news kadaba desk

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ,ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ. ಮೊಬೈಲ್ ಫೋನ್ ಮತ್ತು ಉಪಕರಣಗಳ ದೇಶೀಯ ಉತ್ಪಾದನೆ ಹೆಚ್ಚಾಗಿದೆ. ಮೊಬೈಲ್ ಫೋನ್ ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗುವುದು. ಹಣಕಾಸು ಸಚಿವರು, ‘ಮೊಬೈಲ್ ಫೋನ್‌ಗಳು, ಮೊಬೈಲ್ ಪಿಸಿಬಿಎಸ್ ಮತ್ತು ಮೊಬೈಲ್ ಚಾರ್ಜರ್‌ಗಳಲ್ಲಿನ ಬಿಸಿಡಿಯನ್ನು 15% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ’ ಎಂದು ಹೇಳಿದ್ದಾರೆ. […]

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ವೇತನವನ್ನು ನೇರ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ

(ನ್ಯೂಸ್ ಕಡಬ)newskadaba.com ಜಮ್ಮು-ಕಾಶ್ಮೀರ, ಜು.23. ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಉಗ್ರರ ದಾಳಿ ಇದಾಗಿದ್ದು, ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಿದ್ದ ಉಗ್ರರು ದಾಳಿ ನಡೆಸಿದ್ದಾರೆ. ಇನ್ನು ಭಾರತೀಯ ಸೇನೆಯು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ಸೇನೆ, ಬಟ್ಟಲ್ ಸೆಕ್ಟರ್‌ನಲ್ಲಿ ಉಗ್ರರು ನುಸುಳಿದ್ದರು. ಈ ವೇಳೆ ಭಾರೀ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಶಿರೂರು, ಜು.23. ಅಂಕೋಲಾ ಶಿರೂರು ಗುಡ್ಡ ಕುಸಿತದ ಪ್ರಕರಣದಲ್ಲಿ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದ್ದು ಹೀಗಾಗಿ ಒಟ್ಟು ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾದಂತಾಗಿದೆ ಎಂದು ವರದಿ ತಿಳಿಸಿದೆ. ಶಿರೂರು ಪ್ರಕರಣದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ 5 ಮಂದಿ, ಒಬ್ಬ ಮಹಿಳೆ ಹಾಗೂ ಮೂವರು ಟ್ಯಾಂಕರ್ ಚಾಲಕರು ಹಾಗೂ ಟಿಂಬರ್ ಲಾರಿ ಚಾಲಕ ನಾಪತ್ತೆ ಆಗಿರುವ ಬಗ್ಗೆ ದೂರುಗಳು ಬಂದಿತ್ತು ಎನ್ನಲಾಗಿದೆ. ಗಂಗಾವಳಿ ನದಿ

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ

(ನ್ಯೂಸ್ ಕಡಬ)newskadaba.com  ಮುಂಬೈ, ಜು.23. ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್‌ ಯಾರ್ಡ್‌ ನಲ್ಲಿ ನಡೆದಿದೆ. ಅವಘಡದಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು, ಹಡಗನ್ನು ಸರಿಪಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ಜೊತೆಗೆ ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಐಎನ್‌ಎಸ್ ಬ್ರಹ್ಮಪುತ್ರ ಯುದ್ಧನೌಕೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.23. ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಮೃತರನ್ನು ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಗುರುತಿಸಲಾಗಿದೆ. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜು.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರವನ್ನು ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವರು, ಬಳಿಕ  ಮಾಧ್ಯಮದವರ ಜೊತೆ ಮಾತನಾಡಿ, ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಯ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ರಾಹುಲ್ ಗಾಂಧಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ Read More »

ಕರಾವಳಿ

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಈ ಬಾರಿ ಸುರಿದ ಭಾರಿ ಮಳೆಗೆ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ Read More »

ಕರಾವಳಿ

ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ.  ಈ ಬಗ್ಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಕೆಎಟಿ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠವು 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಜೊತೆಗೆ

ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ Read More »

ಕರ್ನಾಟಕ

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.23. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ ಗೆ ಆಗಮಿಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ವಿತ್ತ ಸಚಿವೆ ಕೆಂಪು ವಸ್ತ್ರದಲ್ಲಿ ಸುತ್ತಿರುವ ಬಜೆಟ್‌ ದಾಖಲೆ (ಬಹಿ ಖಾತಾ) ಕೈಯಲ್ಲಿ ಹಿಡಿದುಕೊಂಡು ನಗುಮುಖದೊಂದಿಗೆ ಸಂಸತ್ತನ್ನು ಪ್ರವೇಶಿಸಿದ್ದು, ಈ ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top