news kadaba desk

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 12 ಮಂದಿ ಕ್ರೀಡಾ ಪಟುಗಳಿಗೆ ಅವಕಾಶ ಪತ್ರ (ಆಫರ್ ಲೆಟರ್) ವಿತರಿಸಿದರು.

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ      ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು              

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಸಿಎಂ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ. ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.  

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ      ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು               Read More »

ಕರ್ನಾಟಕ

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ               

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು. ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಸಂಜೆ 6 ಕ್ಕೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಾದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ,

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ ಭಾರಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಶಿಮ್ಲಾ, ಆ.05. ಉತ್ತರಾಖಂಡ ಬೆನ್ನಲ್ಲೇ ಇದೀಗ ಹಿಮಾಚಲ ಪ್ರದೇಶದಲ್ಲೂ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆ ಮತ್ತು ಭೀಕರ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಶಿಮ್ಲಾದ ರಾಂಪುರ ಬಳಿಯ ಪ್ರವಾಹ ಪೀಡಿತ ಸಮೇಜ್ ಗ್ರಾಮದಲ್ಲಿ ಪ್ರಸ್ತುತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಮೇಘಸ್ಫೋಟದ ಬಳಿಕ ಸುರಿದ ಭಾರಿಮಳೆಯಿಂದಾಗಿ ಪ್ರವಾಹ ಏರ್ಪಟ್ಟಿದ್ದು, ಇಲ್ಲಿನ ಸಮೇಜ್ ಗ್ರಾಮ ಸೇರಿದಂತೆ ಹಲವು ಗಿರಿಧಾಮಗಳು ಮುಳುಗಡೆಯಾಗಿವೆ.

ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ ಭಾರಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.05. ದೇವಸ್ಥಾನದ ಅರ್ಚಕರೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವ್ಯಕ್ತಿಯನ್ನು ಚೆನ್ನೈತ್ತೋಡಿ ಗ್ರಾಮದ ದೊಡ್ಡದಳಿಕೆ ನಿವಾಸಿ ಹರೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಕೇಶವ ಪೂಜಾರಿ ಅವರು ಹರೀಶ್ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಹರೀಶ್ ಮೇ 30 ರಂದು ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ವಾಪಸ್ ಬಂದಿಲ್ಲ ಎಂದು ತಿಳಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ          

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಆರೋಪಿಗೆ ಒಟ್ಟು 37 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಆರೋಪಿಯನ್ನು, ಕೋಟ ನಿವಾಸಿ ಸಚಿನ್ ಪೂಜಾರಿ (26)ಎಂದು ಗುರುತಿಸಲಾಗಿದೆ. 42 ಸಾಕ್ಷಿಗಳ ಪೈಕಿ 24 ಮಂದಿಯನ್ನು ವಿಚಾರಣೆಗೊಳಪಡಿಸಿ, 50 ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ವಶಪಡಿಸಿಕೊಂಡ ಆಭರಣ ಸೇರಿದಂತೆ ಸಂತ್ರಸ್ತೆಯ ಸಾಕ್ಷ್ಯ ಮತ್ತು ಇತರ

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ           Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.05. ಬೆಂಗಳೂರು – ಮಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್‌ ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯವು ಅಂತಿಮ ಹಂತ ತಲುಪಿದೆ. ಘಟನಾ ಸ್ಥಳದಲ್ಲಿ ರೈಲು ಇಂಜಿನ್ ನ ಪ್ರಾಯೋಗಿಕ ಸಂಚಾರ ಯಶಸ್ವಿ ಕಂಡಿದೆ. ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದಾಗಿನಿಂದ ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದೆ. ಜುಲೈ 3ರಂದು ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಗೋಡೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಆದಷ್ಟು ಬೇಗನೆ ರೈಲು

ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ Read More »

ಕರಾವಳಿ

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ            

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.05. ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು ಎನ್ನಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ             Read More »

ರಾಷ್ಟ್ರೀಯ ನ್ಯೂಸ್

ಮಾನವೀಯತೆ ಮೆರೆದ ಕರಾವಳಿ ಚಾಲಕ ಮತ್ತು ನಿರ್ವಾಹಕ…!                 ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ                         

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಅಸ್ವಸ್ಥಗೊಂಡ ಯುವತಿಗಾಗಿ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ ನಲ್ಲಿ ಈ ಘಟನೆ ನಡೆದಿದ್ದು, ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣವೇ ಬಸ್ ಅನ್ನು ಹತ್ತಿರದ ಖಾಸಗಿ ಆಸ್ಪತ್ರೆಯ

ಮಾನವೀಯತೆ ಮೆರೆದ ಕರಾವಳಿ ಚಾಲಕ ಮತ್ತು ನಿರ್ವಾಹಕ…!                 ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ                          Read More »

ಕರಾವಳಿ

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು      

(ನ್ಯೂಸ್ ಕಡಬ) newskadaba.com ಸುಳ್ಯ, ಆ.05. ಬೈಕ್ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.ಮೃತಪಟ್ಟವರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು       Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top