news kadaba desk

ಮಧ್ಯಾಹ್ನದ ಉರಿ ಬಿಸಿಲನ್ನು ಲೆಕ್ಕಿಸದೇ ಜನರತ್ತ ಹಸನ್ಮುಖಿಯಾಗಿ ಕೈ ಬೀಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.13. ಧಾರವಾಡ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಹಮ್ಮಿಕೊಂಡಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಬ್ಬಳ್ಳಿ ನಗರದಲ್ಲಿ ನಿರೀಕ್ಷೆಗೂ ಮೀರಿ ಅಭೂತಪೂರ್ವ ಸ್ವಾಗತ ದೊರಕಿತು.   ಇಲ್ಲಿಯ ವಿಮಾನ ನಿಲ್ದಾಣದಿಂದ ಸಮಾರಂಭ ನಡೆಯಲಿದ್ದ ರೈಲ್ವೆ ಮೈದಾನ ವರೆಗಿನ ಸುಮಾರು ಎಂಟು ಕಿಮೀ ದೂರ ನಿರಂತರವಾಗಿ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನಸ್ತೋಮವಿತ್ತು. ತಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮೀಪದಿಂದ ನೋಡಲು ಸಾವಿರಾರು ಅಭಿಮಾನಿಗಳು, […]

ಮಧ್ಯಾಹ್ನದ ಉರಿ ಬಿಸಿಲನ್ನು ಲೆಕ್ಕಿಸದೇ ಜನರತ್ತ ಹಸನ್ಮುಖಿಯಾಗಿ ಕೈ ಬೀಸಿದ ಪ್ರಧಾನಿ ಮೋದಿ Read More »

ಕರ್ನಾಟಕ

ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.13.  ರಾಜ್ಯದಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಐದು ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಐದು ದಿನಗಳ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ ಅವರು, ಈ ಯೋಜನೆಯಿಂದ ಯುವಕರು ಸ್ವಯಂ ಉದ್ಯೋಗಿಗಳಾಗಲು ಅನುವು ಮಾಡಿಕೊಡುವ ಗುರಿಯನ್ನು ಹೊಂದಿದ್ದು, ಸ್ಫೂರ್ತಿಯ ಚಿಲುಮೆಯಾಗಿರುವ ಸ್ವಾಮಿ ವಿವೇಕಾನಂದರ ಹೆಸರನ್ನು ಈ ಯೋಜನೆಗೆ ಇಡಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು

ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮೈಸೂರು, ಜ. 13.   ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ ಎಂದು ವರದಿಯಾಗಿದೆ. ಜನವರಿ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಭರದ ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯ ಬಗ್ಗೆ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಮಾತನಾಡಿದ್ದು, ಖಚಿತಪಡಿಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ವರದಿಯಾಗಿದೆ. ಈ ಬಾರಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿದೆ. ಕೊನೆ  ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಸೇರ್ಪಡೆಯಾಗಿದೆ.  14ನೇ ಬಾರಿ ಕರ್ನಾಟಕ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ. ರಾಜಧಾನಿ ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ Read More »

ಕರ್ನಾಟಕ

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ. 12. ನವೆಂಬರ್ 2022ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಉತ್ತೀರ್ಣರಾಗಿ, 32.25% ಫಲಿತಾಂಶ ಪಡೆದಿದ್ದಾರೆ. ಸಿಎ ಇಂಟರ್ ಮೀಡಿಯಟ್ ಪರೀಕ್ಷೆಯ ಎರಡು ವಿಭಾಗದಲ್ಲಿ ರಾಷ್ಟ್ರ ಮಟ್ಟದ ಫಲಿತಾಂಶ 12.72% ಆಗಿದ್ದು, ಆಳ್ವಾಸ್ ದೇಶಿಯ ಮಟ್ಟದಲ್ಲಿ 32.25% ಫಲಿತಾಂಶ ಪಡೆದಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!! Read More »

