news kadaba desk

Death, deadbody, Waterfall

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಜು.30. ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪುಯಲ್ಲಿ ವರದಿಯಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು, ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತದಿಂದ ಮೆದುಳು ನಿಷ್ಕ್ರಿಯ..!   ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ 12ರ ಬಾಲಕಿ

(ನ್ಯೂಸ್ ಕಡಬ)newskadaba.com ತುಮಕೂರು, ಜು.29. 12 ವರ್ಷದ ಬಾಲಕಿಯೊಬ್ಬಳು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ ಜೀವಕ್ಕೆ ಬೆಳಕಾಗಿದ್ದಾಳೆ. ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿರುವ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಳು. ಜು.23ರಂದು ಶಾಲೆಗೆ ಹೋಗಿ ವಾಪಸ್ ಬರುವಾಗ ತಿಪಟೂರಿನಲ್ಲಿ ಅಪಘಾತವಾಗಿದೆ. ರಸ್ತೆ ದಾಟುವಾಗ ಚಂದನಗೆ ಲಾರಿ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿತ್ತು. ಪರಿಣಾಮ ಮೆದುಳು ನಿಷ್ಕ್ರಿಯಗೊಂಡಿತ್ತು. ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಂದನಾಗೆ

ಅಪಘಾತದಿಂದ ಮೆದುಳು ನಿಷ್ಕ್ರಿಯ..!   ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ 12ರ ಬಾಲಕಿ Read More »

ಕರ್ನಾಟಕ

ಪೆಡ್ಲರ್’ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..!         ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು           

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಮಾದಕ ವಸ್ತು ಜಾಲ ಪತ್ತೆ ಹಾಗೂ ಪೆಡ್ಲರ್ ಗಳ ಪತ್ತೆಗೆ ಖಾಕಿ ಪಡೆ ಮಾಸ್ಟರ್‌ ಪ್ಲಾನ್‌ ರೂಪಿಸಿದೆ. ಮಾದಕ ದ್ರವ್ಯ ಸೇವನೆ ಪ್ರಕರಣಗಳಲ್ಲಿ ಮೊದಲ ಬಾರಿಗೆ ಸಿಕ್ಕಿಬಿದ್ದವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದನ್ನು ನಿಲ್ಲಿಸಿ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇದೇ ವ್ಯಕ್ತಿ ಮತ್ತೆ ಸಿಕ್ಕಿಬಿದ್ದಿದ್ದೇ ಆದರೆ, ಪ್ರಕರಣ ದಾಖಲಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.  ರಾಜ್ಯ ಪೊಲೀಸರು ಕಳೆದ 6 ತಿಂಗಳುಗಲ್ಲಿ 619 ಕೆಜಿ ಡ್ರಗ್ಸ್ ವಶಕ್ಕೆ

ಪೆಡ್ಲರ್’ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..!         ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು            Read More »

ಕರ್ನಾಟಕ

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ 

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.29. ಕಡಲ್ಕೊರೆತ ಪರಿಣಾಮ ಬೀಚ್ ರಸ್ತೆ ಕುಸಿಯುವ ಭೀತಿ ಉಂಟಾಗಿದ್ದು, ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್‌ಗೆ ತೆರಳುವ ಸಂಪರ್ಕ ರಸ್ತೆಯ ಅಡಿಭಾಗಕ್ಕೆ ಅಲೆಗಳು ಅಪ್ಪಳಿಸುತ್ತಿವೆ. ಹೀಗಾಗಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ರಸ್ತೆ ಕುಸಿಯುವ ಸಾಧ್ಯತೆ ಇರುವ ಹಿನ್ನೆಲೆ ಬೀಚ್‌ಗೆ ತೆರಳುವ ರಸ್ತೆಯನ್ನು ಬ್ಯಾರಿಕೇಡ್ ಇಟ್ಟು ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ. ಜುಲೈ 31ವರೆಗೆ ಬ್ಲೂಫ್ಲ್ಯಾಗ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ  Read More »

