news kadaba desk

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03.   ಪೊಲೀಸರ ವೇಷದಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಅಡಿಕೆ ಮಂಡಿ ಮಾಲಿಕನ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹೆದರಿಸಿ .80 ಲಕ್ಷ ರೂಪಾಯಿವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ತುಮಕೂರು ಜಿಲ್ಲೆಯ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌(28) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಕಲಿ ಪೊಲೀಸರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು […]

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ಕಾರು ಅಪಘಾತ ➤ ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 03.   ಕಾರು ಢಿಕ್ಕಿಯಾದ ಪರಿಣಾಮ ವೃದ್ಧ ದಂಪತಿಗಳು ಮೃತಪಟ್ಟ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವರದಿಯಾಗಿದೆ. ಮೃತ ದಂಪತಿಗಳನ್ನು ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಟ್ಟಿ (60) ಎಂದು ಗುರುತಿಸಲಾಗಿದೆ. ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಮಹಾಮಲ ಶೆಟ್ಟಿ ಸ್ಥಳದಲ್ಲೇ

ಕುಂದಾಪುರ: ಕಾರು ಅಪಘಾತ ➤ ದಂಪತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು.!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03.  ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬೆಳವಂಗಲ ಬಳಿ ವರದಿಯಾಗಿದೆ. ಮೃತ ಯುವಕನನ್ನು ಮದುರೆ ಹೋಬಳಿಯ ಪುಟ್ಟಯ್ಯ ಅಗ್ರಹಾರದ ನಿವಾಸಿ ಮುನಿರಾಜ್ (26) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.ವಿಷಯ ತಿಳಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ  ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು

ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಜಯಪುರ: ಸೈನಿಕ ಶಾಲೆಗೆ ತಲುಪಿದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 03.   ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರವನ್ನು ಆಶ್ರಮದಿಂದ ತೆರೆದ ವಾಹನದಲ್ಲಿ ನಗರದ ಬಿಎಲ್ ಡಿಇ ಆಸ್ಪತ್ರೆ, ಸಿದ್ಧೇಶ್ವರ ದೇವಾಲಯ, ಗಾಂಧಿ ಚೌಕ, ಶಿವಾಜಿ ವೃತ್ತದ ಮಾರ್ಗವಾಗಿ ಸೈನಿಕ ಶಾಲೆಗೆ ತರಲಾಯಿತು. ಈ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸಹಸ್ರಾರು ಭಕ್ತರು ಶ್ರೀಗಳ ಪಾರ್ಥೀವ ಶರೀರವನ್ನು ದರ್ಶನ ಮಾಡಿ, ಕೈಮುಗಿದು ಕಂಬನಿ ಮಿಡಿದರು. ಸೈನಿಕ ಶಾಲೆಯ ಆವರಣದಲ್ಲಿ ಬೆಳ್ಳಿಗ್ಗೆಯಿಂದ ಮಧ್ಯಾಹ್ನ 3ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಹಸ್ರಾರು

ವಿಜಯಪುರ: ಸೈನಿಕ ಶಾಲೆಗೆ ತಲುಪಿದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರ Read More »

ಕರ್ನಾಟಕ

ಬೈಕ್ ಗೆ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಮನಗರ, ಜ. 02.  ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನಪಟ್ಟಣ ತಾಲೂಕಿನ ಪೊಲೀಸ್ ತರಬೇತಿ ಶಾಲೆ ಬಳಿ ವರದಿಯಾಗಿದೆ. ಮೃತರನ್ನು ತಡಿಕವಾಗಿಲು ಗ್ರಾಮದ ನಿವಾಸಿ ಶಿವಸ್ವಾಮಿ (51) ಎಂದು ಗುರುತಿಸಲಾಗಿದೆ. ಮೃತ ಶಿವಸ್ವಾಮಿ ಅವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚನ್ನಪಟ್ಟಣದದಿಂದ ರಾಮನಗರದ ಕಡೆಗೆ ಹೊರಡುತ್ತಿದ್ದ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ನಂತರ ಡಿವೈಡರ್ ಗೆ ಗುದ್ದಿ ನಿಂತಿದೆ ಎನ್ನಲಾಗಿದೆ.

