news kadaba desk

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 22. ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಇಂದು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ. ಮೂರು ದಿನಗಳಿಂದ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ Read More »

ಕರಾವಳಿ

ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್  ವಿದ್ಯಾರ್ಥಿಗಳು ಗಂಭೀರ !

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.22. ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ವರದಿಯಾಗಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಬೈಂದೂರಿಗೆ ಬರುತ್ತಿತ್ತು. ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಚರಂಡಿಗೆ ಇಳಿದು ಓರೆಯಾಗಿ ಮರಕ್ಕೆ ತಾಗಿ ನಿಂತಿದೆ. ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್ ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್  ವಿದ್ಯಾರ್ಥಿಗಳು ಗಂಭೀರ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

*ವಾಲ್ಮೀಕಿ ನಿಗಮ ಹಗರಣ ನಾಗೇಂದ್ರ ಗೆ ಆ. 3ರವರೆಗೆ ನ್ಯಾಯಾಂಗ ಬಂಧನ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ನಾಗೇಂದ್ರ ಅವರ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇನ್ನು ಹಗರಣ ಸಂಬಂಧಪಟ್ಟಂತೆ ಸತ್ಯನಾರಾಯಣ ವರ್ಮನನ್ನು

*ವಾಲ್ಮೀಕಿ ನಿಗಮ ಹಗರಣ ನಾಗೇಂದ್ರ ಗೆ ಆ. 3ರವರೆಗೆ ನ್ಯಾಯಾಂಗ ಬಂಧನ….! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ರೈಲಿನ ಎಸಿ ಬೋಗಿಯೊಳಗೆ ನೀರು ಹರಡಿದ ಘಟನೆ ಮಂಗಳೂರು – ಮನ್ಮಾಡ್ ಮಂಗಳದ್ವೀಪ ಸೂಪರ್‌ ಫಾಸ್ಟ್ ಎಕ್ಸ್ ಪ್ರೆಸ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಮಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ 95 ಮಂದಿ ಪ್ರಯಾಣಿಕರಿದ್ದ ಕೋಚ್ ಬಿ6 ಎಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ರೈಲಿನಲ್ಲಿ ಈ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷದಿಂದಾಗಿ ಕೋಚ್‌ ನಲ್ಲಿ ಜಲಪಾತದಂತೆ ನೀರು ಸುರಿದಿದ್ದು, ಪರಿಣಾಮ ರೈಲಿನ ಒಳಭಾಗದಲ್ಲಿ ಪ್ರವಾಹ ಉಂಟಾಗಿದೆ. ನಿರಂತರ ನೀರು ಸೋರಿಕೆಯಿಂದ 60ಕ್ಕೂ ಹೆಚ್ಚು ಪ್ರಯಾಣಿಕರು ರಾತ್ರಿಯಿಡಿ ನಿದ್ದೆಯಿಲ್ಲದೆ ಪರದಾಡಿದ್ದಾರೆ. ಈ ವಿಚಾರವನ್ನು

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….! Read More »

ಕರಾವಳಿ

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….!

(ನ್ಯೂಸ್ ಕಡಬ)newskadaba.com ಉಡುಪಿ, ಜು.22. ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದ್ದು, ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎನ್ನಲಾಗಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.  

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….! Read More »

ಕರಾವಳಿ

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಘ್ನೇಶ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ನು ಶ್ರೀ ನಿಧಿ (25) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 1.30 ರ ಸುಮಾರಿಗೆ ವಿಘ್ನೇಶ್ ಮತ್ತು ಶ್ರೀ ನಿಧಿ ರೆಸ್ಟೋರೆಂಟ್‌ ನಲ್ಲಿ ಊಟ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….! Read More »

ಕರಾವಳಿ, ಕ್ರೈಮ್ ನ್ಯೂಸ್

ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ.!

(ನ್ಯೂಸ್ ಕಡಬ)newskadaba.com ಜಮ್ಮು, ಜು.22. ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧನಿಗೆ ತೀವ್ರ ಗಾಯವಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿ ದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ. ಘಟನೆಯ ನಂತರ ಭದ್ರತಾ ಸಿಬ್ಬಂದಿ ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳಿಂದ

ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ.! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22.  ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ ಎಂದು ವರದಿ ತಿಳಿಸಿದೆ. ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, 19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದು, ನಾಳೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿಯಾಗುವ ಸಾಧ್ಯತೆ ಇದ್ದು, ನೀಟ್,

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.! Read More »

ರಾಷ್ಟ್ರೀಯ ನ್ಯೂಸ್
Scroll to Top