news kadaba desk

ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…!!

(ನ್ಯೂಸ್ ಕಡಬ) newskadaba.com ಕೋಲ್ಕತ್ತ, ಜ. 10.  ಹಾವು ಬಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಕೋಲ್ಕತ್ತದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್ ನ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ. ಬೇಳೆ ತುಂಬಿದ್ದ ಕಂಟೈನರ್ ವೊಂದರಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ಮಕ್ಕಳನ್ನು ತಕ್ಷಣವೇ ರಾಂಪುರ್ ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ […]

ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಆರ್‌ಒಪಿ ಬಾಕಿ ಪಾವತಿಸಲು ಕೇಂದ್ರಕ್ಕೆ ಮಾರ್ಚ್ 15 ರವರೆಗೆ ಸಮಯ ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.09.  ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ(ಒಆರ್‌ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15 ರವರೆಗೆ ಕಾಲಾವಕಾಶ ನೀಡಿದೆ ಎಂದು ವರದಿ ಪ್ರಕಟನೆ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ಸಶಸ್ತ್ರ ಪಡೆಗಳ ಪಿಂಚಣಿದಾರರಿಗೆ ಎಲ್ಲಾ ಬಾಕಿ ಹಣವನ್ನು ತ್ವರಿತವಾಗಿ ಪಾವತಿಸಲು ಮತ್ತು ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ಕೇಂದ್ರ

ಒಆರ್‌ಒಪಿ ಬಾಕಿ ಪಾವತಿಸಲು ಕೇಂದ್ರಕ್ಕೆ ಮಾರ್ಚ್ 15 ರವರೆಗೆ ಸಮಯ ನೀಡಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಕಾಲು ದಾರಿಗೆ ತ್ರಿವರ್ಣದ ಬಣ್ಣ ➤ ನೆಟ್ಟಿಗರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಇಂದೋರ್, ಜ. 09. 17ನೇ ಪ್ರವಾಸಿ ಭಾರತೀಯ ದಿವಸ್ ನ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಇಂದೋರ್ ನಗರವು ಮಧುವಣಗಿತ್ತಿಯಂತೆ ಸಜ್ಜಾಗಿದೆ. ಹೂಡಿಕೆದಾರರು ಮತ್ತು ಎನ್ಆರ್.ಐ ಶೃಂಗಸಭೆಯ ಪೂರ್ವ ಸಿದ್ದತೆಗಳನ್ನು ವಿವರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದು, ನೋಡುವವರಿಗೆ ಬಾರೀ ಆಘಾತವನ್ನುಂಟು ಮಾಡಿದೆ. ಇಲ್ಲಿನ ಪಾದಚಾರಿ ಮಾರ್ಗವೊಂದಕ್ಕೆ ತ್ರಿವರ್ಣ ಬಳಿದಿರುವುದು ವಿಡಿಯೋದಲ್ಲಿದ್ದು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಲು ದಾರಿಗೆ ತ್ರಿವರ್ಣದ ಬಣ್ಣ ➤ ನೆಟ್ಟಿಗರಿಂದ ಆಕ್ರೋಶ Read More »

ರಾಷ್ಟ್ರೀಯ ನ್ಯೂಸ್

3.2 ಕೆ.ಜಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09.  ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಗರ ಅಪರಾಧ ಪತ್ತೆದಳ(ಸಿಸಿಬಿ)ದ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಪಡ್ಯಾರು ಮನೆ ನಿವಾಸಿ ನಿಮಿತ್ (26) ಹಾಗೂ ಪುಂಜಾಲಕಟ್ಟೆಯ ಕುಕ್ಕಳ ಮನೆಯ ಯೋಗೀಶ್ (41) ಎಂದು ಗುರುತಿಸಲಾಗಿದೆ. ‘ತಿಮಿಂಗಿಲ ವಾಂತಿಯನ್ನು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆರೋಪಿಗಳು ನಗರದ ಲಾಲ್ ಬಾಗ್ ಕರಾವಳಿ ಮೈದಾನ ಪರಿಸರದಲ್ಲಿ ಇದನ್ನು ಮಾರಾಟ ಮಾಡಲು ಯತ್ನಿಸಿದ್ದರು

3.2 ಕೆ.ಜಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!!

(ನ್ಯೂಸ್ ಕಡಬ) newskadaba.com ತೆಲಂಗಾಣ, ಜ.09.  ಗುಮ್ಮಡಿಲ ಕೈಗಾರಿಕಾ ಪ್ರದೇಶದ ಮೈಲನ್ ಕೆಮಿಕಲ್ ಇಂಡಸ್ಟ್ರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ಎಂದು ವರದಿ ತಿಳಿಸಿದೆ. ಮೃತರನ್ನು ಪಶ್ಚಿಮ ಬಂಗಾಳದ ಪರಿತೋಷ್ ಮೆಹ್ತಾ (46), ಬಿಹಾರದ ರಂಜಿತ್ ಕುಮಾರ್ (27) ಮತ್ತು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸಹಾಯಕ ವ್ಯವಸ್ಥಾಪಕ ಲೋಕೇಶ್ವರ್ ರಾವ್ (38) ಎಂದು ಗುರುತಿಸಲಾಗಿದೆ. ಘಟಕದಲ್ಲಿದ್ದ ಇತರ ಕಾರ್ಮಿಕರು ಬೆಂಕಿಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.09. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಈ ಘಟನೆ ವರದಿಯಾಗಿದೆ. ದ್ವಿಚಕ್ರ ವಾಹನಕ್ಕೆ ಗುದ್ದಿದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ತಗುಲಿದ್ದು, ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುವಿನಲ್ಲಿ ಬೈಕ್ ಚಲಿಸುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ಐಎಎನ್‌ಎಸ್‌ಗೆ