ಬೈಕ್ ಗೆ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಜ. 02. ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ನಾಗರಿಕರು ಮೃತಪಟ್ಟ ಹಲವರು ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯಲ್ಲಿ ವರದಿಯಾಗಿದೆ. ಮೃತಪಟ್ಟಿರುವವರನ್ನು ಸತೀಶ್ ಕುಮಾರ್ (45), ದೀಪಕ್ ಕುಮಾರ್ (23), ಪ್ರೀತಮ್ ಲಾಲ್ (57) ಮತ್ತು ಶಿಶುಪಾಲ್ (32) ಹಾಗೂ ಗಾಯಗೊಂಡವರನ್ನು ಪವನ್ ಕುಮಾರ್ (38), ರೋಹಿತ್ ಪಂಡಿತ್ (27), ಸರೋಜ್ ಬಾಲಾ (35), ರಿದಮ್ ಶರ್ಮಾ (17) ಮತ್ತು ಪವನ್ ಕುಮಾರ್ (32) ಎಂದು

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬಯಿ, ಜ. 02. ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಕೇರಳ ಮೂಲದ ಆರ್. ಕೃಷ್ಣಕುಮಾರ್(84) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇವರು ಟಾಟಾ ಸಮೂಹದ ಇಂಡಿಯನ್ ಹೋಟೆಲ್ಸ್ ಮುಖ್ಯಸ್ಥ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದು, ನನ್ನ ಸ್ನೇಹಿತ, ಸಹೋದ್ಯೋಗಿಯ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ.

ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್‌. ಕೃಷ್ಣಕುಮಾರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅಹಮದಾಬಾದ್‌, ಜ. 02. ಮನೆಯೊಂದರ ಮೊದಲ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಅಹಮದಾಬಾದ್‌ನಲ್ಲಿ ವರದಿಯಾಗಿದೆ. ಮೃತರನ್ನು ಜಯೇಶ್ ವಘೇಲಾ (40), ಮತ್ತು ಅವರ ಪತ್ನಿ ಹಂಸಾ (35) ಹಾಗೂ ಅವರು ಮಗ ರೆಹಾನ್ (8) ಎಂದು ಗುರುತಿಸಲಾಗಿದೆ.

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟು ನಿಷೇಧ ಕಾನೂನುಬಾಹಿರ ➤ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02.  ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯನ್ನು ಕಾನೂನುಬಾಹಿರ ಎಂದು ಕರೆದಿರುವ ಅವರು, “ನನ್ನ ಪ್ರಕಾರ ನ. 08 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ನಿಷೇಧ ಕಾನೂನು ವಿರುದ್ದವಾಗಿ ಚಲಾಯಿಸಿದ

ನೋಟು ನಿಷೇಧ ಕಾನೂನುಬಾಹಿರ ➤ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 02. ಉಳ್ಳಾಲದಿಂದ ಮಂಗಳೂರಿನ ಕಡೆಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಸಿಕ್ಕ ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಪ್ರಮಾಣಿಕತೆ ಮೆರೆದ ಘಟನೆ ಉಳ್ಳಾಲದಿಂದ ವರದಿಯಾಗಿದೆ. ಬಿ.ಸಿ,ರೋಡ್ ಮೂಲದ ಮಹಿಳೆ ತಸ್ಲಿಮಾ ಫಾರೂಕ್ ಎಂಬವರು ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಸಂಚರಿಸುತ್ತಿದ್ದ ಶಾಲಿಮಾರ್ ಬಸ್ನಲ್ಲಿ ತೆರಳುತ್ತಿದ್ದ ವೇಳೆ 18 ಗ್ರಾಂನ ಚಿನ್ನದ ಬಳೆಯೊಂದನ್ನು ಕಳೆದುಕೊಂಡಿದ್ದರು. ಈ ಬಳೆ ಬಸ್

ಉಳ್ಳಾಲ: ಚಿನ್ನವನ್ನು ಮಹಿಳೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮರೆದ ಚಾಲಕ ಮತ್ತು ನಿರ್ವಾಹಕ Read More »

ಕರಾವಳಿ
Scroll to Top