news kadaba desk

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.05.  ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ನಮನ ಡಾಬಾ ನಾರಾವಿ-ಗುರುವಾಯನಕೆರೆ ಬಳಿ ವದಿಯಾಗಿದೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ತೌಸೀಫ್ (32), ಉಸ್ಮಾನ್ (55), ಇಕ್ಬಾಲ್ (34), ಇರ್ಫಾನ್ (25) ಮತ್ತು ಅನಾಸ್ ಎಂದು ಗುರುತಿಸಲಾಗಿದೆ. 5 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅಕ್ರಮ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳನ್ನು ಹಾಗೂ ಅಕ್ರಮ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಒಮ್ನಿ ಕಾರು ಮತ್ತು ದ್ವಿಚಕ್ರ […]

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 05. ಬೊಲೆರೊ ವಾಹನವೊಂದು ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

2023 ಬಾಸ್ಮತಿ ಅಕ್ಕಿ , ತಾಳೆಎಣ್ಣೆ ಬೆಲೆಯಲ್ಲಿ ಹೆಚ್ಚಳ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 04.  ದೇಶದಲ್ಲಿ ಬಾಸ್ಮತಿ ಅಕ್ಕಿ ಮತ್ತು ತಾಳೆಎಣ್ಣೆ ಬೆಲೆಗಳು ಹೆಚ್ಚಳ ಕಾಣಲಾರಂಭಿಸಿವೆ. ಕಳೆದ ಒಂದು ತಿಂಗಳಿನಲ್ಲಿ ಅಕ್ಕಿಯಲ್ಲಿ ಬೆಲೆ ಶೇ.15ರಷ್ಟು ಏರಿಕೆಯಾಗಿದೆ. ಮುಂಬರುವ ವಾರಗಳಲ್ಲಿ ತಾಳೆ ಎಣ್ಣೆ ಬೆಲೆ ಪ್ರತೀ ಲೀಟರ್ ಗೆ 5 ರಿಂದ 7ರೂ. ಹೆಚ್ಚುವ ಸಾಧ್ಯತೆಗಳಿವೆ. ಬಾಸ್ಮತಿ ಅಕ್ಕಿಗೆ ಪ್ರತೀ ಕೆ.ಜಿ.ಗೆ ತಿಂಗಳ ಹಿಂದೆ 95 ರೂ. ಇದದ್ದು ಈಗ ದಾಖಲೆಯ 110 ರೂ ತಲುಪಿದೆ. ಗಿರಣಿ ಮಾಲಕರು ಮತ್ತು ಮಾರಾಟಗಾರರು ಅಕ್ಕಿ ದಾಸ್ತಾನು ಮಾಡಿಕೊಳ್ಳುತ್ತಿರುವುದರಿಂದ 

2023 ಬಾಸ್ಮತಿ ಅಕ್ಕಿ , ತಾಳೆಎಣ್ಣೆ ಬೆಲೆಯಲ್ಲಿ ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್

ಅಂಗವಿಕಲರಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ➤ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.04. ಅಂಗವಿಕಲರು ಸಮಾಜದ ಮುಖ್ಯವಾಹಿನಿಗೆ ಬರಲು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದ್ದಾರೆ. ಪಿಇಟಿ ಕ್ರೀಡಾಂಗಣದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ರಾಜ್ಯ ಅಂಧರ ಕ್ರಿಕೆಟ್ ಮಂಡಳಿ ಸಹಯೋಗದಲ್ಲಿ ಆಯೋಜಿಸಿರವ ಮೂರು ದಿನದ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಅಂಗವಿಕಲರು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡ ಸತತವಾಗಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದ್ದಾರೆ. ಎಲ್ಲ ಹಂತದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವರನ್ನು

ಅಂಗವಿಕಲರಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ➤ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ Read More »

ಕರ್ನಾಟಕ

ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ವೈದ್ಯ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ. 04. ಹೆರಿಗೆ ನೋವು ಕಾಣಿಸಿಕೊಂಡು ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಪರೇಶನ್ ನಡೆಸಿದ ವೈದ್ಯರೊಬ್ಬರು ಆಕೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ಘಟನೆ ಉತ್ತರ ಪ್ರದೇಶದ ಅಮ್ರೋಹಾ ವರದಿಯಾಗಿದೆ. ಆಪರೇಶನ್ ನಡೆಸಿದ ವೈದ್ಯನನ್ನು ಮತ್ಲೂಬ್ ಎಂದು ಗುರುತಿಸಲಾಗಿದೆ. . ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ರಾಜೀವ್ ಸಿಂಘಾಲ್ ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ವೈದ್ಯ ಮತ್ಲೂಬ್ ಅವರು ಅಮ್ರೋಹಾದ ನೌಗಾವಾನಾ ಸಾದತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮತಿಯಿಲ್ಲದೆ ನಡೆಸುತ್ತಿದ್ದ

ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ವೈದ್ಯ Read More »

ರಾಷ್ಟ್ರೀಯ ನ್ಯೂಸ್

ಹೃದಯಾಘಾತದಿಂದಾಗಿ ಹೆಡ್ ಕಾನ್ಸ್‌ಟೇಬಲ್ ಮೃತ್ಯು.!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.04.  ಹೆಡ್ ಕಾನ್ಸ್‌ಟೇಬಲ್ ನೋರ್ವರು  ಹೃದಯಘಾತದಿಂದಾಗಿ ಮೃತಪಟ್ಟ ಘಟನೆ ಬೆಂಗಳೂರುನಲ್ಲಿ ವರದಿಯಾಗಿದೆ. ಮೃತರನ್ನು ಹೆಬ್ಬಾಳ ಠಾಣೆಯ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ 7 ಗಂಟೆಯ ಹೊತ್ತಿನಲ್ಲಿ ಹೊಯ್ಸಳ ವಾಹನದಲ್ಲಿ ರೌಂಡ್ಸ್ ನಲ್ಲಿದ್ದಾಗ ತಲೆಸುತ್ತಿ ಬಿದ್ದಿದ್ದರು, ಇದೇ ವೇಳೆ ಪೊಲೀಸರು ಹೊಯ್ಸಳ ವಾಹನದಲ್ಲೇ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಿಸಿದದ್ದರು. ಹೆಡ್ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟರು, ವಿರೂಪಾಕ್ಷಪ್ಪ ಮೂಲತಃ ಬಿಜಾಪುರ ಜಿಲ್ಲೆಯಯವರಾಗಿದ್ದು, 2008 ರಲ್ಲಿ ಪೊಲೀಸ್ ಇಲಾಖೆ ಆಯ್ಕೆಯಾಗಿದ್ದರು

ಹೃದಯಾಘಾತದಿಂದಾಗಿ ಹೆಡ್ ಕಾನ್ಸ್‌ಟೇಬಲ್ ಮೃತ್ಯು.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 04. ಶಿವಮೊಗ್ಗದಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಕುಡುಮಲ್ಲಿಗೆ ಸಮೀಪದಲ್ಲಿ ವರದಿಯಾಗಿದೆ. ಶಿವಮೊಗ್ಗಕ್ಕೆ ತೆರಳುತ್ತಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಘಟನೆ ನಡೆದ ಸ್ಥಳಕ್ಕೆ ಬಂದು ಪ್ರಯಾಣಿಕರನ್ನು ಸಂತೈಸಿ ಕಾರನ್ನು ಎಲ್ಲರ ಸಹಾಯದಿಂದ ಮೇಲೆತ್ತಿದ್ದರು ಎಂದು ತಿಳಿದು ಬಂದಿದೆ.

ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..!

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನ ಶ್ವಾನ ದಳದ ಏಳು ವರ್ಷ ಹತ್ತು ತಿಂಗಳು ಪ್ರಾಯದ ಹೆಣ್ಣು ನಾಯಿ ‘ಜ್ವಾಲಾ’ ಮೂತ್ರಪಿಂಡದ ಸಮಸ್ಯೆಯಿಂದಾಗಿ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಂತಿಮ ಗೌರವ ಸಲ್ಲಿಸಿ ಅದರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ’ಜ್ವಾಲಾ’ ಗೆ ಅಂತಿಮ ನಮನ ಸಲ್ಲಿಸಿದ್ದಾರೆ ಎನ್ನಲಾಗಿದೆ. ‘ಡಾಬರ್ ಮನ್ ಪಿಂಚೆರ್ ತಳಿಯಾದ ಜ್ವಾಲಾ

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 04.  ತನ್ನ ಗ್ರಾಮಕ್ಕೆ ನಿತ್ಯ ಬಸ್‌ ಸಂಚಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿಸುವ ಘಟನೆ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ  ಸಂಭವಿಸಿದೆ. ಮೃತ ಬಾಲಕಿಯನ್ನು ಅಕ್ಷತಾ ಈರಪ್ಪ ಹುಲಿಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಕಿತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯನ್ನು ಬಾಲಕಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಅಕ್ಷತಾ ಮತ್ತು ಅವರ ಸ್ನೇಹಿತರು ಹಲವು ಬಾರಿ ಪ್ರತಿಭಟನೆ ನಡೆಸಿ ಕಿತ್ತೂರು ಶಾಸಕ ಮಹಾಂತೇಶ

ರಸ್ತೆ ಅಪಘಾತ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಮೈಸೂರು, ಜ.04. ಗ್ಯಾಸ್ ಸಿಲಿಂಡರರೊಂದು ಸ್ಫೋಟಗೊಂಡು ಪರಿಣಾಮ ಸುಮಾರು 10 ಮಂದಿಗೆ ಗಾಯವಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬುಧವಾರ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್‍ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದೆ. ಈ ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top