news kadaba desk

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಜು.26. ಕೆಟ್ಟ ಶಾಖದ ಅಲೆ ಗ್ರೀಸ್ ದೇಶಕ್ಕೆ ಎದುರಾಗಿದೆ. ಇದರಿಂದಾಗಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದೆ. ಈ ಕಾಡ್ಗಿಚ್ಚನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡು ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನ ಬಂದಿತ್ತು. ಇನ್ನೂ ಬೆಂಕಿಗೆ ನೀರು ಹಾಯಿಸುತ್ತಿರುವಾಗ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡಿದೆ ಎಂದು ವರದಿಯಾಗಿದೆ.

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – ಐವರು ಐಎಎಸ್, 25ಕೆಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ರಾಜ್ಯ ಸರ್ಕಾರದಿಂದ ಆಡಳಿತ ಕೇಂದ್ರಕ್ಕೆ ಚುರುಕು ಮುಟ್ಟಿಸೋ ಕುರಿತಾಗಿ, ಐವರು ಐಎಎಸ್ ಹಾಗೂ 25 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ. ವೆಂಕಟೇಶ್, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಗಂಗೂಭಾಯಿ ರಮೇಶ್ ಮಾನಕರ್, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರಾಗಿ ಜಿ.ಎಂ ಗಂಗಾಧರ ಸ್ವಾಮಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೆಶಕರನ್ನಾಗಿ ಕೆ.ನಾಗೇಂದ್ರ ಪ್ರಸಾದ್ ಹಾಗೂ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – ಐವರು ಐಎಎಸ್, 25ಕೆಎಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಯುವಕನೋರ್ವ ಧಿಢೀರ್ ನಾಪತ್ತೆ – ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.26. ಬೈಂದೂರು ತಾಲ್ಲೂಕು ಜಡ್ಕಲ್ ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ್‌ (28) ಮನೆಯಿಂದ ನಾಪತ್ತೆಯಾಗಿರುವ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನ್ನ ವಾಸದ ಮನೆಯಾದ ಮಕ್ಕೆಯ ಕೊಳಕೆಹೊಳೆ ಎಂಬಲ್ಲಿ ಮನೆ ಊಟ ಮಾಡಿ ಮಲಗಿದ್ದ ಅವರು, ಮನೆಯವರು ಎದ್ದು ನೋಡಿದಾಗ ಸುರೇಶ್ ಮನೆಯಿಂದ ನಾಪತ್ತೆಯಾಗಿರುವ ಕುರಿತು ತಿಳಿದಿದೆ. ಈ ಬಗ್ಗೆ ಸಹೋದರ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾದ ಸುರೇಶ್‌ ಅವರ ಪತ್ತೆಗೆ

ಯುವಕನೋರ್ವ ಧಿಢೀರ್ ನಾಪತ್ತೆ – ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ Read More »

ಕರ್ನಾಟಕ

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಪಂಚಾಯತ್ ವತಿಯಿಂದ ಅನಂತಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಶುಚಿತ್ವ ಮಾಡುತ್ತಿದ್ದ ವೇಳೆ ತಂಡವೊಂದರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದ್ದು, ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿ ತಂಡ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಗಣೇಶ್ ಪುತ್ತೂರು

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದುಬಂದಿದೆ. ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಕೋಬ್ರಾ, ಜು.26. ಮನೆಯಲ್ಲಿ ಹಲ್ಲಿಗಳು ಕಾಣುವುದು ಸಾಮಾನ್ಯ. ಆದರೆ ಈ ಹಲ್ಲಿ ಯಾರನ್ನಾದರೂ ಕೊಲ್ಲುತ್ತದೆ ಎಂದರೆ ನಂಬಲೂ ಸಹ ವಿಚಿತ್ರ ಎನಿಸುತ್ತದೆ. ಇಂತಹ ಘಟನೆಯೊಂದು ಛತ್ತೀಸ್‌ಗಢದ ಕೋಬ್ರಾದಲ್ಲಿ ನಡೆದಿದ್ದು, ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ರಾಜ್‌ ಕುಮಾರ್ ಚಂಡೆ ಎಂಬುವರ ಕುಟುಂಬವು ನಾಗಿನಬಂಡಾ ಪ್ರದೇಶದಲ್ಲಿ ವಾಸಿಸುತ್ತಿದ್ದು, ಇವರ ಮೂರನೇ ಮಗ ಜಗದೀಶ್ನೇ ಮೃತ ದುರ್ದೈವಿಯಾಗಿದ್ದಾನೆ. ಘಟನೆಯ ವೇಳೆ ಎರಡೂವರೆ ವರ್ಷದ ಜಗದೀಶ್ ಮಲಗಿದ್ದ ಎನ್ನಲಾಗಿದ್ದು, ಈ

