಬುದ್ದೀನ್ ರವರು ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆ. 03ರಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಸಿಯಾಬುದ್ದೀನ್ ಅವರು ಪಕ್ಷದ ನಾಯಕರೊಂದಿಗೆ ಒಳ್ಳೆಯ ಸಂಬಂಧ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ Read More »

ಕರಾವಳಿ

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿ ಮಾಡಿ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top