news kadaba desk

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌ ಶೀಘ್ರದಲ್ಲೇ ಗೌರವಧನ ಹೆಚ್ಚಳ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು. ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ […]

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌ ಶೀಘ್ರದಲ್ಲೇ ಗೌರವಧನ ಹೆಚ್ಚಳ Read More »

ಕರ್ನಾಟಕ

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ    ರಾಜ್ಯ ಸರ್ಕಾರ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ರಾಜ್ಯಾದ್ಯಂತ ದಾಖಲೆಯ 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ ಎನ್ನಲಾಗಿದೆ. ವಿಧಾನ ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ    ರಾಜ್ಯ ಸರ್ಕಾರ ಹೇಳಿಕೆ Read More »

ಕರ್ನಾಟಕ

ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬ           ನಿರ್ಮಾಣ ವೆಚ್ಚ ಬರೋಬ್ಬರೀ 40 ಸಾವಿರ ಕೋಟಿ ರೂ. ಏರಿಕೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ನಮ್ಮ ಮೆಟ್ರೊ 75.06 ಕಿ.ಮೀ ವ್ಯಾಪ್ತಿಯ 2ನೇ ಹಂತದ ಕಾಮಗಾರಿ ವೆಚ್ಚವು ಸುಮಾರು 40,000 ಕೋಟಿ ರೂ.ಗೆ ಏರಿದ್ದು, ಇದು ದಶಕದ ಹಿಂದೆ ಶೇ.52 ರಷ್ಟು ಮೂಲ ವೆಚ್ಚ ಪ್ರಸ್ತಾಪಿಸಲಾಗಿತ್ತು. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಇತ್ತೀಚೆಗೆ ನಗರಾಭಿವೃದ್ಧಿ ಇಲಾಖೆ (UDD) ಮೂಲಕ ಅನುಮೋದನೆಗಾಗಿ ರಾಜ್ಯ ಹಣಕಾಸು ಇಲಾಖೆಗೆ ಪರಿಷ್ಕೃತ ವೆಚ್ಚದೊಂದಿಗೆ ಪ್ರಸ್ತಾವನೆಯನ್ನು ಕಳುಹಿಸಿದೆ. ಯೋಜನೆಯು 2014 ರಲ್ಲಿ 72 ಕಿಮೀಗೆ ಅನುಮೋದನೆ ನೀಡಲಾಯಿತು. ನಂತರ 3 ಕಿಮೀ

ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬ           ನಿರ್ಮಾಣ ವೆಚ್ಚ ಬರೋಬ್ಬರೀ 40 ಸಾವಿರ ಕೋಟಿ ರೂ. ಏರಿಕೆ ! Read More »

ಕರ್ನಾಟಕ
crime, arrest, suspected

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 25. ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. 2020 ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು GM ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು ಎನ್ನಲಾಗಿದೆ. ಮಂಗಳೂರಿನ

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ Read More »

ಕರಾವಳಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ      

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ ಎನ್ನಲಾಗಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಪ್ರಜ್ವಲ್​ ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ,

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ       Read More »

ಕರ್ನಾಟಕ

ಕೆಆರ್‌ಎಸ್ ಜಲಾಶಯ ಭರ್ತಿ ಜನರಲ್ಲಿ ಪ್ರವಾಹದ ಆತಂಕ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.25. 2 ದಿನಗಳ ಬಳಿಕ ವರುಣದೇವ ಮತ್ತೆ ಅಬ್ಬರಿಸಲು ಶುರು ಮಾಡಿದ್ದು, ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. 124.80 ಗರಿಷ್ಠ ಸಾಮರ್ಥ್ಯದ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಸಂಪೂರ್ಣವಾಗಿ ಭರ್ತಿಯಾಗಿದೆ. ಹೀಗಾಗಿ ಕಾವೇರಿ ಕೊಳ್ಳದ ಜನರಿಗೆ ಸಂತೋಷದ ಜೊತೆಗೆ ಪ್ರವಾಹದ ಭೀತಿ ಎದುರಾಗಿದೆ ಎನ್ನಲಾಗಿದೆ. ಕೆಆರ್‌ಎಸ್ ಡ್ಯಾಂಗೆ 41,099 ಕ್ಯುಸೆಟ್ ಒಳ ಹರಿವು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ

ಕೆಆರ್‌ಎಸ್ ಜಲಾಶಯ ಭರ್ತಿ ಜನರಲ್ಲಿ ಪ್ರವಾಹದ ಆತಂಕ Read More »

ಕರ್ನಾಟಕ

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು !

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.25. ಭಾರೀ ಮಳೆಯಿಂದಾಗಿ ಮತ್ತೊಂದು ಅವಘಡ ಸಂಭವಿಸಿದ್ದು, ಗಾಳಿ-ಮಳೆಗೆ ಮಂಗಳೂರು ಹೊರವಲಯದ ಸುರತ್ಕಲ್‌ ಸಮೀಪವಿರುವ ಜೋಕಟ್ಟೆಯಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಶೈಲೇಶ್ (17) ಎಂದು ಗುರುತಿಸಲಾಗಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಜೈಲಿನ ಮೇಲೆ ಪೊಲೀಸರ ದಾಳಿ ! 25 ಮೊಬೈಲ್,ಡ್ರಗ್ಸ್ ಸೇರಿ ಹಲವು ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಕಾರಾಗೃಹದ ಮೇಲೆ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಮೊಬೈಲ್‌ ಸೇರಿ ಹಲವು ನಿಷೇಧಿತ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಕೋಡಿಯಾಲ್ ಬೈಲ್ ನಲ್ಲಿರುವ ಜೈಲಿನಲ್ಲಿರುವ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪೊಲೀಸ್‌ ಇನ್ಸ್‌ ಪೆಕ್ಟರ್‌ಗಳ ನೇತೃತ್ವದಲ್ಲಿ ಸುಮಾರು 150 ಮಂದಿ ಸಿಬ್ಬಂದಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಲಾಗಿದೆ. ಹಲವು ವಿಚಾರಣಾಧೀನ ಕೈದಿಗಳ ಬಳಿ 25 ಮೊಬೈಲ್ ಫೋನ್‌ಗಳು, ಒಂದು ಬ್ಲೂಟೂತ್ ಸಾಧನ, 5 ಇಯರ್‌ಫೋನ್‌, ಒಂದು ಪೆನ್ ಡ್ರೈವ್, 5

ಮಂಗಳೂರು : ಜೈಲಿನ ಮೇಲೆ ಪೊಲೀಸರ ದಾಳಿ ! 25 ಮೊಬೈಲ್,ಡ್ರಗ್ಸ್ ಸೇರಿ ಹಲವು ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ. ಜುಲೈ 26 ಮತ್ತು 28ರಂದು ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು (06567) ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯರಾತ್ರಿ 12.30 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !   Read More »

ಕರಾವಳಿ, ಕರ್ನಾಟಕ
Scroll to Top