ಕರಾವಳಿ, ಕರ್ನಾಟಕ

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಜ.12. ಮೂರು ಬೈಕ್ ಗಳಲ್ಲಿ ಸಕಲೇಶಪುರ ತಾಲೂಕಿನ ಬಿಸಿಲೆ ಘಾಟ್ ಗೆ ಹೊರಟಿದ್ದ ನಗರದ ಎನ್ ಡಿಆರ್ ಕೆ ಕಾಲೇಜಿನ ಆರು ವಿದ್ಯಾರ್ಥಿಗಳು, ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸ್ಮಿತಾ, ರಕ್ಷಿತ್, ರಕ್ಷಿತಾ, ಹರ್ಷಿತ್, ಮಹೇಶ್, ರೋಹಿತ್ ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರದ ಕ್ರಾಫರ್ಢ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಒಂದು ಬೈಕ್, ಪಕ್ಕದಲ್ಲಿ ಸಾಗತ್ತಿದ್ದ ಸ್ನೇಹಿತನ ಬೈಕ್ ಗೆ

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..!!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ. 12. ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಆರೋಪಿಯನ್ನು ಮನೋಹರ್ ನಾಯಕ್ ಎಂದು ಗುರುತಿಸಲಾಗಿದೆ. ಈತ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಇಬ್ಬರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಶಿಕ್ಷಕನ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಹಾಗೂ ಮೊಬೈಲ್ ಕಳವು ಪ್ರಕರಣ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕಳವು ಮಾಡಿದ ಬೈಕ್ ಗಳಲ್ಲಿ ಸಂಚರಿಸುತ್ತಾ ಒಂಟಿಯಾಗಿ ಓಡಾಡುವವರ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದ ಮೂವರು ಖದೀಮರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಯಲಹಂಕ ಶ್ರೀನಿವಾಸಪುರದ ಮುಬಾರಕ್ ಅಲಿಯಾಸ್ ಡೂಮ್(20), ಅಗ್ರಹಾರ ಲೇಔಟ್ ನ ಸುನೀಲ್ ಅಲಿಯಾಸ್ ಚಿತ್ತು(20) ಹಾಗೂ ಯಲಹಂಕದ ಇಸ್ಮಾಯಿಲ್ ಅಲಿಯಾಸ್ ಜಿಶಾನ್ (19) ಎಂದು ಗುರುತಿಸಲಾಗಿದೆ.

ಬೈಕ್ ಹಾಗೂ ಮೊಬೈಲ್ ಕಳವು ಪ್ರಕರಣ ➤ ಮೂವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.   ಎರಡ ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಕುಖ್ಯಾತ ರೌಡಿಶೀಡರ್ ನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮುನೇಲ್ ಎಂದು ಗುರುತಿಸಲಾಗಿದೆ.  ಈತನ ಮೇಲೆ ಕೊಲೆಯತ್ನ, ರಾಬರಿ, ಜೀವ ಬೆದರಿಕೆ ಮುಂತಾದ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಅರೆಸ್ಟ್..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಬಂಟ್ವಾಳ ತಾಲ್ಲೂಕಿನ ಕಾರಿಂಜ ತಾಣವನ್ನು ಶೀಘ್ರ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಘೋಷಿಸಿದರು ಎಂದು ವರದಿಯಾಗಿದೆ. ಕಾರಿಂಜೇಶ್ವರ ದೇಗುಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿರುವ ಉತ್ತಮ ಪರಿಸರವನ್ನು ರಕ್ಷಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಭರವಸೆ ನೀಡಿದರು. ಬಂಟ್ವಾಳ ಕ್ಷೇತ್ರದ ಶಾಸಕ ಯು.ರಾಜೇಶ್ ನಾಯಕ್ ಅವರೊಂದಿಗೆ ಕಾರಿಂಜಕ್ಕೆ ಭೇಟಿ ನೀಡಿದ್ದ ಅವರು ಜನರೊಂದಿಗೆ ಬೆರೆತು

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ
Scroll to Top