news kadaba desk

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಫೋನ್ ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದು, “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ […]

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.20. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರಾಗಿದ್ದ ಮಳೆ ಅಬ್ಬರ ಇಂದು ಕಡಿಯಾದಂತಿದ್ದು, ಬೆಳಿಗ್ಗೆಯಿಂದಲೇ ಬಿಸಿಲಿನ ಕೂಡಿದ ವಾತವರಣ ಕಂಡುಬಂದಿದೆ. ಅಪಾಯದ ಮಟ್ಟ ಮೀರಿ 8.6ಮೀ ವರೆಗೂ ತಲುಪಿದ್ದ ನೀರಿನ ಹರಿವಿನ ಮಟ್ಟ7.4 ಮೀ ಗೆ ಇಳಿಕೆಯಾಗಿದ್ದು, ಜಿಲ್ಲೆಯ ನೇತ್ರಾವತಿ, ಕುಮಾರಧಾರ, ನಂದಿನಿ ಹಾಗೂ ಶಾಂಭವಿ ನದಿಗಳಲ್ಲೂ ನೀರು ಹರಿವಿನ ಮಟ್ಟ ತಗ್ಗಿರುವ ಬಗ್ಗೆ ವರದಿಯಾಗಿದೆ.  

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.! Read More »

ಕರಾವಳಿ

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.!

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜು.20. ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ ಎನ್ನಲಾಗಿದೆ. ಇದೀಗ, ಮಹಾಮಾರಿ ಡೆಂಗ್ಯೂ ಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಮೃತ ಯುವತಿಯನ್ನು ರೇಖಾ (19) ಎಂದು ಗುರುತಿಸಲಾಗಿದ್ದು,  ತೀವ್ರ ಜ್ವರ ಕಾಣಿಸಿಕೊಂಡ ಪರಿಣಾಮ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಯುವತಿಗೆ ಶಂಕಿತ ಡೆಂಗ್ಯೂ ಜ್ವರವಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.  

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿ ಚಕ್ರ ವಾಹನಕ್ಕೆ ನಾಯಿಯ ಶವ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಉಡುಪಿ, ಜು.20. ದ್ವಿಚಕ್ರ ವಾಹನದಲ್ಲಿ ನಾಯಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ವ್ಯಕ್ತಿ ನಾಯಿಯ ಕುತ್ತಿಗೆಗೆ ಸರಪಳಿಯನ್ನು ಜೋಡಿಸಿ ನಂತರ ತನ್ನ ಸ್ಕೂಟರ್‌ ನ ಸೀಟಿಗೆ ಇನ್ನೊಂದು ತುದಿಯನ್ನು ಕಟ್ಟಿದ್ದಾನೆ. ವ್ಯಕ್ತಿಗಾಗಿ ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಾರ್ವಜನಿಕರು ಕ್ರೂರ ಕೃತ್ಯವನ್ನು ಖಂಡಿಸಿದ್ದು ಮುಂದೆ ಇಂತಹ ಘಟನೆಗಳು ನಡೆಯದಂತೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.  

ದ್ವಿ ಚಕ್ರ ವಾಹನಕ್ಕೆ ನಾಯಿಯ ಶವ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ Read More »

ಕರಾವಳಿ

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.20. ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ  ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ ಎನ್ನಲಾಗಿದೆ. ಯುವಕನನ್ನು ಮಹೀಂದ್ರ ಶೋರೂಂ ಉದ್ಯೋಗಿ ಸನ್ಮಿತ್ (21) ಎಂದು ತಿಳಿದುಬಂದಿದೆ. ಈತನ ಸ್ಕೂಟರ್  ಹೊಳೆಯ ಬದಿಯಿಂದ 150 ಮೀ ದೂರದಲ್ಲಿ ನಿಲ್ಲಿಸಿದ್ದ ಎನ್ನಲಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ. ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ರವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆಗೂ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ.  

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…! Read More »

ಕರಾವಳಿ

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….!

(ನ್ಯೂಸ್ ಕಡಬ)Newskadaba.com ಮಂಗಳೂರು, ಜು.20. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಿಯಂತ್ರಣ ತಪ್ಪಿ ಸ್ಕಿಡ್ಡಾಗಿ ರಸ್ತೆ ವಿಭಜಕದ ಮಧ್ಯೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ಕಿ ಮತ್ತು ಆತನ ಪುತ್ರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….! Read More »

ಕರಾವಳಿ

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಸೆ.23. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ಕರ್ನಾಟಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ನಿರ್ದೇಶಿಸುವಂತೆ ಆಗ್ರಹಿಸಿದೆ ಎಂದು ತಿಳಿದುಬಂದಿದೆ. ಮತದಾರರಿಗೆ ಆಸೆ, ಆಮಿಷ ಒಡ್ಡಬಾರದೆಂದು ಕಾನೂನಿದ್ದು, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆ ಮನೆಗೆ ಕುಕ್ಕರ್‌, ಹಣ

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು Read More »

ಕರ್ನಾಟಕ
Scroll to Top