news kadaba desk

ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಿರಂತರ ಮಳೆಗೆ ಹಲವು ಜಲಾಶಯಗಳು ಭರ್ತಿ ಆಗಿದ್ದು, ಭಾರೀ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಕರ್ನಾಟಕದಲ್ಲಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ರಜೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ […]

ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರ್ನಾಟಕ

ಮನೆಯೂಟ ಕೋರಿ ಅರ್ಜಿ ಸಲ್ಲಿಸಿದ ದರ್ಶನ್   ವಜಾಗೊಳಿಸಿದ ಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಜು.26. ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ ಎನ್ನಲಾಗಿದೆ. ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ದರ್ಶನ್ ಕೊಲೆ ಆರೋಪಿ ಆಗಿರುವುದರಿಂದ ಅವರಿಗೆ ಈ ಸೌಲಭ್ಯವನ್ನು ನೀಡಲು ಆಗುವುದಿಲ್ಲವೆಂದು ಕೋರ್ಟ್‌ ಹೇಳಿದೆ. ಜೈಲು ನಿಯಾಮವಳಿ 728ರ

ಮನೆಯೂಟ ಕೋರಿ ಅರ್ಜಿ ಸಲ್ಲಿಸಿದ ದರ್ಶನ್   ವಜಾಗೊಳಿಸಿದ ಕೋರ್ಟ್ Read More »

ಕರ್ನಾಟಕ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.26. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಅಟೋ ರಿಕ್ಷಾ ಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22)  ಎಂದು ಗುರುತಿಸಲಾಗಿದೆ. ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌ ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24)  ಎಂದು ಗುರುತಿಸಲಾಗಿದೆ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವಕ ಟೆಟ್ರಾ ಹೆಡ್ರಾಕೆನಬಿನಾಯ್ಡ ಎಂಬ

ಮಂಗಳೂರು: ಮಾದಕ ವಸ್ತು ಸೇವನೆ    ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ಮತ್ಸ್ಯಗಂಧ ಎಕ್ಸ್‌ ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿಗಳ ಮೇಲೆ ಬೃಹತ್ ಮರ ಬಿದ್ದಿರುವುದನ್ನು ಗಮನಿಸಿದ ಅವರು ಸರಿಯಾದ ಸಮಯಕ್ಕೆ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.    

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ Read More »

ಕರಾವಳಿ

ವಿಮಾನ ಪತನ  19 ಮಂದಿ ಸಜೀವ ದಹನದ ಶಂಕೆ

(ನ್ಯೂಸ್ ಕಡಬ)newskadaba.com  ನೇಪಾಳ, ಜು.25.  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್​ ಆಗುವ ವೇಳೆ ಶೌರ್ಯ ಏರ್​ಲೈನ್ಸ್​ ವಿಮಾನ ಪತನಗೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನಗೊಂಡ ಘಟನೆ ನೇಪಾಳದಲ್ಲಿ ನಡೆದಿದೆ. ವಿಮಾನದಲ್ಲಿ ಪೈಲಟ್​ ಸೇರಿ 19 ಮಂದಿ ಇದ್ದರು. ಸದ್ಯ ಐವರ ಮೃತದೇಹವನ್ನು ಹೊರತೆಗೆಯಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಶೌರ್ಯ ಏರ್​ಲೈನ್ಸ್​ ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನದ ಪೈಲಟ್ ಮತ್ತು ಇತರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.  

ವಿಮಾನ ಪತನ  19 ಮಂದಿ ಸಜೀವ ದಹನದ ಶಂಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಹೋರಾತ್ರಿ ಧರಣಿ ರಾಜಕೀಯ ನಾಟಕ    ಹೆಚ್‌.ಕೆ. ಪಾಟೀಲ್ ಕಿಡಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆಯಿಂದ ಕೆರಳಿರುವ ಪ್ರತಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಡೆಸಿರುವ ಅಹೋರಾತ್ರಿ ಧರಣಿ ರಾಜಕೀಯ ನಾಟಕವಷ್ಟೇ ಎಂದು ಕಾನೂನು ಸಚಿವ ಹೆಚ್‌.ಕೆ. ಪಾಟೀಲ್ ಅವರು ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಪರ್ಯಾಯ ನಿವೇಶನ (ಪ್ಲಾಟ್‌) ಹಗರಣ ವಿಚಾರವನ್ನು ಚರ್ಚೆಗೆ ಏಕೆ ಕೈಗೆತ್ತಿಕೊಳ್ಳಲಾಗುತ್ತಿಲ್ಲ ಎಂಬುದನ್ನು ವಿವರಿಸಿದರೂ ಬಿಜೆಪಿಯು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು

ಅಹೋರಾತ್ರಿ ಧರಣಿ ರಾಜಕೀಯ ನಾಟಕ    ಹೆಚ್‌.ಕೆ. ಪಾಟೀಲ್ ಕಿಡಿ Read More »

ಕರ್ನಾಟಕ

ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಬಿಡಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ

(ನ್ಯೂಸ್ ಕಡಬ)newskadaba.com ಮುಂಬೈ, ಜು.25. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರಿ ಮಳೆಯ ಪರಿಣಾಮ ಸಾಂಗ್ಲಿ, ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿಯನ್ನು ತಡೆಯುವುದಕ್ಕೆ ಆಲಮಟ್ಟಿ ಜಲಾಯಶಯದಿಂದ ನೀರು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ. ಈ ಬಗ್ಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ (ಆಲಮಟ್ಟಿ ಡ್ಯಾಮ್) ಕೃಷ್ಣಾ ನದಿಗೆ ಕಟ್ಟಲಾಗಿರುವ ಜಲಾಶಯವಾಗಿದ್ದು, ಜಲವಿದ್ಯುತ್ ಯೋಜನೆಯದ್ದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಜಿತ್ ಪವಾರ್, ‘ಆಲಮಟ್ಟಿ ಅಣೆಕಟ್ಟಿನಿಂದ ನೀರು ಹರಿಸುವುದನ್ನು

ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಬಿಡಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ Read More »

ರಾಷ್ಟ್ರೀಯ ನ್ಯೂಸ್

ಹರಿಯಾಣದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

(ನ್ಯೂಸ್ ಕಡಬ)newskadaba.com ಹರಿಯಾಣ, ಜು.25. ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ ಎಂದು ವರದಿ ತಿಳಿಸಿದೆ. ಫರಿದಾಬಾದ್ ಜಿಲ್ಲೆಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪನಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ 1 ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದೆ. ದೇಶದ ರಾಜಧಾನಿ ದೆಹಲಿ-ಎನ್‌ಸಿಆರ್‌ನ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹರಿಯಾಣದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ Read More »

ರಾಷ್ಟ್ರೀಯ ನ್ಯೂಸ್

‘ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳ ಧರಣಿ’    ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರು ವಿಷಯವೇ ಇಲ್ಲದ್ದನ್ನ ವಿಷಯ ಮಾಡ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಿಯಮಾವಳಿ ಪ್ರಕಾರವೇ ಸೈಟ್ ಪಡೆಯಲಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ.

‘ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳ ಧರಣಿ’    ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top