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ಕುಕ್ಕುಂಜೆಯಿಂದ ಅಳಂಬ, ಬರೆಂಬಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಕುಸಿದಿದೆ ಎನ್ನಲಾಗಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕ ಸಂಚಾರ ಮಾಡುತ್ತಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು Read More »

ಕರಾವಳಿ

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು

(ನ್ಯೂಸ್ ಕಡಬ)newskadaba.com ಪುತ್ತೂರು,ಜು.26. ಉಪ್ಪಿನಂಗಡಿ ಭಾಗದ ವಿದ್ಯುತ್ ಸುಧಾರಣೆಗೆ ರೂಪಿಸಿರುವ 34 ನೆಕ್ಕಿಲಾಡಿ ಗ್ರಾಮದ ಕರುವೇಲುವಿನಲ್ಲಿ 110 ಕೆ.ವಿ ಉಪಕೇಂದ್ರ ಸ್ಥಾಪನೆಗೆ ಯೋಜನೆ ರೂಪಿಸಿದೆ. ಇದರ ಅನುಮೋದನೆ ನೀಡುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಜಮೀನಿಗೆ ಹಣ ಪಾವತಿಯಾಗಿ ಜಿಲ್ಲಾಧಿಕಾರಿಯಿಂದ ಮಂಜೂರಾತಿ ಕ್ರಮವು ದೊರಕಿದೆ ಎನ್ನಲಾಗಿದೆ. 40 ವರ್ಷಗಳ ಬಳಿಕ ಪುತ್ತೂರು ತಾಲೂಕಿಗೆ 2ನೇ 110 ಕೆವಿ ಉಪಕೇಂದ್ರ ಮಂಜೂರು ಆಗಿದ್ದು, ಕಳೆದ

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು Read More »

ಕರಾವಳಿ

ಕಾಡಾನೆ ದಾಳಿ…! – ಕೃಷಿ ನಾಶ

(ನ್ಯೂಸ್ ಕಡಬ)newskadaba.com ಮಂಡೆಕೋಲು, ಜು.26. ಮಂಡೆಕೋಲು ಗ್ರಾಮದಲ್ಲಿ ದಾಳಿ ಮುಂದುವರಿಸಿರುವ ಕಾಡಾನೆಗಳ ಹಿಂಡು ಬೊಳುಗಲ್ಲು ಭಾಗದಲ್ಲಿ ಕೃಷಿ ನಾಶ ಪಡಿಸಿದೆ ಎಂದು ವರದಿ ತಿಳಿಸಿದೆ. ಬೊಳುಗಲ್ಲು ಭಾಗದಲ್ಲಿ ದಾಳಿ ನಡೆಸಿದ ಆನೆಗಳ ಹಿಂಡು ಶುಭಕರ ಬೊಳುಗಲ್ಲು ಅವರ ತೋಟಕ್ಕೆ ನುಗ್ಗಿ ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಪಡಿಸಿದ್ದು, ನೂರಕ್ಕೂ ಅಧಿಕ ಬಾಳೆ ಗಿಡಗಳನ್ನು ನಾಶಪಡಿಸಿವೆ ಎಂದು ಶುಭಕರ ಬೊಳುಗಲ್ಲು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಗಡಿಪ್ರದೇಶವಾದ ಮಂಡೆಕೋಲಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಕನ್ಯಾನ, ಚಾಕೋಟೆ, ಬೊಳುಗಲ್ಲು

ಕಾಡಾನೆ ದಾಳಿ…! – ಕೃಷಿ ನಾಶ Read More »

ಕರಾವಳಿ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಘಟನೆಯ ಕೆಪಿಸಿಸಿ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತ ಗಟ್ಟಿ ನೇಮಕಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಹಾಗೂ ಕಡಬ ಬ್ಲಾಕ್ ಒಳಗೊಂಡ ಸುಳ್ಯ ವಿಧಾನಸಭಾ ಕ್ಷೇತ್ತದ ಕೆಪಿಸಿಸಿ ಉಸ್ತುವಾರಿಯಾಗಿ ಮಮತ ಗಟ್ಟಿ ಅವರನ್ನುನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಅವರಿಗೆ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ Read More »

ಕರಾವಳಿ
Scroll to Top