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲಿಗೆ ಸಿಲುಕಿ ಮೂವರ ಮೃತದೇಹಗಳು ಛಿದ್ರಛಿದ್ರ..!!!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ , ಜ.09.  ರೈಲ್ವೆ ಹಳಿ ಮೇಲೆ ಮೂವರ ಮೃತದೇಹಗಳು ಛಿದ್ರಛಿದ್ರ ವಾಗಿ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ರೈಲ್ವೆ ನಿಲ್ದಾಣದ ಸಮೀಪ ವರದಿಯಾಗಿದೆ. ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ಇಲ್ಲವೇ ಯಾರೋ ಕೊಲೆ ಮಾಡಿ ಶವಗಳನ್ನು ರೈಲ್ವೆ ಹಳಿ ಮೇಲೆ ಎಸೆದಿರಬಹುವುದು ಎಂದು ಶಂಕೆ ವ್ಯಕ್ತವಾಗಿದೆ. ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಗುರುತು ಸಿಗದಷ್ಟು ಮೃತದೇಹಗಳು ಛಿದ್ರವಾಗಿದೆ ಎಂದು ತಿಳಿದುಬಂದಿದೆ. ಸುದ್ದಿ

ರೈಲಿಗೆ ಸಿಲುಕಿ ಮೂವರ ಮೃತದೇಹಗಳು ಛಿದ್ರಛಿದ್ರ..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.09.  ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯ ಕಾರ್ತಿಕ್ ಲಾಡ್ಜ್ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಮುಂಬೈ ನಿವಾಸಿ ರಘುರಾಮ್ ಎಂದು ಗುರುತಿಸಲಾಗಿದೆ. ರಾತ್ರಿ ರೂಮ್ ಸೇರಿದವರು ಮತ್ತೆ ಹೊರಬಾರದ ಹಿನ್ನೆಲೆಯಲ್ಲಿ  ಹೋಟೆಲ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ.

ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್..!!!

(ನ್ಯೂಸ್ ಕಡಬ) newskadaba.com ಕೊಳ್ಳೆಗಾಲ, ಜ.09. ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲದ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವರದಿಯಾಗಿದೆ. ಬಂಧಿತರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಎಂದು ಗುರುತಿಸಲಾಗಿದೆ. ಇವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಮಾಂತ್ರಿಕರೊಬ್ಬರಿಗೆ ಮಾರಾಟ ಮಾಡಲು ಕೊಂಡ್ಯೋತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಸಂಬಂಧ ಎಫ್.ಎಂ.ಎಸ್ ಕಚೇರಿ ಪ್ರಕರಣ ದಾಖಲಿಸಿಕೊಂಡು

ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್..!!! Read More »

ರಾಷ್ಟ್ರೀಯ ನ್ಯೂಸ್

ನಾಲ್ವರಿಗೆ ಗೃಹ ರತ್ನ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com ಹಾವೇರಿ , ಜ.09.  ಹಾವೇರಿ ಜಿಲ್ಲೆಯ ಹೊಸರಿತ್ತಿ ಶ್ರೀ ಸುಬುದೇಂದ್ರತೀರ್ಥ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಪೇಟೆಯ ನಾಲ್ವರು ಗೃಹ ರಕ್ಷಕ ಸಿಬ್ಬಂದಿಗೆ ಗೃಹ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು ಎಂದು ವರದಿಯಾಗಿದೆ. ಪ್ರಶಸ್ತಿ ಪಡಿದವರನ್ನು ಗೃಹ ರಕ್ಷಕದಳದ ತಾಲೂಕು ಸಮಾದೇಷ್ಟ ಎಸ್.ಎಂ.ಗಿರೀಶ್ ಕುಮಾರ್, ಹಂಪಿ ಗೃಹರಕ್ಷಕ ದಳದ ಭಾಷಾಸಾಬ್, ಎಚ್.ಸಿದ್ದಪ್ಪ, ಬಿ.ಕೊಟ್ರಪ್ಪ ಅವರಿಗೆ ಮಂತ್ರಾಲಯದ ಸುಳಾದಿ ಹನುಮೇಶಾಚಾರ್  ಎಂದು ಗುರುತಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಸಿದ್ಧಲಿಂಗಯ್ಯ ಅಂಕಲಕೋಟೆ, ಡಾ.ಧರ್ಮನಗೌಡ, ಪತ್ರಕರ್ತ ಅನಂತ ಪದ್ಮನಾಭ ಇದ್ದರು

ನಾಲ್ವರಿಗೆ ಗೃಹ ರತ್ನ ಪ್ರಶಸ್ತಿ ಪ್ರಧಾನ Read More »

ಕರ್ನಾಟಕ
Scroll to Top