news kadaba desk

ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು

(ನ್ಯೂಸ್ ಕಡಬ)newskadaba.com. ಪ್ಯಾರಿಸ್, ಜು.24. ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಫ್ರೆಂಚ್ ಪೊಲೀಸರು ತಿಳಿಸಿದ್ದಾರೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಈ ಅವಘಡ ಸಂಭವಿಸಿದ್ದು, ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕೆಬಾಬ್ ಶಾಪ್‌ ಗೆ ಬಂದು ರಕ್ಷಣೆ ಪಡೆದಿದ್ದಾರೆ. ಆಗ ಆಕೆಯ ಉಡುಪು ಹರಿದು ಹೋಗಿರುವುದು ಸಿಸಿಟಿವಿಯಲ್ಲಿ […]

ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಜೆಟ್ ಬಳಿಕ ಚಿನ್ನದ ದರ ಕುಸಿತ

(ನ್ಯೂಸ್ ಕಡಬ)newskadaba.com. ನವದೆಹಲಿ, ಜು.24. ಬಜೆಟ್ ನಲ್ಲಿ ಚಿನ್ನದ ಮೇಲಿನ ಅಮದು ಸುಂಕ ಕಡಿಮೆಯಾಗಿರುವ ಪರಿಣಾಮ ಇಂದು ಚಿನ್ನದ ದರ ಕುಸಿತ ಕಂಡಿದ್ದು, 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ 10 ಗ್ರಾಮ್ ಗೆ 4,332.0 ರೂಪಾಯಿಗಳಷ್ಟು ಕಡಿಮೆಯಾಗಿದ್ದು ಪ್ರತಿ ಗ್ರಾಮ್ ಬೆಲೆ 7071.6 ರೂಗಳಷ್ಟಾಗಿದೆ. 22 ಕ್ಯಾರಟ್ ಹಳದಿ ಲೋಹದ ದರ ಪ್ರತಿ ಗ್ರಾಮ್ ಗೆ 6,477.5 ರೂಪಾಯಿಗಳಷ್ಟಿದ್ದು, 10 ಗ್ರಾಮ್ ಚಿನ್ನದ ದರದಲ್ಲಿ 3,970.0 ರೂಗಳಷ್ಟು ಕುಸಿತ ದಾಖಲಾಗಿದೆ. 24 ಕ್ಯಾರಾಟ್ ಚಿನ್ನದ ದರ

ಬಜೆಟ್ ಬಳಿಕ ಚಿನ್ನದ ದರ ಕುಸಿತ Read More »

ರಾಷ್ಟ್ರೀಯ ನ್ಯೂಸ್

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ

(ನ್ಯೂಸ್ ಕಡಬ)newskadaba.com. ಉಡುಪಿ, ಜು.24. ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ದೊಡ್ಡ ಅನಾಹುತವನ್ನು ತಪ್ಪಿಸಿ, ಸಮಯಪ್ರಜ್ಞೆಯಿಂದ ನಿರ್ಣಾಯಕ ಕ್ರಮವನ್ನು ಕೈಗೊಂಡಿರುವ ಸಿಬ್ಬಂದಿಯನ್ನು ಗುರುತಿಸಿ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನೀಡಿದರು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ Read More »

ಕರಾವಳಿ, ಕರ್ನಾಟಕ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ)newskadaba.com. ಬೆಂಗಳೂರು, ಜು.24. ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ ಮಾಡಿದ್ದೇನೆ. ದೇಶದ ಹಲವು ರಾಜ್ಯಗಳಲ್ಲಿ ಅಧಿಕೃತವಾಗಿ ಎರಡನೇ ಭಾಷೆಯನ್ನಾಗಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ, ಕರ್ನಾಟಕ

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com. ತುಮಕೂರು, ಜು.24. ಬಿಟ್ ಕಾಯಿನ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶ್ರೀಕಿಯೊಂದಿಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎನ್ನಲಾಗಿದೆ. ಪ್ರಕರಣದ ಈ ಮೂವರು ಆರೋಪಿಗಳು ಜಾಮೀನು ಕೋರಿ ನಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಉದ್ಯಮಿಯೊಬ್ಬರಿಗೆ ಆನ್‌ಲೈನ್ ವಂಚಿಸಿದ

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರ್ನಾಟಕ

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com. ಬಂಟ್ವಾಳ, ಜು.24. ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ ಎರಡು ಬಾರಿ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಸಂತ್ರಸ್ತ ಯುವತಿ ಠಾಣೆಗೆ ದೂರು‌ ನೀಡಿದ್ದಾರೆ. ಆರೋಪಿಗೆ ಈಗಾಗಲೇ ‌ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯ ಎಸಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಲ್ಲದೆ

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

‘ಬಜೆಟ್‌ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ- ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ’ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com. ನವದೆಹಲಿ, ಜು 24. ಈ ಬಾರಿಯ ಬಜೆಟ್ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ. ರಾಜ್ಯಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಪ್ರತಿ ಬಜೆಟ್‌ನಲ್ಲಿ ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ಅವಕಾಶ ಸಿಗುವುದಿಲ್ಲ. ಈ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ ಎಂದರು.

‘ಬಜೆಟ್‌ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ- ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ’ ನಿರ್ಮಲಾ ಸೀತಾರಾಮನ್ Read More »

ರಾಷ್ಟ್ರೀಯ ನ್ಯೂಸ್

ಪಾರಿವಾಳದ ಪ್ರಾಣ ಉಳಿಸಲು ವಿದ್ಯುತ್ ಕಂಬವೇರಿದ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಚಿತ್ರದುರ್ಗ, ಜು.24. ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೋರ್ವ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಮೃತ ಬಾಲಕನನ್ನು ರಾಮಚಂದ್ರ (12) ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ.   ವಿದ್ಯುತ್ ಶಾಕ್‌ ನಿಂದಾಗಿ ಬಾಲಕನ ಶವ ವಿದ್ಯುತ್ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ

ಪಾರಿವಾಳದ ಪ್ರಾಣ ಉಳಿಸಲು ವಿದ್ಯುತ್ ಕಂಬವೇರಿದ ಬಾಲಕ ಮೃತ್ಯು Read More »

ಕರ್ನಾಟಕ

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ . ಮೃತರನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ.ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಲಾರಿಯೊಂದು ಸ್ಕೂಟರ್‌ ಗೆ ಢಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ವಿಕಲಚೇತನ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಶಿವರಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರ ಠಾಣೆಯ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top