ಕರಾವಳಿ

ಬಜೆಟ್‌ ನಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಕೇಂದ್ರ ಬಜೆಟ್‌ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕೆಆರ್ಎಸ್ಗೆ ಬಾಗಿನ ಅರ್ಪಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾಮಾನ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಬಜೆಟ್‌ ನಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ ಆಗಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಮೃತಪಟ್ಟವರನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ. ಶಾರಿಕ್ ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಂದಿರುವುದಿಲ್ಲ. ಇದನ್ನು ಗಮನಿಸಿದ ಆತನ ಸಹೋದರ ಹೋಗಿ ನೋಡಿದಾಗ ಶಾರಿಕ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ವಾಹನಗಳ ‘ಮಾಲಿನ್ಯ ನಿಯಂತ್ರಣ’ ಪ್ರಮಾಣಪತ್ರ ಮತ್ತಷ್ಟು ದುಬಾರಿ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ವಾಹನಗಳ ‘ಮಾಲಿನ್ಯ ನಿಯಂತ್ರಣ’ ಪ್ರಮಾಣ ಪತ್ರದ ದರ ಏರಿಕೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಎಮಿಷನ್ ಪರೀಕ್ಷಾ ಕೇಂದ್ರಗಳ ಮಾಲೀಕರ ಸಂಘಗಳು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಬಾಡಿಗೆ ವೆಚ್ಚ, ಎಮಿಷನ್ ಚೆಕ್ ಉಪಕರಣಗಳು, ವೇತನ ಮತ್ತು ಓವರ್‌ ಹೆಡ್‌ ಗಳ ಹೆಚ್ಚಳದ ಬಗ್ಗೆ ತಿಳಿಸಿದ್ದು, ದರ ಪರಿಷ್ಕರಿಸಲು ಮನವಿ ಮಾಡಿದೆ. ಸುಮಾರು ಮೂರು ವರ್ಷಗಳ ಹಿಂದೆ ದರ ಹೆಚ್ಚಿಸಲಾಗಿದೆ ಎಂದು ಸಂಘದ ಸದಸ್ಯರು ತಿಳಿಸಿದ್ದು, ಸದ್ಯಕ್ಕೆ

ರಾಜ್ಯದಲ್ಲಿ ವಾಹನಗಳ ‘ಮಾಲಿನ್ಯ ನಿಯಂತ್ರಣ’ ಪ್ರಮಾಣಪತ್ರ ಮತ್ತಷ್ಟು ದುಬಾರಿ ಸಾಧ್ಯತೆ Read More »

ಕರ್ನಾಟಕ

ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಸೋಂಕಿನ ಅಬ್ಬರ ಹೆಚ್ಚಾಗಿದ್ದು, 320 ಮಂದಿಗೆ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ರಾಜ್ಯದ ಒಟ್ಟಾರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 17 ಸಾವಿರ ಗಡಿ ದಾಟಿದೆ ಎನ್ನಲಾಗಿದೆ. ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ. ಈ ಪೈಕಿ 320 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 17,227ಕ್ಕೆ ಏರಿಕೆಯಾಗಿದೆ. 465 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇದರಲ್ಲಿ 9

ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ Read More »

ಕರ್ನಾಟಕ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.   ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಮೃತರನ್ನ ಪ್ರಶಾಂತ್‌ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಪ್ರಶಾಂತ್‌, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್‌ ಸರ್ಕಲ್‌ ಮಾರ್ಗವಾಗಿ ಬೈಕ್‌ ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್‌ ಮಾರ್ಗದಿಂದ ಕೆ.ಆರ್‌ ವೃತ್ತದ ಮಾರ್ಗವಾಗಿ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.  ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಅನೀಶ್‌ಕುಮಾರ್‌ ಕುಟುಂಬದ ಮೇಲೆ ದಾಳಿ ನಡೆಸಿದ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಧಾರಿಗಳ

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ     Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top